Andolana originals

ಕನ್ನಂಬಾಡಿ ಹಿನ್ನೀರಿನಲ್ಲಿ ಭೂವರಾಹನಾಥ

• ಬಲ್ಲೇನಹಳ್ಳಿ ಮಂಜುನಾಥ್, ಉಪನ್ಯಾಸಕರು ಮತ್ತು ಸಾಹಿತಿಗಳು

ಮಂಡ್ಯ ಜಿಲ್ಲೆಯ ಕೃಷ್ಣರಾಜಪೇಟೆ ತಾಲ್ಲೂಕು ಹಲವು ಪುರಾತನ ದೇವಾಲಯ ಗಳಿಗೆ ಹೆಸರಾಗಿದೆ. ಇಲ್ಲಿ ಹೊಯ್ಸಳ ಅರಸರ ಕಾಲದ ದೇಗುಲಗಳು ಸಾಕಷ್ಟಿವೆ. ಇಂತಹ ದೇಗುಲಗಳಲ್ಲಿ ಹೇಮಾವತಿ ನದಿಯ ದಂಡೆ ಮತ್ತು ಕನ್ನಂಬಾಡಿ ಕಟ್ಟೆ ಹಿನ್ನೀರಿನ ದಡದಲ್ಲಿ ಇರುವ ಕಲ್ಲಹಳ್ಳಿಯ ಭೂವರಾಹನಾಥ ದೇಗುಲವೂ ಒಂದು.

ಮೇಲುಕೋಟೆಯ ನಂತರ ಜಿಲ್ಲೆಯಲ್ಲಿ ಅಪಾರ ಜನರನ್ನು ಆಕರ್ಷಿಸುವ ಪ್ರಾಚೀನ ವೈಷ್ಣವ ದೇವಾಲಯ ಇದಾಗಿದ್ದು, ಭೂ ವೈಕುಂಠ ಎಂದೇ ಹೆಸರಾಗಿದೆ. ಕೊಡಗಿನಿಂದ ಹರಿದು ಬರುವ ಕಾವೇರಿ, ಚಿಕ್ಕಮಗಳೂರಿನ ಬೆಟ್ಟದಿಂದ ಹರಿದು ಬರುವ ಹೇಮಾವತಿ ಹಾಗೂ ಹುಣಸೂರಿನ ಕಡೆಯಿಂದ ಬರುವ ಲಕ್ಷ್ಮಣತೀರ್ಥ ನದಿಗಳು ಸೇರುವ ತಾಣ ಇದಾಗಿದೆ.

ಕನ್ನಂಬಾಡಿ ಕಟ್ಟೆಯ ನಿರ್ಮಾಣದಿಂದ ಮುಳುಗಡೆಯಾದ ಕಲ್ಲಹಳ್ಳಿ ಗ್ರಾಮದ ಹಿನ್ನೀರಿನ ಅಂಚಿನಲ್ಲಿ ಈ ದೇವಾಲಯ ನಿರ್ಮಾಣಗೊಂಡಿದೆ. ದಕ್ಷಿಣ ಭಾರತದಲ್ಲಿಯೇ ಅಪರೂಪವಾದ ಸುಮಾರು 8 ಅಡಿ ಎತ್ತರ ವಿರುವ ಏಕ ಕಪ್ಪುಶಿಲೆಯ ವರಾಹ ವಿಗ್ರಹ ಹಾಗೂ ಭೂದೇವಿ (ಲಕ್ಷ್ಮೀ) ವಿಗ್ರಹ ಗಮನ ಸೆಳೆಯುತ್ತವೆ.

ಶಾಸನದ ಸಾರಾಂಶ: ಈ ವಿಗ್ರಹದ ನಿರ್ಮಾತೃ ಯಾರೆಂಬುದು ತಿಳಿದಿಲ್ಲವಾದರೂ, ದೇಗುಲದ ಮುಂದಿರುವ ಶಾಸನವು ಕ್ರಿ.ಶ.1334ರಲ್ಲಿ ಹೊಯ್ಸಳ ಅರಸ ಮುಮ್ಮಡಿ ಬಲ್ಲಾಳನು ತನ್ನ ಮಡದಿ ದ್ಯಾಮಲಾದೇವಿಯ ಜ್ಞಾಪಕಾರ್ಥಕವಾಗಿ ಈ ಸ್ಥಳವನ್ನು ‘ದೇಮಲಾಪುರ’ ಎಂದು ಕರೆದು, ಅಗ್ರ ಹಾರ ಮಾಡಿದನೆಂದು, ಈ ಮೂರ್ತಿಯ ಪೂಜಾ ಕೈಂಕರ್ಯಗಳಿಗಾಗಿ 42 ಸಾವಿರ ಕೋಲು ಅಳತೆಯ ಬೆದ್ದಲು (ಹೊಲ) ನೀಡಿದನೆಂದು ತಿಳಿಸುವುದರಿಂದ ಹೊಯ್ಸಳ ಅರಸರ ಕಾಲದಲ್ಲಿ ಇದೊಂದು ಪ್ರಸಿದ್ಧ ವೈಷ್ಣವ ಕ್ಷೇತ್ರವಾಗಿತ್ತೆಂದು ತಿಳಿದು ಬರುತ್ತದೆ.

ಹಳೆಯ ದೇವಸ್ಥಾನವು ಚಿಕ್ಕದಾಗಿದ್ದರಿಂದ ಇದೇ ಜಾಗದಲ್ಲಿ ಹೊಯ್ಸಳ ವಾಸ್ತು ಶಿಲ್ಪದ ಮಾದರಿಯಲ್ಲಿ ಪುನರ್ ನಿರ್ಮಾಣ ಮಾಡಲಾಗುತ್ತಿದೆ. 108 ಕಾಲು ಮಂಟಪ-ಅಲ್ಲದೆ 178 ಅಡಿ ಎತ್ತರದ ರಾಜಗೋಪುರ ನಿರ್ಮಾಣ ಮಾಡಲಾಗುತ್ತಿದೆ. ದೇವಾಲಯದ ಅಭಿವೃದ್ಧಿ ಗಾಗಿ ಸುಮಾರು 50 ಕೋಟಿ ರೂ. ವೆಚ್ಚ ಅಂದಾಜಿಸಲಾಗಿದೆ. ದಾನಿಗಳ ಸಹಾಯದಿಂದ ಮೈಸೂರಿನ ಶ್ರೀ ಪರಕಾಲ ಮಠದ ಮಾರ್ಗದರ್ಶನದಲ್ಲಿ ಅಭಿವೃದ್ಧಿಗೊಳಿಸಲಾಗುತ್ತಿದೆ. ಇದನ್ನು ಹೊಯ್ಸಳ ದೊರೆ ಮೂರನೇ ವೀರಬಲ್ಲಾಳನಿಗೆ ಅರ್ಪಿಸಲು ಮಠ ನಿರ್ಧರಿಸಿದೆ. ಬಿ.ಎಸ್.ಯಡಿಯೂರಪ್ಪ ಸಿಎಂ ಆಗಿದ್ದಾಗ 3 ಕೋಟಿ ರೂ. ಅನುದಾನ ನೀಡಿದ್ದಾರೆ. ಕ್ಷೇತ್ರವನ್ನು ಪ್ರವಾಸಿ ತಾಣವನ್ನಾಗಿಸುವುದು, ತ್ರಿವೇಣಿ ಸಂಗಮಕ್ಕೆ ಬೋಟಿಂಗ್‌ ವ್ಯವಸ್ಥೆ, ತೂಗು ಸೇತುವೆ ನಿರ್ಮಾಣ ಕಾರ್ಯ ಮಾಡಲಾಗುತ್ತಿದೆ. ನೀರಾವರಿ ಇಲಾಖೆಯು ಪ್ರವಾಸಿಗರ ಅನುಕೂಲಕ್ಕಾಗಿ ಹೇಮಾವತಿ ನದಿಯ ಹಿನ್ನೀರಿಗೆ ಸೋಪಾನಕಟ್ಟೆ ನಿರ್ಮಿಸಲು ಕಾಮಗಾರಿ ಕೈಗೊಂಡಿದೆ.

ಭೂವರಾಹನಾಥ ದೇವಾಲಯಕ್ಕೆ ಇರುವ ದೂರ:
• ಮಂಡ್ಯ ಜಿಲ್ಲಾ ಕೇಂದ್ರದಿಂದ 60 ಕಿ.ಮೀ.
• ಮೈಸೂರಿನಿಂದ 50 ಕಿ.ಮೀ.
• ಕೆ.ಆರ್.ಎಸ್‌ನಿಂದ 30 ಕಿ.ಮೀ.

ಆಂದೋಲನ ಡೆಸ್ಕ್

Recent Posts

ಪ್ರಧಾನಿ ಮೋದಿ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು

ತಿರುವನಂತಪುರಂ : ಪ್ರಧಾನಿ ನರೇಂದ್ರ ಮೋದಿ ಅವರು ಶನಿವಾರ ದೇಶವನ್ನು ಉದ್ದೇಶಿಸಿ ಮಾಡಿದ ಭಾಷಣದ ವಿರುದ್ಧ ಕಾಂಗ್ರೆಸ್‌ ಮತ್ತು ಸಿಪಿಎಂ…

49 seconds ago

ಸಭೆ ನಡೆಸುತ್ತಿರುವಾಗಲೇ ತೀವ್ರ ಅಸ್ವಸ್ಥ ; ಡಿಸಿಎಂ ಪವನ್‌ ಕಲ್ಯಾಣ್‌ಗೆ ದಿಢೀರ್‌ ಶಸ್ತ್ರ ಚಿಕಿತ್ಸೆ,

ಹೈದರಾಬಾದ್ : ಆಂಧ್ರಪ್ರದೇಶದ ಉಪಮುಖ್ಯಮಂತ್ರಿ ಹಾಗೂ ಜನಸೇನಾ ಅಧ್ಯಕ್ಷ ಪವನ್ ಕಲ್ಯಾಣ್ ಅವರಿಗೆ ಹೈದರಾಬಾದ್‌ನಲ್ಲಿ ತುರ್ತು ಶಸ್ತ್ರಚಿಕಿತ್ಸೆ ಮಾಡಲಾಗಿದೆ. ಸದ್ಯ…

29 mins ago

ಸರ್ವಾಧಿಕಾರಿ ಬಿಜೆಪಿಯೇ ಮಹಿಳಾ ವಿರೋಧಿ : ಡಿಸಿಎಂ ಡಿ.ಕೆ.ಶಿವಕುಮಾರ್ ಕಿಡಿ

ಬೆಂಗಳೂರು : ಮಹಿಳಾ ಮೀಸಲಾತಿ ಪರಿಕಲ್ಪನೆ ಕಾಂಗ್ರೆಸ್‌ನ ಕೂಸು. ಮಸೂದೆಗೆ ಸೋಲಾಗಲಿದೆ ಎಂದು ಗೊತ್ತಿದ್ದರೂ ಸರ್ವಾಧಿಕಾರಿಯಂತೆ ಯಾವುದೇ ಚರ್ಚೆ ಮಾಡದೆ,…

59 mins ago

ಅಕ್ರಮ ಸಂಬಂಧಕ್ಕೆ ಅಡ್ಡಿಯಾಗಿದ್ದ ಪತಿ ಕೊಲೆ ಪ್ರಕರಣ : ಎಸ್‌.ಪಿ.ಮಲ್ಲಿಕಾರ್ಜುನ ಹೇಳಿದ್ದೇನು?

ಮೈಸೂರು : ಅನೈತಿಕ ಸಂಬಂಧಕ್ಕೆ ಅಡ್ಡಿಯಾಗಿದ್ದ ಪತಿಯನ್ನು ಪತ್ನಿಯೇ ಕೊಲೆ ಮಾಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಸೂರು ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ…

1 hour ago

ಇಟಲಿಯಲ್ಲಿ ಇಬ್ಬರು ಭಾರತೀಯರಿಗೆ ಗುಂಡಿಕ್ಕಿ ಹತ್ಯೆ

ರೋಮ್‌ : ಇಟಲಿಯ ಬರ್ಗಾಮೊ ಪ್ರಾಂತ್ಯದ ಕೊವೊದಲ್ಲಿ ಇಬ್ಬರು ಭಾರತೀಯರನ್ನು ಗುಂಡಿಕ್ಕಿ ಹತ್ಯೆ ಮಾಡಲಾಗಿದೆ. ಕೊವೊ ನಿವಾಸಿ ರಾಗಿಂದರ್ ಸಿಂಗ್…

2 hours ago

ಮೈಸೂರು | ಪಬ್‌ನಲ್ಲಿ ಗಲಾಟೆ ; ಓರ್ವ ಯುವಕನ ಕೊಲೆ

ಮೈಸೂರು : ಪಬ್‌ನಲ್ಲಿ ನಡೆದ ಗಲಾಟೆ ಪರಿಣಾಮ ಓರ್ವ ಯುವಕ ಕೊಲೆಯಾಗಿರುವ ಘಟನೆ ಮೈಸೂರಿನ ವಿಜಯನಗರದ ಎರಡನೇ ಹಂತದ ರೆಸ್ಟೋರೆಂಟ್‌ನಲ್ಲಿ…

2 hours ago