Andolana originals

ಆರ್ಥಿಕ ಸಬಲತೆಯತ್ತ ಲಿಂಗತ್ವ ಅಲ್ಪಸಂಖ್ಯಾತರ ದಿಟ್ಟ ಹೆಜ್ಜೆ

ಸ್ವ ಸಹಾಯ ಸಂಘ ಸ್ಥಾಪನೆ: ೧೫ ಮಂದಿ ಸದಸ್ಯರು

ಚಿರಂಜೀವಿ ಸಿ.ಹುಲ್ಲಹಳ್ಳಿ

ಮೈಸೂರು: ಸಾಮಾನ್ಯವಾಗಿ ಸಿಗ್ನಲ್‌ನಲ್ಲಿ ಕೆಂಪು ದೀಪ ಬೆಳಗಿದ ತಕ್ಷಣ ವಾಹನವನ್ನು ನಿಲುಗಡೆ ಮಾಡಿದವರ ಬಳಿಗೆ ಧಾವಿಸಿ, ಭಿಕ್ಷಾಟನೆ ಮಾಡುತ್ತಾ, ಆ ಹಣದಿಂದಲೇ ಬಹಳಷ್ಟು ಲಿಂಗತ್ವ ಅಲ್ಪಸಂಖ್ಯಾತರು ಜೀವನ ನಿರ್ವಹಣೆ ಮಾಡುತ್ತಿದ್ದಾರೆ. ಹಲವರು ಅವರನ್ನು ಅಪಹಾಸ್ಯ, ವ್ಯಂಗ್ಯದಿಂದ ನೋಡುತ್ತಾರೆ. ಇಂತಹ ಅವಮಾನದ ವಿರುದ್ಧ ಸಿಡಿದ ಹಲವು ಲಿಂಗತ್ವ ಅಲ್ಪಸಂಖ್ಯಾತರು ಸ್ವ ಸಹಾಯ ಸಂಘವನ್ನು ಸ್ಥಾಪಿಸುವ ಮೂಲಕ ಗೌರವಯುತವಾದ ಸ್ವಾವಲಂಬನೆ ಬದುಕಿನತ್ತ ದೃಢ ಹೆಜ್ಜೆ ಇಟ್ಟಿದ್ದಾರೆ.

ಸರ್ಕಾರ ನೀಡುವ ಲಿಂಗತ್ವ ಅಲ್ಪಸಂಖ್ಯಾತರ ಗುರುತಿನ ಚೀಟಿಯನ್ನು ಕೇವಲ ೯೦ ಮಂದಿ ಪಡೆದಿದ್ದು, ಅವರು ಮಾತ್ರ ಸರ್ಕಾರದ ಮೈತ್ರಿ ಮತ್ತು ಗೃಹಲಕ್ಷ್ಮಿ ಯೋಜನೆಯಡಿ ಮಾಸಾಶನ ಪಡೆಯುತ್ತಿದ್ದಾರೆ.

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಮತ್ತು ಮಹಿಳಾ ಅಭಿವೃದ್ಧಿ ನಿಗಮದಿಂದ ಇವರಿಗೆ ನಿರೀಕ್ಷಿತ ಪ್ರಮಾಣದಲ್ಲಿ ಸಾಲ ಸೌಲಭ್ಯ ಕೂಡ ಸಿಕ್ಕಿಲ್ಲ.

ಈ ಹಿನ್ನೆಲೆಯಲ್ಲಿ ಸ್ವಾವಲಂಬಿ ಜೀವನ ನಡೆಸಲು ಸಂಘಟಿತರಾದ ೧೫ ಲಿಂಗತ್ವ ಅಲ್ಪಸಂಖ್ಯಾತರು ಆದರ್ಶ ಹೆಸರಿನಲ್ಲಿ ಸ್ವ ಸಹಾಯ ಸಂಘ ಸ್ಥಾಪಿಸಿಕೊಂಡು ಆರ್ಥಿಕವಾಗಿ ಸದೃಢರಾಗುತ್ತಿದ್ದಾರೆ.

ಜಿಲ್ಲೆಯಲ್ಲಿ ೧,೮೦೦ ಲಿಂಗತ್ವ ಅಲ್ಪ ಸಂಖ್ಯಾತರಿದ್ದು, ನಗರದಲ್ಲಿಯೇ ಹೆಚ್ಚಿನ ಸಂಖ್ಯೆಯಲ್ಲಿ ವಾಸವಾಗಿದ್ದಾರೆ. ಸಾಕಷ್ಟು ಮಂದಿ ಭಿಕ್ಷಾಟನೆಯಲ್ಲಿ ತೊಡಗಿದ್ದಾರೆ. ಆದರೆ, ಬಹುಪಾಲು ಮಂದಿ ಒಲ್ಲದ ಮನಸ್ಸಿನಿಂದ ಭಿಕ್ಷಾಟನೆ ಮಾಡುತ್ತಿದ್ದು, ಸ್ವ ಉದ್ಯೋಗ ಮತ್ತು ಸ್ವ ವ್ಯವಹಾರದಿಂದ ಸ್ವಾವಲಂಬಿ ಬದುಕು ನಡೆಸಬೇಕು ಎಂದು ಕನಸು ಕಾಣುತ್ತಿದ್ದಾರೆ. ಇಂತಹವರಿಗೆ ಆರ್ಥಿಕ ಬೆಂಬಲ ನೀಡುವುದು ‘ಆದರ್ಶ’ ಸ್ವ ಸಹಾಯ ಸಂಘದ ಉದ್ದೇಶವಾಗಿದೆ.

ಲಿಂಗತ್ವ ಅಲ್ಪಸಂಖ್ಯಾತರನ್ನು ಸಮಾಜ ನೋಡುವ ದೃಷ್ಟಿಯೇ ಬೇರೆ. ಜೊತೆಗೆ ದೊಡ್ಡ ಮನಸ್ಸಿನಿಂದ ಕೆಲಸ ಕೊಡುವುದು ವಿರಳ.

ಭಿಕ್ಷಾಟನೆ ಅನಿವಾರ್ಯವಾಗಿದೆ. ಇವರಿಗೆಲ್ಲ ಆರ್ಥಿಕ ನೆರವು ದೊರೆತರೆ ಭಿಕ್ಷಾಟನೆಯಿಂದ ದೂರ ಸರಿಯಬಹುದು. ಹೀಗಾಗಿ ಲಿಂಗತ್ವ ಅಲ್ಪ ಸಂಖ್ಯಾತರಾದ ಪ್ರಣತಿ ಪ್ರಕಾಶ್ ಮತ್ತು ಶಿವರಾಜು ಅವರು ೨೦೨೩ರ ಜುಲೈನಲ್ಲಿ ‘ಆದರ್ಶ ಲಿಂಗತ್ವ ಅಲ್ಪ ಸಂಖ್ಯಾತರ ಸ್ವ ಸಹಾಯ ಸಂಘ’ ರಚಿಸಿ, ೧೫ ಮಂದಿಯನ್ನು ಸಂಘದ ಸದಸ್ಯರನ್ನಾಗಿ ಮಾಡಿದರು.

೧೫ ಸದಸ್ಯರಲ್ಲಿ ಈಗಾಗಲೇ ೧೨ ಸದಸ್ಯರಿಗೆ ತಲಾ ೧೦ ಸಾವಿರದಂತೆ ೧.೨ ಲಕ್ಷ ರೂ. ಸಾಲ ನೀಡಲಾಗಿದ್ದು, ಈ ಹಣದಲ್ಲಿ ಆರು ಮಂದಿ ಕುರಿ, ಮೇಕೆಗಳನ್ನು ಖರೀದಿಸಿ ಸ್ವಾವಲಂಬಿ ಜೀವನ ನಡೆಸಲು ಮುಂದಾಗಿರುವುದು ಇತರರಿಗೆ ಮಾದರಿಯಾಗಿದೆ.

೨.೫ ಲಕ್ಷ ರೂ. ಸಂಗ್ರಹ:  ಪ್ರತಿ ತಿಂಗಳು ಎಲ್ಲರೂ ಸಂಘದ ಹೆಸರಿನಲ್ಲಿ ಒಂದು ಸಾವಿರ ರೂ. ಉಳಿತಾಯ ಮಾಡುತ್ತಿದ್ದಾರೆ. ೨.೫ ಲಕ್ಷ ರೂ. ಗಳವರೆಗೆ ಹಣವನ್ನು ಕಳೆದ ೧೬ ತಿಂಗಳಲ್ಲಿ ಸಂಗ್ರಹಿಸಲಾಗಿದೆ. ಸದಸ್ಯರೇ ಸಾಲವನ್ನು ಪಡೆದು ಸಕಾಲಕ್ಕೆ ಮರು ಪಾವತಿಸುವ ಮೂಲಕ ಸಂಘದ ಬೆಳವಣಿಗೆಗೆ ಸಹಕಾರ ನೀಡುತ್ತಿದ್ದಾರೆ ಎಂದು ಸಂಘದ ಸಂಸ್ಥಾಪಕರಲ್ಲಿ ಒಬ್ಬರಾದ ಶಿವರಾಜು ಹೇಳಿದರು.

” ನಮ್ಮ ಸಮುದಾಯವು ಸಮಾಜದಲ್ಲಿ ನಿರ್ಲಕ್ಷ್ಯಕ್ಕೆ ಒಳಗಾಗಿದೆ. ಇವರನ್ನು ಆರ್ಥಿಕವಾಗಿ ಸಬಲೀಕರಣಗೊಳಿಸಿ ಸ್ವಾವಲಂಬಿಗಳಾಗಿಸಬೇಕು ಎಂಬ ಸದುದ್ದೇಶದಿಂದ ಲಿಂಗತ್ವ ಅಲ್ಪಸಂಖ್ಯಾತರ ಸ್ವ ಸಹಾಯ ಸಂಘವನ್ನು ಸ್ಥಾಪಿಸಲಾಗಿದೆ. ಮುಂದಿನ ದಿನಗಳಲ್ಲಿ ಸಹಕಾರ ಸಂಘವನ್ನು ಸ್ಥಾಪಿಸುವ ಗುರಿ ಇದೆ.”

-ಶಿವರಾಜು, ಲಿಂಗತ್ವ ಅಲ್ಪಸಂಖ್ಯಾತರು,

ಆಂದೋಲನ ಡೆಸ್ಕ್

Recent Posts

ಚಾಮರಾಜನಗರ| ಒಟ್ಟಿಗೆ ಕಾಣಿಸಿಕೊಂಡ ಐದು ಹುಲಿಗಳು: ಭಯಭೀತರಾದ ಗ್ರಾಮಸ್ಥರು

ಚಾಮರಾಜನಗರ: ಚಾಮರಾಜನಗರ ಹಾಗೂ ಗುಂಡ್ಲುಪೇಟೆ ತಾಲ್ಲೂಕುಗಳ ಗ್ರಾಮಸ್ಥರಲ್ಲಿ ವ್ಯಾಘ್ರಗಳ ಆತಂಕ ಮನೆ ಮಾಡಿದೆ. ಒಟ್ಟಿಗೆ ಐದು ಹುಲಿಗಳು ರಸ್ತೆಯಲ್ಲಿ ಹಾದು…

50 mins ago

ಹಾಸನ ಜಿಲ್ಲೆಯಲ್ಲಿ ಹೃದಯಾಘಾತಕ್ಕೆ ಇಬ್ಬರು ಬಲಿ

ಹಾಸನ: ಹಾಸನ ಜಿಲ್ಲೆಯಲ್ಲಿ ಹೃದಯಾಘಾತಕ್ಕೆ ಇಬ್ಬರು ಬಲಿಯಾಗಿರುವ ಘಟನೆ ನಡೆದಿದೆ. ಜಿಲ್ಲೆಯ ಅರಕಲಗೂಡು ತಾಲ್ಲೂಕಿನ ದೊಡ್ಡಳ್ಳಿ ಗ್ರಾಮದ ಸುಧಾಮಣಿ ಹಾಗೂ…

1 hour ago

ಅಸ್ಸಾಂನಲ್ಲಿ ಘೋರ ದುರಂತ: ರೈಲು ಡಿಕ್ಕಿಯಾಗಿ 7 ಆನೆಗಳು ಸಾವು

ಗುವಾಹಟಿ: ರೈಲು ಡಿಕ್ಕಿ ಹೊಡೆದ ಪರಿಣಾಮ ಏಳು ಆನೆಗಳು ಸ್ಥಳದಲ್ಲೇ ಮೃತಪಟ್ಟಿದ್ದು, ಒಂದು ಆನೆ ಗಂಭೀರವಾಗಿ ಗಾಯಗೊಂಡಿರುವ ಘಟನೆ ಅಸ್ಸಾಂನ…

2 hours ago

ಬುರುಡೆ ಗ್ಯಾಂಗ್‌ನಲ್ಲಿ ಬಿರುಕು: ಏನಾಗಿದೆ ಗೊತ್ತಾ?

ಮಂಗಳೂರು: ಧರ್ಮಸ್ಥಳ ಷಡ್ಯಂತ್ರ ಪ್ರಕರಣದ ಪ್ರಮುಖ ಆರೋಪಿ ಮಾಸ್ಕ್‌ ಮ್ಯಾನ್‌ ಚಿನ್ನಯ್ಯ ಇದೀಗ ಬುರುಡೆ ಗ್ಯಾಂಗ್‌ ವಿರುದ್ಧವೇ ತಿರುಗಿ ಬಿದ್ದಿದ್ದಾನೆ.…

2 hours ago

ದ್ವೇಷ ಭಾಷಣ ಪ್ರತಿಬಂಧನ ಮಸೂದೆಗೆ ಅಂಕಿತ ಹಾಕದಂತೆ ರಾಜ್ಯಪಾಲರಿಗೆ ಪತ್ರ ಬರೆದ ಶೋಭಾ ಕರಂದ್ಲಾಜೆ

ಬೆಂಗಳೂರು: ಬೆಳಗಾವಿ ವಿಧಾನಮಂಡಲ ಅಧಿವೇಶನದಲ್ಲಿ ಅಂಗೀಕರಿಸಲಾದ ಕರ್ನಾಟಕ ದ್ವೇಷ ಭಾಷಣ ಮತ್ತು ದ್ವೇಷ ಅಪರಾಧಗಳ ಪ್ರತಿಬಂಧಕ ಮಸೂದೆಗೆ ಅಂಕಿತ ಹಾಕಬಾರದು…

2 hours ago

ಓದುಗರ ಪತ್ರ: ಕಾನೂನು ಎಷ್ಟರ ಮಟ್ಟಿಗೆ ಕೆಲಸ ಮಾಡುತ್ತೆ?

ದ್ವೇಷ ಭಾಷಣ ಮತ್ತು ದ್ವೇಷ ಅಪರಾಧಗಳ ವಿಧೇಯಕವನ್ನು ರಾಜ್ಯ ಕಾಂಗ್ರೆಸ್ ಸರ್ಕಾರ ಡಿ.೧೮ರಂದು ಬೆಳಗಾವಿ ಸುವರ್ಣ ವಿಧಾನಸೌಧದಲ್ಲಿ ನಡೆಯುತ್ತಿರುವ ಅಧಿವೇಶನದಲ್ಲಿ…

3 hours ago