Andolana originals

ರಸ್ತೆಯಲ್ಲಿ ಸಿಕ್ಕಿದ 15 ಚೂಡಿದಾರ್‌ಗಳಿದ್ದ ಬಾಕ್ಸ್‌; ಬಾಲಕಿಯರ ಬಾಲಮಂದಿರಕ್ಕೆ ತಲುಪಿಸಿದ ಆಟೋ ಚಾಲಕ

ಮೈಸೂರು: ವಾಹನವೊಂದರಲ್ಲಿ ಸಾಗಿಸುತ್ತಿದ್ದಾಗ ಕೆಳಗಡೆ ಬಿದ್ದ ಬಟ್ಟೆ ತುಂಬಿದ ಬಾಕ್ಸ್, ಆಟೋ ಚಾಲಕರೊಬ್ಬರಿಗೆ ಸಿಕ್ಕಿದ್ದು, ಅದನ್ನು ಮೈಸೂರಿನ ಬಾಲಕಿ ಯರ ಬಾಲಮಂದಿರಕ್ಕೆ ತಲುಪಿಸಿದ್ದಾರೆ.

ಶನಿವಾರ ಮಧ್ಯಾಹ್ನ ೨ ಗಂಟೆ ವೇಳೆಯಲ್ಲಿ ನಂಜನಗೂಡಿನಿಂದ ಗುಂಡ್ಲುಪೇಟೆ ಕಡೆಗೆ ತೆರಳುತ್ತಿದ್ದ ಸರಕು ಸಾಗಾಣಿಕೆ ವಾಹನದಲ್ಲಿದ್ದ ಬಾಕ್ಸ್‌ವೊಂದು ಬೇಗೂರು ಬಳಿ ರಸ್ತೆಗೆ ಬಿದ್ದಿದ್ದು, ಅದೇ ದಾರಿಯಲ್ಲಿ ಮೈಸೂರಿನ ಕಡೆಗೆ ಆಟೋ ರಿಕ್ಷಾದಲ್ಲಿ ಬರುತ್ತಿದ್ದ ನವೀನ್ ಅವರಿಗೆ ಆ ಬಾಕ್ಸ್ ಸಿಕ್ಕಿದೆ. ಆ ಬಾಕ್ಸ್‌ನ್ನು ವಾಪಸ್ ಮಾಡುವ ಸಲುವಾಗಿ ಅವರು ಆ ವಾಹನದ ಹಿಂದೆ ಒಂದಷ್ಟು ದೂರ ಹೋಗಿದ್ದಾರೆ.

ಆದರೆ, ಅದನ್ನು ಹಿಡಿಯಲು ಸಾಧ್ಯವಾಗಿಲ್ಲ. ಹಾಗಾಗಿ ಅವರು ಮೈಸೂರಿನ ಸಿದ್ದಾರ್ಥ ಲೇಔಟ್‌ನಲ್ಲಿರುವ ತಮ್ಮ ಮನೆಗೆ ವಾಪಸ್ ಬಂದಿದ್ದಾರೆ. ಆ ಬಾಕ್ಸ್‌ನಲ್ಲಿ ಹೆಣ್ಣುಮಕ್ಕಳು ಧರಿಸುವ ೧೫ ಹೊಸ ಚೂಡಿದಾರ್‌ಗಳು ಕಂಡುಬಂದಿವೆ. ಸಾಗಾಣಿಕೆ ವಾಹನದವರು ತಮ್ಮನ್ನು ಹುಡುಕಿಕೊಂಡು ಬರಬಹುದು ಎಂದು ನವೀನ್ ಭಾವಿಸಿದ್ದರು. ಹಾಗಾಗಿ ಆ ಬಾಕ್ಸ್‌ನ್ನು ಮಂಗಳವಾರದವರೆಗೆ ತಮ್ಮ ಮನೆಯಲ್ಲಿಯೇ ಇಟ್ಟುಕೊಂಡಿದ್ದರು.

ಆದರೆ, ಚೂಡಿದಾರ್‌ಗಳಿದ್ದ ಬಾಕ್ಸ್ ಅನ್ನು ಕೇಳಿಕೊಂಡು ಯಾರೂ ನವೀನ್ ಅವರನ್ನು ಸಂಪರ್ಕಿಸಲಿಲ್ಲ. ಆದ್ದರಿಂದ ಹೆಣ್ಣುಮಕ್ಕಳ ಚೂಡಿದಾರ್‌ಗಳಿದ್ದ ಬಾಕ್ಸ್ ಅನ್ನು ನವೀನ್ ಅವರು ಮೈಸೂರಿನ ಬಾಲಕಿಯರ ಬಾಲಮಂದಿರಕ್ಕೆ ತಲುಪಿಸಿದ್ದಾರೆ. ಅಲ್ಲಿರುವ ಹೆಣ್ಣುಮಕ್ಕಳಿಗೆ ಈ ಚೂಡಿದಾರ್‌ಗಳು ಉಪಯುಕ್ತವಾಗಬಹುದು ಎಂದು ಭಾವಿಸಿ ಅಲ್ಲಿಗೆ ಕೊಟ್ಟಿದ್ದೇನೆ ಎಂದು ಆಟೋ ಚಾಲಕ ನವೀನ್ ‘ಆಂದೋಲನ’ ದಿನಪತ್ರಿಕೆಗೆ ತಿಳಿಸಿದರು.

ವಾರಸುದಾರರು ಬಾಲಮಂದಿರ ಸಂಪರ್ಕಿಸಬಹುದು

ನವೀನ್ ಅವರು ಆ ಬಾಕ್ಸ್‌ನ್ನು ಮಂಗಳವಾರ ಬಾಲಮಂದಿರದಲ್ಲಿದ್ದ ಅಧ್ಯಕ್ಷರಾದ ಭಾಗ್ಯಶ್ರೀ ಅವರಿಗೆ ತಲುಪಿಸಿದ್ದಾರೆ. ಬಾಕ್ಸ್‌ನ ವಾರಸುದಾರರು ಬಾಲಮಂದಿರಕ್ಕೆ ಆಗಮಿಸಿ ಸೂಕ್ತ ಮಾಹಿತಿಗಳನ್ನು ನೀಡಿ ಅದನ್ನು ವಾಪಸ್‌ ಪಡೆಯಬಹುದು. ಮಾಹಿತಿಗೆ ಮೊ. ಸಂ. 9481831708/ 9845366774 ಸಂಪರ್ಕಿಸಬಹುದು ಎಂದು ಭಾಗ್ಯಶ್ರೀ ಅವರು ತಿಳಿಸಿದ್ದಾರೆ.

andolana

Recent Posts

ಅಧಿವೇಶನದಲ್ಲಿ ಸರ್ಕಾರದ ವಿರುದ್ಧ ಮುಗಿಬೀಳಲು ವಿಪಕ್ಷಗಳು ಸಜ್ಜು

ಬೆಂಗಳೂರು: ನಾಯಕತ್ವ ಬದಲಾವಣೆ ಗೊಂದಲ, ಸರ್ಕಾರದಲ್ಲಿ ಶೇಕಡಾ.63 ರ್ಷಟು ಕಮಿಷನ್‌ ಕುರಿತು ಉಪಲೋಕಾಯುಕ್ತರ ಹೇಳಿಕೆ, ವಿವಿಧ ಇಲಾಖೆಗಳಲ್ಲಿ ನಡೆದಿರುವ ಭ್ರಷ್ಟಾಚಾರ…

7 mins ago

ಕಾವೇರಿ ನದಿ ಪಾತ್ರಕ್ಕೆ ಮಾರಕವಾದ ಪ್ರವಾಸೋದ್ಯಮ

ರಾಜ್ಯದಲ್ಲಿ ರಿಯಲ್ ಎಸ್ಟೇಟ್ ಉದ್ಯಮ ಗರಿಗೆದರಿದ ಬಳಿಕ ಅಲ್ಲಲ್ಲಿ ಕೆರೆ-ಕಟ್ಟೆ, ಸರ್ಕಾರಿ ಜಾಗಗಳ ಒತ್ತುವರಿ ಪ್ರಕರಣ ಮೇಲಿಂದ ಮೇಲೆ ಭಾರೀ…

33 mins ago

ಅಧಿಕಾರ ಹಂಚಿಕೆ ಗೊಂದಲ; ಬಿಜೆಪಿ, ಜಾ.ದಳದಲ್ಲಿ ಆತ್ಮವಿಶ್ವಾಸ ಹೆಚ್ಚಳ

ಕಾಂಗ್ರೆಸ್‌ನಲ್ಲಿ ನಡೆಯುತ್ತಿರುವ ವಿದ್ಯಮಾನಗಳಿಗೆ ಕಾರಣವಾಯಿತೇ ಹೈಕಮಾಂಡ್ ಮೌನ? ರಾಜ್ಯ ಕಾಂಗ್ರೆಸ್‌ನಲ್ಲಿ ಮುಂದುವರಿದಿರುವ ಗೊಂದಲ ಬಿಜೆಪಿ ಮತ್ತು ಜಾ.ದಳ ಪಾಳೆಯಗಳ ಆತ್ಮವಿಶ್ವಾಸ…

49 mins ago

ಕೊಡವ ಕೌಟುಂಬಿಕ ಕ್ರಿಕೆಟ್‌ ಉತ್ಸವಕ್ಕೆ ಸಿದ್ಧತೆ

ಏ.೨ರಿಂದ ೨೮ ದಿನಗಳ ಕಾಲ ನಡೆಯಲಿರುವ ಪಂದ್ಯಾವಳಿ; ೩೦೦ಕ್ಕೂ ಅಧಿಕ ತಂಡಗಳು ಪಾಲ್ಗೊಳ್ಳುವ ನಿರೀಕ್ಷೆ  ಮಡಿಕೇರಿ:ಕೊಡವ ಕ್ರಿಕೆಟ್ ಅಕಾಡೆಮಿ ಸಹಯೋಗದಲ್ಲಿ…

1 hour ago

ಹೊರವಲಯದ ನಿವೇಶನಗಳಿಗೆ ಹೆಚ್ಚಾಗಲಿದೆ ಮತ್ತಷ್ಟು ಬೇಡಿಕೆ

ಮೈಸೂರು: ನಗರದ ಹೊರವಲಯದ ನಾಲ್ಕು ದಿಕ್ಕುಗಳಲ್ಲಿರುವ ಹಲವು ಪ್ರದೇಶಗಳನ್ನು ಸೇರಿಸಿ ಗ್ರೇಡ್- ೧ ಮೈಸೂರು ಮಹಾನಗರ ಪಾಲಿಕೆಯನ್ನಾಗಿ ರಚಿಸಲು ರಾಜ್ಯಸರ್ಕಾರ…

2 hours ago

ಶಿವಾನಂದಪುರಿ ಶ್ರೀಗಳಿಗೆ ಕನಕ ಭವನ ನಿರ್ವಹಣೆ ಹೊಣೆ

ಮಂಜು ಕೋಟೆ ಕುರುಬ ಸಮಾಜದ ಎರಡು ಬಣಗಳ ನಡುವೆ ಉಂಟಾಗಿದ್ದ ಗೊಂದಲ; ಸಿಎಂ ಸಿದ್ದರಾಮಯ್ಯ ಸೂಚನೆಯಂತೆ ಕ್ರಮ ಎಚ್.ಡಿ.ಕೋಟೆ: ಮುಖ್ಯಮಂತ್ರಿ…

4 hours ago