Andolana originals

ರಸ್ತೆಯಲ್ಲಿ ಸಿಕ್ಕಿದ 15 ಚೂಡಿದಾರ್‌ಗಳಿದ್ದ ಬಾಕ್ಸ್‌; ಬಾಲಕಿಯರ ಬಾಲಮಂದಿರಕ್ಕೆ ತಲುಪಿಸಿದ ಆಟೋ ಚಾಲಕ

ಮೈಸೂರು: ವಾಹನವೊಂದರಲ್ಲಿ ಸಾಗಿಸುತ್ತಿದ್ದಾಗ ಕೆಳಗಡೆ ಬಿದ್ದ ಬಟ್ಟೆ ತುಂಬಿದ ಬಾಕ್ಸ್, ಆಟೋ ಚಾಲಕರೊಬ್ಬರಿಗೆ ಸಿಕ್ಕಿದ್ದು, ಅದನ್ನು ಮೈಸೂರಿನ ಬಾಲಕಿ ಯರ ಬಾಲಮಂದಿರಕ್ಕೆ ತಲುಪಿಸಿದ್ದಾರೆ.

ಶನಿವಾರ ಮಧ್ಯಾಹ್ನ ೨ ಗಂಟೆ ವೇಳೆಯಲ್ಲಿ ನಂಜನಗೂಡಿನಿಂದ ಗುಂಡ್ಲುಪೇಟೆ ಕಡೆಗೆ ತೆರಳುತ್ತಿದ್ದ ಸರಕು ಸಾಗಾಣಿಕೆ ವಾಹನದಲ್ಲಿದ್ದ ಬಾಕ್ಸ್‌ವೊಂದು ಬೇಗೂರು ಬಳಿ ರಸ್ತೆಗೆ ಬಿದ್ದಿದ್ದು, ಅದೇ ದಾರಿಯಲ್ಲಿ ಮೈಸೂರಿನ ಕಡೆಗೆ ಆಟೋ ರಿಕ್ಷಾದಲ್ಲಿ ಬರುತ್ತಿದ್ದ ನವೀನ್ ಅವರಿಗೆ ಆ ಬಾಕ್ಸ್ ಸಿಕ್ಕಿದೆ. ಆ ಬಾಕ್ಸ್‌ನ್ನು ವಾಪಸ್ ಮಾಡುವ ಸಲುವಾಗಿ ಅವರು ಆ ವಾಹನದ ಹಿಂದೆ ಒಂದಷ್ಟು ದೂರ ಹೋಗಿದ್ದಾರೆ.

ಆದರೆ, ಅದನ್ನು ಹಿಡಿಯಲು ಸಾಧ್ಯವಾಗಿಲ್ಲ. ಹಾಗಾಗಿ ಅವರು ಮೈಸೂರಿನ ಸಿದ್ದಾರ್ಥ ಲೇಔಟ್‌ನಲ್ಲಿರುವ ತಮ್ಮ ಮನೆಗೆ ವಾಪಸ್ ಬಂದಿದ್ದಾರೆ. ಆ ಬಾಕ್ಸ್‌ನಲ್ಲಿ ಹೆಣ್ಣುಮಕ್ಕಳು ಧರಿಸುವ ೧೫ ಹೊಸ ಚೂಡಿದಾರ್‌ಗಳು ಕಂಡುಬಂದಿವೆ. ಸಾಗಾಣಿಕೆ ವಾಹನದವರು ತಮ್ಮನ್ನು ಹುಡುಕಿಕೊಂಡು ಬರಬಹುದು ಎಂದು ನವೀನ್ ಭಾವಿಸಿದ್ದರು. ಹಾಗಾಗಿ ಆ ಬಾಕ್ಸ್‌ನ್ನು ಮಂಗಳವಾರದವರೆಗೆ ತಮ್ಮ ಮನೆಯಲ್ಲಿಯೇ ಇಟ್ಟುಕೊಂಡಿದ್ದರು.

ಆದರೆ, ಚೂಡಿದಾರ್‌ಗಳಿದ್ದ ಬಾಕ್ಸ್ ಅನ್ನು ಕೇಳಿಕೊಂಡು ಯಾರೂ ನವೀನ್ ಅವರನ್ನು ಸಂಪರ್ಕಿಸಲಿಲ್ಲ. ಆದ್ದರಿಂದ ಹೆಣ್ಣುಮಕ್ಕಳ ಚೂಡಿದಾರ್‌ಗಳಿದ್ದ ಬಾಕ್ಸ್ ಅನ್ನು ನವೀನ್ ಅವರು ಮೈಸೂರಿನ ಬಾಲಕಿಯರ ಬಾಲಮಂದಿರಕ್ಕೆ ತಲುಪಿಸಿದ್ದಾರೆ. ಅಲ್ಲಿರುವ ಹೆಣ್ಣುಮಕ್ಕಳಿಗೆ ಈ ಚೂಡಿದಾರ್‌ಗಳು ಉಪಯುಕ್ತವಾಗಬಹುದು ಎಂದು ಭಾವಿಸಿ ಅಲ್ಲಿಗೆ ಕೊಟ್ಟಿದ್ದೇನೆ ಎಂದು ಆಟೋ ಚಾಲಕ ನವೀನ್ ‘ಆಂದೋಲನ’ ದಿನಪತ್ರಿಕೆಗೆ ತಿಳಿಸಿದರು.

ವಾರಸುದಾರರು ಬಾಲಮಂದಿರ ಸಂಪರ್ಕಿಸಬಹುದು

ನವೀನ್ ಅವರು ಆ ಬಾಕ್ಸ್‌ನ್ನು ಮಂಗಳವಾರ ಬಾಲಮಂದಿರದಲ್ಲಿದ್ದ ಅಧ್ಯಕ್ಷರಾದ ಭಾಗ್ಯಶ್ರೀ ಅವರಿಗೆ ತಲುಪಿಸಿದ್ದಾರೆ. ಬಾಕ್ಸ್‌ನ ವಾರಸುದಾರರು ಬಾಲಮಂದಿರಕ್ಕೆ ಆಗಮಿಸಿ ಸೂಕ್ತ ಮಾಹಿತಿಗಳನ್ನು ನೀಡಿ ಅದನ್ನು ವಾಪಸ್‌ ಪಡೆಯಬಹುದು. ಮಾಹಿತಿಗೆ ಮೊ. ಸಂ. 9481831708/ 9845366774 ಸಂಪರ್ಕಿಸಬಹುದು ಎಂದು ಭಾಗ್ಯಶ್ರೀ ಅವರು ತಿಳಿಸಿದ್ದಾರೆ.

andolana

Recent Posts

ಆಧುನಿಕ ಕಾಲಕ್ಕೆ ತಕ್ಕಂತೆ ಮನ್ರೇಗಾ ಹೆಸರು ಬದಲಾವಣೆ : ಸಂಸದ ಯದುವೀರ್‌

ಮೈಸೂರು : ಆಧುನಿಕ ಕಾಲಕ್ಕೆ ತಕ್ಕಂತೆ ಮನ್ರೇಗಾ ಹೆಸರನ್ನು ಕೇಂದ್ರ ಸರ್ಕಾರ ಬದಲಾಯಿಸಿದೆ. ಆದರೆ, ಕಾಂಗ್ರೆಸ್ ಮಾಡುತ್ತಿರುವ ಆರೋಪಕ್ಕೆ ಯಾವ…

5 seconds ago

ತಂತ್ರಜ್ಞಾನ ಅಳವಡಿಸಿಕೊಂಡು ಉತ್ತಮ ಇಳುವರಿ ಜೊತೆಗೆ ಹೆಚ್ಚಿನ ಆದಾಯ ಪಡೆಯರಿ : ರೈತರಿಗೆ ಸಿಎಂ ಕರೆ

ಬೆಳಗಾವಿ : ರಾಜ್ಯ ಸರ್ಕಾರ ರೈತ ಪರ ಸರಕಾರವಾಗಿದ್ದು, ಕಬ್ಬು ಬೆಳೆಯುವ ಪ್ರದೇಶದಲ್ಲಿ ಮಣ್ಣಿನ ಆರೋಗ್ಯ ಮತ್ತು ನೀರಿನ ಸಮಗ್ರ…

20 mins ago

ಟಿ-20 ವಿಶ್ವಕಪ್‌ಗೆ ಭಾರತ ತಂಡ ಪ್ರಕಟ :ಸೂರ್ಯಕುಮಾರ್ ಯಾದವ್ ನಾಯಕ

ಹೊಸದಿಲ್ಲಿ: ಮುಂಬರುವ ಐಸಿಸಿ ಟಿ-೨೦ ವಿಶ್ವಕಪ್‌ಗಾಗಿ ೧೫ ಸದಸ್ಯರ ಭಾರತ ತಂಡವನ್ನು ಪ್ರಕಟಿಸಲಾಗಿದೆ. ತಂಡವನ್ನು ಸೂರ್ಯಕುಮಾರ್ ಯಾದವ್ ಮುನ್ನಡೆಸಲಿದ್ದು, ಶುಭಮನ್…

31 mins ago

ಮೊಟ್ಟೆ ಕ್ಯಾನ್ಸರ್‌ ಕಾರಕವಲ್ಲ : ಕೇಂದ್ರ ವರದಿ

ಹೊಸದಿಲ್ಲಿ : ಮೊಟ್ಟೆ ಸೇವೆನೆಗೆ ಸುರಕ್ಷಿತವಾಗಿದ್ದು ಮೊಟ್ಟೆಯಲ್ಲಿ ಕ್ಯಾನ್ಸರ್ ಕಾರಕವಾಗುವ ಯಾವುದೇ ಅಂಶ ಪತ್ತೆ ಆಗಿಲ್ಲ ಎಂದು ಕೇಂದ್ರ ಆಹಾರ…

34 mins ago

‘ಅಂತರ್ಜಲ ಹೆಚ್ಚಳಕ್ಕೆ ಆದ್ಯತೆ ನೀಡಿ’ : ಶಿವಶಂಕರ್ ಸೂಚನೆ

ಚಾಮರಾಜನಗರ : ಜಿಲ್ಲೆಯಲ್ಲಿ ಅಂತರ್ಜಲ ಮಟ್ಟ ಹೆಚ್ಚಿಸುವಂತಹ ಕಾಮಗಾರಿಗಳನ್ನು ಆದ್ಯತೆ ಮೇರೆಗೆ ಕೈಗೊಳ್ಳುವಂತೆ ಕೇಂದ್ರ ಗ್ರಾಮೀಣಾಭಿವೃದ್ಧಿ ಸಚಿವಾಲಯದ ಜಲಶಕ್ತಿ ಮಂತ್ರಾಲಯದ…

39 mins ago

ಮೈಸೂರು | ನಾಳೆಯಿಂದ ಅರಮನೆ ಅಂಗಳದಲ್ಲಿ ಫಲಪುಷ್ಪ ಪ್ರದರ್ಶನ

ಮೈಸೂರು : ಕ್ರಿಸ್‌ಮಸ್ ಹಾಗೂ ಹೊಸ ವರ್ಷದ ಸಂಭ್ರಮಾಚರಣೆಗಾಗಿ ಪ್ರವಾಸಿಗರು, ಸ್ಥಳೀಯರಿಗೆ ಮನರಂಜನೆ ಒದಗಿಸಲು ಅರಮನೆ ಅಂಗಳದಲ್ಲಿ ಡಿ.೨೧ರಿಂದ ೩೧ರವರೆಗೆ…

1 hour ago