Andolana originals

ಜನನ, ಮರಣ ಪ್ರ ಮಾಣ ಪತ್ರವೂ ದುಬಾರಿ

ಎಚ್. ಎಸ್. ದಿನೇಶ್‌ಕುಮಾರ್
ಮೈಸೂರು: ಬಸ್ ದರ, ಪೆಟ್ರೋಲ್, ಹಾಲು ಹಾಗೂ ಇನ್ನಿತರ ವಸ್ತುಗಳ ದರ ಏರಿಕೆಯಿಂದ ತೊಂದರೆಗೊಳಗಾಗಿರುವ ಜನರಿಗೆ ಸರ್ಕಾರ ಮತ್ತೊಂದು ಬರೆ ಎಳೆದಿದ್ದು, ೫ ರೂ. ಗೆ ದೊರಕುತ್ತಿದ್ದ ಜನನ, ಮರಣ ಪ್ರಮಾಣಪತ್ರಗಳಿಗೆ ಇನ್ನು ಮುಂದೆ ಬರೋಬ್ಬರಿ ೫೦ ರೂ. ಶುಲ್ಕ ತೆರಬೇಕಿದೆ.

ಇಂದು ಜನರಿಗೆ ಬೇಕಾದ ಅತ್ಯವಶ್ಯಕ ದಾಖಲೆಗಳಲ್ಲಿ ಜನನ, ಮರಣ ಪ್ರಮಾಣ ಪತ್ರ ಕೂಡ ಒಂದು. ಹುಟ್ಟಿದ ಮಗುವನ್ನು ನಂತರದ ದಿನಗಳಲ್ಲಿ ಶಾಲೆಗೆ ಸೇರಿಸಲು, ಆಧಾರ್ ಕಾರ್ಡ್ ಮಾಡಿಸಲು ಹಾಗೂ ಇನ್ನಿತರ ಸಂದರ್ಭದಲ್ಲಿ ಜನನ ಪ್ರಮಾಣ ಪತ್ರ ಬೇಕೇಬೇಕು. ಇನ್ನು ಯಾವುದೇ ವ್ಯಕ್ತಿ ಮೃತಪಟ್ಟಲ್ಲಿ ಆತನ ಆಸ್ತಿ ಹಂಚಿಕೆ, ಸ್ವತ್ತುಗಳ ವಿಲೇವಾರಿ, ಬ್ಯಾಂಕ್ ವಹಿವಾಟು, ನ್ಯಾಯಾಲಯದಲ್ಲಿ ನಡೆಯುವ ವ್ಯಾಜ್ಯಗಳಿಗೆ ಮರಣ ಪತ್ರಗಳು ಅಗತ್ಯ ದಾಖಲೆಗಳಲ್ಲಿ ಪ್ರಮುಖವಾದುದು.

ಹೀಗಾಗಿ ಜನರು ನಗರಪಾಲಿಕೆ, ಗ್ರಾಪಂ ಸೇರಿದಂತೆ ಸ್ಥಳೀಯ ಸಂಸ್ಥೆಗಳ ಮೂಲಕ ಜನನ, ಮರಣ ಪ್ರಮಾಣ ಪತ್ರಗಳನ್ನು ತೆಗೆದು ಕೊಳ್ಳುತ್ತಾರೆ. ಇಷ್ಟು ದಿನಗಳು ಸಾರ್ವಜ ನಿಕರು ಈ ಪ್ರಮಾಣ ಪತ್ರಗಳನ್ನು ೫ ರೂ. ಶುಲ್ಕ ಪಾವತಿಸಿ ಪಡೆದುಕೊಳ್ಳುತ್ತಿದ್ದರು.

ಆದರೀಗ ಸರ್ಕಾರ ಹೊಸ ಆದೇಶವನ್ನು ಹೊರಡಿಸಿದ್ದು, ಇನ್ನು ಮುಂದೆ ಅಂದರೆ ಫೆ. ೪ ರಿಂದಲೇ ಜನನ ಹಾಗೂ ಮರಣ ಪ್ರಮಾಣ ಪತ್ರಗಳ ಶುಲ್ಕ ಏರಿಕೆಯಾಗಿದ್ದು, ೫ ರೂ. ಗೆ ಬದಲಾಗಿ ೫೦ ರೂ. ಪಾವತಿಸಿ ಪ್ರಮಾಣ ಪತ್ರ ಪಡೆಯಬೇಕಾಗಿದೆ.

ಸ್ಥಳೀಯ ಸಂಸ್ಥೆಗಳ ಮೂಲಕ ೨೫ ರೂ. ಪಾವತಿಸಿ ಐದು ಜನನ ಅಥವಾ ಮರಣ ಪ್ರಮಾಣ ಪತ್ರಗಳನ್ನು ಪಡೆದುಕೊಳ್ಳುತ್ತಿದ್ದವರು ಇನ್ನು ಮುಂದೆ ೨೫೦ ರೂ. ಶುಲ್ಕ ಪಾವತಿಸ ಬೇಕಾಗಿದೆ. ನಗರಾಭಿವೃದ್ಧಿ ಇಲಾಖೆ ಶುಲ್ಕ ವನ್ನು ಹತ್ತು ಪಟ್ಟು ಏರಿಕೆ ಮಾಡಿರುವುದು ಸಾರ್ವಜನಿಕರಲ್ಲಿ ಬೇಸರ ಮೂಡಿಸಿದೆ.

ಆದರೀಗ ೨೦ ರೂ. ಪಾವತಿಸಬೇಕಿದೆ. ೩೦ ದಿಗಳಿಂದ ಒಂದು ವರ್ಷದ ಒಳಗೆ ಪ್ರಮಾಣ ಪತ್ರ ಪಡೆಯಬೇಕಾದಲ್ಲಿ ೫ ರೂ. ದಂಡ ಪಾವತಿಸಬೇಕಿತ್ತು. ಇದೀಗ ೫೦ ರೂ. ಪಾವತಿಸಬೇಕಿದೆ.

ದಂಡದ ಮೊತ್ತ ಕೂಡ ಹೆಚ್ಚಳ: ಜನನ ಅಥವಾ ಮರಣ ಪ್ರಮಾಣ ಪತ್ರವನ್ನು ಘಟನೆ ಘಟಿಸಿದ ೨೧ ದಿನಗಳ ಒಳಗಾಗಿ ಅರ್ಜಿ ಸಲ್ಲಿಸಿ ಪಡೆಯಬೇಕು. ಹಾಗಾದಾಗ ಒಂದು ಪ್ರತಿ ಉಚಿತವಾಗಿ ನೀಡಲಾಗುತ್ತದೆ. ೨೧ ದಿನಗಳು ದಾಟಿದಲ್ಲಿ ೩೦ ದಿನಗಳ ಒಳಗಾಗಿ ಜನನ ಅಥವಾ ಮರಣ ಪತ್ರಕ್ಕೆ ಅರ್ಜಿ ಸಲ್ಲಿಸಿದಲ್ಲಿ ಇಷ್ಟು ದಿನ ೨ ರೂ. ದಂಡ ಪಾವತಿಸಬೇಕಿತ್ತು.

ನಗರಾಭಿವೃದ್ಧಿ ಇಲಾಖೆ ವತಿಯಿಂದ ಜನನ, ಮರಣ ಪ್ರಮಾಣಪತ್ರಗಳ ಶುಲ್ಕ ಹೆಚ್ಚಳವಾಗಿದೆ. ಬಹುದಿನಗಳ ಹಿಂದೆಯೇ ಹೆಚ್ಚಳವಾಗುವ ನಿರೀಕ್ಷೆ ಇತ್ತು. ಬೇರೆ ರಾಜ್ಯಗಳಿಗೆ ಹೋಲಿಸಿದಲ್ಲಿ ಸರ್ಕಾರ ನಿಗದಿಪಡಿಸಿರುವ ಹೊಸ ಶುಲ್ಕ ಕಡಿಮೆ ಇದೆ. ಸಾರ್ವಜನಿಕರು ಸಹಕರಿಸಬೇಕು. -ಎನ್. ಜಿ. ನಾಗರತ್ನ, ಸಹಾಯಕ ಸಾಂಖ್ಯಿಕ ನಿರ್ದೇಶಕರು.

ಅಧಿಕಾರಿಗಳ ಗಮನಕ್ಕೇ ಬಂದಿರಲಿಲ್ಲ ಮಂಗಳವಾರ ಬೆಳಿಗ್ಗೆ ಎಂದಿನಂತೆ ಜನನ, ಮರಣ ವಿಭಾಗದಲ್ಲಿ ಅಽಕಾರಿಗಳು ಹಾಗೂ ಸಿಬ್ಬಂದಿ ಕೆಲಸದಲ್ಲಿ ತೊಡಗಿದ್ದರು. ಮ. ೧೨ ಗಂಟೆ ವೇಳೆಗೆ ದಿಢೀರನೆ ಅವರ ಮುಂದಿರುವ ಕಂಪ್ಯೂಟರ್‌ಗಳಲ್ಲಿ ಶುಲ್ಕಗಳು ಬದಲಾದ . ಇದರಿಂದ ಅಽಕಾರಿಗಳು ಹಾಗೂ ಸಾರ್ವಜನಿಕರು ಗೊಂದಲಕ್ಕೀಡಾದರು. ನಂತರ ನಗರಾಭಿವೃದ್ಧಿ ಇಲಾಖೆಯಿಂದ ಅಽಕೃತ ಆದೇಶ ಹೊರಬಿತ್ತು. ಮ. ೧೨ ಗಂಟೆ ನಂತರ ಜನರು ಪರಿಷ್ಕೃತ ಶುಲ್ಕ ಪಾವತಿಸುವಂತಾಯಿತು.

ಆಂದೋಲನ ಡೆಸ್ಕ್

Recent Posts

ಕರ್ನಾಟಕದಲ್ಲಿ ಮುಂಗಾರು ವಿಳಂಬ: ಕಂಗಾಲಾದ ರೈತರು

ಬೆಂಗಳೂರು: ಕರ್ನಾಟಕದಲ್ಲಿ ಮುಂಗಾರು ವಿಳಂಬವಾಗಿದ್ದು, ಇದು ಉತ್ಪಾದನೆಯ ಮೇಲೆ ಪರಿಣಾಮ ಬೀರಬಹುದು. ಕೃಷಿ ಇಲಾಖೆಯ ಅಧಿಕಾರಿಗಳು ಬಿತ್ತನೆ ಗುರಿಯ ಶೇಕಡಾ…

3 hours ago

ಇದು ಕೇವಲ ಆರಂಭ: ಮುಂದೆ ಹೋರಾಟ ದೊಡ್ಡಮಟ್ಟದಲ್ಲಿ ಇದೆ ಎಂದ ನಿಖಿಲ್‌ ಕುಮಾರಸ್ವಾಮಿ

ರಾಮನಗರ: ಟೌನ್‌ಶಿಪ್ ಯೋಜನೆ ವಿರೋಧಿಸಿ ಜೆಡಿಎಸ್‌ ಕೈಗೊಂಡಿರುವ ಕೈಗೊಂಡಿರುವ ಬೃಹತ್‌ ಪಾದಯಾತ್ರೆಯಲ್ಲಿ ಮಾತನಾಡಿದ ಯುವನಾಯಕ ನಿಖಿಲ್‌ ಕುಮಾರಸ್ವಾಮಿ ಇದು ಕೇವಲ…

3 hours ago

ಓದುಗರ ಪತ್ರ: ಮೇಲ್ಮನೆಯ ಗಾಂಭೀರ್ಯ ಹೆಚ್ಚಿಸುವಂತೆ ಕಾರ್ಯನಿರ್ವವಹಿಸಲಿ

ರಾಜ್ಯ ವಿಧಾನ ಸಭೆಯಿಂದ ವಿಧಾನ ಪರಿಷತ್ತಿನ ಏಳು ಸ್ಥಾನಗಳಿಗೆ ಇತ್ತೀಚೆಗೆ ನಡೆದ ಚುನಾವಣೆಯಲ್ಲಿ ನಿರೀಕ್ಷೆಯಂತೆಯೇ ಕಾಂಗ್ರೆಸ್ ೫ ಹಾಗೂ ಬಿಜೆಪಿ…

6 hours ago

ಓದುಗರ ಪತ್ರ: ದೇವಿಯ ನೇರ ದರ್ಶನ ಭಾಗ್ಯ ಕಲ್ಪಿಸಿ

ಆಷಾಢ ಶುಕ್ರವಾರಗಳಂದು ( ಜುಲೈ ೧೭, ೨೪, ೩೧, ಆಗಸ್ಟ್ ೭ ರಂದು ಆಷಾಢ ಶುಕ್ರವಾರಗಳು) ಸಾವಿರಾರು ಭಕ್ತರು ಚಾಮುಂಡಿ…

6 hours ago

ಓದುಗರ ಪತ್ರ: ಕಾಲಾವಕಾಶ ನೀಡಬೇಕು

ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಸದ್ಯ,ಪೊಲೀಸ್ ಇಲಾಖೆಯ ಮೂರು ಸಾವಿರಕ್ಕೂ ಅಧಿಕ ಹುದ್ದೆಗಳ ನೇಮಕಾತಿ ಅಧಿಸೂಚನೆ ಹೊರಡಿಸಿ ಲಿಖಿತ ಪರೀಕ್ಷಾ ದಿನಾಂಕ…

7 hours ago

ಶಿವಾಜಿ ಗಣೇಶನ್‌ ಅವರ ವಾರದ ಅಂಕಣ: ಬಿಜೆಪಿ ಷಡ್ಯಂತ್ರದಿಂದ ಹಲವು ಪಕ್ಷಗಳು ಒಡಕಿನತ್ತ?

ದೇಶದ ಹಲವು ಕಡೆ ಮತ್ತೆ ಪಕ್ಷಾಂತರದ ಹಾವಳಿ ಶುರುವಾಗಿದೆ. ಕೇಂದ್ರದಲ್ಲಿನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರದ ಕೈವಾಡವಿಲ್ಲದೆ ಈ ಪಕ್ಷಾಂತರ…

7 hours ago