ಗುಂಡ್ಲುಪೇಟೆ : ಸಾರ್ವಜನಿಕ ಸ್ಥಳಗಳಲ್ಲಿ ಜನರ ಪರದಾಟ
ಮಹೇಂದ್ರ ಹಸಗೂಲಿ
ಗುಂಡ್ಲುಪೇಟೆ: ಒಂದೆಡೆ ಬೇಸಿಗೆಯ ಬಿಸಿಲಿನಿಂದ ಜನರು ಬೆಂಡಾಗಿದ್ದಾರೆ. ಮತ್ತೊಂದು ಕಡೆ ಪಟ್ಟಣದ ಸಾರ್ವಜನಿಕ ಬಸ್ ನಿಲ್ದಾಣ ಹಳೇ ಬಸ್ ನಿಲ್ದಾಣ ದಲ್ಲಿರುವ ನೀರಿನ ಘಟಕಗಳು ಕೆಟ್ಟು ನಿಂತು ಜನರು ನೀರಿಗಾಗಿ ಪರ ದಾಡುವಂತಾಗಿದೆ.
ಶುದ್ಧ ಕುಡಿಯುವ ನೀರಿನ ಘಟಕ ಕೆಟ್ಟಿರುವ ಹಿನ್ನೆಲೆಯಲ್ಲಿ ಜನರು ಅಂಗಡಿಗಳಲ್ಲಿ ಹಣ ಕೊಟ್ಟು ನೀರಿನ ಬಾಟಲಿ ಖರೀದಿಸಬೇಕಾಗಿದೆ. ಆದ್ದರಿಂದ ಶೀಘ್ರದಲ್ಲಿ ಶುದ್ಧ ಕುಡಿ ಯುವ ನೀರಿನ ಘಟಕಗಳನ್ನು ದುರಸ್ತಿ ಪಡಿಸಬೇಕು ಎಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.
ಪಟ್ಟಣಕ್ಕೆ ಪ್ರತಿನಿತ್ಯ ಗ್ರಾಮೀಣ ಭಾಗದಿಂದ ನೂರಾರು ಮಂದಿ ಆಗಮಿಸುತ್ತಾರೆ. ಆದರೆ, ಸಾರ್ವ ಜನಿಕ ಬಸ್ ನಿಲ್ದಾಣದಲ್ಲಿ, ಹಳೇ ಬಸ್ ನಿಲ್ದಾಣದಲ್ಲಿರುವ ನೀರಿನ ಘಟಕ ಗಳು ಕೆಟ್ಟುನಿಂತಿವೆ. ತಾಲ್ಲೂಕು ಕಚೇರಿ ಯಲ್ಲೂ ಕುಡಿಯುವ ನೀರಿನ ವ್ಯವಸ್ಥೆ ಇಲ್ಲ. ಬೇಸಿಗೆಯಲ್ಲಿ ಎಲ್ಲೂ ಶುದ್ಧ ಕುಡಿಯುವ ನೀರು ಸಿಗದೆ ಬಾಯಾರಿಕೆ ತಣಿಸಿಕೊಳ್ಳಲು ಜನರು ಅಂಗಡಿಗಳತ್ತ ಮುಖ ಮಾಡ ಬೇಕಾಗಿದೆ.
ಕೂಡಲೆ ಪುರಸಭೆ ಹಾಗೂ ತಾಲ್ಲೂಕು ಆಡಳಿತ ಸಾರ್ವಜನಿಕ ಸ್ಥಳದಲ್ಲಿ ಶುದ್ಧ ಕುಡಿಯುವ ನೀರಿನ ಘಟಕ ತೆರೆಯಬೇಕು. ಜೊತೆಗೆ ಕೆಟ್ಟು ನಿಂತಿರುವ ನೀರಿನ ಘಟಕಗಳನ್ನು ದುರಸ್ತಿಪಡಿಸಬೇಕು ಎಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ.
ಬಿರು ಬಿಸಿಲಿಗೆ ಜನ ಹೈರಾಣಾ ಗುತ್ತಿದ್ದಾರೆ. ಆದರೆ ಪಟ್ಟಣದಲ್ಲಿ ಸಾರ್ವಜನಿಕ ಸ್ಥಳಗಳಾದ ಬಸ್ ನಿಲ್ದಾಣದಲ್ಲಿ ಕುಡಿಯುವ ನೀರಿನ ಘಟಕ ಕೆಟ್ಟು ಹೋಗಿದ್ದು, ಜನರು ಅಂಗಡಿ ಗಳಿಗೆ ತೆರಳಿ ನೀರಿನ ಬಾಟಲಿ ಖರೀದಿಸುತ್ತಿದ್ದಾರೆ. ತಾಲ್ಲೂಕು ಆಡಳಿತ ಮತ್ತು ಪುರಸಭೆ ಇತ್ತ ಗಮನಹರಿಸಿ ಕ್ರಮ ಜರುಗಿಸಬೇಕು. -ಮುನೀರ್ ಪಾಷ, ಗಡಿನಾಡು ರಕ್ಷಣಾ ಸೇನೆ ರಾಜ್ಯಾಧ್ಯಕ್ಷ
ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ 2026ಕ್ಕೆ ಸಿದ್ಧತೆಗಳು ಆರಂಭವಾಗಿದ್ದು, ಈ ಬಾರಿ ದಸರಾ ಗಜಪಡೆಯ ಪಟ್ಟಿಯಲ್ಲಿ ಮಹತ್ವದ…
ಚೆನ್ನೈ: ಹನೂರು ಶೂಟೌಟ್ ಪ್ರಕರಣದಲ್ಲಿ ಮೃತರ ಕುಟುಂಬಗಳಿಗೆ ತಮಿಳುನಾಡು ಸರ್ಕಾರದಿಂದಲೂ ತಲಾ 10 ಲಕ್ಷ ರೂಪಾಯಿ ಪರಿಹಾರ ಘೋಷಣೆ ಮಾಡಲಾಗಿದೆ.…
ಗುಂಡ್ಲುಪೇಟೆ: ಪಟ್ಟಣದ ಕೇರಳ ರಸ್ತೆಯಲ್ಲಿರುವ ಗ್ಯಾರೇಜ್ಗೆ ಬೆಂಕಿ ತಗುಲಿ ಸಂಪೂರ್ಣ ಗ್ಯಾರೇಜ್ ಸುಟ್ಟುಹೋಗಿರುವ ಘಟನೆ ನಡೆದಿದೆ. ಪಟ್ಟಣದ ವಾಹಿದ್ ಎಂಬುವವರಿಗೆ…
ಮಂಡ್ಯ: ರಾಜ್ಯದಲ್ಲಿ ಕೆಆರ್ಎಸ್ ಜಲಾಶಯದ ನೀರಿನ ವಿಚಾರವೂ ಚರ್ಚೆಗೆ ಬಂದಿದ್ದು, ಕೇವಲ 1951 ಕ್ಯೂಸೆಕ್ಸ್ ನೀರು ಹರಿದು ಬರುತ್ತಿರುವ ಡ್ಯಾಂನಿಂದ…
ಕೊಡಗು: ಸಾರ್ವಜನಿಕರಿಗೆ ಉಪಟಳ ನೀಡುತ್ತಿರುವ ಮೂರು ಗಂಡಾನೆಗಳನ್ನು ಸೆರೆ ಹಿಡಿಯಲು ಅರಣ್ಯ ಇಲಾಖೆ ಆದೇಶ ನೀಡಿದೆ. ಇಂದು ಬೆಳಿಗ್ಗೆ 10…
ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ನಡೆದ ಹನೂರು ಎನ್ಕೌಂಟರ್ ಬಗ್ಗೆ ಮೊದಲ ಬಾರಿಗೆ ಕಾವೇರಿ ವನ್ಯಧಾಮದ ACF ಮರಿಸ್ವಾಮಿ ಮಾಧ್ಯಮಗಳಿಗೆ ಪ್ರತಿಕ್ರಿಯೆ…