Andolana originals

ರಾತ್ರೋರಾತ್ರಿ ಕೋಟ್ಯಧಿಪತಿಯಾದ ಪಾಂಡವಪುರದ ಮೆಕ್ಯಾನಿಕ್!‌

ಪಾಂಡವಪುರ: ಪಟ್ಟಣದ ನಿವಾಸಿ, ಮೆಕ್ಯಾನಿಕ್ ಅಲ್ತಾಫ್ ಎಂಬವರಿಗೆ ಕೇರಳದ ಲಾಟರಿ ಸಂಸ್ಥೆಯಿಂದ ಬರೋಬ್ಬರಿ ೨೫ ಕೋಟಿ ರೂ. ಬಹುಮಾನ ಬಂದಿದ್ದು, ರಾತ್ರೋರಾತ್ರಿ ಕೋಟ್ಯಧಿಪತಿಯಾಗಿದ್ದಾರೆ.

ಕೇರಳದ ಬಹು ನಿರೀಕ್ಷಿತ ‘ತಿರುವೋಣಂ’ ಬಂಪರ್ ಲಾಟರಿ ಸಂಸ್ಥೆಯಿಂದ ೫೦೦ ರೂ. ಕೊಟ್ಟು ಒಂದು ಲಾಟರಿ ಟಿಕೆಟ್ ಖರೀದಿಸಿದ್ದ ಅಲ್ತಾಫ್‌ಗೆ ಲಾಟರಿ ಡ್ರಾನಲ್ಲಿ ಮೊದಲ ಬಹುಮಾನ ದೊರೆತಿದ್ದು, ಬರೋಬ್ಬರಿ ೨೫ ಕೋಟಿ ರೂ. ಗೆದ್ದುಕೊಂಡಿದ್ದಾರೆ. ೨೫ ಕೋಟಿ ರೂ. ಗಳಲ್ಲಿ ಎಲ್ಲ ತೆರಿಗೆ ಕಳೆದುಕೊಂಡು ೧೨. ೮೦ ಕೋಟಿ ರೂ. ಕೈಸೇರಲಿದೆ ಎಂದು ವಿಜೇತ ಅಲ್ತಾಫ್ ತಿಳಿಸಿದ್ದಾರೆ.

ದ್ವಿಚಕ್ರ ವಾಹನಗಳ ಮೆಕ್ಯಾನಿಕ್ ಆಗಿ ಕೆಲಸ ಮಾಡುತ್ತಿರುವ ಅಲ್ತಾಫ್ ತುಂಬಾ ಕಡುಬಡತನದಲ್ಲಿ ಜೀವನ ನಡೆಸುತ್ತಿರುವ ವ್ಯಕ್ತಿ. ಅಲ್ಲಿ ದುಡಿದು ಅಲ್ಲಿ ತಿನ್ನುತ್ತಿದ್ದ ಕುಟುಂಬ ಇವರದು. ಕಡುಬಡತನದಲ್ಲಿ ಜೀವನ ನಡೆಸುತ್ತಿರುವ ಅಲ್ತಾಫ್‌ಗೆ ಇರುವುದಕ್ಕೆ ಸ್ವಂತ ಮನೆ ಇಲ್ಲದೆ ತನ್ನ ಹೆಂಡತಿ ಮಕ್ಕಳೊಂದಿಗೆ ಪಟ್ಟಣದ ಬಸವನಗುಡಿ ಬಡಾವಣೆಯಲ್ಲಿ ಬಾಡಿಗೆ ಮನೆಯಲ್ಲಿ ಜೀವನ ನಡೆಸುತ್ತಿದ್ದಾರೆ. ಜೀವನ ನಿರ್ವಹಣೆಗಾಗಿ ಪಾಂಡವಪುರ ಪಟ್ಟಣದ ಮಂಡ್ಯ ರಸ್ತೆಯಲ್ಲಿ ಸಣ್ಣ ದೊಂದು ಪೆಟ್ಟಿಗೆ ಅಂಗಡಿ ಇಟ್ಟುಕೊಂಡು ಸ್ಕೂಟರ್ ಮೆಕ್ಯಾನಿಕ್ ನಡೆಸುತ್ತಿದ್ದಾರೆ.

ಸಣ್ಣಪುಟ್ಟ ಸಾಲ ಮಾಡಿಕೊಂಡು ತೀರಿಸಲಾಗದಷ್ಟು ಸಂಕಷ್ಟದ ಸ್ಥಿತಿಯಲ್ಲಿ ಬದುಕು ನಡೆಸುತ್ತಿದ್ದರು. ಇತ್ತೀಚೆಗೆ ಕೇರಳಕ್ಕೆ ಹೋಗಿದ್ದ ಅಲ್ತಾಫ್ ೫೦೦ ರೂ. ಕೊಟ್ಟು ಲಾಟರಿ ಖರೀದಿಸಿದ್ದರು. ಮೊನ್ನೆ ಹಣವಿಲ್ಲದೆ ತಮ್ಮ ಬಳಿ ಇದ್ದ ಲಾಟರಿ ಟಿಕೇಟನ್ನು ಪಕ್ಕದ ವೆಲ್ಡಿಂಗ್ ಶಾಪ್ ಅಂಗಡಿ ಮಾಲೀಕನಿಗೆ ಕೇವಲ ೨೫೦ ರೂ. ಗೆ ಮಾರಾಟ ಮಾಡಲು ಮುಂದಾಗಿದ್ದರು. ಆದರೆ, ಅಂಗಡಿ ಮಾಲೀಕ ೨೫೦ ರೂ. ಕೊಟ್ಟು ಲಾಟರಿ ಖರೀದಿಸಲು ನಿರಾಕರಿಸಿದರು. ಅದಾದ ಒಂದು ಗಂಟೆಗೆ ಆ ಲಾಟರಿಗೆ ೨೫ ಕೋಟಿ ರೂ. ಬಹುಮಾನ ಬಂದಿದೆ ಎಂದು ಅಲ್ತಾಫ್ ಸ್ನೇಹಿತ ಸಮಿವುಲ್ಲ ತಿಳಿಸಿದ್ದಾರೆ. ಅಲ್ತಾಫ್‌ಗೆ ಪತ್ನಿ ಸೀಮಾ ಹಾಗೂ ೨೧ ವರ್ಷದ ಮಗ ಹಾಗೂ ೧೮ ವರ್ಷದ ಮಗಳಿದ್ದಾರೆ. ಕಷ್ಟದಲ್ಲಿದ್ದ ಅಲ್ತಾಫ್ ತನ್ನ ಮಗನನ್ನು ಶಾಲೆಗೆ ಕಳುಹಿಸಲಾಗದೆ ಶಾಲೆ ಬಿಡಿಸಿ ಮಗನನ್ನೂ ಕೂಡ ತನ್ನ ಗ್ಯಾರೇಜ್‌ನಲ್ಲಿ ಇರಿಸಿಕೊಂಡು ಸ್ಕೂಟರ್ ರಿಪೇರಿ ಮಾಡುವ ಕೆಲಸ ಕಲಿಸುತ್ತಿದ್ದರು ಎನ್ನಲಾಗಿದೆ. ಅಂತಹ ಬಡವ ಅಲ್ತಾಫ್‌ಗೆ ಅದೃಷ್ಟ ಒಲಿದು ಬಂದಿದೆ. ಇದೀಗ ಕೋಟ್ಯಧೀಶನಾಗಿದ್ದು, ಬಹುಮಾನದ ಹಣ ಪಡೆದುಕೊಳ್ಳುವುದಕ್ಕಾಗಿ ಅಲ್ತಾಫ್ ಸ್ನೇಹಿತರೊಂದಿಗೆ ಕೇರಳಕ್ಕೆ ತೆರಳಿದ್ದಾರೆ.

ಸ್ವಂತ ಉದ್ಯಮ ನಡೆಸಲು ತೀರ್ಮಾನ ಲಾಟರಿಯಲ್ಲಿ ನನಗೆ ೨೫ ಕೋಟಿ ರೂ. ಬಂದಿದೆ ಎಂದ ತಕ್ಷಣ ತುಂಬಾ ಖುಷಿ ಆಯಿತು. ವಿಷಯ ತಿಳಿದು ನೇರವಾಗಿ ಮನೆಗೆ ಹೋಗಿ ನನ್ನ ಹೆಂಡತಿ ಮತ್ತು ಮಗಳಿಗೆ ವಿಷಯ ತಿಳಿಸಿದೆ. ಆದರೆ, ಅವರು ನನ್ನ ಮಾತನ್ನು ನಂಬಲಿಲ್ಲ. ಮೊಬೈಲ್‌ನಲ್ಲಿ ನನ್ನ ಲಾಟರಿ ಸಂಖ್ಯೆಗೆ ೨೫ ಕೋಟಿ ರೂ. ಬಹುಮಾನ ಬಂದಿರುವ ಮೆಸೇಜ್‌ನ್ನು ತೋರಿಸಿದಾಗ ಅವರಿಗೆ ನಂಬಿಕೆ ಬಂತು. ನನ್ನ ಹೆಂಡತಿ ಸಂತೋಷದಿಂದ ಕಣ್ಣೀರು ಹಾಕಿದರು ಎನ್ನುತ್ತಾರೆ ಅಲ್ತಾಫ್. ‌

ನಾನು ತುಂಬಾ ಕಷ್ಟದಲ್ಲಿ ಜೀವನ ನಡೆಸುತ್ತಿದ್ದೆ. ಇರುವುದಕ್ಕೂ ಸ್ವಂತ ಮನೆ ಇರಲಿಲ್ಲ. ಬಡತನದಲ್ಲಿ ಜೀವನ ನಡೆಸುತ್ತಿದ್ದೆವು. ನಾನು ಕುಟುಂಬ ಸಮೇತ ಮೈಸೂರಿಗೆ ಹೋಗಿ ನೆಲೆಸಬೇಕೆಂದು ತೀರ್ಮಾನ ಮಾಡಿಕೊಂಡಿದ್ದೆವು. ಕೇರಳಕ್ಕೆ ಹೋದಾಗ ನಾನು ೫೦೦ ರೂ. ಕೊಟ್ಟು ಲಾಟರಿ ಟಿಕೆಟ್ ಪಡೆದುಕೊಂಡಿದ್ದೆ. ಅಲ್ಲಾನ ದಯೆಯಿಂದ ನನಗೆ ಬಹುಮಾನ ಬಂದಿದೆ. ೨೫ ಕೋಟಿ ರೂ. ಗಳಲ್ಲಿ ತೆರಿಗೆ ಹಾಗೂ ಇನ್ನಿತರೆ ಎಲ್ಲ ಖರ್ಚು ವೆಚ್ಚ ಕಳೆದು ೧೨ ಕೋಟಿ ೮ ಲಕ್ಷ ರೂ. ಗಳು ಕೈಗೆ ಸೇರಲಿದೆ. ಎಲ್ಲ ಹಣವನ್ನೂ ನನ್ನ ಬ್ಯಾಂಕ್ ಖಾತೆಗೆ ಹಾಕಲಿದ್ದಾರೆ. ಬರುವ ಹಣದಲ್ಲಿ ಕೈಲಾದ ಸಮಾಜ ಸೇವೆ ಮಾಡಿ ಮೈಸೂರಿನಲ್ಲಿ ಸ್ವಂತ ಮನೆ ಖರೀದಿಸಿಕೊಂಡು ಸ್ವಂತ ಉದ್ಯಮ ನಡೆಸಲು ತೀರ್ಮಾನ ಮಾಡಿಕೊಂಡಿದ್ದೇ
– ಅಲ್ತಾಫ್‌, ಲಾಟರಿ ವಿಜೇತ

 

andolana

Recent Posts

ಮೈಸೂರು | ಹೀಲಿಯಂ ಅನಿಲ ಬಲೂನ್‌ ನಿಷೇಧ ; ಕಮಿಷನರ್‌ ಆದೇಶ

ಮೈಸೂರು : ಇತ್ತೀಚಿಗೆ ನಗರದ ಅರಮನೆ ಸಮೀಪದಲ್ಲಿ ಸಂಭವಿಸಿದ ಹೀಲಿಯಂ ಸಿಲಿಂಡರ್ ಸ್ಪೋಟ ಘಟನೆಗೆ ಸಂಬಂಧಿದಂತೆ, ಸಾರ್ವಜನಿಕ ಶಾಂತಿ, ಸುರಕ್ಷತೆ…

3 mins ago

ನಮೀಬಿಯಾ ವಿರುದ್ಧ ಗೆಲುವು : ಸೂಪರ್‌ 8 ಸುತ್ತಿಗೆ ಎಂಟ್ರಿ ಕೊಟ್ಟ ಪಾಕಿಸ್ತಾನ

ಕೊಲಂಬೊ : ಐಸಿಸಿ ಪುರುಷರ ಟಿ20 ವರ್ಲ್ಡ್ ಕಪ್ 2026ರಲ್ಲಿ ಪಾಕಿಸ್ತಾನ ತಂಡವು ತನ್ನ ಕೊನೆಯ ಲೀಗ್ ಪಂದ್ಯದಲ್ಲಿ ನಮೀಬಿಯಾವನ್ನು…

18 mins ago

ಸೇನಾ ವಿಚಾರ ಪ್ರಸ್ತಾಪಿಸಿದ ರಾಹುಲ್‌ ಗಾಂಧಿ: ಲೋಕಸಭೆಯಲ್ಲಿ ಗದ್ದಲ, ಕೋಲಾಹಲ

ನವದೆಹಲಿ: ಎಂ.ಎಂ.ನರವಣೆ ಅವರ ಅಪ್ರಕಟಿತ ಪುಸ್ತಕದ ಕುರಿತು ನಿಯತಕಾಲಿಕೆಯೊಂದರಲ್ಲಿ ಪ್ರಕಟವಾದ ಲೇಖನದ ಪ್ರತಿಯನ್ನು ರಾಹುಲ್‌ ಗಾಂಧಿ ಸದನದಲ್ಲಿ ಪ್ರದರ್ಶಿಸಿದರು. ಈ…

28 mins ago

ಭಾರತದಲ್ಲಿ ಎಐ ಪ್ರಯಾಣ ಅಸಾಧಾರಣವಾಗಿರಲಿದೆ : ಗೂಗಲ್‌ ಸಿಇಒ ಸುಂದರ್‌ ಪಿಚೈ

ಹೊಸದಿಲ್ಲಿ : ಗೂಗಲ್ ಸಿಇಒ ಸುಂದರ್ ಪಿಚೈ ಅವರು ಭಾರತದ ಕೃತಕ ಬುದ್ಧಿಮತ್ತೆ (AI) ಪ್ರಯಾಣವು "ಅಸಾಧಾರಣ" ಆಗಿರುವುದಾಗಿ ಹೇಳಿದ್ದಾರೆ.…

33 mins ago

ಮಹದೇಶ್ವರ ಬೆಟ್ಟ : ಮಹಾಶಿವರಾತ್ರಿ ಜಾತ್ರಾ ಮಹೋತ್ಸವಕ್ಕೆ ತೆರೆ

ಹನೂರು : ತಾಲ್ಲೂಕಿನ ಮಲೆಮಹದೇಶ್ವರ ಬೆಟ್ಟದಲ್ಲಿ ಮಹಾಶಿವರಾತ್ರಿ ಜಾತ್ರಾ ಮಹೋತ್ಸವದ ಕೊನೆಯ ದಿನವಾದ ಬುಧವಾರ ಲಕ್ಷಾಂತರ ಭಕ್ತರ ಸಮ್ಮುಖದಲ್ಲಿ ಮಹಾರಥೋತ್ಸವ…

49 mins ago

ಭಾರತೀಯ ಸೇನೆ ಬಗ್ಗೆ ರಾಹುಲ್‌ ಗಾಂಧಿ ಆಕ್ಷೇಪಾರ್ಹ ಹೇಳಿಕೆ

ನವದೆಹಲಿ: ಭಾರತ್‌ ಜೋಡೋ ಯಾತ್ರೆಯ ವೇಳೆ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಅವರು ಭಾರತೀಯ ಸೇನೆ ಬಗ್ಗೆ ಆಕ್ಷೇಪಾರ್ಹ ಹೇಳಿಕೆ…

52 mins ago