Andolana originals

ಕೊಳೆತ ತ್ಯಾಜ್ಯದಿಂದ ಭುವನಗಿರಿ ಗ್ರಾಮಸ್ಥರಿಗೆ ನರಕಯಾತನೆ

ಕೆ.ಬಿ.ಶಂಶುದ್ಧೀನ್

ರೋಗ ಹರಡುವ ಭೀತಿಯ ಜೊತೆಗೆ ಉಸಿರಾಟಕ್ಕೆ ಸಮಸ್ಯೆ ಆರೋಪ: ಸೂಕ್ತ ಕ್ರಮಕ್ಕೆ ಆಗ್ರಹ

ಕುಶಾಲನಗರ: ಕೂಡಿಗೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಭುವನಗಿರಿಯ ಕಸ ವಿಲೇವಾರಿ ಘಟಕದಲ್ಲಿ ಕುಶಾಲನಗರ ಪುರಸಭೆ ವ್ಯಾಪ್ತಿಯ ಕಸಗಳನ್ನು ಸಂಗ್ರಹಿಸಿ ನಿರ್ವಹಣೆ ಮಾಡಲಾಗುತ್ತಿದೆ. ಕಸ ವಿಲೇವಾರಿ ಘಟಕ ಪ್ರಾರಂಭವಾದಾಗಿನಿಂದಲೂ ದುರ್ವಾಸನೆಯ ಸಮಸ್ಯೆ ಇದ್ದು, ಎರಡು ತಿಂಗಳಿನಿಂದ ತ್ಯಾಜ್ಯ ಕೊಳೆತು ದುರ್ವಾಸನೆ ಬೀರುತ್ತಿದ್ದು, ಉಸಿರಾಟಕ್ಕೆ ಸಮಸ್ಯೆಯಾಗುತ್ತಿರುವ ಬಗ್ಗೆ ಗ್ರಾಮಸ್ಥರು ಆರೋಪಿಸಿದ್ದಾರೆ.

ಕುಶಾಲನಗರ ಪುರಸಭೆ ವ್ಯಾಪ್ತಿಯಲ್ಲಿ ನಿತ್ಯವೂ ಸಂಗ್ರಹವಾಗುವ ಲೋಡ್‌ಗಟ್ಟಲೇ ತ್ಯಾಜ್ಯಗಳು, ಮಳೆಯಿಂದ ಕೊಳೆತು ನಾರುತ್ತಿದೆ.

ಕಸದ ತ್ಯಾಜ್ಯ ಸಮರ್ಪಕವಾಗಿ ನಿರ್ವಹಣೆಯಾಗದ ಕಾರಣ ಭುವನಗಿರಿ ಗ್ರಾಮಸ್ಥರು ನರಕಯಾತನೆ ಅನುಭವಿಸುವಂತಾಗಿದೆ. ಉಸಿರಾಟಕ್ಕೆ ಶುದ್ಧ ಆಮ್ಲಜನಕ ದೊರಕದ ಮಟ್ಟಿಗೆ ಇಲ್ಲಿನ ಕಸ ತ್ಯಾಜ್ಯ ಗಬ್ಬುನಾರುತ್ತಿದೆ ಎಂದು ಆರೋಪಿಸಿದ್ದಾರೆ.

೧೫ ವರ್ಷಗಳ ಹಿಂದೆ ನಿರ್ಮಾಣ ಮಾಡಿದ ತ್ಯಾಜ್ಯ ನಿರ್ವಹಣಾ ಘಟಕದಿಂದ ಕೇವಲ ಭುವನಗಿರಿ ಗ್ರಾಮಸ್ಥರು ಮಾತ್ರವಲ್ಲದೆ ಸಮೀಪವಿರುವ ಕಣಿವೆ ಗ್ರಾಮಸ್ಥರು ಕೂಡ ಕಿರಿಕಿರಿ ಅನುಭವಿಸುವಂತಾಗಿದೆ ಎಂದು ಗ್ರಾಮಸ್ಥರು ಅಳಲು ತೋಡಿಕೊಂಡಿದ್ದಾರೆ.

ನಿತ್ಯವೂ ನಾಲ್ಕು ಟಿಪ್ಪರ್ ಲಾರಿ ಲೋಡುಗಳಷ್ಟು ಕಸ ಹಾಗೂ ತ್ಯಾಜ್ಯಗಳು ಸಂಗ್ರಹವಾಗುವ ಕಸ ವಿಲೇವಾರಿ ಘಟಕದಲ್ಲಿ ಅತ್ಯಾಧುನಿಕ ಯಂತ್ರಗಳನ್ನು ಬಳಸಿಕೊಂಡು ಸಮರ್ಪಕವಾಗಿ ಕಸ ವಿಲೇವಾರಿ ಮಾಡಲಾಗುವುದು ಎಂದು ಅಧಿಕಾರಿಗಳು ಹೇಳಿ ಕೊಂಡು ಬರುತ್ತಲೇ ಇದ್ದಾರೆ. ಪುರಸಭೆ ವ್ಯವ ಸ್ಥಿತವಾಗಿ ತ್ಯಾಜ್ಯ  ನಿರ್ವಹಣೆ ಮಾಡದಿದ್ದಲ್ಲಿ ಪ್ರತಿಭಟನೆ ಮಾಡಲಾಗುವುದು ಎಂದು ಎಚ್ಚರಿಸಿದ್ದಾರೆ

ಅವೈಜ್ಞಾನಿಕ ಕಾಮಗಾರಿ..?: ಭುವನಗಿರಿ ಗ್ರಾಮದ ಕಸ ವಿಲೇವಾರಿ ಘಟಕದಲ್ಲಿ ಯಂತ್ರಗಳನ್ನು ಅಳವಡಿಸಲು ಬೇಕಾದ ಹೊರಾಂಗಣ ಭವನವನ್ನು ಸಮಾರು ೫೦ ಲಕ್ಷ ರೂ. ವ್ಯಯಿಸಿ ನಿರ್ಮಿಸಿದ್ದಾರೆ. ಆದರೆ ಕಾಮಗಾರಿಯನ್ನು ಅವೈಜ್ಞಾನಿಕವಾಗಿ ಮಾಡಿದ್ದಾರೆ ಎಂದು ಆರೋಪಿಸಿರುವ ಗ್ರಾಮಸ್ಥರು, ಬಳಕೆಗೆ ಮುನ್ನವೇ ಮಳೆಯ ನೀರು ನಿಂತಿದೆ. ನೋಡುಗರಿಗೆ ಕೆರೆಯೋಪಾದಿಯಲ್ಲಿ ಕಾಣುತ್ತಿದೆ. ಆದಷ್ಟು ಬೇಗನೆ ಈ ಬಗ್ಗೆ ಸಂಬಂಧಿಸಿದವರು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.

” ನೊಣ, ಸೊಳ್ಳೆಗಳ ಕಾಟದಿಂದ ಮನೆಯಲ್ಲಿ ನೆಮ್ಮದಿಯಿಂದ ಆಹಾರ ಸೇವನೆ ಮಾಡಲೂ ಆಗುತ್ತಿಲ್ಲ. ಸಂಬಂಽಸಿದ ಅಧಿಕಾರಿಗಳಿಗೆ ನಮ್ಮ ಸಮಸ್ಯೆ ಅರ್ಥವಾಗುತ್ತಿಲ್ಲ. ಸ್ಥಳಕ್ಕೆ ಭೇಟಿ ನೀಡಿದರೆ ನಾವು ಹೇಗೆ ಜೀವಿಸುತ್ತಿದ್ದೇವೆ ಎಂದು ತಿಳಿಯುತ್ತದೆ. ದಯವಿಟ್ಟು ನಮ್ಮ ಸಮಸ್ಯೆಗೆ ಸ್ಪಂದಿಸಬೇಕು.”

-ಸುರೇಶ್, ಸ್ಥಳೀಯ ನಿವಾಸಿ

” ಭುವನಗಿರಿಯ ಕಸ ವಿಲೇವಾರಿ ಘಟಕದ ಮುಂಬದಿಯ ರಸ್ತೆಯಲ್ಲಿ ವಾಸಿಸುವ ಸಾರ್ವಜನಿಕರು ಸಮಸ್ಯೆಯತ್ತ ಅಧಿಕಾರಿಗಳು, ಚುನಾಯಿತ ಜನಪ್ರತಿನಿಧಿಗಳು ಗಮನಹರಿಸಬೇಕು. ತ್ಯಾಜ್ಯ ವಿಲೇವಾರಿಗೆ ಸೂಕ್ತ ಕ್ರಮ ಕೈಗೊಳ್ಳಬೇಕು.”

-ಕಾವ್ಯಶ್ರೀ, ಗ್ರಾಮದ ವಿದ್ಯಾರ್ಥಿನಿ

” ಕಸ ವಿಲೇವಾರಿಗೆ ೩.೨೬ ಕೋಟಿ ರೂ.ಗಳ ಟೆಂಡರ್ ಕರೆಯಲಾಗಿದೆ. ಮಳೆಯ ಕಾರಣದಿಂದ ಕೆಲಸ ಪ್ರಾರಂಭವಾಗಿಲ್ಲ. ಮಳೆ ನಿಂತ ಕೂಡಲೇ ಕೆಲಸ ಪ್ರಾರಂಭವಾಗಲಿದೆ. ಜನರಿಗೆ ಸಮಸ್ಯೆ ಆಗದಂತೆ ಪುರಸಭೆ ಕಾರ್ಯನಿರ್ವಹಿಸಲಿದೆ.”

-ಗಿರೀಶ್, ಮುಖ್ಯಾಧಿಕಾರಿ, ಕುಶಾಲನಗರ ಪುರಸಭೆ

ಆಂದೋಲನ ಡೆಸ್ಕ್

Recent Posts

ಹಣ ದ್ವಿಗುಣಗೊಳಿಸುವುದಾಗಿ ೨೮ ಲಕ್ಷ ರೂ. ವಂಚನೆ; ದೂರು ದಾಖಲು

ಕೊಳ್ಳೇಗಾಲ: ಹಣ ದ್ವಿಗುಣಗೊಳಿಸಿಕೊಡುವುದಾಗಿ ಆಮಿಷ ಒಡ್ಡಿ, ಒಟ್ಟು ೨೮.೮೮ ಲಕ್ಷ ರೂ.ಗಳನ್ನು ವಂಚಿಸಿರುವ ಬಗ್ಗೆ ಪಟ್ಟಣ ಪೊಲೀಸ್ ಠಾಣೆಯಲ್ಲಿ ಮಮತಾ…

9 hours ago

ಅಂಬಳೆ: ಚಾಮುಂಡೇಶ್ವರಿ ದೇಗುಲದಲ್ಲಿ ಕಳ್ಳತನ

ಯಳಂದೂರು:ತಾಲ್ಲೂಕಿನ ಅಂಬಳೆ ಗ್ರಾಮದಲ್ಲಿರುವ ಸುವರ್ಣಾವತಿ ನದಿ ದಡಲ್ಲಿರುವ ಐತಿಹಾಸಿಕ ಚಾಮುಂಡೇಶ್ವರಿ ದೇಗುದಲ್ಲಿ ಗುರುವಾರ ರಾತ್ರಿ ಕಳ್ಳತನ ನಡೆದಿದ್ದು, ಲಕ್ಷಾಂತರ ರೂ.…

9 hours ago

ಇಂಡಿಗೋ ವಿಮಾನ ಹಾರಾಟದಲ್ಲಿ ವ್ಯತ್ಯಯ ಬೆನ್ನಲ್ಲೇ ಪೈಲಟ್‌ಗಳ ರಜಾ ನಿಯಮ ಸಡಿಲಿಸಿದ ಡಿಜಿಸಿಎ

ನವದೆಹಲಿ: ದೇಶಾದ್ಯಂತ ಇಂಡಿಗೋ ವಿಮಾನದ ಹಾರಾಟದಲ್ಲಿ ಭಾರೀ ವ್ಯತ್ಯಯ ಉಂಟಾದ ಬೆನ್ನಲ್ಲೇ ಕೇಂದ್ರ ನಾಗರಿಕ ವಿಮಾನಯಾನ ನಿರ್ದೇಶನಾಲಯ ಪೈಲಟ್‌ಗಳ ರಜಾ…

10 hours ago

ಕೆಪಿಸಿಸಿ ಅಧ್ಯಕ್ಷ ಸ್ಥಾನದ ಬಗ್ಗೆ ಚರ್ಚೆಯಾಗಿಲ್ಲ: ಸತೀಶ್‌ ಜಾರಕಿಹೊಳಿ

ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಸ್ಥಾನದ ಬಗ್ಗೆ ಚರ್ಚೆಯಾಗಿಲ್ಲ ಎಂದು ಲೋಕೋಪಯೋಗಿ ಸಚಿವ ಸತೀಶ್‌ ಜಾರಕಿಹೊಳಿ ಹೇಳಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿ…

11 hours ago

ಶಾಲಾ ಪಠ್ಯದಲ್ಲಿ ಭಗವದ್ಗೀತೆ ಬೋಧನೆ: ಕೇಂದ್ರದ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ಗೆ ಎಚ್‌ಡಿಕೆ ಪತ್ರ

ನವದೆಹಲಿ: ಕಾಲಾತೀತ, ಮೌಲ್ಯಾಧರಿತ ಆದರ್ಶಗಳನ್ನು ಒಳಗೊಂಡಿರುವ ಭಗವದ್ಗೀತೆಯನ್ನು ವಿದ್ಯಾರ್ಥಿಗಳಿಗೆ ಬೋಧಿಸಲು ಪಠ್ಯದಲ್ಲಿ ಸೇರಿಸಬೇಕು ಎಂದು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು…

12 hours ago

ಸೋಲು, ಗೆಲುವಿಗಿಂತ ಕ್ರೀಡೆಯಲ್ಲಿ ಭಾಗವಹಿಸುವುದು ಮುಖ್ಯ: ತಹಶೀಲ್ದಾರ್‌ ಶಿವಕುಮಾರ್‌ ಕಾಸ್ನೂರು

ನಂಜನಗೂಡು: ಸೋಲು, ಗೆಲುವಿಗಿಂತ ಕ್ರೀಡೆಯಲ್ಲಿ ಭಾಗವಹಿಸುವುದು ಮುಖ್ಯ ಎಂದು ತಹಶೀಲ್ದಾರ್‌ ಶಿವಕುಮಾರ್‌ ಕಾಸ್ನೂರು ಹೇಳಿದರು. ನಂಜನಗೂಡು ನಗರದ ಕಾಲೇಜೊಂದರಲ್ಲಿ ಆಯೋಜಿಸಿದ್ದ…

13 hours ago