Andolana originals

ದಾನಿಗಳು ನೀಡಿದ ಉತ್ಸವಮೂರ್ತಿಗಳಿಗೆ ದಿಗ್ಬಂಧನ!

ಆನಂದ್ ಹೊಸೂರು

ಚುಂಚನಕಟ್ಟೆ ಶ್ರೀರಾಮ ದೇವಾಲಯದ ಕೊಠಡಿಯಲ್ಲಿ ವರ್ಷದಿಂದಲೂ ಇರಿಸಲಾಗಿರುವ ವಿಗ್ರಹಗಳನ್ನು ಬಳಸಲು ಆಗ್ರಹ 

ಹೊಸೂರು: ಸಾಲಿಗ್ರಾಮ ತಾಲ್ಲೂಕಿನ ಚುಂಚನಕಟ್ಟೆಯ ಪುರಾಣ ಪ್ರಸಿದ್ಧ ಶ್ರೀಕೋದಂಡರಾಮ ದೇಗುಲದಲ್ಲಿ ದಾನಿಗಳು ಮಾಡಿಸಿಕೊಟ್ಟ ಅಂದಾಜು ೪.೫ ಲಕ್ಷ ರೂ. ವೆಚ್ಚದ ಶ್ರೀರಾಮ, ಸೀತಾ ಮತ್ತು ಲಕ್ಷ ಣ ಮೂರ್ತಿಗಳಿಗೆ ಒಂದು ವರ್ಷದಿಂದಲೂ ಪೂಜೆ ಮಾಡಿ, ಪ್ರಾಣ ಪ್ರತಿಷ್ಠಾಪನಾ ಕಾರ್ಯ ಗಳನ್ನು ಮಾಡದೆ ಕೊಠಡಿಯಲ್ಲಿ ಇಟ್ಟಿರುವುದಕ್ಕೆ ಜನರಿಂದ ಆಕ್ರೋಶ ವ್ಯಕ್ತವಾಗಿದೆ.

ಶ್ರೀ ಕೋದಂಡರಾಮ ದೇಗುಲದ ಉತ್ಸವಮೂರ್ತಿಗಳು ಕೆ.ಆರ್.ನಗರದ ಲಕ್ಷ್ಮೀನಾರಾಯಣ ದೇವಾಲಯ ಹಾಗೂ ಚುಂಚನಕಟ್ಟೆಯ ದೇವಾಲಯಗಳಲ್ಲಿ ಬಳಕೆಯಾಗುತ್ತಿದ್ದು, ಇದನ್ನು ಮನಗಂಡ ಹಿಂದಿನ ಇಒ ರಘು ಅವರು ದೇವಾಲಯಕ್ಕೆ ಹೊಸದಾಗಿ ಮೂರ್ತಿಗಳನ್ನು ಪಡೆಯಲು ಹಲವು ದಾನಿಗಳನ್ನು ಹುಡುಕಿ ಒಟ್ಟುಗೂಡಿಸಿ ಮೂರು ವಿಗ್ರಹಗಳನ್ನು ಮಾಡಿಸಿದ್ದರು.  ಆದರೆ ಕಳೆದ ಜನವರಿಯಿಂದಲೂ ವಿಗ್ರಹಗಳನ್ನು ಆಡಳಿತ ಕಚೇರಿಯಲ್ಲಿ ಬಟ್ಟೆ ಯಿಂದ ಮುಚ್ಚಿಟ್ಟಿರುವುದು ಭಕ್ತಾದಿಗಳ ಆಕ್ರೋಶಕ್ಕೆ ಕಾರಣವಾಗಿದೆ.

ವಿಗ್ರಹಗಳಿಗೆ ಆಗಮಶಾಸ್ತ್ರದ ಪೂಜಾ ಕೈಂಕರ್ಯಗಳನ್ನು ನೆರವೇರಿಸಿ ದೇವಾಲಯದ ಕಾರ್ಯಗಳಿಗೆ ಬಳಸಲು ಏನು ಅಡ್ಡಿ ಎಂಬ ಪ್ರಶ್ನೆಗೆ ಉತ್ತರ ಇಲ್ಲವಾಗಿದೆ. ಈ ಮೂರ್ತಿಗಳಿಂದಲೇ ಭಕ್ತಾದಿಗಳು ಗರುಡೋತ್ಸವ, ರಥೋತ್ಸವ,ನೇಮೋತ್ಸವಗಳನ್ನು ಮಾಡಿ ಮೆರವಣಿಗೆ ಮಾಡುವ ಕೆಲಸ ಮಾಡಬೇಕಿದೆ. ನಿತ್ಯ ದೂರದ ಊರುಗಳಿಂದ ದೇವರ ಸೇವೆಗೆ ಬರುವ ಭಕ್ತರು ಉತ್ಸವಾದಿಗಳು ಬಂದ್ ಆಗಿರುವುದರಿಂದ ನಿರಾಸೆಯಿಂದ ಹಿಂತಿರುಗುತ್ತಿದ್ದಾರೆ. ದೇವಾಲಯದ ಆದಾಯಕ್ಕೂ ಹೊಡೆತ ಬಿದ್ದಿದೆ.

ಈ ಬಗ್ಗೆ ದೇವಾಲಯದ ಆಡಳಿತವನ್ನು ಪ್ರಶ್ನಿಸಿದರೆ ಶೀಘ್ರದಲ್ಲೇ ಕಾರ್ಯ ನೆರವೇರಿಸುವುದಾಗಿ ಹೇಳುತ್ತಾರೆಯೇ ಹೊರತು ಕಾರ್ಯರೂಪಕ್ಕೆ ಬಂದಿಲ್ಲ. ದೇವಾಲಯದ ಪೂಜಾ ಕೈಂಕರ್ಯಗಳಿಗೆ ಕಳಶಪ್ರಾಯವಾಗಿರುವ ಉತ್ಸವಮೂರ್ತಿಗಳಿಲ್ಲದೇ ವಿವಿಧ ಸೇವಾ ಕಾರ್ಯಗಳು ನಿಂತು ಹೋಗಿದ್ದು, ಜನವರಿ ತಿಂಗಳಲ್ಲಿ ಬ್ರಹ್ಮರಥೋತ್ಸವ ಇರುವ ಕಾರಣ ಶಾಸಕರು, ಮುಜರಾಯಿ ಇಲಾಖೆ ಅಧಿಕಾರಿಗಳು ರಥೋತ್ಸವದ ಒಳಗೆ ಉತ್ಸವ ಮೂರ್ತಿಗಳಿಗೆ ಪೂಜಾ ಭಾಗ್ಯ ಕರುಣಿಸಬೇಕಿದೆ.

” ದೇವಾಲಯಕ್ಕೆ ಭಕ್ತರು ನೀಡಿರುವ ಉತ್ಸವಮೂರ್ತಿಗಳನ್ನು ಕೊಠಡಿಯಲ್ಲಿ ಮುಚ್ಚಿಟ್ಟಿರುವುದು ಖಂಡನೀಯ. ಕೂಡಲೇ ಉತ್ಸವಮೂರ್ತಿಗಳಿಗೆ ಪೂಜೆ ಸಲ್ಲಿಸುವ ಅವಕಾಶ ಕಲ್ಪಿಸಬೇಕು.”

-ಅಂಗಡಿ ಕುಮಾರ್, ವ್ಯಾಪಾರಿ

” ಈ ವಿಚಾರ ನನ್ನ ಗಮನಕ್ಕೆ ಬಂದಿದ್ದು ಪೂಜೆಗಾಗಿ ದಿನಾಂಕ ನಿಗದಿ ಮಾಡಿದ್ದು, ಅಂದೇ ಈದ್‌ಮಿಲಾದ್ ಹಬ್ಬವೂ ಬಂದ ಕಾರಣ ಬೇರೆ ದಿನಾಂಕ ನಿಗದಿ ಮಾಡಬೇಕಿದೆ. ಶೀಘ್ರದಲ್ಲಿ ಪೂಜೆ ನೆರವೇರಿಸಿ ವಿಗ್ರಹಗಳನ್ನು ದೇವತಾ ಕಾರ್ಯಗಳಿಗೆ ಬಳಸಿಕೊಳ್ಳಲಾಗುವುದು.”

-ರುಖಿಯಾ ಬೇಗಂ, ತಹಸಿಲ್ದಾರ್, ಸಾಲಿಗ್ರಾಮ

ಆಂದೋಲನ ಡೆಸ್ಕ್

Recent Posts

ತಾಪಮಾನ ಇಳಿಕೆ : ಬೆಂಗಳೂರಲ್ಲಿ ಚಳಿ ಹೆಚ್ಚಳ

ಬೆಂಗಳೂರು : ಬೆಂಗಳೂರಿನಲ್ಲಿ ಕನಿಷ್ಠ 15 ಡಿಗ್ರಿ ಸೆಲ್ಸಿಯಸ್ ಮತ್ತು ಗರಿಷ್ಟ ತಾಪಮಾನ 26 ಡಿಗ್ರಿ ಸೆಲ್ಸಿಯಸ್ ವರೆಗೆ ಇರುತ್ತದೆ…

4 hours ago

ಸಿಎ ಸೈಟ್‌ ಕಟ್ಟಡ ನಿರ್ಮಾಣ ಕಾಲಮಿತಿ ; 3 ವರ್ಷದಿಂದ 5 ವರ್ಷ ಹೆಚ್ಚಳದ ಭರವಸೆ

ಬೆಳಗಾವಿ : ಸರ್ಕಾರದಿಂದ ಪಡೆದ ಸಿಎ ನಿವೇಶನಗಳಲ್ಲಿ ಕಟ್ಟಡ ನಿರ್ಮಾಣ ಮಾಡಲು ಈಗಿರುವ ಮೂರು ವರ್ಷಗಳ ಮಿತಿಯನ್ನು ಐದು ವರ್ಷಗಳಿಗೆ…

4 hours ago

ಮೈಸೂರು : ಆನ್‌ಲೈನ್‌ನಲ್ಲಿ ವೈದ್ಯರೊಬ್ಬರಿಗೆ 82 ಲಕ್ಷ ರೂ. ವಂಚನೆ

ಮೈಸೂರು : ಭಾರತೀಯ ದೂರ ಸಂಪರ್ಕ ನಿಯಂತ್ರಣ ಪ್ರಾಧಿಕಾರ(ಟ್ರಾಯ್) ಹಾಗೂ ಮುಂಬೈನ ಬಾಂಧ್ರಾ ಪೊಲೀಸ್ ಅಧಿಕಾರಿ ಸೋಗಿನಲ್ಲಿ ನಗರದ ವೈದ್ಯರೊಬ್ಬರಿಗೆ…

4 hours ago

SC/ST ದೌರ್ಜನ್ಯ ತಡೆ : ನಾಗರಿಕ ಹಕ್ಕು ಜಾರಿ ನೂತನ ಠಾಣೆ ಮೈಸೂರಲ್ಲಿ ಕಾರ್ಯರಂಭ

ಮೈಸೂರು : ಜಾತಿ ನಿಂದನೆ, ಅಸ್ಪೃಶ್ಯತೆ ಆಚರಣೆ ಪ್ರಕರಣಗಳಿಗೆ ಸಂಬಂಧಿಸಿದಂತೆ ದೂರು ದಾಖಲು ಹಾಗೂ ತನಿಖೆ ನಡೆಸುವ ಉದ್ದೇಶದಿಂದ ಆರಂಭಗೊಂಡಿರುವ…

4 hours ago

ಕೆಪಿಎ-ಮಹಿಳಾ-ಮಕ್ಕಳ ಅಭಿವೃದ್ಧಿ ಸಂಸ್ಥೆ ನಡುವೆ ಒಡಂಬಡಿಕೆ

ಮೈಸೂರು : ಕರ್ನಾಟಕ ಪೊಲೀಸ್ ಅಕಾಡೆಮಿ ಮತ್ತು ಸಾವಿತ್ರಿಬಾಯಿ ಫುಲೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಂಸ್ಥೆಯ ನಡುವೆ ಒಡಂಬಡಿಕೆಗೆ…

4 hours ago

ಮೈಸೂರಲ್ಲಿ ಎಸ್.ಎಲ್.ಬೈರಪ್ಪ ಸ್ಮಾರಕ ನಿರ್ಮಾಣ : ಸಿಎಂ ಘೋಷಣೆ

ಬೆಳಗಾವಿ (ಸುವರ್ಣಸೌಧ) : ಇತ್ತೀಚೆಗೆ ನಿಧನರಾದ ಸಾಹಿತಿ ಎಸ್.ಎಲ್.ಭೈರಪ್ಪ ಅವರ ಸ್ಮಾರಕವನ್ನು ಮೈಸೂರಿನಲ್ಲಿ ನಿರ್ಮಿಸಲು ತೀರ್ಮಾನಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ…

4 hours ago