Andolana originals

ದಾನಿಗಳು ನೀಡಿದ ಉತ್ಸವಮೂರ್ತಿಗಳಿಗೆ ದಿಗ್ಬಂಧನ!

ಆನಂದ್ ಹೊಸೂರು

ಚುಂಚನಕಟ್ಟೆ ಶ್ರೀರಾಮ ದೇವಾಲಯದ ಕೊಠಡಿಯಲ್ಲಿ ವರ್ಷದಿಂದಲೂ ಇರಿಸಲಾಗಿರುವ ವಿಗ್ರಹಗಳನ್ನು ಬಳಸಲು ಆಗ್ರಹ 

ಹೊಸೂರು: ಸಾಲಿಗ್ರಾಮ ತಾಲ್ಲೂಕಿನ ಚುಂಚನಕಟ್ಟೆಯ ಪುರಾಣ ಪ್ರಸಿದ್ಧ ಶ್ರೀಕೋದಂಡರಾಮ ದೇಗುಲದಲ್ಲಿ ದಾನಿಗಳು ಮಾಡಿಸಿಕೊಟ್ಟ ಅಂದಾಜು ೪.೫ ಲಕ್ಷ ರೂ. ವೆಚ್ಚದ ಶ್ರೀರಾಮ, ಸೀತಾ ಮತ್ತು ಲಕ್ಷ ಣ ಮೂರ್ತಿಗಳಿಗೆ ಒಂದು ವರ್ಷದಿಂದಲೂ ಪೂಜೆ ಮಾಡಿ, ಪ್ರಾಣ ಪ್ರತಿಷ್ಠಾಪನಾ ಕಾರ್ಯ ಗಳನ್ನು ಮಾಡದೆ ಕೊಠಡಿಯಲ್ಲಿ ಇಟ್ಟಿರುವುದಕ್ಕೆ ಜನರಿಂದ ಆಕ್ರೋಶ ವ್ಯಕ್ತವಾಗಿದೆ.

ಶ್ರೀ ಕೋದಂಡರಾಮ ದೇಗುಲದ ಉತ್ಸವಮೂರ್ತಿಗಳು ಕೆ.ಆರ್.ನಗರದ ಲಕ್ಷ್ಮೀನಾರಾಯಣ ದೇವಾಲಯ ಹಾಗೂ ಚುಂಚನಕಟ್ಟೆಯ ದೇವಾಲಯಗಳಲ್ಲಿ ಬಳಕೆಯಾಗುತ್ತಿದ್ದು, ಇದನ್ನು ಮನಗಂಡ ಹಿಂದಿನ ಇಒ ರಘು ಅವರು ದೇವಾಲಯಕ್ಕೆ ಹೊಸದಾಗಿ ಮೂರ್ತಿಗಳನ್ನು ಪಡೆಯಲು ಹಲವು ದಾನಿಗಳನ್ನು ಹುಡುಕಿ ಒಟ್ಟುಗೂಡಿಸಿ ಮೂರು ವಿಗ್ರಹಗಳನ್ನು ಮಾಡಿಸಿದ್ದರು.  ಆದರೆ ಕಳೆದ ಜನವರಿಯಿಂದಲೂ ವಿಗ್ರಹಗಳನ್ನು ಆಡಳಿತ ಕಚೇರಿಯಲ್ಲಿ ಬಟ್ಟೆ ಯಿಂದ ಮುಚ್ಚಿಟ್ಟಿರುವುದು ಭಕ್ತಾದಿಗಳ ಆಕ್ರೋಶಕ್ಕೆ ಕಾರಣವಾಗಿದೆ.

ವಿಗ್ರಹಗಳಿಗೆ ಆಗಮಶಾಸ್ತ್ರದ ಪೂಜಾ ಕೈಂಕರ್ಯಗಳನ್ನು ನೆರವೇರಿಸಿ ದೇವಾಲಯದ ಕಾರ್ಯಗಳಿಗೆ ಬಳಸಲು ಏನು ಅಡ್ಡಿ ಎಂಬ ಪ್ರಶ್ನೆಗೆ ಉತ್ತರ ಇಲ್ಲವಾಗಿದೆ. ಈ ಮೂರ್ತಿಗಳಿಂದಲೇ ಭಕ್ತಾದಿಗಳು ಗರುಡೋತ್ಸವ, ರಥೋತ್ಸವ,ನೇಮೋತ್ಸವಗಳನ್ನು ಮಾಡಿ ಮೆರವಣಿಗೆ ಮಾಡುವ ಕೆಲಸ ಮಾಡಬೇಕಿದೆ. ನಿತ್ಯ ದೂರದ ಊರುಗಳಿಂದ ದೇವರ ಸೇವೆಗೆ ಬರುವ ಭಕ್ತರು ಉತ್ಸವಾದಿಗಳು ಬಂದ್ ಆಗಿರುವುದರಿಂದ ನಿರಾಸೆಯಿಂದ ಹಿಂತಿರುಗುತ್ತಿದ್ದಾರೆ. ದೇವಾಲಯದ ಆದಾಯಕ್ಕೂ ಹೊಡೆತ ಬಿದ್ದಿದೆ.

ಈ ಬಗ್ಗೆ ದೇವಾಲಯದ ಆಡಳಿತವನ್ನು ಪ್ರಶ್ನಿಸಿದರೆ ಶೀಘ್ರದಲ್ಲೇ ಕಾರ್ಯ ನೆರವೇರಿಸುವುದಾಗಿ ಹೇಳುತ್ತಾರೆಯೇ ಹೊರತು ಕಾರ್ಯರೂಪಕ್ಕೆ ಬಂದಿಲ್ಲ. ದೇವಾಲಯದ ಪೂಜಾ ಕೈಂಕರ್ಯಗಳಿಗೆ ಕಳಶಪ್ರಾಯವಾಗಿರುವ ಉತ್ಸವಮೂರ್ತಿಗಳಿಲ್ಲದೇ ವಿವಿಧ ಸೇವಾ ಕಾರ್ಯಗಳು ನಿಂತು ಹೋಗಿದ್ದು, ಜನವರಿ ತಿಂಗಳಲ್ಲಿ ಬ್ರಹ್ಮರಥೋತ್ಸವ ಇರುವ ಕಾರಣ ಶಾಸಕರು, ಮುಜರಾಯಿ ಇಲಾಖೆ ಅಧಿಕಾರಿಗಳು ರಥೋತ್ಸವದ ಒಳಗೆ ಉತ್ಸವ ಮೂರ್ತಿಗಳಿಗೆ ಪೂಜಾ ಭಾಗ್ಯ ಕರುಣಿಸಬೇಕಿದೆ.

” ದೇವಾಲಯಕ್ಕೆ ಭಕ್ತರು ನೀಡಿರುವ ಉತ್ಸವಮೂರ್ತಿಗಳನ್ನು ಕೊಠಡಿಯಲ್ಲಿ ಮುಚ್ಚಿಟ್ಟಿರುವುದು ಖಂಡನೀಯ. ಕೂಡಲೇ ಉತ್ಸವಮೂರ್ತಿಗಳಿಗೆ ಪೂಜೆ ಸಲ್ಲಿಸುವ ಅವಕಾಶ ಕಲ್ಪಿಸಬೇಕು.”

-ಅಂಗಡಿ ಕುಮಾರ್, ವ್ಯಾಪಾರಿ

” ಈ ವಿಚಾರ ನನ್ನ ಗಮನಕ್ಕೆ ಬಂದಿದ್ದು ಪೂಜೆಗಾಗಿ ದಿನಾಂಕ ನಿಗದಿ ಮಾಡಿದ್ದು, ಅಂದೇ ಈದ್‌ಮಿಲಾದ್ ಹಬ್ಬವೂ ಬಂದ ಕಾರಣ ಬೇರೆ ದಿನಾಂಕ ನಿಗದಿ ಮಾಡಬೇಕಿದೆ. ಶೀಘ್ರದಲ್ಲಿ ಪೂಜೆ ನೆರವೇರಿಸಿ ವಿಗ್ರಹಗಳನ್ನು ದೇವತಾ ಕಾರ್ಯಗಳಿಗೆ ಬಳಸಿಕೊಳ್ಳಲಾಗುವುದು.”

-ರುಖಿಯಾ ಬೇಗಂ, ತಹಸಿಲ್ದಾರ್, ಸಾಲಿಗ್ರಾಮ

ಆಂದೋಲನ ಡೆಸ್ಕ್

Recent Posts

ಪ್ರಧಾನ್‌ ರಾಜೀನಾಮೆ : ವಾಂಗ್ಚುಕ್‌ ಫಸ್ಟ್‌ ರಿಯಾಕ್ಷನ್‌

ನವದೆಹಲಿ : ಕೇಂದ್ರ ಶಿಕ್ಷಣ ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ ಕುರಿತು ಹೋರಾಟಗಾರ ಸೋನಮ್‌ ವಾಂಗ್ಚುಕ್‌ ಮೊದಲ ಪ್ರತಿಕ್ರಿಯೆ…

24 mins ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಜುಲೈ 25 ಶನಿವಾರ  

9 hours ago

ನೋಟ-ಪ್ರತಿನೋಟ | ಮೈಸೂರು ದಸರಾದಲ್ಲಿ ಕಂಬಳ ಆಯೋಜನೆ ಸರಿಯೇ? ತಪ್ಪೇ?

ಮೈಸೂರು ದಸರಾ ಮಹೋತ್ಸವದಲ್ಲಿ ಇದೇ ಪ್ರಥಮವಾಗಿ ಕಂಬಳ ಆಯೋಜನೆಗೆ ರಾಜ್ಯ ಸರ್ಕಾರ ಮುಂದಾಗಿದೆ. ಕಂಬಳಕ್ಕಾಗಿ ಮೈಸೂರಿನಲ್ಲಿ ಸ್ಥಳ ನಿಗದಿಪಡಿಸಿದ್ದು, ಸಿದ್ಧತೆ…

9 hours ago

ಗಾಂಧಿ ಅಭಿಯಾನ ಅರಿವಿನ ಯಾನ | ಗಾಂಧಿಗೆ ಅಜ್ಜಿ ಒಡವೆ ನೀಡಿದ ಪ್ರಸಂಗ…

ನನ್ನ ಅಜ್ಜಿ ಯಾವಾಗಲೂ ಒಂದು ಮಾತು ಹೇಳುತ್ತಿದ್ದರು. ಗಾಂಧಿ ಹಕ್ಕಿಯ ಹಾಗೆ ಇದ್ದರು ಮತ್ತು ನಿರುಪದ್ರವಿ ಎಂದು. ಗಾಂಽಯ ಕಾಲದಲ್ಲಿ…

9 hours ago

ಗಾಂಧಿ ಅಭಿಯಾನ ಅರಿವಿನ ಯಾನ | ಗಾಂಧಿಯ ಉಡುಪು ಯಾಕೆ ಬದಲಾಯಿತು?

  ಡಾ.ಪ್ರಮೀಳಾದೇವಿ ಬಿ.ಕೆ. ಮಹಾತ್ಮಗಾಂಧಿ ಇಂಗ್ಲೆಂಡಿನಲ್ಲಿದ್ದಾಗಲೂ, ಅಲ್ಲಿಂದ ಹಿಂತಿರುಗಿದಾಗ, ಮತ್ತು ಆರಂಭದ ದಿನಗಳಲ್ಲಿ ಅವರು ಎಲ್ಲಾ ವಿದ್ಯಾವಂತರಂತೆ ಬೆಲೆಬಾಳುವ ಸೂಟುಬೂಟು…

9 hours ago

ಗಾಂಧಿ ಅಭಿಯಾನ ಅರಿವಿನ ಯಾನ ; ಸಜ್ಜನನಾದ ಆಂಗ್ಲನಾಗುವ ಪ್ರಯತ್ನ

ಶಾಕಾಹಾರದಲ್ಲಿ ದಿನದಿನಕ್ಕೂ ನನ್ನ ನಂಬಿಕೆ ಹೆಚ್ಚುತ್ತಲೇ ಹೋಯಿತು. ಸಾಲ್ಟ್‌ರ ಗ್ರಂಥದ ವ್ಯಾಸಂಗದಿಂದ, ಆಹಾರದ ವಿಷಯಕ್ಕೆ ಸಂಬಂಧಿಸಿದ ಗ್ರಂಥಗಳನ್ನು ಅಭ್ಯಾಸ ಮಾಡಲು…

9 hours ago