ಮೈಸೂರು: ವಾಹನವೊಂದರಲ್ಲಿ ಸಾಗಿಸುತ್ತಿದ್ದಾಗ ಕೆಳಗಡೆ ಬಿದ್ದ ಬಟ್ಟೆ ತುಂಬಿದ ಬಾಕ್ಸ್, ಆಟೋ ಚಾಲಕರೊಬ್ಬರಿಗೆ ಸಿಕ್ಕಿದ್ದು, ಅದನ್ನು ಮೈಸೂರಿನ ಬಾಲಕಿ ಯರ ಬಾಲಮಂದಿರಕ್ಕೆ ತಲುಪಿಸಿದ್ದಾರೆ.
ಶನಿವಾರ ಮಧ್ಯಾಹ್ನ ೨ ಗಂಟೆ ವೇಳೆಯಲ್ಲಿ ನಂಜನಗೂಡಿನಿಂದ ಗುಂಡ್ಲುಪೇಟೆ ಕಡೆಗೆ ತೆರಳುತ್ತಿದ್ದ ಸರಕು ಸಾಗಾಣಿಕೆ ವಾಹನದಲ್ಲಿದ್ದ ಬಾಕ್ಸ್ವೊಂದು ಬೇಗೂರು ಬಳಿ ರಸ್ತೆಗೆ ಬಿದ್ದಿದ್ದು, ಅದೇ ದಾರಿಯಲ್ಲಿ ಮೈಸೂರಿನ ಕಡೆಗೆ ಆಟೋ ರಿಕ್ಷಾದಲ್ಲಿ ಬರುತ್ತಿದ್ದ ನವೀನ್ ಅವರಿಗೆ ಆ ಬಾಕ್ಸ್ ಸಿಕ್ಕಿದೆ. ಆ ಬಾಕ್ಸ್ನ್ನು ವಾಪಸ್ ಮಾಡುವ ಸಲುವಾಗಿ ಅವರು ಆ ವಾಹನದ ಹಿಂದೆ ಒಂದಷ್ಟು ದೂರ ಹೋಗಿದ್ದಾರೆ.
ಆದರೆ, ಅದನ್ನು ಹಿಡಿಯಲು ಸಾಧ್ಯವಾಗಿಲ್ಲ. ಹಾಗಾಗಿ ಅವರು ಮೈಸೂರಿನ ಸಿದ್ದಾರ್ಥ ಲೇಔಟ್ನಲ್ಲಿರುವ ತಮ್ಮ ಮನೆಗೆ ವಾಪಸ್ ಬಂದಿದ್ದಾರೆ. ಆ ಬಾಕ್ಸ್ನಲ್ಲಿ ಹೆಣ್ಣುಮಕ್ಕಳು ಧರಿಸುವ ೧೫ ಹೊಸ ಚೂಡಿದಾರ್ಗಳು ಕಂಡುಬಂದಿವೆ. ಸಾಗಾಣಿಕೆ ವಾಹನದವರು ತಮ್ಮನ್ನು ಹುಡುಕಿಕೊಂಡು ಬರಬಹುದು ಎಂದು ನವೀನ್ ಭಾವಿಸಿದ್ದರು. ಹಾಗಾಗಿ ಆ ಬಾಕ್ಸ್ನ್ನು ಮಂಗಳವಾರದವರೆಗೆ ತಮ್ಮ ಮನೆಯಲ್ಲಿಯೇ ಇಟ್ಟುಕೊಂಡಿದ್ದರು.
ಆದರೆ, ಚೂಡಿದಾರ್ಗಳಿದ್ದ ಬಾಕ್ಸ್ ಅನ್ನು ಕೇಳಿಕೊಂಡು ಯಾರೂ ನವೀನ್ ಅವರನ್ನು ಸಂಪರ್ಕಿಸಲಿಲ್ಲ. ಆದ್ದರಿಂದ ಹೆಣ್ಣುಮಕ್ಕಳ ಚೂಡಿದಾರ್ಗಳಿದ್ದ ಬಾಕ್ಸ್ ಅನ್ನು ನವೀನ್ ಅವರು ಮೈಸೂರಿನ ಬಾಲಕಿಯರ ಬಾಲಮಂದಿರಕ್ಕೆ ತಲುಪಿಸಿದ್ದಾರೆ. ಅಲ್ಲಿರುವ ಹೆಣ್ಣುಮಕ್ಕಳಿಗೆ ಈ ಚೂಡಿದಾರ್ಗಳು ಉಪಯುಕ್ತವಾಗಬಹುದು ಎಂದು ಭಾವಿಸಿ ಅಲ್ಲಿಗೆ ಕೊಟ್ಟಿದ್ದೇನೆ ಎಂದು ಆಟೋ ಚಾಲಕ ನವೀನ್ ‘ಆಂದೋಲನ’ ದಿನಪತ್ರಿಕೆಗೆ ತಿಳಿಸಿದರು.
ವಾರಸುದಾರರು ಬಾಲಮಂದಿರ ಸಂಪರ್ಕಿಸಬಹುದು
ನವೀನ್ ಅವರು ಆ ಬಾಕ್ಸ್ನ್ನು ಮಂಗಳವಾರ ಬಾಲಮಂದಿರದಲ್ಲಿದ್ದ ಅಧ್ಯಕ್ಷರಾದ ಭಾಗ್ಯಶ್ರೀ ಅವರಿಗೆ ತಲುಪಿಸಿದ್ದಾರೆ. ಬಾಕ್ಸ್ನ ವಾರಸುದಾರರು ಬಾಲಮಂದಿರಕ್ಕೆ ಆಗಮಿಸಿ ಸೂಕ್ತ ಮಾಹಿತಿಗಳನ್ನು ನೀಡಿ ಅದನ್ನು ವಾಪಸ್ ಪಡೆಯಬಹುದು. ಮಾಹಿತಿಗೆ ಮೊ. ಸಂ. 9481831708/ 9845366774 ಸಂಪರ್ಕಿಸಬಹುದು ಎಂದು ಭಾಗ್ಯಶ್ರೀ ಅವರು ತಿಳಿಸಿದ್ದಾರೆ.
ಬೆಂಗಳೂರು: ತಮ್ಮ ವಿರುದ್ಧ ದಾಖಲಾಗಿರುವ ಅಸಹಜ ಲೈಂಗಿಕ ಪ್ರಕರಣವನ್ನು ಕೈಬಿಡುವಂತೆ ಕೋರಿ, ಜೆಡಿಎಸ್ ವಿಧಾನ ಪರಿಷತ್ ಸದಸ್ಯ ಹಾಗೂ ಮಾಜಿ…
ಟಿ.ನರಸೀಪುರ: ಕಾಡಾನೆ ದಾಳಿಗೆ ಸಿಲುಕಿ ರೈತರೊಬ್ಬರು ಬಲಿಯಾಗಿರುವ ಘಟನೆ ಮೈಸೂರು ಜಿಲ್ಲೆ ಟಿ.ನರಸೀಪುರ ತಾಲ್ಲೂಕಿನ ತಲಕಾಡು ಪೊಲೀಸ್ ಠಾಣೆ ವ್ಯಾಪ್ತಿಯ…
ಮೈಸೂರು: ಮೈಸೂರು ನಗರದ ಸಿಸಿಬಿ ಪೊಲೀಸರು ಇಂದು ಮಾದಕ ವಸ್ತುಗಳ ವಿರುದ್ಧ ವಿಶೇಷ ಕಾರ್ಯಾಚರಣೆ ನಡೆಸಿ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.…
ಮಂಡ್ಯ: ಮಕ್ಕಳು ಪಠ್ಯೇತರ ಚಟುವಟಿಕೆಗಳಾದ ಚಿತ್ರಕಲೆ, ಸಂಗೀತ, ಕ್ರೀಡಾ ಆಸಕ್ತಿಯನ್ನು ಬೆಳೆಸಿಕೊಳ್ಳಬೇಕು ಎಂದು ವಿಧಾನಪರಿಷತ್ ಸದಸ್ಯ ಹಾಗೂ ಕರ್ನಾಟಕ ರಾಜ್ಯ…
ಮೈಸೂರು: ಶಾಸಕರ ವಿದೇಶಿ ಪ್ರವಾಸಕ್ಕೂ ರಾಜಕೀಯ ಬೆಳವಣಿಗೆಗಳಿಗೂ ಸಂಬಂಧವಿಲ್ಲ ಎಂದು ವಿಧಾನ ಪರಿಷತ್ ಸದಸ್ಯ ಡಾ.ಯತೀಂದ್ರ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದರು.…
ಬೆಂಗಳೂರು: ಉದ್ಯಮಿ ಸಿ.ಜೆ.ರಾಯ್ ಆತ್ಮಹತ್ಯೆ ಪ್ರಕರಣದ ತನಿಖೆ ಅಂತಿಮ ಹಂತ ತಲುಪಿದ್ದು, ವಿಶೇಷ ತನಿಖಾ ತಂಡ ತನಿಖೆಯನ್ನು ಪೂರ್ಣಗೊಳಿಸಿ ವರದಿ…