Andolana originals

ಮಾನಂದವಾಡಿ ರಸ್ತೆಯಲ್ಲಿ ಅಪಘಾತಕ್ಕೆ ಬೀಳಬೇಕಿದೆ ಬ್ರೇಕ್…

ಪ್ರಶಾಂತ್ ಎಸ್.

ವೇಗ ನಿಯಂತ್ರಣಕ್ಕೆ ಕ್ರಮ ಕೈಗೊಳ್ಳದಿದ್ದರೆ ಅನಾಹುತಕ್ಕೆ ಹಾದಿ

ಎನ್.ಎಚ್.ಪಾಳ್ಯ,ಟೋಲ್‌ಗೇಟ್, ಶಿವಪುರ ತಿರುವಿನಲ್ಲಿ ರಿಫ್ಲೆಕ್ಟರ್,ಬ್ಯಾರಿಕೇಡ್ ಅಳವಡಿಕೆ ಅಗತ್ಯ

ಮೈಸೂರು: ಮೈಸೂರು- ಮಾನಂದವಾಡಿ ಹೆದ್ದಾರಿಯಲ್ಲಿರುವ ಅಶೋಕಪುರಂ ರೈಲ್ವೆ ವರ್ಕ್‌ಶಾಪ್, ನಾಚನಹಳ್ಳಿ ಪಾಳ್ಯ, ಟೋಲ್‌ಗೇಟ್, ಶಿವಪುರ ತಿರುವುಗಳು ‘ಬ್ಲಾಕ್ ಸ್ಪಾಟ್’ಗಳಾಗಿ ಮಾರ್ಪಟ್ಟಿವೆ.

ನಿತ್ಯ ಇಲ್ಲಿ ಒಂದಲ್ಲಾ ಒಂದು ಅಪಾಘಾತ ಸಂಭವಿಸುತ್ತಿದೆ.ಈ ಸ್ಥಳಗಳಲ್ಲಿ ಅಪಘಾತ ವಲಯ ಎಂಬ ಸೂಚನಾ ಫಲಕವಾಗಲಿ, ರಿಫ್ಲೆಕ್ಟರ್, ಬ್ಯಾರಿಕೇಡ್ ಅಥವಾ ರಸ್ತೆ ವಿಭಜಕವನ್ನಾಗಲಿ ಅಳವಡಿಸುವ ಗೋಜಿಗೆ ಹೋಗಿಲ್ಲ. ಇದರಿಂದಾಗಿ ಈ ಮಾರ್ಗದಲ್ಲಿ ವಾಹನ ಸವಾರರು, ಅದರಲ್ಲೂ ದ್ವಿಚಕ್ರ ವಾಹನ ಸವಾರರು ಜೀವ ಭಯದಲ್ಲೇ ಸಂಚರಿಸುವಂತಾಗಿದೆ.

ಬೇಕಿದೆ ರಿಫ್ಲೆಕ್ಟರ್: ಈ ರಸ್ತೆಯಲ್ಲಿ ರಿಫ್ಲೆಕ್ಟರ್, ಬ್ಯಾರಿಕೇಡ್ ಮತ್ತು ಅತ್ಯಾಧುನಿಕ ಸೂಚನಾ ಫಲಕಗಳನ್ನು ಅಳವಡಿಸಬೇಕಿದೆ. ರಸ್ತೆಯ ಇಕ್ಕೆಲಗಳಲ್ಲಿ ರಾತ್ರಿ ವೇಳೆ ಹೊಳೆಯುವ ರಿಫ್ಲೆಕ್ಟರ್ಗಳನ್ನಾದರೂ ಅಳವಡಿಸಿದರೆ ಅಪಘಾತಗಳು ನಿಯಂತ್ರಣಕ್ಕೆ ಬರಲಿವೆ. ಸ್ವಲ್ಪ ಮೈ ಮರೆತರೂ ಮೂರೂ ದಿಕ್ಕುಗಳಿಂದಲೂ ನುಗ್ಗುವ ವಾಹನಗಳ ವೇಗವನ್ನು ನಿಯಂತ್ರಣ ಮಾಡದಿದ್ದರೆ, ಅಪಾಯ ಉಂಟಾಗಲಿದೆ.

ಬೇಕಿದೆ ಬ್ಯಾರಿಕೇಡ್ : ಅಶೋಕಪುರಂ ರೈಲ್ವೆ ವರ್ಕ್ ಶಾಪ್‌ನಿಂದ ಶಿವಪುರ ತಿರುವಿನವರೆಗಿನ ರಸ್ತೆ ಅಲ್ಲಲ್ಲಿ ಹಳ್ಳ ದಿಣ್ಣೆಗಳಿಂದ ಕೂಡಿದೆ. ದಿಣ್ಣೆ ಹತ್ತಿದ ವಾಹನಗಳು ಮತ್ತೆ ಇಳಿಯಬೇಕಾದರೆ ಬ್ರೇಕ್ ಹಾಕಿ ನಿಯಂತ್ರಿಸಬೇಕಾಗಿದೆ. ಈ ಹಿಂದೆ ಸಾರ್ವಜನಿಕರ ದೂರನ್ನು ಆಲಿಸಿ ಬ್ಯಾರಿಕೇಡ್ ಅಳವಡಿಸಲಾಗಿತ್ತು. ಅಂದಿನಿಂದ ಇಲ್ಲಿ ಅಪಘಾತವಾಗುವುದು ತುಸು ಕಡಿಮೆಯಾಗಿತ್ತು. ಆದರೆ,ಇದೀಗ ಬ್ಯಾರಿಕೇಡ್‌ಗಳು ಕಣ್ಮರೆಯಾಗಿದ್ದರಿಂದ ಎದುರು -ಬದುರು ಚಲಿಸುವ ವಾಹನಗಳಿಗೂ ತೊಂದರೆ ಆಗುತ್ತಿದೆ. ಎರಡು ದಿನಗಳ ಹಿಂದೆ ಕೂಡ ಕೆಎಸ್‌ಆರ್‌ಟಿಸಿ ಬಸ್ ಹಾಗೂ ಕಾರಿನ ನಡುವೆ ಅಪಘಾತವಾಗಿ ಎರಡೂ ವಾಹನಗಳು ಜಖಂಗೊಂಡಿವೆ.

” ಅಶೋಕಪುರಂ ರೈಲ್ವೆ ವರ್ಕ್‌ಶಾಪ್, ನಾಚನಹಳ್ಳಿ ಪಾಳ್ಯ, ಟೋಲ್ ಗೇಟ್, ಶಿವಪುರ ತಿರುವು ಬಳಿ ಬ್ಯಾರಿಕೇಡ್ ಅಳವಡಿಸಬೇಕು. ಇದರಿಂದ ಮೂರೂ ದಿಕ್ಕುಗಳಿಂದ ಬರುವ ವಾಹನಗಳ ಅಪಘಾತ ನಿಯಂತ್ರಣವಾಗುತ್ತದೆ. ಸವಾರರು ಜಾಗ್ರತೆಯಿಂದ ರಸ್ತೆಯಲ್ಲಿ ಸಂಚರಿಸಬಹುದು. ಪೊಲೀಸ್ ಇಲಾಖೆ ಕೂಡಲೇ ಸಮಸ್ಯೆ ಬಗೆಹರಿಸಬೇಕಿದೆ.”

-ಚಕ್ರವರ್ತಿ, ಬೈಕ್ ಸವಾರ

 

 

 

ಆಂದೋಲನ ಡೆಸ್ಕ್

Recent Posts

ಎರಡನೇ ಆಷಾಢ ಶುಕ್ರವಾರದ ಸಂಭ್ರಮ: ಲಕ್ಷ್ಮೀ ಅಲಂಕಾರದಲ್ಲಿ ಕಂಗೊಳಿಸುತ್ತಿರುವ ತಾಯಿ ಚಾಮುಂಡೇಶ್ವರಿ

ಮೈಸೂರು: ಆಷಾಢ ಮಾಸದ ಎರಡನೇ ಶುಕ್ರವಾರವಾದ ಇಂದು ನಾಡ ಅಧಿದೇವತೆ ನೆಲೆಸಿರುವ ಚಾಮುಂಡಿಬೆಟ್ಟದಲ್ಲಿ ತಾಯಿ ಚಾಮುಂಡೇಶ್ವರಿ ಲಕ್ಷ್ಮೀ ಅಲಂಕಾರದಲ್ಲಿ ಕಂಗೊಳಿಸುತ್ತಿದ್ದಾಳೆ.…

10 hours ago

ಓದುಗರ ಪತ್ರ: ವಿದ್ಯಾರ್ಥಿಗಳ ಮೇಲೆ ಲಾಠಿ ಪ್ರಹಾರ ಖಂಡನೀಯ

ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ದಿಲ್ಲಿಯಲ್ಲಿ ವಿದ್ಯಾರ್ಥಿಗಳು ನಡೆಸಿದ ಪ್ರತಿಭಟನೆ ವೇಳೆ ಕೇಂದ್ರ ಸರ್ಕಾರದ ಕುಮ್ಮಕ್ಕು ಹಾಗೂ ಪೊಲೀಸರ…

13 hours ago

ಓದುಗರ ಪತ್ರ: ಗ್ರಂಥಪಾಲಕರಿಲ್ಲದ ಗ್ರಂಥಾಲಯಗಳು

ಕಳೆದ ೨೫ ವರ್ಷಗಳಿಂದ ರಾಜ್ಯದಲ್ಲಿ ೧೦ ಸಾವಿರ ಗ್ರಂಥಪಾಲಕ ಹುದ್ದೆಗಳನ್ನು ಭರ್ತಿ ಮಾಡದಿರುವುದು ಸರ್ಕಾರದ ಅಕ್ಷಮ್ಯ ನಿರ್ಲಕ್ಷ್ಯ. ೧,೨೦೦ ಸರ್ಕಾರಿ…

13 hours ago

ಓದುಗರ ಪತ್ರ: ಮುಚ್ಚಿರುವ ಪಿಎಚ್‌ಸಿ ಕೇಂದ್ರ ತೆರೆಯುವುದು ಎಂದು?

ಮೈಸೂರಿನ ಕುವೆಂಪು ನಗರದ ಎಂ ಬ್ಲಾಕ್‌ನಲ್ಲಿರುವ ಪ್ರಾಥಮಿಕ ಆರೋಗ್ಯ ಕೇಂದ್ರವು, ಕಳೆದ ಮೂರು ತಿಂಗಳಿಂದ ಮುಚ್ಚಿದೆ. ಇದಕ್ಕೆ ಕಾರಣ ತಿಳಿದಿಲ್ಲ.…

13 hours ago

ಇದು ನಮಿತ್ ಮಲ್ಹೋತ್ರ ‘ರಾಮಾಯಣ’ ದರ್ಶನ

 ವೈಡ್‌ ಆಂಗಲ್:‌ ಬಾ.ನಾ.ಸುಬ್ರಹ್ಮಣ್ಯ  ‘ತಿಣಿಕಿದನು -ಣಿರಾಯ ರಾಮಾಯಣದ ಕವಿಗಳ ಭಾರದಲಿ ತಿಂ ತಿಣೀಯ ರಘುವರ ಚರಿತೆಯಲಿ ಕಾಲಿಡಲು ತೆರಪಿಲ್ಲ’ ಎಂದು…

13 hours ago

ಮಡಿಕೇರಿಯಲ್ಲಿ ಬಳಂಜಿಗಿಲ್ಲ ಬೇಡಿಕೆ

ಪುನೀತ್ ಜಿಲ್ಲೆಯಲ್ಲಿ ಕ್ಷೀಣಿಸಿದ ಮಳೆಯಿಂದ ಬೇಡಿಕೆ ಕುಸಿತ; ಕುಲಕಸುಬಿಗೆ ಹೊಡೆತ  ಮಡಿಕೇರಿ: ಜಿಲ್ಲೆಯಲ್ಲಿ ಧಾರಾಕಾರ ಮಳೆಯ ವಾತಾವರಣ ಇಲ್ಲದ ಕಾರಣ…

13 hours ago