Andolana originals

ಮಾನಂದವಾಡಿ ರಸ್ತೆಯಲ್ಲಿ ಅಪಘಾತಕ್ಕೆ ಬೀಳಬೇಕಿದೆ ಬ್ರೇಕ್…

ಪ್ರಶಾಂತ್ ಎಸ್.

ವೇಗ ನಿಯಂತ್ರಣಕ್ಕೆ ಕ್ರಮ ಕೈಗೊಳ್ಳದಿದ್ದರೆ ಅನಾಹುತಕ್ಕೆ ಹಾದಿ

ಎನ್.ಎಚ್.ಪಾಳ್ಯ,ಟೋಲ್‌ಗೇಟ್, ಶಿವಪುರ ತಿರುವಿನಲ್ಲಿ ರಿಫ್ಲೆಕ್ಟರ್,ಬ್ಯಾರಿಕೇಡ್ ಅಳವಡಿಕೆ ಅಗತ್ಯ

ಮೈಸೂರು: ಮೈಸೂರು- ಮಾನಂದವಾಡಿ ಹೆದ್ದಾರಿಯಲ್ಲಿರುವ ಅಶೋಕಪುರಂ ರೈಲ್ವೆ ವರ್ಕ್‌ಶಾಪ್, ನಾಚನಹಳ್ಳಿ ಪಾಳ್ಯ, ಟೋಲ್‌ಗೇಟ್, ಶಿವಪುರ ತಿರುವುಗಳು ‘ಬ್ಲಾಕ್ ಸ್ಪಾಟ್’ಗಳಾಗಿ ಮಾರ್ಪಟ್ಟಿವೆ.

ನಿತ್ಯ ಇಲ್ಲಿ ಒಂದಲ್ಲಾ ಒಂದು ಅಪಾಘಾತ ಸಂಭವಿಸುತ್ತಿದೆ.ಈ ಸ್ಥಳಗಳಲ್ಲಿ ಅಪಘಾತ ವಲಯ ಎಂಬ ಸೂಚನಾ ಫಲಕವಾಗಲಿ, ರಿಫ್ಲೆಕ್ಟರ್, ಬ್ಯಾರಿಕೇಡ್ ಅಥವಾ ರಸ್ತೆ ವಿಭಜಕವನ್ನಾಗಲಿ ಅಳವಡಿಸುವ ಗೋಜಿಗೆ ಹೋಗಿಲ್ಲ. ಇದರಿಂದಾಗಿ ಈ ಮಾರ್ಗದಲ್ಲಿ ವಾಹನ ಸವಾರರು, ಅದರಲ್ಲೂ ದ್ವಿಚಕ್ರ ವಾಹನ ಸವಾರರು ಜೀವ ಭಯದಲ್ಲೇ ಸಂಚರಿಸುವಂತಾಗಿದೆ.

ಬೇಕಿದೆ ರಿಫ್ಲೆಕ್ಟರ್: ಈ ರಸ್ತೆಯಲ್ಲಿ ರಿಫ್ಲೆಕ್ಟರ್, ಬ್ಯಾರಿಕೇಡ್ ಮತ್ತು ಅತ್ಯಾಧುನಿಕ ಸೂಚನಾ ಫಲಕಗಳನ್ನು ಅಳವಡಿಸಬೇಕಿದೆ. ರಸ್ತೆಯ ಇಕ್ಕೆಲಗಳಲ್ಲಿ ರಾತ್ರಿ ವೇಳೆ ಹೊಳೆಯುವ ರಿಫ್ಲೆಕ್ಟರ್ಗಳನ್ನಾದರೂ ಅಳವಡಿಸಿದರೆ ಅಪಘಾತಗಳು ನಿಯಂತ್ರಣಕ್ಕೆ ಬರಲಿವೆ. ಸ್ವಲ್ಪ ಮೈ ಮರೆತರೂ ಮೂರೂ ದಿಕ್ಕುಗಳಿಂದಲೂ ನುಗ್ಗುವ ವಾಹನಗಳ ವೇಗವನ್ನು ನಿಯಂತ್ರಣ ಮಾಡದಿದ್ದರೆ, ಅಪಾಯ ಉಂಟಾಗಲಿದೆ.

ಬೇಕಿದೆ ಬ್ಯಾರಿಕೇಡ್ : ಅಶೋಕಪುರಂ ರೈಲ್ವೆ ವರ್ಕ್ ಶಾಪ್‌ನಿಂದ ಶಿವಪುರ ತಿರುವಿನವರೆಗಿನ ರಸ್ತೆ ಅಲ್ಲಲ್ಲಿ ಹಳ್ಳ ದಿಣ್ಣೆಗಳಿಂದ ಕೂಡಿದೆ. ದಿಣ್ಣೆ ಹತ್ತಿದ ವಾಹನಗಳು ಮತ್ತೆ ಇಳಿಯಬೇಕಾದರೆ ಬ್ರೇಕ್ ಹಾಕಿ ನಿಯಂತ್ರಿಸಬೇಕಾಗಿದೆ. ಈ ಹಿಂದೆ ಸಾರ್ವಜನಿಕರ ದೂರನ್ನು ಆಲಿಸಿ ಬ್ಯಾರಿಕೇಡ್ ಅಳವಡಿಸಲಾಗಿತ್ತು. ಅಂದಿನಿಂದ ಇಲ್ಲಿ ಅಪಘಾತವಾಗುವುದು ತುಸು ಕಡಿಮೆಯಾಗಿತ್ತು. ಆದರೆ,ಇದೀಗ ಬ್ಯಾರಿಕೇಡ್‌ಗಳು ಕಣ್ಮರೆಯಾಗಿದ್ದರಿಂದ ಎದುರು -ಬದುರು ಚಲಿಸುವ ವಾಹನಗಳಿಗೂ ತೊಂದರೆ ಆಗುತ್ತಿದೆ. ಎರಡು ದಿನಗಳ ಹಿಂದೆ ಕೂಡ ಕೆಎಸ್‌ಆರ್‌ಟಿಸಿ ಬಸ್ ಹಾಗೂ ಕಾರಿನ ನಡುವೆ ಅಪಘಾತವಾಗಿ ಎರಡೂ ವಾಹನಗಳು ಜಖಂಗೊಂಡಿವೆ.

” ಅಶೋಕಪುರಂ ರೈಲ್ವೆ ವರ್ಕ್‌ಶಾಪ್, ನಾಚನಹಳ್ಳಿ ಪಾಳ್ಯ, ಟೋಲ್ ಗೇಟ್, ಶಿವಪುರ ತಿರುವು ಬಳಿ ಬ್ಯಾರಿಕೇಡ್ ಅಳವಡಿಸಬೇಕು. ಇದರಿಂದ ಮೂರೂ ದಿಕ್ಕುಗಳಿಂದ ಬರುವ ವಾಹನಗಳ ಅಪಘಾತ ನಿಯಂತ್ರಣವಾಗುತ್ತದೆ. ಸವಾರರು ಜಾಗ್ರತೆಯಿಂದ ರಸ್ತೆಯಲ್ಲಿ ಸಂಚರಿಸಬಹುದು. ಪೊಲೀಸ್ ಇಲಾಖೆ ಕೂಡಲೇ ಸಮಸ್ಯೆ ಬಗೆಹರಿಸಬೇಕಿದೆ.”

-ಚಕ್ರವರ್ತಿ, ಬೈಕ್ ಸವಾರ

 

 

 

ಆಂದೋಲನ ಡೆಸ್ಕ್

Recent Posts

ಮಾನವ ಹಕ್ಕುಗಳ ಆಯೋಗದ ಅಧ್ಯಕ್ಷರಾಗಿ ನಿವೃತ್ತ ನ್ಯಾ.ಪಿ.ಎನ್.ದೇಸಾಯಿ ನೇಮಕ

ಬೆಂಗಳೂರು : ಮುಖ್ಯಮಂತ್ರಿ ಸ್ಥಾನದಿಂದ ನಿರ್ಗಮಿಸುವ ಮೊದಲು ಸಿದ್ದರಾಮಯ್ಯ ಅವರು ನಿವೃತ್ತ ನ್ಯಾಯಮೂರ್ತಿ ಪಿ.ಎನ್.ದೇಸಾಯಿ ಅವರನ್ನು ಕರ್ನಾಟಕ ರಾಜ್ಯ ಮಾನವ…

25 mins ago

ಕಾಂಗ್ರೆಸ್‌ ಶಾಸಕಾಂಗ ಪಕ್ಷದ ನಾಯಕರಾಗಿ ಡಿ.ಕೆ.ಶಿವಕುಮಾರ್‌ ಆಯ್ಕೆ

ಬೆಂಗಳೂರು : ಕಾಂಗ್ರೆಸ್‌ ಶಾಸಕಾಂಗ ಪಕ್ಷದ ನಾಯಕನಾಗಿ ಡಿ.ಕೆ.ಶಿವಕುಮಾರ್‌ ಆಯ್ಕೆ ಆಗಿದ್ದಾರೆ. ಡಿಕೆಶಿ ಅವರ ಹೆಸರನ್ನು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ…

3 hours ago

ಅಂತೂ ಇಂತು ಕುಂತಿ ಮಕ್ಕಳಿಗೆ ರಾಜ್ಯವಿಲ್ಲ ಎಂಬಂತಾಗಿದೆ ದಲಿತರ ಸ್ಥಿತಿ : ಮಾಜಿ ಸಚಿವ ಎನ್.ಮಹೇಶ್‌

ಕೊಳ್ಳೇಗಾಲ : ಅಂತೂ ಇಂತು ಕುಂತಿ ಮಕ್ಕಳಿಗೆ ರಾಜ್ಯವಿಲ್ಲ ಎಂಬಂತಾಗಿದೆ ದಲಿತರ ಸ್ಥಿತಿ ಎಂದು ಮಾಜಿ ಸಚಿವ ಎನ್‌.ಮಹೇಶ್‌ ಮಾರ್ಮಿಕವಾಗಿ…

3 hours ago

ಲೋಕಭವನದ ಗ್ಲಾಸ್‌ಹೌಸ್‌ನಲ್ಲೇ ಡಿಕೆಶಿ ಪ್ರಮಾಣವಚನ ಸ್ವೀಕಾರ ; ಸಾರ್ವಜನಿಕರಿಗಿಲ್ಲ ಪ್ರವೇಶ

ಬೆಂಗಳೂರು : ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿದ ಬೆನ್ನಲ್ಲಿಯೇ ನೂತನ ಮುಖ್ಯಮಂತ್ರಿ ಆಯ್ಕೆ ಮತ್ತು ಪ್ರಮಾಣವಚನ ಸ್ವೀಕಾರಕ್ಕೆ…

4 hours ago

ಪೊನ್ನಾಚಿ | ಚಿರತೆ ದಾಳಿಗೆ ಕುರಿ ಬಲಿ

ಹನೂರು : ಜಮೀನಿನಲ್ಲಿ ಕುರಿ ಮೇಯಿಸುತ್ತಿದ್ದ ಧನಗಾಹಿ ಮೇಲೆ ಚಿರತೆ ದಾಳಿ ನಡೆಸಿದ ವೇಳೆ ಕೂದಲೆಳೆ ಅಂತರದಲ್ಲಿ ಪ್ರಾಣಪಾಯದಿಂದ ಪಾರಾಗಿದ್ದಾರೆ.…

4 hours ago

ಮಣಿಪುರದಲ್ಲಿ ನಿಷೇಧಿತ ಸಂಘಟನೆಗಳಿಗೆ ಸೇರಿದ ಐವರು ಉಗ್ರರ ಬಂಧನ

ಇಂಫಾಲ: ಮಣಿಪುರದ ಇಂಫಾಲ ಪಶ್ಚಿಮ ಮತ್ತು ಪೂರ್ವ ಜಿಲ್ಲೆಗಳಲ್ಲಿ ಎರಡು ನಿಷೇಧಿತ ಸಂಘಟನೆಗಳಿಗೆ ಸೇರಿದ ಐದು ಉಗ್ರರನ್ನು ಭದ್ರತಾ ಪಡೆಗಳು…

6 hours ago