Andolana originals

ರಸ್ತೆಯಲ್ಲಿ ಸಿಕ್ಕಿದ 15 ಚೂಡಿದಾರ್‌ಗಳಿದ್ದ ಬಾಕ್ಸ್‌; ಬಾಲಕಿಯರ ಬಾಲಮಂದಿರಕ್ಕೆ ತಲುಪಿಸಿದ ಆಟೋ ಚಾಲಕ

ಮೈಸೂರು: ವಾಹನವೊಂದರಲ್ಲಿ ಸಾಗಿಸುತ್ತಿದ್ದಾಗ ಕೆಳಗಡೆ ಬಿದ್ದ ಬಟ್ಟೆ ತುಂಬಿದ ಬಾಕ್ಸ್, ಆಟೋ ಚಾಲಕರೊಬ್ಬರಿಗೆ ಸಿಕ್ಕಿದ್ದು, ಅದನ್ನು ಮೈಸೂರಿನ ಬಾಲಕಿ ಯರ ಬಾಲಮಂದಿರಕ್ಕೆ ತಲುಪಿಸಿದ್ದಾರೆ.

ಶನಿವಾರ ಮಧ್ಯಾಹ್ನ ೨ ಗಂಟೆ ವೇಳೆಯಲ್ಲಿ ನಂಜನಗೂಡಿನಿಂದ ಗುಂಡ್ಲುಪೇಟೆ ಕಡೆಗೆ ತೆರಳುತ್ತಿದ್ದ ಸರಕು ಸಾಗಾಣಿಕೆ ವಾಹನದಲ್ಲಿದ್ದ ಬಾಕ್ಸ್‌ವೊಂದು ಬೇಗೂರು ಬಳಿ ರಸ್ತೆಗೆ ಬಿದ್ದಿದ್ದು, ಅದೇ ದಾರಿಯಲ್ಲಿ ಮೈಸೂರಿನ ಕಡೆಗೆ ಆಟೋ ರಿಕ್ಷಾದಲ್ಲಿ ಬರುತ್ತಿದ್ದ ನವೀನ್ ಅವರಿಗೆ ಆ ಬಾಕ್ಸ್ ಸಿಕ್ಕಿದೆ. ಆ ಬಾಕ್ಸ್‌ನ್ನು ವಾಪಸ್ ಮಾಡುವ ಸಲುವಾಗಿ ಅವರು ಆ ವಾಹನದ ಹಿಂದೆ ಒಂದಷ್ಟು ದೂರ ಹೋಗಿದ್ದಾರೆ.

ಆದರೆ, ಅದನ್ನು ಹಿಡಿಯಲು ಸಾಧ್ಯವಾಗಿಲ್ಲ. ಹಾಗಾಗಿ ಅವರು ಮೈಸೂರಿನ ಸಿದ್ದಾರ್ಥ ಲೇಔಟ್‌ನಲ್ಲಿರುವ ತಮ್ಮ ಮನೆಗೆ ವಾಪಸ್ ಬಂದಿದ್ದಾರೆ. ಆ ಬಾಕ್ಸ್‌ನಲ್ಲಿ ಹೆಣ್ಣುಮಕ್ಕಳು ಧರಿಸುವ ೧೫ ಹೊಸ ಚೂಡಿದಾರ್‌ಗಳು ಕಂಡುಬಂದಿವೆ. ಸಾಗಾಣಿಕೆ ವಾಹನದವರು ತಮ್ಮನ್ನು ಹುಡುಕಿಕೊಂಡು ಬರಬಹುದು ಎಂದು ನವೀನ್ ಭಾವಿಸಿದ್ದರು. ಹಾಗಾಗಿ ಆ ಬಾಕ್ಸ್‌ನ್ನು ಮಂಗಳವಾರದವರೆಗೆ ತಮ್ಮ ಮನೆಯಲ್ಲಿಯೇ ಇಟ್ಟುಕೊಂಡಿದ್ದರು.

ಆದರೆ, ಚೂಡಿದಾರ್‌ಗಳಿದ್ದ ಬಾಕ್ಸ್ ಅನ್ನು ಕೇಳಿಕೊಂಡು ಯಾರೂ ನವೀನ್ ಅವರನ್ನು ಸಂಪರ್ಕಿಸಲಿಲ್ಲ. ಆದ್ದರಿಂದ ಹೆಣ್ಣುಮಕ್ಕಳ ಚೂಡಿದಾರ್‌ಗಳಿದ್ದ ಬಾಕ್ಸ್ ಅನ್ನು ನವೀನ್ ಅವರು ಮೈಸೂರಿನ ಬಾಲಕಿಯರ ಬಾಲಮಂದಿರಕ್ಕೆ ತಲುಪಿಸಿದ್ದಾರೆ. ಅಲ್ಲಿರುವ ಹೆಣ್ಣುಮಕ್ಕಳಿಗೆ ಈ ಚೂಡಿದಾರ್‌ಗಳು ಉಪಯುಕ್ತವಾಗಬಹುದು ಎಂದು ಭಾವಿಸಿ ಅಲ್ಲಿಗೆ ಕೊಟ್ಟಿದ್ದೇನೆ ಎಂದು ಆಟೋ ಚಾಲಕ ನವೀನ್ ‘ಆಂದೋಲನ’ ದಿನಪತ್ರಿಕೆಗೆ ತಿಳಿಸಿದರು.

ವಾರಸುದಾರರು ಬಾಲಮಂದಿರ ಸಂಪರ್ಕಿಸಬಹುದು

ನವೀನ್ ಅವರು ಆ ಬಾಕ್ಸ್‌ನ್ನು ಮಂಗಳವಾರ ಬಾಲಮಂದಿರದಲ್ಲಿದ್ದ ಅಧ್ಯಕ್ಷರಾದ ಭಾಗ್ಯಶ್ರೀ ಅವರಿಗೆ ತಲುಪಿಸಿದ್ದಾರೆ. ಬಾಕ್ಸ್‌ನ ವಾರಸುದಾರರು ಬಾಲಮಂದಿರಕ್ಕೆ ಆಗಮಿಸಿ ಸೂಕ್ತ ಮಾಹಿತಿಗಳನ್ನು ನೀಡಿ ಅದನ್ನು ವಾಪಸ್‌ ಪಡೆಯಬಹುದು. ಮಾಹಿತಿಗೆ ಮೊ. ಸಂ. 9481831708/ 9845366774 ಸಂಪರ್ಕಿಸಬಹುದು ಎಂದು ಭಾಗ್ಯಶ್ರೀ ಅವರು ತಿಳಿಸಿದ್ದಾರೆ.

andolana

Recent Posts

ಧರ್ಮಸ್ಥಳ ಪ್ರಕರಣದಲ್ಲಿ ಪ್ರಕಾಶ್‌ ರಾಜ್‌ ಹೆಸರು: ನಟ ಏನಂದ್ರು ಗೊತ್ತಾ?

ಬೆಂಗಳೂರು: ಶ್ರೀ ಕ್ಷೇತ್ರ ಧರ್ಮಸ್ಥಳ ಪ್ರಕರಣದಲ್ಲಿ ತಮ್ಮ ಹೆಸರನ್ನು ಕೆಲವರು ಅನಗತ್ಯವಾಗಿ ಉಲ್ಲೇಖಿಸುತ್ತಿದ್ದಾರೆ. ನಾನು ಯಾವುದೇ ರೀತಿಯ ತಪ್ಪು ಮಾಡಿಲ್ಲ.…

19 mins ago

ನೀಟ್‌ ವಿದ್ಯಾರ್ಥಿಗಳಿಗೆ ಪ್ರಯಾಣದಲ್ಲಿ 50% ರಿಯಾಯಿತಿ: ಯುಪಿ ಸಿಎಂ ಯೋಗಿ ಆದಿತ್ಯನಾಥ್‌ ಆದೇಶ

ಲಕ್ನೋ: ಜೂನ್.‌21ರಂದು ನಡೆಯಲಿರುವ ನೀಟ್-ಯುಜಿ ಮರುಪರೀಕ್ಷೆಗೆ ಹಾಜರಾಗುವ ಎಲ್ಲಾ ವಿದ್ಯಾರ್ಥಿಗಳ ಬಸ್‌ ಪ್ರಯಾಣದ ದರದಲ್ಲಿ ಶೇ.50ರಷ್ಟು ರಿಯಾಯಿತಿ ನೀಡುವುದಾಗಿ ಉತ್ತರ…

3 hours ago

ಮುಂಬೈನಲ್ಲಿ ನೀರಿಗೆ ಭಾರೀ ಬಿಕ್ಕಟ್ಟು: ಕಟ್ಟಡ ಕಾಮಗಾರಿಗಳಿಗೆ ನೀರು ಬಂದ್‌

ಮುಂಬೈ: ದೇಶದಲ್ಲಿ ಮುಂಗಾರು ಪ್ರವೇಶಿದರೂ ಮುಂಬೈನಲ್ಲಿ ಮಳೆಯ ಕೊರತೆ ಎದುರಾಗಿದೆ. ಮಳೆ ಕೊರತೆ ಎದುರಾದ ಪರಿಣಾಮ ಜಲಾಶಯಗಳಲ್ಲಿ ನೀರಿನ ಮಟ್ಟ…

3 hours ago

ಕೆಫೆ ‘ರೂಫ್ ಟಾಪ್’ಗೆ ಅನುಮತಿಯೇ ಇರಲಿಲ್ಲ!

ಎಚ್.ಎಸ್.ದಿನೇಶ್‌ಕುಮಾರ್ ಲಿಕ್ಕರ್ ಗ್ಯಾರೇಜ್, ಫಾಕ್ಸ್ ಡೆನ್‌ಗೆ ಮಾತ್ರ ಅನುಮತಿ; ನೋಟಿಸ್ ಜಾರಿ ಮಾಡಿ ಸುಮ್ಮನಾಗಿದ್ದ ಅಧಿಕಾರಿಗಳು?; ಅಬಕಾರಿ ಡಿಸಿ ಅಮಾನತ್ತಿಗೆ…

4 hours ago

ಓದುಗರ ಪತ್ರ: ದುಷ್ಕೃತ್ಯ ನಿಯಂತ್ರಿಸಲು ಕಾನೂನು ರೂಪಿಸಬೇಕು

ಚಾಮರಾಜನಗರ ತಾಲ್ಲೂಕಿನ ಮಸಾಣಪುರ ಗ್ರಾಮದಲ್ಲಿ ಬಾಬಾ ಸಾಹೇಬ ಡಾ.ಅಂಬೇಡ್ಕರ್‌ರವರ ಭಾವಚಿತ್ರಕ್ಕೆ ಅಪಮಾನ ಮಾಡಿರುವ ಘಟನೆ ನಿಜಕ್ಕೂ ತಲೆತಗ್ಗಿಸುವಂಥ ಹೇಯ ಕೃತ್ಯವಾಗಿದೆ.ಈ…

8 hours ago

ಓದುಗರ ಪತ್ರ: ಯಶಸ್ಸಿಗೆ ಮೂಲ ಅಡಿಪಾಯವೇ ಸಮಯ ಪಾಲನೆ!

‘ಗಿಡವಾಗಿ ಬಗ್ಗದ್ದು ಮರವಾಗಿ ಬಗ್ಗೀತೇ’ ಎಂಬ ಗಾದೆಯ ಮಾತು ನಿಜಕ್ಕೂ ಇಂದಿನ ಕಾಲಘಟ್ಟಕ್ಕೆ ಹೆಚ್ಚಾಗಿ ಅನ್ವಯಿಸುತ್ತದೆ. ಏಕೆಂದರೆ ಸಮಯ ಪಾಲನೆ…

8 hours ago