Andolana originals

ದಾನಿಗಳು ನೀಡಿದ ಉತ್ಸವಮೂರ್ತಿಗಳಿಗೆ ದಿಗ್ಬಂಧನ!

ಆನಂದ್ ಹೊಸೂರು

ಚುಂಚನಕಟ್ಟೆ ಶ್ರೀರಾಮ ದೇವಾಲಯದ ಕೊಠಡಿಯಲ್ಲಿ ವರ್ಷದಿಂದಲೂ ಇರಿಸಲಾಗಿರುವ ವಿಗ್ರಹಗಳನ್ನು ಬಳಸಲು ಆಗ್ರಹ 

ಹೊಸೂರು: ಸಾಲಿಗ್ರಾಮ ತಾಲ್ಲೂಕಿನ ಚುಂಚನಕಟ್ಟೆಯ ಪುರಾಣ ಪ್ರಸಿದ್ಧ ಶ್ರೀಕೋದಂಡರಾಮ ದೇಗುಲದಲ್ಲಿ ದಾನಿಗಳು ಮಾಡಿಸಿಕೊಟ್ಟ ಅಂದಾಜು ೪.೫ ಲಕ್ಷ ರೂ. ವೆಚ್ಚದ ಶ್ರೀರಾಮ, ಸೀತಾ ಮತ್ತು ಲಕ್ಷ ಣ ಮೂರ್ತಿಗಳಿಗೆ ಒಂದು ವರ್ಷದಿಂದಲೂ ಪೂಜೆ ಮಾಡಿ, ಪ್ರಾಣ ಪ್ರತಿಷ್ಠಾಪನಾ ಕಾರ್ಯ ಗಳನ್ನು ಮಾಡದೆ ಕೊಠಡಿಯಲ್ಲಿ ಇಟ್ಟಿರುವುದಕ್ಕೆ ಜನರಿಂದ ಆಕ್ರೋಶ ವ್ಯಕ್ತವಾಗಿದೆ.

ಶ್ರೀ ಕೋದಂಡರಾಮ ದೇಗುಲದ ಉತ್ಸವಮೂರ್ತಿಗಳು ಕೆ.ಆರ್.ನಗರದ ಲಕ್ಷ್ಮೀನಾರಾಯಣ ದೇವಾಲಯ ಹಾಗೂ ಚುಂಚನಕಟ್ಟೆಯ ದೇವಾಲಯಗಳಲ್ಲಿ ಬಳಕೆಯಾಗುತ್ತಿದ್ದು, ಇದನ್ನು ಮನಗಂಡ ಹಿಂದಿನ ಇಒ ರಘು ಅವರು ದೇವಾಲಯಕ್ಕೆ ಹೊಸದಾಗಿ ಮೂರ್ತಿಗಳನ್ನು ಪಡೆಯಲು ಹಲವು ದಾನಿಗಳನ್ನು ಹುಡುಕಿ ಒಟ್ಟುಗೂಡಿಸಿ ಮೂರು ವಿಗ್ರಹಗಳನ್ನು ಮಾಡಿಸಿದ್ದರು.  ಆದರೆ ಕಳೆದ ಜನವರಿಯಿಂದಲೂ ವಿಗ್ರಹಗಳನ್ನು ಆಡಳಿತ ಕಚೇರಿಯಲ್ಲಿ ಬಟ್ಟೆ ಯಿಂದ ಮುಚ್ಚಿಟ್ಟಿರುವುದು ಭಕ್ತಾದಿಗಳ ಆಕ್ರೋಶಕ್ಕೆ ಕಾರಣವಾಗಿದೆ.

ವಿಗ್ರಹಗಳಿಗೆ ಆಗಮಶಾಸ್ತ್ರದ ಪೂಜಾ ಕೈಂಕರ್ಯಗಳನ್ನು ನೆರವೇರಿಸಿ ದೇವಾಲಯದ ಕಾರ್ಯಗಳಿಗೆ ಬಳಸಲು ಏನು ಅಡ್ಡಿ ಎಂಬ ಪ್ರಶ್ನೆಗೆ ಉತ್ತರ ಇಲ್ಲವಾಗಿದೆ. ಈ ಮೂರ್ತಿಗಳಿಂದಲೇ ಭಕ್ತಾದಿಗಳು ಗರುಡೋತ್ಸವ, ರಥೋತ್ಸವ,ನೇಮೋತ್ಸವಗಳನ್ನು ಮಾಡಿ ಮೆರವಣಿಗೆ ಮಾಡುವ ಕೆಲಸ ಮಾಡಬೇಕಿದೆ. ನಿತ್ಯ ದೂರದ ಊರುಗಳಿಂದ ದೇವರ ಸೇವೆಗೆ ಬರುವ ಭಕ್ತರು ಉತ್ಸವಾದಿಗಳು ಬಂದ್ ಆಗಿರುವುದರಿಂದ ನಿರಾಸೆಯಿಂದ ಹಿಂತಿರುಗುತ್ತಿದ್ದಾರೆ. ದೇವಾಲಯದ ಆದಾಯಕ್ಕೂ ಹೊಡೆತ ಬಿದ್ದಿದೆ.

ಈ ಬಗ್ಗೆ ದೇವಾಲಯದ ಆಡಳಿತವನ್ನು ಪ್ರಶ್ನಿಸಿದರೆ ಶೀಘ್ರದಲ್ಲೇ ಕಾರ್ಯ ನೆರವೇರಿಸುವುದಾಗಿ ಹೇಳುತ್ತಾರೆಯೇ ಹೊರತು ಕಾರ್ಯರೂಪಕ್ಕೆ ಬಂದಿಲ್ಲ. ದೇವಾಲಯದ ಪೂಜಾ ಕೈಂಕರ್ಯಗಳಿಗೆ ಕಳಶಪ್ರಾಯವಾಗಿರುವ ಉತ್ಸವಮೂರ್ತಿಗಳಿಲ್ಲದೇ ವಿವಿಧ ಸೇವಾ ಕಾರ್ಯಗಳು ನಿಂತು ಹೋಗಿದ್ದು, ಜನವರಿ ತಿಂಗಳಲ್ಲಿ ಬ್ರಹ್ಮರಥೋತ್ಸವ ಇರುವ ಕಾರಣ ಶಾಸಕರು, ಮುಜರಾಯಿ ಇಲಾಖೆ ಅಧಿಕಾರಿಗಳು ರಥೋತ್ಸವದ ಒಳಗೆ ಉತ್ಸವ ಮೂರ್ತಿಗಳಿಗೆ ಪೂಜಾ ಭಾಗ್ಯ ಕರುಣಿಸಬೇಕಿದೆ.

” ದೇವಾಲಯಕ್ಕೆ ಭಕ್ತರು ನೀಡಿರುವ ಉತ್ಸವಮೂರ್ತಿಗಳನ್ನು ಕೊಠಡಿಯಲ್ಲಿ ಮುಚ್ಚಿಟ್ಟಿರುವುದು ಖಂಡನೀಯ. ಕೂಡಲೇ ಉತ್ಸವಮೂರ್ತಿಗಳಿಗೆ ಪೂಜೆ ಸಲ್ಲಿಸುವ ಅವಕಾಶ ಕಲ್ಪಿಸಬೇಕು.”

-ಅಂಗಡಿ ಕುಮಾರ್, ವ್ಯಾಪಾರಿ

” ಈ ವಿಚಾರ ನನ್ನ ಗಮನಕ್ಕೆ ಬಂದಿದ್ದು ಪೂಜೆಗಾಗಿ ದಿನಾಂಕ ನಿಗದಿ ಮಾಡಿದ್ದು, ಅಂದೇ ಈದ್‌ಮಿಲಾದ್ ಹಬ್ಬವೂ ಬಂದ ಕಾರಣ ಬೇರೆ ದಿನಾಂಕ ನಿಗದಿ ಮಾಡಬೇಕಿದೆ. ಶೀಘ್ರದಲ್ಲಿ ಪೂಜೆ ನೆರವೇರಿಸಿ ವಿಗ್ರಹಗಳನ್ನು ದೇವತಾ ಕಾರ್ಯಗಳಿಗೆ ಬಳಸಿಕೊಳ್ಳಲಾಗುವುದು.”

-ರುಖಿಯಾ ಬೇಗಂ, ತಹಸಿಲ್ದಾರ್, ಸಾಲಿಗ್ರಾಮ

ಆಂದೋಲನ ಡೆಸ್ಕ್

Recent Posts

ಜೂನ್‌ 21ರಂದು ನೀಟ್-ಯುಜಿ 2026ರ ಮರು ಪರೀಕ್ಷೆ

ನವದೆಹಲಿ : ಪ್ರಶ್ನೆಪತ್ರಿಕೆ ಸೋರಿಕೆ ಆರೋಪದ ಹಿನ್ನೆಲೆಯಲ್ಲಿ ರದ್ದುಗೊಂಡಿದ್ದ ‘ನೀಟ್-ಯುಜಿ 2026’ ವೈದ್ಯಕೀಯ ಪ್ರವೇಶ ಪರೀಕ್ಷೆಯ ಮರು ಪರೀಕ್ಷೆ ಜೂನ್…

49 mins ago

ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ ; ಪ್ರತಿಷ್ಠಿತ ಕಾನ್‌ ಚಿತ್ರೋತ್ಸವದಲ್ಲಿ ಭಾರತ ಚಿತ್ರೋದ್ಯಮ

ಉತ್ಸವಗಳ ಉತ್ಸವ ಎಂದೇ ಪ್ರತೀತಿ ಪಡೆದಿರುವ ಅಂತಾರಾಷ್ಟ್ರೀಯ ಚಿತ್ರೋತ್ಸವ ಫ್ರಾನ್ಸ್‌ನ ಕಾನ್‌ನದು. ಇದೀಗ ಮೊನ್ನೆ ಅದರ ೭೯ನೇ ಆವೃತ್ತಿಗೆ ಚಾಲನೆ…

4 hours ago

ಗಗನಮುಖಿಯಾಗಿದ್ದ ತೆಂಗಿನ ಕಾಯಿ ದರ ಕುಸಿತ

ಎಚ್‌.ಎಸ್.ದಿನೇಶ್‌ ಕುಮಾರ್‌ ಮೈಸೂರು : ಕಳೆದ ವರ್ಷ ಗಗನಕ್ಕೇರಿದ್ದ ತೆಂಗಿನಕಾಯಿ ಬೆಲೆ ಇದೀಗ ಶೇ. ೫೦ರಷ್ಟು ದರ ಇಳಿದಿದೆ. ಇದರಿಂದಾಗಿ…

5 hours ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಮೇ.15  ಶುಕ್ರವಾರ

5 hours ago

ತಮಿಳುನಾಡಿನಲ್ಲಿ ಮದ್ಯ ಖರೀದಿ ಮತ್ತು ಸೇವನೆಗೆ 21 ವರ್ಷ ವಯಸ್ಸು ಕಡ್ಡಾಯ

ಚೆನ್ನೈ: ರಾಜ್ಯದಲ್ಲಿ ಅಪ್ರಾಪ್ತ ವಯಸ್ಕರಲ್ಲಿ ಹೆಚ್ಚುತ್ತಿರುವ ಮದ್ಯ ಸೇವನೆಯನ್ನು ತಡೆಯಲು, ತಮಿಳುನಾಡು ಸರ್ಕಾರವು ಎಲ್ಲಾ ರೀತಿಯ ಮದ್ಯ ಖರೀದಿ ಮತ್ತು…

18 hours ago

ಮುಂದಿನ ಐದು ದಿನಗಳ ಕಾಲ ರಾಜ್ಯದಲ್ಲಿ ಭಾರೀ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು: ದಕ್ಷಿಣ ಒಳನಾಡು ಹಾಗೂ ಉತ್ತರ ಒಳನಾಡಿನ ಕೆಲವು ಜಿಲ್ಲೆಗಳಿಗೆ ಪೂರ್ವ ಮುಂಗಾರು ಆರ್ಭಟ ಮುಂದುವರಿದಿದೆ. ನಾಳೆ ಮತ್ತಷ್ಟು ತೀವ್ರತೆ…

18 hours ago