ಮೈಸೂರು: ವಾಹನವೊಂದರಲ್ಲಿ ಸಾಗಿಸುತ್ತಿದ್ದಾಗ ಕೆಳಗಡೆ ಬಿದ್ದ ಬಟ್ಟೆ ತುಂಬಿದ ಬಾಕ್ಸ್, ಆಟೋ ಚಾಲಕರೊಬ್ಬರಿಗೆ ಸಿಕ್ಕಿದ್ದು, ಅದನ್ನು ಮೈಸೂರಿನ ಬಾಲಕಿ ಯರ ಬಾಲಮಂದಿರಕ್ಕೆ ತಲುಪಿಸಿದ್ದಾರೆ.
ಶನಿವಾರ ಮಧ್ಯಾಹ್ನ ೨ ಗಂಟೆ ವೇಳೆಯಲ್ಲಿ ನಂಜನಗೂಡಿನಿಂದ ಗುಂಡ್ಲುಪೇಟೆ ಕಡೆಗೆ ತೆರಳುತ್ತಿದ್ದ ಸರಕು ಸಾಗಾಣಿಕೆ ವಾಹನದಲ್ಲಿದ್ದ ಬಾಕ್ಸ್ವೊಂದು ಬೇಗೂರು ಬಳಿ ರಸ್ತೆಗೆ ಬಿದ್ದಿದ್ದು, ಅದೇ ದಾರಿಯಲ್ಲಿ ಮೈಸೂರಿನ ಕಡೆಗೆ ಆಟೋ ರಿಕ್ಷಾದಲ್ಲಿ ಬರುತ್ತಿದ್ದ ನವೀನ್ ಅವರಿಗೆ ಆ ಬಾಕ್ಸ್ ಸಿಕ್ಕಿದೆ. ಆ ಬಾಕ್ಸ್ನ್ನು ವಾಪಸ್ ಮಾಡುವ ಸಲುವಾಗಿ ಅವರು ಆ ವಾಹನದ ಹಿಂದೆ ಒಂದಷ್ಟು ದೂರ ಹೋಗಿದ್ದಾರೆ.
ಆದರೆ, ಅದನ್ನು ಹಿಡಿಯಲು ಸಾಧ್ಯವಾಗಿಲ್ಲ. ಹಾಗಾಗಿ ಅವರು ಮೈಸೂರಿನ ಸಿದ್ದಾರ್ಥ ಲೇಔಟ್ನಲ್ಲಿರುವ ತಮ್ಮ ಮನೆಗೆ ವಾಪಸ್ ಬಂದಿದ್ದಾರೆ. ಆ ಬಾಕ್ಸ್ನಲ್ಲಿ ಹೆಣ್ಣುಮಕ್ಕಳು ಧರಿಸುವ ೧೫ ಹೊಸ ಚೂಡಿದಾರ್ಗಳು ಕಂಡುಬಂದಿವೆ. ಸಾಗಾಣಿಕೆ ವಾಹನದವರು ತಮ್ಮನ್ನು ಹುಡುಕಿಕೊಂಡು ಬರಬಹುದು ಎಂದು ನವೀನ್ ಭಾವಿಸಿದ್ದರು. ಹಾಗಾಗಿ ಆ ಬಾಕ್ಸ್ನ್ನು ಮಂಗಳವಾರದವರೆಗೆ ತಮ್ಮ ಮನೆಯಲ್ಲಿಯೇ ಇಟ್ಟುಕೊಂಡಿದ್ದರು.
ಆದರೆ, ಚೂಡಿದಾರ್ಗಳಿದ್ದ ಬಾಕ್ಸ್ ಅನ್ನು ಕೇಳಿಕೊಂಡು ಯಾರೂ ನವೀನ್ ಅವರನ್ನು ಸಂಪರ್ಕಿಸಲಿಲ್ಲ. ಆದ್ದರಿಂದ ಹೆಣ್ಣುಮಕ್ಕಳ ಚೂಡಿದಾರ್ಗಳಿದ್ದ ಬಾಕ್ಸ್ ಅನ್ನು ನವೀನ್ ಅವರು ಮೈಸೂರಿನ ಬಾಲಕಿಯರ ಬಾಲಮಂದಿರಕ್ಕೆ ತಲುಪಿಸಿದ್ದಾರೆ. ಅಲ್ಲಿರುವ ಹೆಣ್ಣುಮಕ್ಕಳಿಗೆ ಈ ಚೂಡಿದಾರ್ಗಳು ಉಪಯುಕ್ತವಾಗಬಹುದು ಎಂದು ಭಾವಿಸಿ ಅಲ್ಲಿಗೆ ಕೊಟ್ಟಿದ್ದೇನೆ ಎಂದು ಆಟೋ ಚಾಲಕ ನವೀನ್ ‘ಆಂದೋಲನ’ ದಿನಪತ್ರಿಕೆಗೆ ತಿಳಿಸಿದರು.
ವಾರಸುದಾರರು ಬಾಲಮಂದಿರ ಸಂಪರ್ಕಿಸಬಹುದು
ನವೀನ್ ಅವರು ಆ ಬಾಕ್ಸ್ನ್ನು ಮಂಗಳವಾರ ಬಾಲಮಂದಿರದಲ್ಲಿದ್ದ ಅಧ್ಯಕ್ಷರಾದ ಭಾಗ್ಯಶ್ರೀ ಅವರಿಗೆ ತಲುಪಿಸಿದ್ದಾರೆ. ಬಾಕ್ಸ್ನ ವಾರಸುದಾರರು ಬಾಲಮಂದಿರಕ್ಕೆ ಆಗಮಿಸಿ ಸೂಕ್ತ ಮಾಹಿತಿಗಳನ್ನು ನೀಡಿ ಅದನ್ನು ವಾಪಸ್ ಪಡೆಯಬಹುದು. ಮಾಹಿತಿಗೆ ಮೊ. ಸಂ. 9481831708/ 9845366774 ಸಂಪರ್ಕಿಸಬಹುದು ಎಂದು ಭಾಗ್ಯಶ್ರೀ ಅವರು ತಿಳಿಸಿದ್ದಾರೆ.
ಬೆಂಗಳೂರು: ನಾಯಕತ್ವ ಬದಲಾವಣೆ ಗೊಂದಲ, ಸರ್ಕಾರದಲ್ಲಿ ಶೇಕಡಾ.63 ರ್ಷಟು ಕಮಿಷನ್ ಕುರಿತು ಉಪಲೋಕಾಯುಕ್ತರ ಹೇಳಿಕೆ, ವಿವಿಧ ಇಲಾಖೆಗಳಲ್ಲಿ ನಡೆದಿರುವ ಭ್ರಷ್ಟಾಚಾರ…
ರಾಜ್ಯದಲ್ಲಿ ರಿಯಲ್ ಎಸ್ಟೇಟ್ ಉದ್ಯಮ ಗರಿಗೆದರಿದ ಬಳಿಕ ಅಲ್ಲಲ್ಲಿ ಕೆರೆ-ಕಟ್ಟೆ, ಸರ್ಕಾರಿ ಜಾಗಗಳ ಒತ್ತುವರಿ ಪ್ರಕರಣ ಮೇಲಿಂದ ಮೇಲೆ ಭಾರೀ…
ಕಾಂಗ್ರೆಸ್ನಲ್ಲಿ ನಡೆಯುತ್ತಿರುವ ವಿದ್ಯಮಾನಗಳಿಗೆ ಕಾರಣವಾಯಿತೇ ಹೈಕಮಾಂಡ್ ಮೌನ? ರಾಜ್ಯ ಕಾಂಗ್ರೆಸ್ನಲ್ಲಿ ಮುಂದುವರಿದಿರುವ ಗೊಂದಲ ಬಿಜೆಪಿ ಮತ್ತು ಜಾ.ದಳ ಪಾಳೆಯಗಳ ಆತ್ಮವಿಶ್ವಾಸ…
ಏ.೨ರಿಂದ ೨೮ ದಿನಗಳ ಕಾಲ ನಡೆಯಲಿರುವ ಪಂದ್ಯಾವಳಿ; ೩೦೦ಕ್ಕೂ ಅಧಿಕ ತಂಡಗಳು ಪಾಲ್ಗೊಳ್ಳುವ ನಿರೀಕ್ಷೆ ಮಡಿಕೇರಿ:ಕೊಡವ ಕ್ರಿಕೆಟ್ ಅಕಾಡೆಮಿ ಸಹಯೋಗದಲ್ಲಿ…
ಮೈಸೂರು: ನಗರದ ಹೊರವಲಯದ ನಾಲ್ಕು ದಿಕ್ಕುಗಳಲ್ಲಿರುವ ಹಲವು ಪ್ರದೇಶಗಳನ್ನು ಸೇರಿಸಿ ಗ್ರೇಡ್- ೧ ಮೈಸೂರು ಮಹಾನಗರ ಪಾಲಿಕೆಯನ್ನಾಗಿ ರಚಿಸಲು ರಾಜ್ಯಸರ್ಕಾರ…
ಮಂಜು ಕೋಟೆ ಕುರುಬ ಸಮಾಜದ ಎರಡು ಬಣಗಳ ನಡುವೆ ಉಂಟಾಗಿದ್ದ ಗೊಂದಲ; ಸಿಎಂ ಸಿದ್ದರಾಮಯ್ಯ ಸೂಚನೆಯಂತೆ ಕ್ರಮ ಎಚ್.ಡಿ.ಕೋಟೆ: ಮುಖ್ಯಮಂತ್ರಿ…