Andolana originals

ಸೋದರನಿಂದಲೇ ವಂಚನೆ: ಸೋದರಿಗಿಲ್ಲ ಸೂರು

ಅಕ್ಕನ ಮನೆಯ ಖಾತೆಯನ್ನು ತನ್ನ ಹೆಸರಿಗೆ ಬದಲಿಸಿಕೊಂಡು ವಂಚನೆ
• ಶ್ರೀಧರ್ ಆರ್ ಭಟ್

ನಂಜನಗೂಡು: ವ್ಯಕ್ತಿಯೊಬ್ಬ ತನ್ನ ಸಹೋದರಿಯ ಮನೆಯ ಖಾತೆಯನ್ನು ಅಕ್ರಮವಾಗಿ ತನ್ನ ಹೆಸರಿಗೆ ಬದಲಿಸಿಕೊಂಡು ವಂಚಿಸಿ, ಆಕೆಯನ್ನು ಮನೆಯಿಂದ ಹೊರಹಾಕಿರುವ ಘಟನೆ ತಾಲ್ಲೂಕಿನಲ್ಲಿ ನಡೆದಿದೆ.

ಚಿನ್ನದಗುಡಿಹುಂಡಿ ಗ್ರಾಮದ ಕರಿಗಮ್ಮ ತನ್ನ ಸಹೋದರನಿಂದ ವಂಚನೆಗೆ ಒಳಗಾದವರು.

ಪ್ರಾಯದಲ್ಲೇ ಬೆಂಗಳೂರು ಸೇರಿ ಅವರಿವರ ಮನೆಯ ಮುಸುರೆ ತಿಕ್ಕಿ, ಕೂಲಿ ನಾಲಿ ಮಾಡಿ, ಒಂದಿಷ್ಟು ಕಾಸು ಕೂಡಿಟ್ಟ ಕರಿಗಮ ಅವರು ತಂದೆ ಬಸವೇಗೌಡರಿಂದ ತನಗೆ ದಾನವಾಗಿ ಬಂದ ಚಿನ್ನದಗುಡಿಹುಂಡಿ ಗ್ರಾಮದ ನಿವೇಶನದಲ್ಲಿ ಕೆಲ ವರ್ಷಗಳ ಹಿಂದೆ ಮನೆ ನಿರ್ಮಿಸಿದ್ದರು. ಆದರೆ, ತಂದೆಯಿಂದ ಬಂದ ನಿವೇಶನದಲ್ಲಿ ನಿರ್ಮಿಸಿದ ಮನೆಯಲ್ಲೀಗ ಕರಿಗಮ್ಮ ಅವರಿಗೇ ಜಾಗವಿಲ್ಲವಾಗಿದೆ. ಇತ್ತ ಅವರಿಗೆ ತಂದೆಯೂ ಇಲ್ಲ, ಅತ್ತ ಪತಿಯೂ ಇಲ್ಲ, ಮಕ್ಕಳೂ ಇಲ್ಲ. ಹೀಗಾಗಿ ಕರಿಗಮ್ಮ ಅವರ ಗೋಳು ಕೇಳುವವರಾರು ಎಂಬ ಪ್ರಶ್ನೆ ಉದ್ಭವಿಸಿದೆ.

ಸಹೋದರನೇ ತನಗೆ ವಂಚನೆ ಮಾಡಬಹುದು ಎಂದು ತಿಳಿಯದ ಕರಿಗಮ್ಮ ಅವರು ಮನೆಯನ್ನು ಸಹೋದರ ನಾಗರಾಜ ಅವರ ಸುಪರ್ದಿಗೆ ವಹಿಸಿ ಮತ್ತೆ ಬೆಂಗಳೂರಿಗೆ ತೆರಳಿದ್ದರು. ಕೆಲ ವರ್ಷಗಳ ನಂತರ ಮನೆಗೆ ಬಂದರೆ ‘ನಿನಗೆ ಈ ಮನೆಯಲ್ಲಿ ಜಾಗವೇ ಇಲ್ಲ’ ಎಂಬ ಮಾತು ಸಹೋದರನಿಂದ ಬಂದಾಗ ಕರಿಗಮ್ಮನ ಸ್ಥಿತಿ ಅಯೋಮಯವಾಯಿತು.

ಕರಿಗಮ್ಮ ಅವರು ತಮ್ಮ ತಂದೆ ಬಸವೇಗೌಡರಿಂದ ಬಂದ ನಿವೇಶನದ ಜಂಜರ್ ನಂ.633ರ 30X40 ಚದರಡಿ ನಿವೇಶನದಲ್ಲಿ ಮನೆ ನಿರ್ಮಿಸಿ ಪಂಚಾಯಿತಿಯಿಂದ ಖಾತೆಯನ್ನೂ ಮಾಡಿಸಿಕೊಂಡಿದ್ದರು. ಆದರೆ ಈಗ ಆ ಮನೆ ಕರಿಗಮ್ಮನಿಗೆ ತಿಳಿಯದ ಹಾಗೆ ಸಹೋದರ ನಾಗರಾಜು ಹೆಸರಿಗೆ ಖಾತೆಯಾಗಿದೆ.

ಸಹೋದರ ನಾಗರಾಜು ನೋಟರಿಯವರಿಂದ ಒಂದು ಅಫಿಡವಿಟ್ ಸಿದ್ಧಪಡಿಸಿ, ಆ ದಾಖಲೆಯ ಮೇಲೆ ಬದನವಾಳು ಪಂಚಾಯಿತಿಗೆ ತೆರಳಿ ಕುತಂತ್ರ ಮಾಡಿ ತನ್ನ ಹೆಸರಿಗೆ ಮನೆಯ ಖಾತೆಯನ್ನು ಬದಲಾಯಿಸಿ ಕೊಂಡು ನಾನು ಕಟ್ಟಿದ ಮನೆಯಿಂದ ನನ್ನನ್ನು ಹೊರಹಾಕಿದ್ದಾನೆ ಎಂಬುದು ಕರಿಗಮ್ಮನವರ ಆರೋಪವಾಗಿದೆ.

ಮನೆಯಿಲ್ಲದ ಈ ವಯೋವೃದ್ಧೆ ಈಗ ಅವರಿವರ ಮನೆಯ ಜಗುಲಿಯ ಮೇಲೆ ಕಾಲ ಕಳೆಯುತ್ತಾ, ಬೆಳಗಾದರೆ ನ್ಯಾಯಕ್ಕಾಗಿ ಕಂಡ ಕಂಡ ಮುಖಂಡರು ಮತ್ತು ಅಧಿಕಾರಿಗಳ ಮನೆ ಬಾಗಿಲಿಗೆ ಎಡತಾಕುತ್ತಿದ್ದಾರೆ.

ನೋಟರಿ ಅಫಿಡವಿಟ್ ಆಧಾರದ ಮೇಲೆ ಖಾತೆ ಬದಲಾವಣೆ ಮಾಡಿರುವುದು ಅಕ್ಷಮ್ಯ ಅಪರಾಧ. ಈ ಕುರಿತು ವರದಿ ತರಿಸಿಕೊಂಡು ತಪ್ಪಾಗಿದ್ದಲ್ಲಿ ಈ ಖಾತೆಯನ್ನು ರದ್ದುಪಡಿಸಲಾಗುವುದು.
-ಜೆರಾಲ್ಡ್ ರಾಜೇಶ್, ಇಒ, ತಾಪಂ.

ಹಿಂದಿದ್ದ ಪಿಡಿಒ ಈ ಖಾತೆ ಬದಲಾವಣೆ ಮಾಡಿದ್ದಾರೆ. ಮೇಲಧಿಕಾರಿಗಳಿಂದ ಆದೇಶ ಮಾಡಿಸಿದರೆ ಈ ಖಾತೆಯನ್ನು ಸ್ಥಗಿತಗೊಳಿ ಸುವೆ. ಈ ಕುರಿತು ಈಗಾಗಲೇ ಮೇಲಧಿಕಾರಿ ಗಳಿಗೆ ವರದಿ ನೀಡಿದ್ದೇನೆ.
-ಕರಿಯಪ್ಪ, ಪಿಡಿಒ, ಬದನವಾಳು ಗ್ರಾಪಂ

ಆಂದೋಲನ ಡೆಸ್ಕ್

Recent Posts

ಯಡಿಯೂರಪ್ಪ ರಾಜಕೀಯ ಜೀವನಕ್ಕೆ 50 ವರ್ಷ: ಭಾವುಕ ಪೋಸ್ಟ್‌ ಹಾಕಿದ ರಾಘವೇಂದ್ರ

ಬೆಂಗಳೂರು: ಕರ್ನಾಟಕದ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ರಾಜಕೀಯ ಜೀವನಕ್ಕೆ 50 ವರ್ಷಗಳು ತುಂಬಿದೆ. ಇಂದು ನಡೆಯುವ ಬಿಜೆಪಿ ರಾಜ್ಯ ಕಾರ್ಯಕಾರಿಣಿ…

3 mins ago

ಓದುಗರ ಪತ್ರ: ಐದು ವರ್ಷಕ್ಕೊಮ್ಮೆ ಆಸ್ತಿ ತೆರಿಗೆ ಪರಿಷ್ಕರಿಸಿ

ರಾಜ್ಯದಲ್ಲಿ ಪುರಸಭೆ, ನಗರಸಭೆ, ಮಹಾನಗರ ಪಾಲಿಕೆಗಳಲ್ಲಿ ಐದು ವರ್ಷಗಳಿಗೊಮ್ಮೆ ಆಸ್ತಿ ತೆರಿಗೆಯನ್ನು ಪರಿಷ್ಕರಣೆ ಮಾಡಬೇಕು ಎಂಬ ನಿಯಮವಿದ್ದರೂ ವರ್ಷಕ್ಕೊಮ್ಮೆ ಆಸ್ತಿ…

27 mins ago

ಓದುಗರ ಪತ್ರ: ಮ್ಯಾನ್ ಹೋಲ್ ಸ್ವಚ್ಛಗೊಳಿಸಿ

ಮೈಸೂರಿನ ಝಾನ್ಸಿ ಲಕ್ಷ್ಮೀಬಾಯಿ (ಜೆಎಲ್‌ಬಿ) ರಸ್ತೆಯಲ್ಲಿರುವ ಮೈಸೂರು ಅಭಿವೃದ್ಧಿ ಪ್ರಾಧಿಕಾರ (ಎಂಡಿಎ) ಕಚೇರಿಯ ಮುಂದಿರುವ ಫುಟ್‌ಪಾತ್‌ನಲ್ಲಿರುವ ಮ್ಯಾನ್ ಹೋಲ್‌ನಲ್ಲಿ ಕಸ…

31 mins ago

ಓದುಗರ ಪತ್ರ: ಕಬ್ಬಿಣದ ಸಲಾಕೆ ತೆರವುಗೊಳಿಸಿ

ಮೈಸೂರಿನ ಚಾಮುಂಡಿಪುರಂ ಸರ್ಕಾರಿ ಸಾರ್ವಜನಿಕ ಗ್ರಂಥಾಲಯದಲ್ಲಿ ನಿಯತ ಕಾಲಿಕೆ ವಿಭಾಗ ಒಂದನೇ ಮಹಡಿಯಲ್ಲಿದ್ದು, ಸಾರ್ವಜನಿಕರು ಮೆಟ್ಟಿಲು ಹತ್ತಿಕೊಂಡು ಹೋಗುವಾಗ ಅಲ್ಲಿರುವ…

33 mins ago

ಓದುಗರ ಪತ್ರ: ಹೈಡ್ರೋಪೋನಿಕ್ಸ್ ಟೆಕ್‌ಪಾರ್ಕ್ ಸ್ಥಾಪಿಸಿ

ಸಾಂಪ್ರದಾಯಿಕ ಕೃಷಿ ಇಂದು ಹವಾಮಾನ ವೈಪರೀತ್ಯ ಮತ್ತು ಮಣ್ಣಿನ ಸವಕಳಿಯಿಂದ ಬಳಲುತ್ತಿದೆ. ಇಂತಹ ಸಂದರ್ಭದಲ್ಲಿ ಹೈಡ್ರೋಪೋನಿಕ್ಸ್ ಕೇವಲ ತಂತ್ರಜ್ಞಾನವಲ್ಲ ಅದು…

36 mins ago

ಸೋನ್ ಹಿಲ್ ಬಳಿಯ ಕಸದ ರಾಶಿ ತೆರವು ಕಾರ್ಯ ಶುರು

ನವೀನ್ ಡಿಸೋಜ ಗುಡ್ಡದ ಮೇಲೆ ಅವೈಜ್ಞಾನಿಕವಾಗಿ ಸುರಿದಿದ್ದ ಕಸ ವಿಂಗಡಣೆ ಕೆಲಸ ಚುರುಕು ಮಡಿಕೇರಿ: ವಾಯು ಗುಣಮಟ್ಟದಲ್ಲಿ ದೇಶದಲ್ಲೇ ಹೆಸರಾಗಿರುವ…

3 hours ago