Andolana originals

ನನ್ನ ಕತೆಯ ಪಾತ್ರಗಳಿಗೆ ಅನ್ಯಾಯ ಮಾಡಿಲ್ಲ : ಬಾನು ಮುಷ್ತಾಕ್‌

ಸಂದರ್ಶನ: ರಶ್ಮಿ ಕೋಟಿ

ಬೂಕರ್ ಪ್ರಶಸ್ತಿ ಪುರಸ್ಕತ “ಹಾರ್ಟ್ ಲ್ಯಾಂಪ್” ಕೃತಿಯಿಂದ ಬಾನು ಮುಷ್ತಾಕ್ ಅವರು ಭಾರತೀಯ ಸಾಹಿತ್ಯದಲ್ಲಿ ಹೊಸ ಅಧ್ಯಾಯವನ್ನೇ ಬರೆದಿದ್ದಾರೆ. ಶೋಷಿತರ, ತಳವರ್ಗದ, ಹೆಣ್ಣಿನ ನೋವನ್ನು ನಿಖರವಾಗಿ ಚಿತ್ರಿಸಿರುವ ಈ ಕಥಾ ಸಂಕಲನ ಈಗ ಜಗತ್ತಿನ ಗಮನ ಸೆಳೆದಿದೆ. ಇದು ಕೇವಲ ಸಾಹಿತ್ಯದ ಗೆಲುವಲ್ಲ; ಇದು ನಿಶ್ಶಬ್ದ ಧ್ವನಿಗೆ ನೀಡಲಾದ ಅಕ್ಷರ ರೂಪಕ್ಕೆ ದೊರೆತಿರುವ ಮಾನ್ಯತೆ. ಈ ಮಹತ್ವದ ಕ್ಷಣದಲ್ಲಿ ತಮ್ಮ ಸಾಹಿತ್ಯದ ಹಾದಿ, ಹೋರಾಟ ಮತ್ತು “ಹಾರ್ಟ್ ಲ್ಯಾಂಪ್” ಹುಟ್ಟಿದ ಕಥೆಯ ಕುರಿತು ಬಾನು ಮುಷ್ತಾಕ್ ಅವರು ‘ಆಂದೋಲನ’ ದಿನಪತ್ರಿಕೆಗೆ ನೀಡಿರುವ ವಿಶೇಷ ಸಂದರ್ಶನದಲ್ಲಿ ಮನಬಿಚ್ಚಿ ಮಾತನಾಡಿದ್ದಾರೆ.

ಆಂದೋಲನ: ಬೂಕರ್ ಇತಿಹಾಸದಲ್ಲಿಯೇ ಸಣ್ಣ ಕತೆಗಳಿಗೆ ಪ್ರಶಸ್ತಿ ಲಭಿಸಿರುವುದು ಇದೇ ಮೊದಲು. ಈ ಕುರಿತು ನೀವು ಏನು ಹೇಳ ಬಯಸುತ್ತೀರಿ?
ಬಾನು: ಹೌದು. ಇದುವರೆಗೂ ಸಣ್ಣ ಕತೆಗಳನ್ನು ಬೂಕರ್ ಸ್ಪರ್ಧೆಗೆ ಪರಿಗಣಿಸಿಯೇ ಇಲ್ಲ. ಇದೇ ಮೊಟ್ಟಮೊದಲ ಬಾರಿಗೆ ಸಣ್ಣಕತೆಗಳಿಗೆ ಬೂಕರ್ ಪ್ರಶಸ್ತಿ ಲಭಿಸಿರುವುದು. ಸಾಮಾನ್ಯ ವಾಗಿ ಸಣ್ಣ ಕತೆಗಳನ್ನು ಕಾದಂಬರಿ ಕ್ಷೇತ್ರಕ್ಕಿಂತ ಕಡಿಮೆ ಪ್ರಾಮುಖ್ಯತೆ ಹೊಂದಿರುವುದು ಎಂದು ಪರಿಗಣಿಸಲಾ ಗುತ್ತದೆ ಹಾಗೂ ಬಹುತೇಕ ಅಂತಾರಾಷ್ಟ್ರೀಯ ವೇದಿಕೆಯಲ್ಲಿ ಫಿಕ್ಷನ್ ಎಂದರೆ ಕಾದಂಬರಿ ಎಂದೇ ಲೆಕ್ಕ. ಹಾಗಾಗಿ ನಮ್ಮ ಕಥಾ ಸಂಕಲನ ಹೊಸ ವಿಶ್ವ ದಾಖಲೆಯನ್ನು ನಿರ್ಮಿಸಿದೆ ಎಂದೇ ಹೇಳಬಹುದು. ಇದರೊಂದಿಗೆ ಮತ್ತೊಂದು ದಾಖಲೆ ಎಂದರೆ ನಾನು ಹಾಗೂ ನನ್ನ ಕಥಾ ಸಂಕಲನದ ಅನುವಾದಕಿಯಾದ ದೀಪಾ ಭಸ್ತಿ ಇಬ್ಬರೂ ಕನ್ನಡಿಗರು, ಇಬ್ಬರೂ ಕಂದು ವರ್ಣದವರು. ಇದೂ ಕೂಡ ಒಂದು ಹೊಸ ವಿಶ್ವ ದಾಖಲೆಯೇ ಸರಿ.

ಆಂದೋಲನ: ನಿಮ್ಮ ಕತೆಗಳ ಸೃಷ್ಟಿಗೆ ಕಾರಣವಾದ ಮೂಲ ಯೋಚನೆ ಅಥವಾ ಅನುಭವ ಯಾವುದು?
ಬಾನು: ಒಂದೊಂದು ಕತೆಗೂ ವಿಭಿನ್ನ ಹಿನ್ನೆಲೆಯಿದೆ. ಆಯಾ ಸಂದರ್ಭೋಚಿತವಾಗಿ ತೋರಿ ಬರುವಂತಹ ಪ್ರಚೋದನೆಯನ್ನು ಕಲಾತ್ಮಕವಾಗಿ ಅಭಿವ್ಯಕ್ತಿ ಮಾಡಿದ್ದೇನೆ. ಹಾಗಾಗಿ ಪ್ರತೀ ಕತೆಯ ಸೃಷ್ಟಿಯ ಸಂದರ್ಭವೂ ಭಿನ್ನವಾಗಿದ್ದು, ಅದರ ಹಿಂದಿನ ಪ್ರಚೋದನೆಯೂ ಭಿನ್ನವಾಗಿದೆ.

ಆಂದೋಲನ: ನಿಮ್ಮ ಕತೆಗಳನ್ನು ಇಂಗ್ಲಿಷ್‌ಗೆ ಭಾಷಾಂತರಿಸುವಾಗ ದೀಪಾ ಹಾಗೂ ನಿಮ್ಮ ನಡುವೆ ಯಾವ ರೀತಿಯ ಚರ್ಚೆಗಳಾಗುತ್ತಿದ್ದವು?
ಬಾನು: ನಾನು ದೀಪಾ ಅವರಿಗೆ ಎಲ್ಲ ರೀತಿಯ ಸ್ವಾತಂತ್ರ್ಯವನ್ನು ಕೊಟ್ಟಿದ್ದೆ. ಮೊದಲಿಗೆ “ಹಸೀನಾ ಮತ್ತು ಇತರ ಕತೆಗಳು” ಕೃತಿಯಿಂದ ದೀಪಾ ಅವರು ೧೨ ಕತೆಗಳನ್ನು ಭಾಷಾಂತರಕ್ಕೆ ಆಯ್ಕೆ ಮಾಡಿಕೊಂಡು ನನಗೆ ಕಳಿಸಿದರು. ನನ್ನ ಕತೆಯಲ್ಲಿ ಅನೇಕ ಮುಸ್ಲಿಂ ಸಂಪ್ರದಾಯದ ವಿಚಾರಗಳನ್ನು ಹಾಗೂ ಉರ್ದು ಪದಗಳನ್ನು ಪ್ರಸ್ತಾಪ ಮಾಡಿರುವುದರಿಂದ ಅವುಗಳ ಬಗ್ಗೆ ವಿವರಗಳನ್ನು ಕೇಳುತ್ತಿದ್ದರು. ನಾನು ವಿವರಿಸುತ್ತಿದ್ದೆ. ಅದರ ಹೊರತಾಗಿ ಹೆಚ್ಚೇನೂ ಚರ್ಚೆ ಮಾಡಲಿಲ್ಲ.

ಆಂದೋಲನ: ನೀವು ಮುಸ್ಲಿಂ ಮಹಿಳೆಯರು ಮಸೀದಿಗಳಲ್ಲಿ ಪ್ರಾರ್ಥನೆ ಮಾಡುವ ಕುರಿತು ನೀಡಿದ ಹೇಳಿಕೆ ವಿವಾದಕ್ಕೆ ಗುರಿಯಾಯಿತು. ಆ ಘಟನೆ ನಿಮ್ಮ ಬರವಣಿಗೆಯ ಮೇಲೆ ಪ್ರಭಾವ ಬೀರಿತೆ?
ಬಾನು: ನನ್ನ ಕತೆಗಳ ಕುರಿತು ಯಾರಿಗೂ ಯಾವುದೇ ತಕರಾರುಗಳಿಲ್ಲ. ಮುಸ್ಲಿಂ ಸಮುದಾಯದವರಿಗೂ ಇಲ್ಲ. ಆದರೆ ಈ ವಿವಾದದ ನಂತರ ನನ್ನ ವಿಚಾರ ಇನ್ನಷ್ಟು ಸ್ಛುಟವಾಯಿತು. ಬರವಣಿಗೆಯ ಶೈಲಿಯಲ್ಲಿ, ಶಬ್ದಗಳ ಪ್ರಯೋಗದಲ್ಲಿ ಎಚ್ಚರಿಕೆ ವಹಿಸುವುದು ಅನಿವಾರ್ಯವಾಯಿತು.

ಆಂದೋಲನ: ನಿಮ್ಮ ಕತೆಯ ಪಾತ್ರಗಳೇನಾದರೂ ನಿಮ್ಮನ್ನು ಕಾಡಿವೆಯೇ?
ಬಾನು: ಖಂಡಿತಾ ಇಲ್ಲ. ನನ್ನ ಪಾತ್ರಗಳು ಎಂದೂ ತಕರಾರು ಮಾಡಿಲ್ಲ, ನನ್ನ ಬಳಿ ನ್ಯಾಯ ಕೇಳಿಲ್ಲ. ಏಕೆಂದರೆ ಅವುಗಳಿಗೆ ಎಲ್ಲೂ ಕೂಡ ಅನ್ಯಾಯ ಮಾಡಿಲ್ಲ. ಹಲವಾರು ಬಾರಿ ನಾನು ಮತ್ತು ಪಾತ್ರ ಎರಡೂ ಒಂದೇ ಆಗಿರುವ ಸಂದರ್ಭಗಳೂ ಇವೆ. ಅಲ್ಲದೆ ನಾನು ಎಂದೂ ಆತ್ಮವಂಚನೆ ಮಾಡಿಕೊಂಡವಳಲ್ಲ. ಹಾಗಾಗಿ ನನ್ನ ಪಾತ್ರಗಳಿಗೂ ನಾನು ಎಂದೂ ವಂಚನೆ ಮಾಡಿಲ್ಲ. ಹಾಗಾಗಿ ಅವರ‍್ಯಾರೂ ನನ್ನೊಂದಿಗೆ ಜಿದ್ದಿಗೆ ಬಿದ್ದಿಲ್ಲ.

ಆಂದೋಲನ: ಹೊಸ ತಲೆಮಾರಿನ ಲೇಖಕರಿಗೆ ಯಾವ ಸಂದೇಶ ಕೊಡಲು ಬಯಸುತ್ತೀರಾ?
ಬಾನು: ಹೊಸ ತಲೆಮಾರಿನ ಲೇಖಕರು ಹೊಸ ಕಾಲದ ಅವಶ್ಯಕತೆಗಳಿಗೆ ತಕ್ಕ ಹಾಗೆ ಬರೆಯುತ್ತಿದ್ದಾರೆ. ಬಹಳ ಪ್ರಮುಖವಾದ ಯುವ ಲೇಖಕರು ಮೂಡಿದ್ದಾರೆ. ಅವರು ಬಹಳ ಸ್ಪಷ್ಟವಾಗಿ ಹಾಗೂ ಸಮೃದ್ಧವಾಗಿ ಬರವಣಿಗೆಯನ್ನು ಮಾಡುತ್ತಿದ್ದಾರೆ. ಬರವಣಿಗೆ ಎಂಬುದೇ ಒಂದು ಸಾಂಸ್ಕ ತಿಕ ಕ್ರಿಯೆ. ಹಾಗಾಗಿ ಬರವಣಿಗೆಯಲಿ ನಮ್ಮ ಜನಜೀವನಕ್ಕೆ, ನಮ್ಮ ದೇಶಕ್ಕೆ ಅಭಿವೃದ್ಧಿಪರವಾದ ಚಿಂತನೆಯನ್ನು ಕೊಡುತ್ತಾ ಅದನ್ನು ಕಾರ್ಯಗೊಳಿಸುವತ್ತ ಸಕ್ರಿಯರಾಗುತ್ತಾ ನಮ್ಮ ಸಮಾಜ ದಲ್ಲಿ ಚಿಂತನೆಯ ದೀಪವನ್ನು ಕೂಡ ಹಚ್ಚುವ ಕೆಲಸ ಮಾಡಬೇಕಿದೆ.

ಆಂದೋಲನ: ದೀಪಾ ಭಸ್ತಿಯವರು ನಿಮ್ಮ ಕೃತಿಯನ್ನು ಸಮರ್ಥವಾಗಿ ಅನುವಾದ ಮಾಡಿದ ಕಾರಣ ಅದಕ್ಕೆ ಬೂಕರ್ ಪ್ರಶಸ್ತಿ ಲಭಿಸಿದೆ. ಈ ಸಂದರ್ಭದಲ್ಲಿ ಅನುವಾದಕರ ಶಕ್ತಿ ಹಾಗೂ ಪ್ರಾಮುಖ್ಯತೆಯ ಬಗ್ಗೆ ಏನು ಹೇಳ ಬಯಸುತ್ತೀರಿ?
ಬಾನು: ಅನುವಾದದ ಪ್ರಕ್ರಿಯೆ ನಮ್ಮ ರಾಜ್ಯದಲ್ಲಿ ಕಡೆಗಣಿಸಲ್ಪಟ್ಟ ಸಾಹಿತ್ಯಕ ಕ್ರಿಯೆಯಾಗಿದೆ. ನೀವು ಮಲಯಾಳಂ ಸಾಹಿತ್ಯವನ್ನು ಗಮನಿಸಿದರೆ ಅಲ್ಲಿನ ಅನೇಕ ಪುಸ್ತಕಗಳು ಬೇರೆ ಭಾಷೆಗಳಿಗೆ ಹಾಗೂ ಬೇರೆ ಭಾಷೆಯ ಪುಸ್ತಕಗಳು ಮಲಯಾಳಂ ಭಾಷೆಗೆ ಅನುವಾದಗಳಾಗಿವೆ. ಆದರೆ ನಮ್ಮಲ್ಲಿ ಅನುವಾದದ ಕೆಲಸ ಹೆಚ್ಚಾಗಿ ಆಗುತ್ತಿಲ್ಲ. ಹಾಗಾಗಿ ಅನುವಾದಕರ ಶಕ್ತಿ ಹಾಗೂ ಪ್ರಾಮುಖ್ಯತೆ ಕುರಿತಾಗಿ ವಿಚಾರಗೋಷ್ಠಿಗಳು ನಡೆಯಬೇಕು. ಅದರೊಂದಿಗೆ ಹೆಚ್ಚು ಹೆಚ್ಚು ಅನುವಾದಕರು ಬೆಳೆಯಲು ಬೇಕಾದರೆ ಅನುವಾದಕ್ಕೆ ಸೂಕ್ತ ಸಂಭಾವನೆ ಕೊಡುವ ವ್ಯವಸ್ಥೆ ಬಂದರೆ ಅನುವಾದ ಕ್ಷೇತ್ರವು ಖಂಡಿತವಾಗಿಯೂ ಹಿಗ್ಗಲಿದೆ.

ಆಂದೋಲನ ಡೆಸ್ಕ್

Recent Posts

ಪಂಜುಗಂಗೊಳ್ಳಿ ಅವರ ವಾರದ ಅಂಕಣ: ಎವ್ಗನ್ ಬಾವ್ಚಾರ್ ಎಂಬ ಕಣ್ಣಿಲ್ಲದ ಫೋಟೋಗ್ರಾಫರ್!

ಪಂಜು ಗಂಗೊಳ್ಳಿ  ನೂರಾರು ಜನ ವಿಶೇಷಚೇತನರಿಗೆ ಫೋಟೋಗ್ರಫಿ ತರಬೇತಿ ಎವ್ಗನ್ ಬಾವ್ಚಾರ್ ೧೯೪೬ರಲ್ಲಿ ಸ್ಲೊವೇನಿಯಾ (ಆಗ ಯುಗೊಸ್ಲೇವಿಯಾ)ದಲ್ಲಿ ಹುಟ್ಟಿದರು. ಏಳು…

1 hour ago

ಓದುಗರ ಪತ್ರ: ಕಳ್ಳಸಾಗಣೆ ಕಪಿಮುಷ್ಟಿಯಲ್ಲಿ ದೇಶದ ಆರ್ಥಿಕತೆ

ಇತ್ತೀಚಿನ ಅಂಕಿಅಂಶಗಳ ಪ್ರಕಾರ, ಭಾರತದಲ್ಲಿ ಅಕ್ರಮ ಸಿಗರೇಟ್ ಮಾರುಕಟ್ಟೆಯು ವಾರ್ಷಿಕವಾಗಿ ಸುಮಾರು ರೂ.೧೫,೦೦೦ ಕೋಟಿಗೂ ಅಧಿಕ ನಷ್ಟವನ್ನು ಸರ್ಕಾರಕ್ಕೆ ಉಂಟುಮಾಡುತ್ತಿದೆ.…

1 hour ago

ಓದುಗರ ಪತ್ರ: ದ್ವಿಚಕ್ರವಾಹನಗಳಿಗೆ ದರ್ಪಣ(ಕನ್ನಡಿ) ಕಡ್ಡಾಯವಾಗಲಿ

ದ್ವಿಚಕ್ರ ವಾಹನಗಳಿಗೆ ಸಂಚಾರ ನಿಯಮದಂತೆ ಎರಡೂ ಕಡೆ ದರ್ಪಣವನ್ನು ಕಡ್ಡಾಯವಾಗಿ ಅಳವಡಿಸಿಕೊಳ್ಳಬೇಕು. ಯಾರು ಈ ನಿಯಮವನ್ನು ಉಲ್ಲಂಘಿಸುತ್ತಾರೋ ಅವರಿಗೆ ಸಂಚಾರ…

1 hour ago

ಓದುಗರ ಪತ್ರ: ವಾಹನ ನಿಲುಗಡೆ ನಿಷೇಧಿಸಿ

ಮೈಸೂರಿನ ಕುವೆಂಪುನಗರದ ನೃಪತುಂಗ ರಸ್ತೆಯ ಶಾಂತಿ ಸಾಗರ್ ಕಾಂಪ್ಲೆಕ್ಸ್ ನ ಆಂಜನೇಯ ದೇವಸ್ಥಾನದ ಮುಂಭಾಗದಲ್ಲಿ ಮದ್ದೂರು ವಡೆ ಸೆಂಟರ್ ಮತ್ತು…

1 hour ago

ರಸ್ತೆಗಳು ಅಧ್ವಾನ; ಸವಾರರು ಹೈರಾಣ!

ಪ್ರಶಾಂತ್ ಎಸ್. ಮೈಸೂರು: ನಗರ ಹೊರವಲಯದ ಶ್ರೀರಾಂಪುರ ಪಟ್ಟಣ ಪಂಚಾಯಿತಿ ವ್ಯಾಪ್ತಿಯ ಹಲವೆಡೆ ರಸ್ತೆಗಳ ದುಸ್ಥಿತಿಯಿಂದಾಗಿ ವಾಹನಗಳ ಸವಾರರು ಜೀವವನ್ನು…

1 hour ago

ವೈಭವದ ಸುತ್ತೂರು ಜಾತ್ರಾ ಮಹೋತ್ಸವ ಸಂಪನ್ನ

ಕೆ.ಬಿ.ರಮೇಶನಾಯಕ ಮೈಸೂರು: ಕಪಿಲಾ ನದಿ ತೀರದ ಸುತ್ತೂರಿನಲ್ಲಿ ಆರುದಿನಗಳ ಕಾಲ ಅತ್ಯಂತ ಸಡಗರ, ಸಂಭ್ರಮದಿಂದ ನಡೆದ ಧಾರ್ಮಿಕ, ಸಾಂಸ್ಕೃತಿಕ, ವೈಜ್ಞಾನಿಕ…

1 hour ago