Andolana originals

ಸಾರ್ವಜನಿಕ ಶೌಚಾಲಯ ‘ಎರಡೂ’ ಬಂದ್!

ಚಾ.ನಗರದ ತರಕಾರಿ ಮಾರುಕಟ್ಟೆ, ಹಳೇ ಖಾಸಗಿ ಬಸ್ ನಿಲ್ದಾಣದಲ್ಲಿ ಮುಚ್ಚಿದ ಶೌಚಾಲಯಗಳು; ಜನರಿಗೆ ಸಮಸ್ಯೆ

ಚಾಮರಾಜನಗರ: ನಗರದಲ್ಲಿನ ಎರಡು ಸಾರ್ವಜನಿಕ ಶೌಚಾಲಯಗಳು ಏಕಾಏಕಿ ಬಂದ್ ಆಗಿವೆ. ಜನನಿಬಿಡ ಸ್ಥಳದಲ್ಲಿನ ಇವು ಬಂದ್ ಆಗಿರುವುದು ಸಾರ್ವಜನಿಕರಿಗೆ ಅದರಲ್ಲೂ ಮಹಿಳೆಯರಿಗೆ ತುಂಬಾ ತೊಂದರೆ ಉಂಟು ಮಾಡಿದೆ.

ಇಲ್ಲಿನ ತರಕಾರಿ ಮಾರುಕಟ್ಟೆ ಬಳಿಯಲ್ಲಿರುವ ಮತ್ತು ಹಳೇ ಖಾಸಗಿ ಬಸ್ ನಿಲ್ದಾಣದ ಸನಿಹ ದಲ್ಲಿನ ಈ ಸಾರ್ವಜನಿಕ ಶೌಚಾಲಯಗಳು ಇತ್ತೀಚೆಗೆ ಬಾಗಿಲು ಮುಚ್ಚಿವೆ. ಹತ್ತಿರದಲ್ಲಿ ಯಾವುದೇ ಸಾರ್ವಜನಿಕ ಶೌಚಾಲಯಗಳು ಇಲ್ಲದೇ ಇರುವ ಕಾರಣ ತರಕಾರಿ ಮಾರುಕಟ್ಟೆ ವ್ಯಾಪಾರಿಗಳು, ಗ್ರಾಹಕರು, ಆಟೋ, ಕಾರು ಚಾಲಕರು, ತಳ್ಳುಗಾಡಿ, ಬೀದಿ ಬದಿ ವ್ಯಾಪಾರಿಗಳು ಹೀಗೆ ಎಲ್ಲರೂ ಪ್ರಕೃತಿ ಕರೆ-ದೇಹಬಾಧೆ ತೀರಿಸಬೇಕೆಂದರೆ ಹತ್ತಿರದಲ್ಲಿ ಗಲ್ಲಿ ಅಥವಾ ಯಾವುದಾದರೂ ಮರೆಯಾದ ಸ್ಥಳಗಳು ಇವೆಯೇ ಎಂದು ಹುಡುಕಾಡುವ ಸ್ಥಿತಿ ಎದುರಾಗಿದೆ!

ಮಹಿಳೆಯರಂತೂ ಚಾಮರಾಜನಗರ ಆಡಳಿತ ವ್ಯವಸ್ಥೆ ಬಗ್ಗೆ ಅಸಹ್ಯ ಪಟ್ಟುಕೊಳ್ಳುವಂತಾಗಿದೆ. ಬಂದ್ ಆಗಿರುವ ಎರಡೂ ಸಾರ್ವಜನಿಕ ಶೌಚಾಲಯಗಳಲ್ಲಿಯೂ ಮೂತ್ರ ವಿಸರ್ಜನೆಗೆ ಯಾವುದೇ ಶುಲ್ಕ ಇರಲಿಲ್ಲ. ಮಲ ವಿಸರ್ಜನೆಗೆ ೫ ರೂ.ಶುಲ್ಕ ನಿಗದಿಪಡಿಸಲಾಗಿತ್ತು. ಅದರಲ್ಲೂ ಹಳೇ ಖಾಸಗಿ ಬಸ್ ನಿಲ್ದಾಣದ ಶೌಚಗೃಹವನ್ನು ನೂರಾರು ಜನ ವ್ಯಾಪಾರಿಗಳು ಅವಲಂಬಿಸಿದ್ದರು. ಟೆಂಡರ್ ಪಡೆದವರು ನಗರಸಭೆಗೆ ಹಣ ಕಟ್ಟದಿರುವುದು ಈ ಸಮಸ್ಯೆಗೆ ಮೂಲ ಕಾರಣ ಎಂದು ಹೇಳಲಾಗುತ್ತಿದೆ. ವಾಸ್ತವವಾಗಿ, ನಗರದಲ್ಲಿ ಇರುವ ಸಾರ್ವಜನಿಕ ಶೌಚಾಲಯಗಳ ಸಂಖ್ಯೆಯೇ ಬೆರಳೆಣಿಕೆಯಷ್ಟು. ಅವನ್ನೂ ಸರಿಯಾಗಿ ನಿರ್ವಹಣೆ ಮಾಡದೆ ಹೀಗೆಯೇ ಒಂದೊಂದಾಗಿ ವಿವಿಧ ಕಾರಣ ನೀಡಿ ಮುಚ್ಚುತ್ತಿರುವುದು ಹೇಸಿಗೆಯ ವಿಚಾರ.

ಇದನ್ನು ಓದಿ: 30 ಹಾಡಿಗಳಿಗೂ ಅರಣ್ಯ ಹಕ್ಕು ಪತ್ರಗಳನ್ನು ನೀಡಲು ಆಗ್ರಹ

ಜಲ-ಮಲ ಬಾಧೆಗೂ ನಗರದಲ್ಲಿ ತೊಂದರೆ ಎದುರಾಗಿದೆ ಎಂದರೆ ಆಡಳಿತ ನಡೆಸುವ ಅಽಕಾರಿಗಳು ಮತ್ತು ಚುನಾಯಿತರ ಸಹಿತ ಎಲ್ಲರಿಗೂ ಗೌರವ ತರುವ ವಿಚಾರ ಖಂಡಿತಾ ಅಲ್ಲ. ಈಗಾಗಲೇ ನಗರಸಭೆಯ ಹೊಸ ಖಾಸಗಿ ಬಸ್ ನಿಲ್ದಾಣದಲ್ಲಿನ ಸಾರ್ವಜನಿಕ ಶೌಚಾಲಯ ಬಂದ್ ಆಗಿದ್ದು ಈ ಯಾದಿಗೆ ಈಗ ಇನ್ನೆರಡು ಸೇರಿರುವುದು ತಲೆತಗ್ಗಿಸುವ ವಿಚಾರ ಎಂದು ನಗರಸಭೆ ಮಾಜಿ ಸದಸ್ಯ ಚಂದ್ರಶೇಖರ ತೀವ್ರ ಅಸಮಾಧಾನ ವ್ಯಕ್ತಪಡಿಸಿದರು.

” ಈಗ ಮುಚ್ಚಲ್ಪಟ್ಟಿರುವ ಎರಡೂ ಸಾರ್ವಜನಿಕ ಶೌಚಾಲಯಗಳು ಮತ್ತು ನಗರಸಭೆಯ ಬಸ್ ನಿಲ್ದಾಣದಲ್ಲಿ ಈ ಹಿಂದೆಯೇ ಬಂದ್ ಆಗಿರುವಂತಹ ಶೌಚಾಲಯದ ಟೆಂಡರ್ ಅನ್ನು ಒಬ್ಬರೇ ಪಡೆದಿದ್ದು ಅವರು ಲಕ್ಷಾಂತರ ರೂ.ಬಾಕಿ ಉಳಿಸಿಕೊಂಡಿರುವ ಕಾರಣಕ್ಕೆ ಇವುಗಳ ನಿರ್ವಹಣೆಯನ್ನು ತಾತ್ಕಾಲಿಕವಾಗಿ ಬೇರೆಯವರಿಗೆ ವಹಿಸಲು ನಗರಸಭೆ ಸಾಮಾನ್ಯ ಸಭೆಯಲ್ಲಿ ನಿರ್ಣಯ ತೆಗೆದುಕೊಳ್ಳಲಾಗಿತ್ತು.ಈ ನಿಟ್ಟಿನಲ್ಲಿ ನಗರಸಭೆ ಆಡಳಿತ ಇನ್ನೂ ಯಾಕೆ ಮೌನ ವಹಿಸಿದೆ ಎಂಬುದು ಅರ್ಥವಾಗುತ್ತಿಲ್ಲ.”

-ಸಿ.ಜಿ.ಚಂದ್ರಶೇಖರ್, ನಗರಸಭೆ ಮಾಜಿ ಸದಸ್ಯರು

” ಟೆಂಡರ್‌ದಾರರು ಒಪ್ಪಂದದ ಪ್ರಕಾರ ಹಣ ಪಾವತಿ ಮಾಡದೆ ಬಾಕಿ ಉಳಿಸಿಕೊಂಡಿರುವ ಕಾರಣ ಅವರ ೧೧ ಲಕ್ಷ ರೂ. ಠೇವಣಿ ಹಣವನ್ನು ಮುಟ್ಟುಗೋಲು ಹಾಕಿಕೊಳ್ಳಲಾಗಿದೆ. ಹೊಸದಾಗಿ ಟೆಂಡರ್ ಕರೆಯುವ ಪ್ರಕ್ರಿಯೆ ಚಾಲ್ತಿಯಲ್ಲಿದ್ದು ಅಲ್ಲಿಯವರೆಗೆ ಸಾರ್ವಜನಿಕರಿಗೆ ತೊಂದರೆಯಾಗದಂತೆ ತಾತ್ಕಾಲಿಕ ವ್ಯವಸ್ಥೆ ಮಾಡಿ ಮುಚ್ಚಿರುವ ಎರಡೂ ಶೌಚಾಲಯಗಳ ಬಾಗಿಲು ತೆರೆಸಲು ಕ್ರಮ ವಹಿಸಲಾಗುವುದು.”

-ಪ್ರಕಾಶ್, ನಗರಸಭೆ ಆಯುಕ್ತರು, ಚಾಮರಾಜನಗರ

ಆಂದೋಲನ ಡೆಸ್ಕ್

Recent Posts

ಹೊಸ ವರ್ಷಾಚರಣೆ ಹಿನ್ನೆಲೆ ರಾಜ್ಯದ ಈ ಪ್ರವಾಸಿ ತಾಣಗಳಿಗೆ ಪ್ರವೇಶ ನಿರ್ಬಂಧ

ಬೆಂಗಳೂರು: ಹೊಸ ವರ್ಷಾಚರಣೆಯ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಬಿಗಿ ಭದ್ರತೆ ಕೈಗೊಳ್ಳಲಾಗಿದೆ. ಪ್ರವಾಸಿ ತಾಣಗಳಿಗೆ ಹೆಚ್ಚಿನ ಸಂಖ್ಯೆಯಲ್ಲಿ ಪ್ರವಾಸಿಗರು ಆಗಮಿಸುವ ಹಿನ್ನೆಲೆಯಲ್ಲಿ…

39 mins ago

ಹೊಸ ವರ್ಷಾಚರಣೆ: ಮೈಸೂರಿನಲ್ಲಿ ಅಬಕಾರಿ ಪೊಲೀಸರ ಅಲರ್ಟ್

ಮೈಸೂರು: ಹೊಸ ವರ್ಷದ ಸಂಭ್ರಮದ ಹಿನ್ನೆಲೆಯಲ್ಲಿ ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಅಕ್ರಮ ಮದ್ಯ ಹಾಗೂ ಮಾದಕ ವಸ್ತುಗಳ ಮಾರಾಟ ತಡೆಯಲು…

58 mins ago

ನಂಜನಗೂಡು: ಪೊಲೀಸ್ ಠಾಣೆ ಪಕ್ಕದಲ್ಲೇ ಸರಣಿ ಕಳ್ಳತನ: ಪಟ್ಟಣದಲ್ಲಿ ಆತಂಕ

ನಂಜನಗೂಡು: ಪಟ್ಟಣದಲ್ಲಿ ಸರಣಿ ಕಳ್ಳತನ ಪ್ರಕರಣಗಳು ಬೆಳಕಿಗೆ ಬಂದಿದ್ದು, ನಗರವಾಸಿಗಳಲ್ಲಿ ಆತಂಕ ಮೂಡಿಸಿದೆ. ನಗರದ ಆರ್.ಪಿ. ರಸ್ತೆಯಲ್ಲಿರುವ ಸುಮಾರು 14…

1 hour ago

ಚಾಮರಾಜನಗರದಲ್ಲಿ ಮತ್ತೊಂದು ಹುಲಿ ಸೆರೆ

ಚಾಮರಾಜನಗರ: ಚಾಮರಾಜನಗರ ತಾಲ್ಲೂಕಿನ ಕಲ್ಪುರ ಭಾಗದಲ್ಲಿ ಸಂಚಾರ ಮಾಡುತ್ತಿದ್ದ ಮತ್ತೊಂದು ಹುಲಿಯನ್ನು ಅರವಳಿಕೆ ಚುಚ್ಚುಮದ್ದು ನೀಡಿ ಸೆರೆ ಹಿಡಿಯಲಾಗಿದೆ. ಕಳೆದ…

2 hours ago

ಓದುಗರ ಪತ್ರ: ಇಸ್ಕಾನ್ ಕೃಷ್ಣ ದೇವಾಲಯದ ಬಳಿಯಿದ್ದ ಕಸ ತೆರವು

ಮೈಸೂರಿನ ಜಯನಗರದಲ್ಲಿರುವ ಇಸ್ಕಾನ್ ದೇವಾಲಯದ ಪಕ್ಕದಲ್ಲಿದ್ದ ಕಸದ ರಾಶಿಯನ್ನು ಮೈಸೂರು ಮಹಾನಗರಪಾಲಿಕೆಯಿಂದ ಮಂಗಳವಾರ ತೆರವುಗೊಳಿಸಲಾಗಿದೆ. ಆಂದೋಲನ ದಿನಪತ್ರಿಕೆಯ ಓದುಗರ ಪತ್ರ…

5 hours ago

ಓದುಗರ ಪತ್ರ: ಪ್ರಮುಖ ವೃತ್ತಗಳಲ್ಲಿ ಭಿಕ್ಷುಕರ ಹಾವಳಿ ನಿಯಂತ್ರಿಸಿ

ಮೈಸೂರಿನ ಪ್ರಮುಖ ವೃತ್ತಗಳಾದ ಸಿದ್ದಪ್ಪ ಸ್ಕ್ವೇರ್, ಸಂಸ್ಕೃತ ಪಾಠಶಾಲೆ, ವಿ.ವಿ.ಪುರಂ, ತಾತಯ್ಯ ವೃತ್ತ ಮೊದಲಾದ ಕಡೆಗಳಲ್ಲಿ ಭಿಕ್ಷುಕರು, ಅಂಗವಿಕಲರು ಪ್ರತಿನಿತ್ಯ…

5 hours ago