ಮೈಸೂರು: ವಾಹನವೊಂದರಲ್ಲಿ ಸಾಗಿಸುತ್ತಿದ್ದಾಗ ಕೆಳಗಡೆ ಬಿದ್ದ ಬಟ್ಟೆ ತುಂಬಿದ ಬಾಕ್ಸ್, ಆಟೋ ಚಾಲಕರೊಬ್ಬರಿಗೆ ಸಿಕ್ಕಿದ್ದು, ಅದನ್ನು ಮೈಸೂರಿನ ಬಾಲಕಿ ಯರ ಬಾಲಮಂದಿರಕ್ಕೆ ತಲುಪಿಸಿದ್ದಾರೆ.
ಶನಿವಾರ ಮಧ್ಯಾಹ್ನ ೨ ಗಂಟೆ ವೇಳೆಯಲ್ಲಿ ನಂಜನಗೂಡಿನಿಂದ ಗುಂಡ್ಲುಪೇಟೆ ಕಡೆಗೆ ತೆರಳುತ್ತಿದ್ದ ಸರಕು ಸಾಗಾಣಿಕೆ ವಾಹನದಲ್ಲಿದ್ದ ಬಾಕ್ಸ್ವೊಂದು ಬೇಗೂರು ಬಳಿ ರಸ್ತೆಗೆ ಬಿದ್ದಿದ್ದು, ಅದೇ ದಾರಿಯಲ್ಲಿ ಮೈಸೂರಿನ ಕಡೆಗೆ ಆಟೋ ರಿಕ್ಷಾದಲ್ಲಿ ಬರುತ್ತಿದ್ದ ನವೀನ್ ಅವರಿಗೆ ಆ ಬಾಕ್ಸ್ ಸಿಕ್ಕಿದೆ. ಆ ಬಾಕ್ಸ್ನ್ನು ವಾಪಸ್ ಮಾಡುವ ಸಲುವಾಗಿ ಅವರು ಆ ವಾಹನದ ಹಿಂದೆ ಒಂದಷ್ಟು ದೂರ ಹೋಗಿದ್ದಾರೆ.
ಆದರೆ, ಅದನ್ನು ಹಿಡಿಯಲು ಸಾಧ್ಯವಾಗಿಲ್ಲ. ಹಾಗಾಗಿ ಅವರು ಮೈಸೂರಿನ ಸಿದ್ದಾರ್ಥ ಲೇಔಟ್ನಲ್ಲಿರುವ ತಮ್ಮ ಮನೆಗೆ ವಾಪಸ್ ಬಂದಿದ್ದಾರೆ. ಆ ಬಾಕ್ಸ್ನಲ್ಲಿ ಹೆಣ್ಣುಮಕ್ಕಳು ಧರಿಸುವ ೧೫ ಹೊಸ ಚೂಡಿದಾರ್ಗಳು ಕಂಡುಬಂದಿವೆ. ಸಾಗಾಣಿಕೆ ವಾಹನದವರು ತಮ್ಮನ್ನು ಹುಡುಕಿಕೊಂಡು ಬರಬಹುದು ಎಂದು ನವೀನ್ ಭಾವಿಸಿದ್ದರು. ಹಾಗಾಗಿ ಆ ಬಾಕ್ಸ್ನ್ನು ಮಂಗಳವಾರದವರೆಗೆ ತಮ್ಮ ಮನೆಯಲ್ಲಿಯೇ ಇಟ್ಟುಕೊಂಡಿದ್ದರು.
ಆದರೆ, ಚೂಡಿದಾರ್ಗಳಿದ್ದ ಬಾಕ್ಸ್ ಅನ್ನು ಕೇಳಿಕೊಂಡು ಯಾರೂ ನವೀನ್ ಅವರನ್ನು ಸಂಪರ್ಕಿಸಲಿಲ್ಲ. ಆದ್ದರಿಂದ ಹೆಣ್ಣುಮಕ್ಕಳ ಚೂಡಿದಾರ್ಗಳಿದ್ದ ಬಾಕ್ಸ್ ಅನ್ನು ನವೀನ್ ಅವರು ಮೈಸೂರಿನ ಬಾಲಕಿಯರ ಬಾಲಮಂದಿರಕ್ಕೆ ತಲುಪಿಸಿದ್ದಾರೆ. ಅಲ್ಲಿರುವ ಹೆಣ್ಣುಮಕ್ಕಳಿಗೆ ಈ ಚೂಡಿದಾರ್ಗಳು ಉಪಯುಕ್ತವಾಗಬಹುದು ಎಂದು ಭಾವಿಸಿ ಅಲ್ಲಿಗೆ ಕೊಟ್ಟಿದ್ದೇನೆ ಎಂದು ಆಟೋ ಚಾಲಕ ನವೀನ್ ‘ಆಂದೋಲನ’ ದಿನಪತ್ರಿಕೆಗೆ ತಿಳಿಸಿದರು.
ವಾರಸುದಾರರು ಬಾಲಮಂದಿರ ಸಂಪರ್ಕಿಸಬಹುದು
ನವೀನ್ ಅವರು ಆ ಬಾಕ್ಸ್ನ್ನು ಮಂಗಳವಾರ ಬಾಲಮಂದಿರದಲ್ಲಿದ್ದ ಅಧ್ಯಕ್ಷರಾದ ಭಾಗ್ಯಶ್ರೀ ಅವರಿಗೆ ತಲುಪಿಸಿದ್ದಾರೆ. ಬಾಕ್ಸ್ನ ವಾರಸುದಾರರು ಬಾಲಮಂದಿರಕ್ಕೆ ಆಗಮಿಸಿ ಸೂಕ್ತ ಮಾಹಿತಿಗಳನ್ನು ನೀಡಿ ಅದನ್ನು ವಾಪಸ್ ಪಡೆಯಬಹುದು. ಮಾಹಿತಿಗೆ ಮೊ. ಸಂ. 9481831708/ 9845366774 ಸಂಪರ್ಕಿಸಬಹುದು ಎಂದು ಭಾಗ್ಯಶ್ರೀ ಅವರು ತಿಳಿಸಿದ್ದಾರೆ.
ಬೆಂಗಳೂರು: ನಾವು ಮುಂಚೂಣಿ ನಾಯಕರಾಗಿದ್ದೆವು. ಈಗ ಬೇರೆ ಕುದುರೆಗಳು ಬಂದಿವೆ. ಇದೊಂದು ರೇಸ್. ಈಗ ಅವರ ಕುದುರೆಗಳು ಮುಂದೆ ಇವೆ…
ಸೋಮವಾರಪೇಟೆ: ವಿಪರೀತ ಬಿಸಿಲಿನಿಂದ ಕಂಗೆಟ್ಟಿರುವ ತಾಲ್ಲೂಕಿನ ಗ್ರಾಮೀಣ ಜನರು ಮಳೆಗಾಗಿ ದೇವರ ಮೊರೆ ಹೋಗುತ್ತಿದ್ದಾರೆ. ಹಿರಿಕರ ಗ್ರಾಮದ ಕೃಷಿಕರು, ಗ್ರಾಮದ…
ಕಲಬುರ್ಗಿ: ಇಂದು(ಏಪ್ರಿಲ್.15, 2026) ರಾಜ್ಯದಲ್ಲಿಯೇ ಅತೀ ಹೆಚ್ಚು ಉಷ್ಣಾಂಶ ಕಲಬುರ್ಗಿ ಜಿಲ್ಲೆಯಲ್ಲಿ ದಾಖಲಾಗಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ. ಕಲಬುರ್ಗಿ ಜಿಲ್ಲೆಯ ನಾಲ್ಕು…
ಲಕ್ನೋ: ಕರ್ನಾಟಕ ಕಾಂಗ್ರೆಸ್ನ ಹಿರಿಯ ಶಾಸಕರು ಅಯೋಧ್ಯೆ ರಾಮಮಂದಿರಕ್ಕೆ ತೆರಳಿ ರಾಮಲಲ್ಲಾನ ದರ್ಶನ ಪಡೆದರು. 12 ಮಂದಿ ಶಾಸಕರು ಇಂದು…
ಯೋಗೇಶ್ ಗೌಡ ಕೊಲೆ ಪ್ರಕರಣ: ಶಾಸಕ ವಿನಯ್ ಕುಲಕರ್ಣಿ ಅಪರಾಧಿ ಎಂದು ತೀರ್ಪು ಬೆಂಗಳೂರು: ಧಾರವಾಡ ಜಿಲ್ಲಾ ಪಂಚಾಯತ್ ಮಾಜಿ…
ಬೆಂಗಳೂರು: ಮಂಡ್ಯಕ್ಕೆ ಆಗಮಿಸಲು ಬೆಂಗಳೂರಿಗೆ ಬಂದಿಳಿದಿದ್ದ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಸಿಎಂ ಸಿದ್ದರಾಮಯ್ಯ ಮನವಿ ಪತ್ರ ಸಲ್ಲಿಸಿದ್ದಾರೆ. ಇಂದು…