Andolana originals

ಕಂಚುಗಾರ ಕೊಪ್ಪಲಿನ ಪ್ರತಿಭೆಗೆ ಕಾಮನ್ವೆಲ್ತ್‌ನಲ್ಲಿ ಕಂಚು!

ಭೇರ್ಯ ಮಹೇಶ್

ಕಾಮನ್ವೆಲ್ತ್ ಕ್ರೀಡಾಕೂಟದ ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ ಸಾಧನೆ ತೋರಿದ ಮೈಸೂರಿನ ಶಿಲ್ಪ 

ಕೆ.ಆರ್.ನಗರ: ಈಕೆ ಹುಟ್ಟಿ- ಬೆಳೆದ ಊರಿನ ಹೆಸರಲ್ಲೇ ಇದೆ ‘ಕಂಚು’; ಅದಕ್ಕೆ ತಕ್ಕಂತೆ ಕಾಮನ್ವೆಲ್ತ್ ಕ್ರೀಡಾ ಕೂಟದ ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ ಸಾಧನೆ ತೋರಿ ಕಂಚಿನ ಪದಕಕ್ಕೆ ಕೊರಳೊಡ್ಡಿದ್ದಾರೆ. ಸಾಧಿಸುವ ಛಲವೊಂದಿದ್ದರೆ, ಸಾಧನೆಗೆ ಅಂಗವೈಕಲ್ಯಅಡ್ಡಿಯಾಗದು ಎಂಬುದನ್ನು ಕಾಮನ್ವೆಲ್ತ್ ಗೇಮ್ಸ್‌ನಲ್ಲಿ ಕಂಚಿನ ಪದಕಕ್ಕೆ ಕೊರಳೊಡ್ಡುವ ಮೂಲಕ ಸಾಧಿಸಿ ತೋರಿಸಿದ್ದಾರೆ

ತಾಲ್ಲೂಕಿನ ಗ್ರಾಮೀಣ ಪ್ರತಿಭೆ ಕೆ.ಎಸ್.ಶಿಲ್ಪ. ಮೈಸೂರು ಜಿಲ್ಲೆಯ ಭತ್ತದ ಕಣಜ ಕೆ.ಆರ್.ನಗರ ತಾಲ್ಲೂಕಿನ ಕಂಚುಗಾರ ಕೊಪ್ಪಲು ಗ್ರಾಮದ ರೈತ ದಂಪತಿ ಶೈಲೇಶ್(ಶೈಲ) ಮತ್ತು ಶಾಂತ ಅವರ ಎರಡನೇ ಮಗಳಾಗಿರುವ ಕೆ.ಎಸ್.ಶಿಲ್ಪ. ಅವರು ನಾಲ್ಕನೇ ವಯಸ್ಸಿನಲ್ಲಿ ರಸ್ತೆ ಅಪಘಾತವೊಂದರಲ್ಲಿ ಒಂದು ಕಾಲು ಕಳೆದು ಕೊಂಡರು. ಅದರಿಂದ ಎದೆಗುಂದಲಿಲ್ಲ. ಬದಲಿಗೆ ವಿದ್ಯಾಭ್ಯಾಸವನ್ನು ಮುಂದುವರಿಸಿ ಎಂ.ಎ., ಬಿ.ಇಡಿ ಪದವಿ ಪಡೆದವರು.

ಮೈಸೂರಿನ ಶಿಕ್ಷಣ ಸಂಸ್ಥೆಯೊಂದರಲ್ಲಿ ಸೇವೆ ಸಲ್ಲಿಸುತ್ತಿರುವಾಗಲೇ ಕ್ರೀಡೆಯಲ್ಲೂ ಸಾಧನೆ ಮೆರೆಯಬೇಕು ಎಂದು ನಿರ್ಧರಿಸಿ ಗುಂಡು ಎಸೆತವನ್ನು ಅಭ್ಯಾಸ ಮಾಡುತ್ತಾ, ಜಿಲ್ಲೆ, ರಾಜ್ಯ, ರಾಷ್ಟ್ರವನ್ನು ಪ್ರತಿನಿಧಿಸಿ, ಇದೀಗ ಕಾಮನ್ವೆಲ್ತ್ ಕ್ರೀಡಾಕೂಟದಲ್ಲಿ ಭಾಗವಹಿಸಿದ್ದಾರೆ.

ಪ್ಯಾರಾ ಅಥ್ಲೆಟಿಕ್ ವಿಭಾಗದಲ್ಲಿ ಗುಂಡು ಎಸೆತದಲ್ಲಿ ತೃತೀಯ ಸ್ಥಾನಕ್ಕೆ ಭಾಜನರಾಗಿ ಕಂಚಿನ ಪದಕಕ್ಕೆ ಕೊರಳೊಡ್ಡುವ ಮೂಲಕ ಪದಕ ಪಟ್ಟಿಯಲ್ಲಿ ಭಾರತದ ಹೆಸರು ದಾಖಲಿಸಿದ್ದಾರೆ.

ಅಭಿನಂದನೆಗಳ ಮಹಾಪೂರ: ಶಿಲ್ಪ ಅವರು ಮಾಡಿದ ಈ ಸಾಧನೆಗೆ ಅಭಿನಂದನೆಗಳ ಮಹಾಪೂರವೇ ಹರಿದು ಬರುತ್ತಿದೆ. ಕೆ.ಆರ್.ನಗರ ತಾಲ್ಲೂಕಿನ ಗ್ರಾಮೀಣ ಪ್ರತಿಭೆಯ ಈ ಸಾಧನೆ ಕಂಡು ಶಿಲ್ಪ ಅವರ ಪೋಷಕರಿಗೆ ತಾಲ್ಲೂಕಿನ ಜನತೆ ಅಭಿನಂದನೆ ಸಲ್ಲಿಸುತ್ತಿರುವುದಲ್ಲದೇ ಪಟಾಕಿ ಸಿಡಿಸಿ ಸಂಭ್ರಮಿಸುತ್ತಿದ್ದಾರೆ. ಗ್ರಾಪಂ ಮಾಜಿ ಅಧ್ಯಕ್ಷ ತ್ಯಾಗರಾಜ್, ನಿವೃತ್ತ ಶಿಕ್ಷಕ ದೇವೇಂದ್ರ ಕುಮಾರ್, ಕುಬೇರ, ಚನ್ನಕೇಶವ ಮೊದಲಾದವರು ಮನೆಗೆ ತೆರಳಿ ಶಿಲ್ಪ ಪೋಷಕರಿಗೆ ಶುಭಾಶಯ ಕೋರಿದರು.

” ಕಷ್ಟಪಟ್ಟು ಮಗಳನ್ನು ಓದಿಸಿದ್ದೇನೆ. ಆಕೆ ಕೂಡ ಛಲದಿಂದಲೇ ಓದಿನ ಜೊತೆಗೆ ಗುಂಡು ಎಸೆತವನ್ನು ಅಭ್ಯಾಸ ಮಾಡಿಕೊಂಡು ಇಂದು ವಿದೇಶಿ ನೆಲದಲ್ಲಿ ಪದಕ ಗೆಲ್ಲುವ ಮೂಲಕ ಭಾರತದ ಕೀರ್ತಿ ಪತಾಕೆ ಹಾರಿಸಿದ ಹೆಮ್ಮೆ ಇದೆ. ನಮ್ಮ ಮಗಳು ಈ ಸಾಧನೆಯಿಂದ ರಾಜ್ಯ, ದೇಶದ ಜೊತೆಗೆ ಊರಿಗೆ ಕೀರ್ತಿ ತಂದಿದ್ದಾಳೆ.”

– ಶೈಲೇಶ್, ಶಿಲ್ಪ ತಂದೆ

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಚುಟುಕು ಸಾಹಿತ್ಯ ಪ್ರಶಸ್ತಿ ಸೇರ್ಪಡೆ ಸ್ವಾಗತಾರ್ಹ

೨೦೨೫-೨೬ನೇ ಸಾಲಿಗೆ ಕನ್ನಡ ಪುಸ್ತಕ ಪ್ರಾಧಿಕಾರವು ಅರ್ಹ ಸಾಹಿತಿಗಳಿಗೆ ಪ್ರಶಸ್ತಿಯನ್ನು ಪ್ರಕಟಿಸಿದ್ದು ಅದರಲ್ಲಿ ಇದೇ ಮೊದಲ ಬಾರಿಗೆ ಚುಟುಕು ಸಾಹಿತ್ಯಕ್ಕೂ…

2 hours ago

ವೈಚಾರಿಕ ಕ್ರಾಂತಿಯ ವಚನಕಾರ ಹಡಪದ ಅಪ್ಪಣ್ಣ

ಎಚ್.ಹಾಲಪ್ಪ ಅಸಮಾನತೆ, ಶೋಷಣೆ, ಅಂಧಶ್ರದ್ಧೆ ವಿರುದ್ಧ ವಚನ ರಚಿಸಿದ ಹಡಪದ ಅಪ್ಪಣ್ಣ ಜಯಂತಿ ಇಂದು ೧೨ನೇ ಶತಮಾನದ ವಚನ ಚಳವಳಿ…

2 hours ago

ಹವಾಮಾನ ಬದಲಾವಣೆ; ಹುಲಿಗಳಿಗೆ ಹೊಸ ಅಪಾಯ?

ಶ್ರೇಯಸ್ ದೇವನೂರು, ವನ್ಯಜೀವಿ ಛಾಯಾಗ್ರಾಹಕ ಜುಲೈ ೨೯ರಂದು ವಿಶ್ವ ಹುಲಿ ದಿನವನ್ನು ಆಚರಿಸುವಾಗ, ಭಾರತದ ಹುಲಿ ಸಂರಕ್ಷಣೆಯ ಯಶಸ್ಸನ್ನು ನಾವು…

2 hours ago

ಪಂಜುಗಂಗೊಳ್ಳಿ ಅವರ ವಾರದ ಅಂಕಣ: ಗೌರವ್ ಶುಕ್ಲಾ ಎಂಬ ‘ಸಮವಸ್ತ್ರವಿಲ್ಲದ ಸೈನಿಕ’

‘ಸಪೋರ‍್ಟ್ ಅವರ್ ಹೀರೋಸ್’ ಸರ್ಕಾರೇತರ ಸಂಸ್ಥೆ ಸ್ಥಾಪನೆ  ೩೬ವರ್ಷ ಪ್ರಾಯದ ಗೌರವ್ ಶುಕ್ಲಾ(ಕುಳಿತವರಲ್ಲಿ ಎಡ ಬದಿ)ರ ತಂದೆ ೨೮ ವರ್ಷಗಳ…

2 hours ago

ಮಲ್ಲಳ್ಳಿ ಜಲಪಾತದ ರೋಪ್‌ವೇ ಯೋಜನೆಗೆ ವೇಗ

ಲಕ್ಷ್ಮೀಕಾಂತ್ ಕೊಮಾರಪ್ಪ ಸೋಮವಾರಪೇಟೆ: ತಾಲ್ಲೂಕಿನ ಪ್ರಮುಖ ಪ್ರವಾಸಿ ತಾಣಗಳಲ್ಲಿ ಒಂದಾದ ಮಲ್ಲಳ್ಳಿ ಜಲಪಾತದಲ್ಲಿ ಬಹುನಿರೀಕ್ಷಿತ ರೋಪ್‌ವೇ ಯೋಜನೆಗೆ ವೇಗ ದೊರೆತಿದೆ.…

2 hours ago

ಮೀನುಗಾರಿಕೆ ಉತ್ತೇಜನಕ್ಕೆ ಸಂಚಾರ ಮತ್ಸ್ಯ ವಾಹಿನಿ

ಕೆ.ಬಿ.ರಮೇಶನಾಯಕ ಮೈಸೂರು: ಹಲವು ರೋಗಗಳಿಗೆ ರಾಮಬಾಣವಾದ ಹಾಗೂ ಆರೋಗ್ಯಕ್ಕೆ ಹಿತಕರ ಎನ್ನಲಾಗಿರುವ ಮೀನು ಆಹಾರವನ್ನು ಜನಸಾಮಾನ್ಯರಿಗೆ ಸುಲಭವಾಗಿ ದೊರೆಯುವಂತೆ ಮಾಡಲು…

2 hours ago