Andolana originals

ಮಾನಂದವಾಡಿ ರಸ್ತೆಯಲ್ಲಿ ಅಪಘಾತಕ್ಕೆ ಬೀಳಬೇಕಿದೆ ಬ್ರೇಕ್…

ಪ್ರಶಾಂತ್ ಎಸ್.

ವೇಗ ನಿಯಂತ್ರಣಕ್ಕೆ ಕ್ರಮ ಕೈಗೊಳ್ಳದಿದ್ದರೆ ಅನಾಹುತಕ್ಕೆ ಹಾದಿ

ಎನ್.ಎಚ್.ಪಾಳ್ಯ,ಟೋಲ್‌ಗೇಟ್, ಶಿವಪುರ ತಿರುವಿನಲ್ಲಿ ರಿಫ್ಲೆಕ್ಟರ್,ಬ್ಯಾರಿಕೇಡ್ ಅಳವಡಿಕೆ ಅಗತ್ಯ

ಮೈಸೂರು: ಮೈಸೂರು- ಮಾನಂದವಾಡಿ ಹೆದ್ದಾರಿಯಲ್ಲಿರುವ ಅಶೋಕಪುರಂ ರೈಲ್ವೆ ವರ್ಕ್‌ಶಾಪ್, ನಾಚನಹಳ್ಳಿ ಪಾಳ್ಯ, ಟೋಲ್‌ಗೇಟ್, ಶಿವಪುರ ತಿರುವುಗಳು ‘ಬ್ಲಾಕ್ ಸ್ಪಾಟ್’ಗಳಾಗಿ ಮಾರ್ಪಟ್ಟಿವೆ.

ನಿತ್ಯ ಇಲ್ಲಿ ಒಂದಲ್ಲಾ ಒಂದು ಅಪಾಘಾತ ಸಂಭವಿಸುತ್ತಿದೆ.ಈ ಸ್ಥಳಗಳಲ್ಲಿ ಅಪಘಾತ ವಲಯ ಎಂಬ ಸೂಚನಾ ಫಲಕವಾಗಲಿ, ರಿಫ್ಲೆಕ್ಟರ್, ಬ್ಯಾರಿಕೇಡ್ ಅಥವಾ ರಸ್ತೆ ವಿಭಜಕವನ್ನಾಗಲಿ ಅಳವಡಿಸುವ ಗೋಜಿಗೆ ಹೋಗಿಲ್ಲ. ಇದರಿಂದಾಗಿ ಈ ಮಾರ್ಗದಲ್ಲಿ ವಾಹನ ಸವಾರರು, ಅದರಲ್ಲೂ ದ್ವಿಚಕ್ರ ವಾಹನ ಸವಾರರು ಜೀವ ಭಯದಲ್ಲೇ ಸಂಚರಿಸುವಂತಾಗಿದೆ.

ಬೇಕಿದೆ ರಿಫ್ಲೆಕ್ಟರ್: ಈ ರಸ್ತೆಯಲ್ಲಿ ರಿಫ್ಲೆಕ್ಟರ್, ಬ್ಯಾರಿಕೇಡ್ ಮತ್ತು ಅತ್ಯಾಧುನಿಕ ಸೂಚನಾ ಫಲಕಗಳನ್ನು ಅಳವಡಿಸಬೇಕಿದೆ. ರಸ್ತೆಯ ಇಕ್ಕೆಲಗಳಲ್ಲಿ ರಾತ್ರಿ ವೇಳೆ ಹೊಳೆಯುವ ರಿಫ್ಲೆಕ್ಟರ್ಗಳನ್ನಾದರೂ ಅಳವಡಿಸಿದರೆ ಅಪಘಾತಗಳು ನಿಯಂತ್ರಣಕ್ಕೆ ಬರಲಿವೆ. ಸ್ವಲ್ಪ ಮೈ ಮರೆತರೂ ಮೂರೂ ದಿಕ್ಕುಗಳಿಂದಲೂ ನುಗ್ಗುವ ವಾಹನಗಳ ವೇಗವನ್ನು ನಿಯಂತ್ರಣ ಮಾಡದಿದ್ದರೆ, ಅಪಾಯ ಉಂಟಾಗಲಿದೆ.

ಬೇಕಿದೆ ಬ್ಯಾರಿಕೇಡ್ : ಅಶೋಕಪುರಂ ರೈಲ್ವೆ ವರ್ಕ್ ಶಾಪ್‌ನಿಂದ ಶಿವಪುರ ತಿರುವಿನವರೆಗಿನ ರಸ್ತೆ ಅಲ್ಲಲ್ಲಿ ಹಳ್ಳ ದಿಣ್ಣೆಗಳಿಂದ ಕೂಡಿದೆ. ದಿಣ್ಣೆ ಹತ್ತಿದ ವಾಹನಗಳು ಮತ್ತೆ ಇಳಿಯಬೇಕಾದರೆ ಬ್ರೇಕ್ ಹಾಕಿ ನಿಯಂತ್ರಿಸಬೇಕಾಗಿದೆ. ಈ ಹಿಂದೆ ಸಾರ್ವಜನಿಕರ ದೂರನ್ನು ಆಲಿಸಿ ಬ್ಯಾರಿಕೇಡ್ ಅಳವಡಿಸಲಾಗಿತ್ತು. ಅಂದಿನಿಂದ ಇಲ್ಲಿ ಅಪಘಾತವಾಗುವುದು ತುಸು ಕಡಿಮೆಯಾಗಿತ್ತು. ಆದರೆ,ಇದೀಗ ಬ್ಯಾರಿಕೇಡ್‌ಗಳು ಕಣ್ಮರೆಯಾಗಿದ್ದರಿಂದ ಎದುರು -ಬದುರು ಚಲಿಸುವ ವಾಹನಗಳಿಗೂ ತೊಂದರೆ ಆಗುತ್ತಿದೆ. ಎರಡು ದಿನಗಳ ಹಿಂದೆ ಕೂಡ ಕೆಎಸ್‌ಆರ್‌ಟಿಸಿ ಬಸ್ ಹಾಗೂ ಕಾರಿನ ನಡುವೆ ಅಪಘಾತವಾಗಿ ಎರಡೂ ವಾಹನಗಳು ಜಖಂಗೊಂಡಿವೆ.

” ಅಶೋಕಪುರಂ ರೈಲ್ವೆ ವರ್ಕ್‌ಶಾಪ್, ನಾಚನಹಳ್ಳಿ ಪಾಳ್ಯ, ಟೋಲ್ ಗೇಟ್, ಶಿವಪುರ ತಿರುವು ಬಳಿ ಬ್ಯಾರಿಕೇಡ್ ಅಳವಡಿಸಬೇಕು. ಇದರಿಂದ ಮೂರೂ ದಿಕ್ಕುಗಳಿಂದ ಬರುವ ವಾಹನಗಳ ಅಪಘಾತ ನಿಯಂತ್ರಣವಾಗುತ್ತದೆ. ಸವಾರರು ಜಾಗ್ರತೆಯಿಂದ ರಸ್ತೆಯಲ್ಲಿ ಸಂಚರಿಸಬಹುದು. ಪೊಲೀಸ್ ಇಲಾಖೆ ಕೂಡಲೇ ಸಮಸ್ಯೆ ಬಗೆಹರಿಸಬೇಕಿದೆ.”

-ಚಕ್ರವರ್ತಿ, ಬೈಕ್ ಸವಾರ

 

 

 

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಕೊರಿಯನ್ ಗೇಮ್ಸ್ ನಿಷೇಧಿಸಿ

ಕೊರಿಯನ್ ಗೇಮ್ಸ್ ವ್ಯಸನದಿಂದ ಮಕ್ಕಳು ಆತ್ಮಹತ್ಯೆ ಮಾಡಿಕೊಳ್ಳುತ್ತಿರುವುದು ಆತಂಕಕಾರಿ ಸಂಗತಿಯಾಗಿದೆ. ಇಂದು ನಮ್ಮ ಯುವಜನತೆ ಕೆ ಪಾಪ್ ಮತ್ತು ಕೆ…

29 mins ago

ಓದುಗರ ಪತ್ರ: ಖಾಲಿ ನಿವೇಶನದಲ್ಲಿರುವ ಕಸ ತೆರವುಗೊಳಿಸಿ

ಮೈಸೂರಿನ ಶ್ರೀರಾಂಪುರ ೨ನೇ ಹಂತದಲ್ಲಿ ನಿವೇಶನನವೊಂದು ಕಳೆದ ೨೬ ವರ್ಷಗಳಿಂದ ಖಾಲಿಬಿದ್ದಿದೆ. ಈ ಖಾಲಿ ನಿವೇಶನದಲ್ಲಿ ಅಕ್ಕಪಕ್ಕದ ಮನೆಯ ನಿವಾಸಿಗಳು…

31 mins ago

ಓದುಗರ ಪತ್ರ: ಬೆಳವಾಡಿ ಕೆರೆ ಸ್ವಚ್ಛಗೊಳಿಸಿ

ಮೈಸೂರು ತಾಲ್ಲೂಕಿನ ಬೆಳವಾಡಿ ಗ್ರಾಮದಲ್ಲಿ ಮೂಲಭೂತ ಸೌಕರ್ಯಗಳ ಅಭಿವೃದ್ಧಿಯಾಗಿರುವುದು ಸ್ವಾಗತಾರ್ಹ ಸಂಗತಿ. ಆದರೆ ಗ್ರಾಮದ ನೈಸರ್ಗಿಕ ಸಂಪತ್ತಾದ ‘ಬೆಳವಾಡಿ ಕೆರೆ’ಗೆ…

33 mins ago

‘ಮಾದಕ ವಸ್ತು ಮಾರಾಟ ಮಾಡಿದರೆ ಕ್ರಮ’

ನವೀನ್ ಡಿಸೋಜ ಜನವರಿಯಲ್ಲಿ ೬೩ ಎನ್‌ಡಿಪಿಎಸ್ ಪ್ರಕರಣಗಳು ದಾಖಲು; ಪೊಲೀಸರ ಕಾರ್ಯಕ್ಕೆ ಸಾರ್ವಜನಿಕರ ಮೆಚ್ಚುಗೆ ಮಡಿಕೇರಿ: ಮಾದಕ ವಸ್ತುಗಳ ಮಾರಾಟ…

37 mins ago

ಆಶ್ರಮ ಶಾಲೆಯಲ್ಲಿ ಅಡುಗೆ ಸಿಬ್ಬಂದಿಯವರ ಸರಸ ಸಲ್ಲಾಪ

ಮಂಜು ಕೋಟೆ ಜಕ್ಕಹಳ್ಳಿ ಆಶ್ರಮ ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಮುಜುಗರ; ಸಿಬ್ಬಂದಿ ವಿರುದ್ಧ ಕ್ರಮಕ್ಕೆ ಪೋಷಕರ ಆಗ್ರ ಎಚ್.ಡಿ.ಕೋಟೆ: ಗಿರಿಜನ ಮಕ್ಕಳ…

42 mins ago

‘ಸರ್ಕಾರಿ ಪಿಯು ಕಾಲೇಜುಗಳಿಗೆ ಹೆಚ್ಚುವರಿ ಕೊಠಡಿ ಭಾಗ್ಯ’

ರಾಜ್ಯದ ೩೨ ಶೈಕ್ಷಣಿಕ ಜಿಲ್ಲೆಗಳ ೧೩೫ ಪಿಯು ಕಾಲೇಜುಗಳಲ್ಲಿ ೧೮೫ ಕೊಠಡಿಗಳ ನಿರ್ಮಾಣ ಬಾಲಕರ ೪೬, ಬಾಲಕಿಯರ ೫೦ ಶೌಚಾಲಯ…

51 mins ago