Andolana originals

ಅರೆಬರೆ ಸ್ಥಳಾಂತರಗೊಂಡಿರುವ ಬೊಕ್ಕಹಳ್ಳಿ

ಅಲ್ಲಿದೆ ಹೊಸ ಊರು, ನದಿ ಮಗ್ಗುಲಿನಲ್ಲೇ ಉಳಿದಿದೆ ಹಳೇ ಊರು

ಮೈಸೂರು/ನಂಜನಗೂಡು: ಈ ಊರಿನ ಅಂಚಿನಲ್ಲಿ ನಿಂತು ನೋಡಿದರೆ ಕಪಿಲಾ ನದಿಯ ವಿಹಂಗಮ ನೋಟ ಕಣ್ಣಿಗೆ ದಕ್ಕುತ್ತದೆ. ನೀರು ಯಾರ ಹಂಗೂ ಇಲ್ಲದೆ ಓಡುತ್ತಿರುತ್ತದೆ. ಹೊಸದಾಗಿ ನೋಡಿದವರಿಗೆ ಮನೋಲ್ಲಾಸ. ಆದರೆ, ಸ್ಥಳೀಯರಿಗೂ ಪ್ರವಾಹದ ಭೀತಿ ನಿರಂತರವಾಗಿ ಕಾಡುತ್ತದೆ.

ನೇರವಾಗಿ ಊರಿನಲ್ಲೇ ಮಳೆಯಾದರೆ ಚಿಂತೆ ಇಲ್ಲ. ಆದರೆ, ದೂರದ ಕೇರಳದ ವಯನಾಡಿನಲ್ಲಿ ಮಳೆ ಬಂದರೆ ಈ ಗ್ರಾಮದ ಜನರಿಗೆ ಚಿಂತೆ. ಏಕೆಂದರೆ ಅಲ್ಲಿ ಜೋರಾಗಿ ಮಳೆ ಸುರಿದರೆ, ಕಬಿನಿ ಅಣೆಕಟ್ಟೆಯಿಂದ ನೀರಿನ ಹೊರಹರಿವು ಹೆಚ್ಚಳವಾಗುತ್ತದೆ. ಕಪಿಲಾ ನದಿಯು ಈ ಗ್ರಾಮದ ಮನೆಗಳಿಗೆ ನುಗ್ಗಿ ತುಂಟಾಟವಾಡುತ್ತದೆ. ಸ್ಥಳೀಯ ನಿವಾಸಿಗಳಿಗೆ ಅದು ಸಂಕಟಕ್ಕೆ ಕಾರಣವಾಗುತ್ತದೆ. ನಂಜನಗೂಡು ತಾಲ್ಲೂಕಿನ ಬೊಕ್ಕಹಳ್ಳಿ ಗ್ರಾಮಕ್ಕೆ ಪ್ರವಾಹ ಪರಿಸ್ಥಿತಿ ಸಂತ್ರಸ್ತರ ಪಾಡು ವರದಿಗಾಗಿ ‘ಆಂದೋಲನ’ ದಿನಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ರಲ್ಲಿ ಕೋಟಿ ಅವರ ನೇತೃತ್ವದಲ್ಲಿ ಸ್ಥಳಕ್ಕೆ ತೆರಳಿದ್ದ ‘ಆಂದೋಲನ’ ದಿನಪತ್ರಿಕೆಯ ತಂಡವನ್ನು ಕಂದಾಯ ಇಲಾಖೆ ಅಧಿಕಾರಿಗಳು ಎಂದು ಸ್ಥಳೀಯರು ಭಾವಿಸಿದಂತೆ ಇತ್ತು.

ವಾಸ್ತವ ವಿಷಯವನ್ನು ಹೇಳಿದ ನಂತರ ಅವರ ಕುತೂಹಲ ಬೇರೆ ಮಜಲಿಗೆ ಹೊರಳಿತು. ಈಗ ಕೆಲ ದಿನಗಳ ಹಿಂದೆ ಬಂದಿತ್ತಲ್ಲ ಪ್ರವಾಹ ಆಗ ನೀರು ಈ ಅಂಬೇಡ್ಕ‌ರ್ ಸಮುದಾಯ ಭವನವನ್ನು ದಾಟಿ, ಊರೊಳಗಿರುವ ಹಲವು ಮನೆಗಳಿಗೆ ನುಗ್ಗಿತ್ತು. ನಮ್ಮ ಮನೆಗೂ ಬಂದಿತ್ತು. ಅವತ್ತು ರಾತ್ರಿ ನಮ್ಮ ತಾಯಿಯನ್ನು ಸುರಕ್ಷಿತವಾಗಿದ್ದ ಬಂಧುಗಳ ಮನೆಗೆ ಕಳುಹಿಸಿ, ನಾನು ಮಾತ್ರ ಮನೆಯಲ್ಲೇ ಮಲಗಿದ್ದೆ ಎಂದವರು ಗ್ರಾಮದ ರಂಗಸ್ವಾಮಿ. ಇತ್ತೀಚೆಗೆ ನದಿಯಲ್ಲಿ ಪ್ರಳಯೋಪಾದಿಯಲ್ಲಿ ಪ್ರವಾಹ ಉಕ್ಕೇರಿತು.
ನಮ್ಮ ಊರಿನ ಸಮಸ್ಯೆಯ ಬಗ್ಗೆ ಹಲವು ವರ್ಷಗಳಿಂದಲೂ ಸಂಬಂಧಪಟ್ಟ ಎಲ್ಲ ಅಧಿಕಾರಿಗಳು, ಜನಪ್ರತಿನಿಧಿಗಳ ಗಮನಕ್ಕೆ ತರುತ್ತಲೇ ಇದ್ದೇವೆ. ಪ್ರಯೋಜನವಾಗಿಲ್ಲ ಎಂಬುದು ಗ್ರಾಮದ ಯುವಕ ಪ್ರಜ್ವಲ್ ಅಳಲು.‌

1962ರಲ್ಲೇ ಸ್ಥಳಾಂತರ; ಅಪೂರ್ಣ
ಕಪಿಲಾ ನದಿಯ ಅಂಚಿನಲ್ಲಿರುವ ಈ ಊರೇ ಹಳೇ ಬೊಕ್ಕಹಳ್ಳಿ. 1962ರಲ್ಲೇ ನದಿಯಲ್ಲಿ ಉಂಟಾಗುತ್ತಿದ್ದ ಪ್ರವಾಹದಿಂದ ಜನರು ತಾಪತ್ರಯ ಪಡುತ್ತಿದ್ದುದನ್ನು ಗಮನಿಸಿದ ಜನಪ್ರತಿನಿಧಿಗಳು, ಇಲ್ಲಿಂದ ಸುಮಾರು 2 ಕಿ.ಮೀ. ದೂರದಲ್ಲಿರುವ ಸುರಕ್ಷಿತ ಸ್ಥಳದಲ್ಲಿ ಈ ಊರಿನವರೆಲ್ಲರಿಗೂ ನಿವೇಶನ ಒದಗಿಸಿದ್ದರು. ಹಲವರು ಅಲ್ಲಿಗೆ ಹೋಗಿ ನೆಲೆಸಿದರು. ಅದು ಹೊಸ ಬೊಕ್ಕಹಳ್ಳಿ ಎಂದಾಯಿತು. ಆದರೆ, ಒಂದೊಂದು ಕುಟುಂಬದಲ್ಲಿ ಮೂರಾಲ್ಕು ಮಕ್ಕಳಿದ್ದು, ಅವರ ಪೈಕಿ ಒಬ್ಬರು ಅಥವಾ ಇಬ್ಬರ ಕುಟುಂಬಗಳು ಮಾತ್ರ ಹೊಸ ಬೊಕ್ಕಹಳ್ಳಿಗೆ ತೆರಳಿದವು. ಇತರರು ಹಳೇ ಊರಿನಲ್ಲೇ ನೆಲೆಸಿದರು. ಪ್ರವಾಹ ಮಾತ್ರ ನಿರಂತರವಾಗಿ ಹಳೇ ಊರನ್ನು ಕಾಡುತ್ತಲೇ ಇದೆ ಎನ್ನುತ್ತಾರೆ ಗ್ರಾಮದ 70 ವರ್ಷ ವಯಸ್ಸಿನ ದೊಡ್ಡಯ್ಯ ಅವರು. ಯಾರಾದರೂ ನಮ್ಮ ಸಮಸ್ಯೆ ಬಗೆಹರಿಸಿ ಬಿಡಲಿ ಎಂಬ ಆಶಾಭಾವನೆ ಅವರ ಕಣ್ಣಲ್ಲಿ ಕಂಡಂತಾಯಿತು.

ಜಲಾವೃತವಾಗಿದ್ದ ಸಂದರ್ಭದಲ್ಲಿ ಬೊಕ್ಕಹಳ್ಳಿ ಗ್ರಾಮದಲ್ಲಿ ಜನ ಸಂಚಾರ ಜನಪ್ರತಿನಿಧಿಗಳು ಮನಸ್ಸು ಮಾಡಬೇಕು ನಮ್ಮ ಅಣ್ಣತಮ್ಮಂದಿರು ಹೊಸ ಊರಿನಲ್ಲಿ ಇದ್ದಾರೆ. ಈಗ ನಾವು ಕೂಡ ಸ್ಥಳಾಂತರಗೊಳ್ಳಲು ಸಿದ್ಧವಾಗಿದ್ದೇವೆ. ಇದಕ್ಕೆ ಜನಪ್ರತಿನಿಧಿಗಳು ಸಹಾಯ ಮಾಡಲು ಮುಂದಾಗಬೇಕು.
-ಪುಟ್ಟಸ್ವಾಮಿ, ಬೊಕ್ಕಹಳ್ಳಿ.

ಹೊಸ ಜಾಗಕ್ಕೆ ಹೋಗುವುದಕ್ಕೆ ಸಿದ್ಧ ಈ ಹಳೇ ಬೊಕ್ಕಹಳ್ಳಿಯಲ್ಲಿ ಸುಮಾರು 80 ಕುಟುಂಬಗಳಿವೆ. ನಮ್ಮನ್ನು ಸ್ಥಳಾಂತರ ಮಾಡುವುದಕ್ಕೆ ಈಗಾಗಲೇ 6 ಎಕರೆ ಜಾಗ ಗುರುತಿಸಿದ್ದಾರೆ. ಅದು ಸಾಕಾಗುವು ದಿಲ್ಲ. ಕನಿಷ್ಠ ಇನ್ನೂ ಎರಡೂವರೆ ಎಕರೆಗಳ ಷ್ಟಾದರೂ ಸೇರಿಸಿ ಕೊಟ್ಟರೆ ಇಲ್ಲಿರುವ ಎಲ್ಲರೂ ಹೊಸ ಜಾಗಕ್ಕೆ ಹೋಗುವುದಕ್ಕೆ ಸಿದ್ಧವಾಗಿದ್ದೇವೆ.
-ದೊಡ್ಡಯ್ಯ, ಬೊಕ್ಕಹಳ್ಳಿ.

ಆಂದೋಲನ ಡೆಸ್ಕ್

Recent Posts

ದ್ವಿತೀಯ ಪಿಯುಸಿ ಫಲಿತಾಂಶ: ಇದೊಂದು ಐತಿಹಾಸಿಕ ದಿನ ಎಂದ ಮಧು ಬಂಗಾರಪ್ಪ

ಬೆಂಗಳೂರು: ಈ ಬಾರಿ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ 5.46,698 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು, ಕರ್ನಾಟಕಕ್ಕೆ ಮೊದಲ ಬಾರಿ ಶೇ.86.48ರಷ್ಟು ಫಲಿತಾಂಶ ಬಂದಿದೆ…

8 hours ago

ಎರಡು ಕ್ಷೇತ್ರಗಳ ಉಪಚುನಾವಣೆ ಮತದಾನ ಮುಕ್ತಾಯ: ವೋಟಿಂಗ್‌ ಪ್ರಮಾಣವೆಷ್ಟು.?

ದಾವಣಗೆರೆ/ಬಾಗಲಕೋಟೆ: ರಾಜ್ಯದ ದಾವಣಗೆರೆ ದಕ್ಷಿಣ ಮತ್ತು ಬಾಗಲಕೋಟೆ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಇಂದು ಮತದಾನ ನಡೆದಿದ್ದು, ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ.…

8 hours ago

ಚಾಮುಂಡಿಬೆಟ್ಟದಲ್ಲಿ ನಡೆಯುತ್ತಿದ್ದ ಕಾಮಗಾರಿಗಳಿಗೆ ಹೈಕೋರ್ಟ್‌ ತಡೆಯಾಜ್ಞೆ

ಬೆಂಗಳೂರು: ನಾಡಿನ ಅಧಿದೇವತೆ ನೆಲೆಸಿರುವ ಮೈಸೂರಿನ ಚಾಮುಂಡಿಬೆಟ್ಟದಲ್ಲಿ ಕೇಂದ್ರ ಸರ್ಕಾರದ ಅನುದಾನದಡಿ ನಡೆಯುತ್ತಿದ್ದ ಕಾಮಗಾರಿಗಳಿಗೆ ಹೈಕೋರ್ಟ್‌ ತಡೆಯಾಜ್ಞೆ ನೀಡಿದೆ. ಹೈಕೋರ್ಟ್‌…

9 hours ago

ಬೆಂಗಳೂರಿನಲ್ಲಿ ಮುಂದಿನ ಮೂರು ದಿನ ಬಿಸಿ ಗಾಳಿ ಎಚ್ಚರಿಕೆ

ಬೆಂಗಳೂರು: ನಗರದಲ್ಲಿ ಮುಂದಿನ ಮೂರು ದಿನಗಳ ಕಾಲ ಅಧಿಕ ಉಷ್ಣಾಂಶ ದಾಖಲಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಬಿಸಿ…

9 hours ago

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಗೆದ್ದರೆ ಆರು ಗ್ಯಾರಂಟಿ ಜಾರಿ: ಪ್ರಧಾನಿ ನರೇಂದ್ರ ಮೋದಿ

ಕೋಲ್ಕತ್ತಾ: ಪಶ್ಚಿಮ ಬಂಗಾಳ ಚುನಾವಣೆಯಲ್ಲಿ ಬಿಜೆಪಿ ಗೆದ್ದರೆ ಜನರಿಗೆ ಆರು ಗ್ಯಾರಂಟಿಗಳನ್ನು ನೀಡುತ್ತೇವೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.…

9 hours ago

ಭಾರತ ತಲುಪಿದ ಗ್ರೀನ್‌ ಆಶಾ: 15,000 ಟನ್‌ ಎಲ್‌ಪಿಜಿ ಹೊತ್ತು ತಂದ ನೌಕೆ

ಮುಂಬೈ: ಪಶ್ಚಿಮ ಏಷ್ಯಾ ಸಂಘರ್ಷದ ಮಧ್ಯೆ ಭಾರತದ ಧ್ವಜ ಹೊಂದಿರುವ 15,400 ಟನ್‌ ಎಲ್‌ಪಿಜಿ ಹೊತ್ತ ಟ್ಯಾಂಕರ್‌ ಹಾರ್ಮುಜ್‌ ಜಲಸಂಧಿಯನ್ನು…

9 hours ago