Categories: Andolana originals

ತೆಂಗು ಬೆಳೆಗೆ ಕಪ್ಪು ತಲೆ ಹುಳುವಿನ ಬಾಧೆ

ಕೆ.ಆರ್.ನಗರ, ಸಾಲಿಗ್ರಾಮ ತಾಲ್ಲೂಕುಗಳಲ್ಲಿ ತೆಂಗು ಬೆಳೆದ ರೈತರಿಗೆ ಸಂಕಷ್ಟ; ಅಧಿಕಾರಿಗಳಿಂದ ಸಲಹೆ
• ಭೇರ್ಯ ಮಹೇಶ್

ಕೆ.ಆರ್.ನಗರ: ಕಳೆದ ವರ್ಷದಿಂದ ಸರಿಯಾಗಿ ಮಳೆ- ಬೆಳೆಯಿಲ್ಲದೆ ಸಂಕಷ್ಟಕ್ಕೀಡಾಗಿದ್ದ ರೈತರಿಗೆ ಇದೀಗ ತೆಂಗು ಬೆಳೆಗೆ ತಗುಲಿರುವ ಕಪ್ಪುತಲೆ ಹುಳುವಿನ ಬಾಧೆ ಚಿಂತೆಗೀಡು ಮಾಡಿದೆ.

ಈಗ ಫಸಲು ಬೇಡ, ಮರ ಉಳಿದರೆ ಸಾಕು ಎನ್ನುತ್ತಿದ್ದಾರೆ ಅವಳಿತಾಲ್ಲೂಕುಗಳ ರೈತರು. ಅವಳಿ ತಾಲ್ಲೂಕುಗಳ ಬಹುತೇಕ ಕಡೆಗಳಲ್ಲಿ ತೆಂಗು ಬೆಳೆಗೆ ಕಪ್ಪು ತಲೆ ಹುಳುವಿನ ಬಾಧೆ ಹೆಚ್ಚಾಗಿದ್ದು, ತೋಟ ಗಾರಿಕೆ ಇಲಾಖೆ ಅಧಿಕಾರಿಗಳು ಮೋನೋಕ್ರೋಟೊಪಾಸ್ ಅಥವಾ ಅಜಾಡಿರೆಕ್ಷನ್ ಕೀಟನಾಶಕವನ್ನು ಸಿಂಪಡಣೆ ಮಾಡಲು ರೈತರಿಗೆ ಸಲಹೆ ನೀಡಿದ್ದಾರೆ.

ದಶಕಗಳಿಂದ ಕಪ್ಪುತಲೆ ಹುಳು ಬಾಧೆಯಿಂದ ಮರಗಳ ಗರಿ, ಸುಳಿ ಒಣಗಿ ಇಳುವರಿ ಕುಂಠಿತವಾಗುತ್ತಿದೆ ಎಂಬುದು ರೈತರ ಅಳಲು.

ಮರಗಳನ್ನು ರೋಗದಿಂದ ರಕ್ಷಿಸಲಾಗದೆ ಹಲವು ರೈತರು ಮರವನ್ನೇ ಕಡಿಯಲು ಮುಂದಾಗುತ್ತಾರೆ. ಇದರ ಜೊತೆಗೆ ನುಸಿಪೀಡೆ, ಬೆಂಕಿ ರೋಗ, ಗಿಡಗಳ ಸುಳಿ ರೋಗಗಳಿಂದಲೂ ರೈತರು ಕಂಗಾಲಾಗಿದ್ದಾರೆ.

ಕೆ.ಆರ್.ನಗರ ಮತ್ತು ಸಾಲಿಗ್ರಾಮ ಅವಳಿ ತಾಲ್ಲೂಕುಗಳಲ್ಲಿ ಅಂದಾಜು 1 ಸಾವಿರ ಎಕರೆಗೂ ಹೆಚ್ಚು ಪ್ರದೇಶದಲ್ಲಿ ಕಪ್ಪುತಲೆ ಹುಳುವಿನ ಬಾಧೆ ಕಾಣಿಸಿಕೊಂಡಿದ್ದು, ರೈತರು ತೋಟಗಾರಿಕೆ ಇಲಾಖೆಗೆ ಭೇಟಿ ನೀಡಿ ಬಾಧೆ ತಪ್ಪಿಸಲು ಸಮಗ್ರ ಮಾಹಿತಿ ಪಡೆದುಕೊಳ್ಳಬೇಕಾಗಿದೆ.

ಕಪ್ಪುತಲೆ ಹುಳುಗಳು ತೆಂಗಿನ ಮರದ ಗರಿ ತಿನ್ನುವ ಹುಳುಗಳಾಗಿವೆ. ಇತ್ತೀಚಿನ ದಿನಗಳಲ್ಲಿ ಈ ಕೀಟ ತೆಂಗು ಬೆಳೆಯುವ ಪ್ರದೇಶದಲ್ಲಿ ಕಾಣಿಸಿಕೊಂಡು ತೆಂಗಿನ ಬೆಳೆಗೆ ಹೆಚ್ಚಾಗಿ ಹಾನಿಯನ್ನುಂಟು ಮಾಡುತ್ತಿದೆ.

ಈ ಕೀಟ ಗಾಳಿಯಲ್ಲಿ ಹರಡುವ ಮೂಲಕ ಹೆಚ್ಚು ಪ್ರದೇಶದಲ್ಲಿ ವ್ಯಾಪಿಸಿ ತೆಂಗಿನ ಮರಗಳಿಗೆ ಹಾನಿಯನ್ನುಂಟು ಮಾಡುತ್ತದೆ. ಎಲೆಯ ಹಸಿರು ಭಾಗಗಳನ್ನು ಕೆರೆದು ತಿನ್ನುತ್ತದೆ. ಈ ಹುಳುಗಳನ್ನು ಹತೋಟಿ ಮಾಡದಿದ್ದರೆ ಶೇ.60ರಷ್ಟು ಇಳುವರಿ ಕುಂಠಿತಗೊಂಡು ಕಾಲಕ್ರಮೇಣ ಮರ ಪ್ರಯೋಜನಕ್ಕೆ ಬಾರದಂತಾಗುತ್ತದೆ.

ಕೀಟಗಳಿಂದ ಮರ ಉಳಿಸಿಕೊಳ್ಳುವ ವಿಧಾನ: ತೆಂಗಿನ ಮರಗಳಲ್ಲಿ ಹಾನಿಯು ಪ್ರಾಥಮಿಕ ಹಂತದಲ್ಲಿದ್ದರೆ ತೋಟಗಳಲ್ಲಿ ಬಿದ್ದ ಗರಿಗಳು, ಇತರ ಕಸ ಕಡ್ಡಿಗಳನ್ನು ಸಂಗ್ರಹಿಸಿ ಸ್ವಚ್ಛವಾಗಿಡಬೇಕು. ಹುಳು ಇರುವ ಭಾಗಗಳು ಅಥವಾ ಗರಿಗಳನ್ನು ಕತ್ತರಿಸಿ ಸುಡಬೇಕು. ಕಪ್ಪುತಲೆ ಹುಳು ಮರಿಹುಳುವಿನ ಹಂತದಲ್ಲಿದಾಗ ಗೋನಿಯೋಜಸ್, ನೆಫಾಂಟಿಡಿಸ್ ಪರೋಪಜೀವಿಗಳನ್ನು ಕೀಟಬಾಧಿತ ಮರಕ್ಕೆ ಸುಮಾರು 15ರಿಂದ 20ರಂತೆ ಬಿಡುಗಡೆ ಮಾಡಬೇಕು.

ಕೀಟಬಾಧೆಯು ತೀವ್ರತೆಯ ಹಂತ ತಲುಪಿದಾಗ ಯಾಂತ್ರಿಕ ಮತ್ತು ಜೈವಿಕ ವಿಧಾನಗಳಿಂದ ಹತೋಟಿಗೆ ಬಾರದಿದ್ದಲ್ಲಿ ರಾಸಾಯನಿಕ ವಿಧಾನ ಅವಶ್ಯವಾಗಿರುತ್ತದೆ. ಸಣ್ಣ ಮರಗಳಿಗೆ 15 ಮಿ.ಲೀ. ಮೋನೋ ಕ್ರೋಟೋ ಫಾಸ್ ಕೀಟನಾಶಕಗಳನ್ನು 10 ಲೀಟರ್ ನೀರಿನಲ್ಲಿ ಬೆರೆಸಿ ಗರಿಗಳ ಕೆಳಭಾಗ ಸಂಪೂರ್ಣ ಒದ್ದೆಯಾಗುವಂತೆ ಸಿಂಪಡಿ ಸಬೇಕು. ಮರಿಹುಳುಗಳಿಗೆ ತೆಂಗಿನ ಬೇರಿನ ಮೂಲಕ ಕೀಟನಾಶಕಗಳನ್ನು ಸಿಂಪಡಣೆ ಮಾಡಬೇಕು ಎಂದು ಈಗಾ ಗಲೇ ತೋಟಗಾರಿಕೆ ಇಲಾಖೆ ಅಧಿಕಾರಿ ಗಳು ಗ್ರಾಮ ಪಂಚಾಯಿತಿ ಮಟ್ಟದಲ್ಲಿ ನಡೆಯುವ ಸಭೆಯಲ್ಲಿ ರೈತರಿಗೆ ಮನವರಿಕೆ ಮಾಡಿ ಕೊಡುತ್ತಿದ್ದಾರೆ.

“ತೆಂಗಿನ ಮರಕ್ಕೆ ಕಪ್ಪುಹುಳುವಿನ ಬಾಧೆ ಹೆಚ್ಚಾದ ಹಿನ್ನೆಲೆಯಲ್ಲಿ ತೆಂಗಿನ ಮರಗಳಲ್ಲಿ ಇಳುವರಿ ಕಡಿಮೆಯಾಗಿದೆ. ಜೊತೆಗೆ ನುಸಿಪೀಡೆ ರೋಗ, ಬೆಂಕಿರೋಗ ಹಾಗೂ ಸುಳಿ ರೋಗಗಳಿಂದ ಈ ಬಾರಿ ತೆಂಗಿನ ಮರಗಳು ನೆಲ ಕಚ್ಚಿವೆ. ಮುಖ್ಯಮಂತ್ರಿಗಳ ತವರು ಜಿಲ್ಲೆಯಲ್ಲಿ ತೆಂಗಿನ ಮರಗಳು ಹಾನಿಯಾಗಿವೆ. ಕೂಡಲೇ ಸರ್ಕಾರ ವಿಶೇಷ ಪ್ಯಾಕೇಜ್ ಘೋಷಣೆ ಮಾಡಿ ತೆಂಗು ಬೆಳೆಗಾರರ ಹಿತ ಕಾಪಾಡಬೇಕು.”
ಜೆ.ಎಂ.ಕುಮಾರ್, ಗೌರವಾಧ್ಯಕ್ಷ, ಕರ್ನಾಟಕ ರೈತ ಪರ್ವ ಸಂಘ.

“ಕಳೆದ ವರ್ಷ ಬರ ಇದ್ದ ಹಿನ್ನೆಲೆಯಲ್ಲಿ ತೆಂಗಿನ ಬೆಳೆಗೆ ಕಪ್ಪುತಲೆ ಹುಳುವಿನ ಬಾಧೆ ಹೆಚ್ಚಾಗಿ ಕಾಣಿಸಿಕೊಂಡಿತ್ತು. ತೆಂಗು ಬೆಳೆ ಅಭಿವೃದ್ಧಿ ಮಂಡಳಿ ವತಿಯಿಂದ ಹೋಬಳಿಯ ಯಾವುದಾದರೂ ಒಂದು ತೋಟದಲ್ಲಿ ಕಪ್ಪುತಲೆ ಹುಳುವಿನ ಬಾಧೆಯನ್ನು ಹತೋಟಿಗೆ ತರಲು ರೈತರಿಗೆ ತರಬೇತಿ ಹಾಗೂ ಪ್ರಾತ್ಯಕಿಕೆ ಕಾರ್ಯಕ್ರಮ ನಡೆಸಲಾಗುತ್ತಿದೆ. ಮಳೆ ಉತ್ತಮವಾಗಿದ್ದರೆ ಹತೋಟಿಗೆ ಬರುತ್ತದೆ. ಪೋಷಕಾಂಶ ಮತ್ತು ನೀರನ್ನು ಹೆಚ್ಚಾಗಿ ತೆಂಗಿನ ಮರಕ್ಕೆ ನೀಡಿದರೆ 3-4 ವರ್ಷಗಳಲ್ಲಿ ಹತೋಟಿಗೆ ಬರುತ್ತದೆ.”
-ಟಿ.ಎಸ್.ಭಾರತಿ, ಹಿರಿಯ ತೋಟಗಾರಿಕೆ ನಿರ್ದೇಶಕರು

 

ಆಂದೋಲನ ಡೆಸ್ಕ್

Recent Posts

ಸಂಸದ ಯದುವೀರ್‌ ಪ್ರಯತ್ನದ ಫಲಶ್ರುತಿ : ತಂಬಾಕು ಮಾರಾಟಕ್ಕೆ ಅನುಮತಿ

ಅಧಿಸೂಚನೆ ಹೊರಡಿಸಿದ ಕೇಂದ್ರ ಸರ್ಕಾರ ಮೈಸೂರು : ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ವ್ಯಾಪ್ತಿಯ ತಂಬಾಕು ಬೆಳೆಗಾರರ ಸಮಸ್ಯೆಗಳು ಹಾಗೂ ಮಾರಾಟ…

4 hours ago

ಅರಮನೆ ಫಲಪುಷ್ಪ ಪ್ರದರ್ಶನ | ಸಂಗೀತ ಸಂಜೆಯಲ್ಲಿ ಪ್ರೇಕ್ಷಕರು ತಲ್ಲೀನ

ಮೈಸೂರು : ಮೈಸೂರು ಅರಮನೆ ಮಂಡಳಿ ವತಿಯಿಂದ ಕ್ರಿಸ್‌ಮಸ್ ಹಾಗೂ ಹೊಸವರ್ಷದ ಪ್ರಯುಕ್ತ 10 ದಿನಗಳ ‘ಅರಮನೆ ಫಲಪುಷ್ಪ ಪ್ರದರ್ಶನ’…

6 hours ago

ಎತ್ತಿನ ಗಾಡಿಗೆ ಸಾರಿಗೆ ಬಸ್‌ ಡಿಕ್ಕಿ : ಎತ್ತು ಸಾವು

ಹಲಗೂರು : ಎತ್ತಿನ ಗಾಡಿ ತೆರಳುತ್ತಿದ್ದ ವೇಳೆ ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಎತ್ತು ಸ್ಥಳದಲ್ಲೇ ಮೃತಪಟ್ಟ ಘಟನೆ…

6 hours ago

ಮುತ್ತತ್ತಿ : ಕಾವೇರಿ ನದಿ ಸೆಳೆತಕ್ಕೆ ಸಿಲುಕಿ ಯುವಕ ಸಾವು

ಹಲಗೂರು : ಇಲ್ಲಿಗೆ ಸಮೀಪದ ಮುತ್ತತ್ತಿ ಕಾವೇರಿ ನದಿಯಲ್ಲಿ ಈಜಾಡುತ್ತಿದ್ದ ವೇಳೆ ನೀರಿನ ಸೆಳೆತಕ್ಕೆ ಸಿಲುಕಿ ಯುವಕ ಮೃತಪಟ್ಟಿರುವ ಘಟನೆ…

6 hours ago

ಪೊಲೀಸ್‌ ಭದ್ರತೆಯಲ್ಲಿ ದೇಗುಲ ಪ್ರವೇಶಿಸಿದ ದಲಿತ ಮಹಿಳೆಯರು : ಶಾಂತಿ ಸಭೆಯಲ್ಲಿ ಪಂಚ ಬೇಡಿಕೆ

ಭಾರತೀನಗರ : ಇಲ್ಲಿಗೆ ಸಮೀಪದ ಕೆ.ಶೆಟ್ಟಹಳ್ಳಿ ಗ್ರಾಮದಲ್ಲಿ ಪೊಲೀಸರ ಭದ್ರತೆಯೊಂದಿಗೆ ಗ್ರಾಮದ ಪರಿಶಿಷ್ಟ ಜಾನಾಂಗದ ಮಹಿಳೆಯರು, ಪುರುಷರು ದೇವಾಲಯಗಳಿಗೆ ಪ್ರವೇಶಿಸಿದರು.…

6 hours ago

ಅಕ್ರಮ ವಿದ್ಯುತ್‌ ಸಂಪರ್ಕ: 31 ಪ್ರಕರಣ ದಾಖಲು, 2.17 ಲಕ್ಷ ರೂ. ದಂಡ

ಮೈಸೂರು : ಅಕ್ರಮವಾಗಿ ವಿದ್ಯುತ್‌ ಸಂಪರ್ಕ ಪಡೆದಿರುವ ಸಂಬಂಧ ಯಶಸ್ವಿ ಕಾರ್ಯಾಚರಣೆ ನಡೆಸಿದ ಚಾಮುಂಡೇಶ್ವರಿ ವಿದ್ಯುತ್‌ ಸರಬರಾಜು ನಿಗಮ ನಿಯಮಿತ(ಚಾವಿಸನಿನಿ)…

7 hours ago