Andolana originals

ಸೋದರನಿಂದಲೇ ವಂಚನೆ: ಸೋದರಿಗಿಲ್ಲ ಸೂರು

ಅಕ್ಕನ ಮನೆಯ ಖಾತೆಯನ್ನು ತನ್ನ ಹೆಸರಿಗೆ ಬದಲಿಸಿಕೊಂಡು ವಂಚನೆ
• ಶ್ರೀಧರ್ ಆರ್ ಭಟ್

ನಂಜನಗೂಡು: ವ್ಯಕ್ತಿಯೊಬ್ಬ ತನ್ನ ಸಹೋದರಿಯ ಮನೆಯ ಖಾತೆಯನ್ನು ಅಕ್ರಮವಾಗಿ ತನ್ನ ಹೆಸರಿಗೆ ಬದಲಿಸಿಕೊಂಡು ವಂಚಿಸಿ, ಆಕೆಯನ್ನು ಮನೆಯಿಂದ ಹೊರಹಾಕಿರುವ ಘಟನೆ ತಾಲ್ಲೂಕಿನಲ್ಲಿ ನಡೆದಿದೆ.

ಚಿನ್ನದಗುಡಿಹುಂಡಿ ಗ್ರಾಮದ ಕರಿಗಮ್ಮ ತನ್ನ ಸಹೋದರನಿಂದ ವಂಚನೆಗೆ ಒಳಗಾದವರು.

ಪ್ರಾಯದಲ್ಲೇ ಬೆಂಗಳೂರು ಸೇರಿ ಅವರಿವರ ಮನೆಯ ಮುಸುರೆ ತಿಕ್ಕಿ, ಕೂಲಿ ನಾಲಿ ಮಾಡಿ, ಒಂದಿಷ್ಟು ಕಾಸು ಕೂಡಿಟ್ಟ ಕರಿಗಮ ಅವರು ತಂದೆ ಬಸವೇಗೌಡರಿಂದ ತನಗೆ ದಾನವಾಗಿ ಬಂದ ಚಿನ್ನದಗುಡಿಹುಂಡಿ ಗ್ರಾಮದ ನಿವೇಶನದಲ್ಲಿ ಕೆಲ ವರ್ಷಗಳ ಹಿಂದೆ ಮನೆ ನಿರ್ಮಿಸಿದ್ದರು. ಆದರೆ, ತಂದೆಯಿಂದ ಬಂದ ನಿವೇಶನದಲ್ಲಿ ನಿರ್ಮಿಸಿದ ಮನೆಯಲ್ಲೀಗ ಕರಿಗಮ್ಮ ಅವರಿಗೇ ಜಾಗವಿಲ್ಲವಾಗಿದೆ. ಇತ್ತ ಅವರಿಗೆ ತಂದೆಯೂ ಇಲ್ಲ, ಅತ್ತ ಪತಿಯೂ ಇಲ್ಲ, ಮಕ್ಕಳೂ ಇಲ್ಲ. ಹೀಗಾಗಿ ಕರಿಗಮ್ಮ ಅವರ ಗೋಳು ಕೇಳುವವರಾರು ಎಂಬ ಪ್ರಶ್ನೆ ಉದ್ಭವಿಸಿದೆ.

ಸಹೋದರನೇ ತನಗೆ ವಂಚನೆ ಮಾಡಬಹುದು ಎಂದು ತಿಳಿಯದ ಕರಿಗಮ್ಮ ಅವರು ಮನೆಯನ್ನು ಸಹೋದರ ನಾಗರಾಜ ಅವರ ಸುಪರ್ದಿಗೆ ವಹಿಸಿ ಮತ್ತೆ ಬೆಂಗಳೂರಿಗೆ ತೆರಳಿದ್ದರು. ಕೆಲ ವರ್ಷಗಳ ನಂತರ ಮನೆಗೆ ಬಂದರೆ ‘ನಿನಗೆ ಈ ಮನೆಯಲ್ಲಿ ಜಾಗವೇ ಇಲ್ಲ’ ಎಂಬ ಮಾತು ಸಹೋದರನಿಂದ ಬಂದಾಗ ಕರಿಗಮ್ಮನ ಸ್ಥಿತಿ ಅಯೋಮಯವಾಯಿತು.

ಕರಿಗಮ್ಮ ಅವರು ತಮ್ಮ ತಂದೆ ಬಸವೇಗೌಡರಿಂದ ಬಂದ ನಿವೇಶನದ ಜಂಜರ್ ನಂ.633ರ 30X40 ಚದರಡಿ ನಿವೇಶನದಲ್ಲಿ ಮನೆ ನಿರ್ಮಿಸಿ ಪಂಚಾಯಿತಿಯಿಂದ ಖಾತೆಯನ್ನೂ ಮಾಡಿಸಿಕೊಂಡಿದ್ದರು. ಆದರೆ ಈಗ ಆ ಮನೆ ಕರಿಗಮ್ಮನಿಗೆ ತಿಳಿಯದ ಹಾಗೆ ಸಹೋದರ ನಾಗರಾಜು ಹೆಸರಿಗೆ ಖಾತೆಯಾಗಿದೆ.

ಸಹೋದರ ನಾಗರಾಜು ನೋಟರಿಯವರಿಂದ ಒಂದು ಅಫಿಡವಿಟ್ ಸಿದ್ಧಪಡಿಸಿ, ಆ ದಾಖಲೆಯ ಮೇಲೆ ಬದನವಾಳು ಪಂಚಾಯಿತಿಗೆ ತೆರಳಿ ಕುತಂತ್ರ ಮಾಡಿ ತನ್ನ ಹೆಸರಿಗೆ ಮನೆಯ ಖಾತೆಯನ್ನು ಬದಲಾಯಿಸಿ ಕೊಂಡು ನಾನು ಕಟ್ಟಿದ ಮನೆಯಿಂದ ನನ್ನನ್ನು ಹೊರಹಾಕಿದ್ದಾನೆ ಎಂಬುದು ಕರಿಗಮ್ಮನವರ ಆರೋಪವಾಗಿದೆ.

ಮನೆಯಿಲ್ಲದ ಈ ವಯೋವೃದ್ಧೆ ಈಗ ಅವರಿವರ ಮನೆಯ ಜಗುಲಿಯ ಮೇಲೆ ಕಾಲ ಕಳೆಯುತ್ತಾ, ಬೆಳಗಾದರೆ ನ್ಯಾಯಕ್ಕಾಗಿ ಕಂಡ ಕಂಡ ಮುಖಂಡರು ಮತ್ತು ಅಧಿಕಾರಿಗಳ ಮನೆ ಬಾಗಿಲಿಗೆ ಎಡತಾಕುತ್ತಿದ್ದಾರೆ.

ನೋಟರಿ ಅಫಿಡವಿಟ್ ಆಧಾರದ ಮೇಲೆ ಖಾತೆ ಬದಲಾವಣೆ ಮಾಡಿರುವುದು ಅಕ್ಷಮ್ಯ ಅಪರಾಧ. ಈ ಕುರಿತು ವರದಿ ತರಿಸಿಕೊಂಡು ತಪ್ಪಾಗಿದ್ದಲ್ಲಿ ಈ ಖಾತೆಯನ್ನು ರದ್ದುಪಡಿಸಲಾಗುವುದು.
-ಜೆರಾಲ್ಡ್ ರಾಜೇಶ್, ಇಒ, ತಾಪಂ.

ಹಿಂದಿದ್ದ ಪಿಡಿಒ ಈ ಖಾತೆ ಬದಲಾವಣೆ ಮಾಡಿದ್ದಾರೆ. ಮೇಲಧಿಕಾರಿಗಳಿಂದ ಆದೇಶ ಮಾಡಿಸಿದರೆ ಈ ಖಾತೆಯನ್ನು ಸ್ಥಗಿತಗೊಳಿ ಸುವೆ. ಈ ಕುರಿತು ಈಗಾಗಲೇ ಮೇಲಧಿಕಾರಿ ಗಳಿಗೆ ವರದಿ ನೀಡಿದ್ದೇನೆ.
-ಕರಿಯಪ್ಪ, ಪಿಡಿಒ, ಬದನವಾಳು ಗ್ರಾಪಂ

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ‘ಮನೆಗೊಂದು ಗ್ರಂಥಾಲಯ’ ಯೋಜನೆ ಯಶಸ್ವಿಯಾಗಲಿ

‘ಮನೆಗೊಂದು ಗ್ರಂಥಾಲಯ’ ಹೆಸರಿನಲ್ಲಿ ಕನ್ನಡ ಪುಸ್ತಕ ಪ್ರಾಧಿಕಾರವು ವಿಶಿಷ್ಟ ಯೋಜನೆಯೊಂದನ್ನು ಪ್ರಾರಂಭ ಮಾಡಿರುವುದು ಶ್ಲಾಘನೀಯ. ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷರಾದ…

2 hours ago

ಓದುಗರ ಪತ್ರ: ವಿದ್ಯಾರ್ಥಿ ಬಸ್ ಪಾಸ್ ದೂರ ಮಿತಿ ಹೆಚ್ಚಿಸಲಿ

ಡಿ.ಕೆ.ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡಿದ ಬಳಿಕ ರಾಜ್ಯದ ಶಾಲಾ -ಕಾಲೇಜುಗಳ ಎಲ್ಲ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ನೀಡುವುದಾಗಿ…

2 hours ago

ಓದುಗರ ಪತ್ರ: ಶಾಲಾ ಶಿಕ್ಷಣದಲ್ಲಿ ಕೃಷಿ ಬಗ್ಗೆ ಪಠ್ಯ ಅಳವಡಿಸಿ

ಮನುಷ್ಯನಿಗೆ ಅತ್ಯಗತ್ಯವಾಗಿರುವುದು ಆಹಾರ. ಇದಕ್ಕೆ ಕೃಷಿಯೇ ಮೂಲ. ರೈತನ ಪರಿಶ್ರಮದಿಂದ ಜನರು ನೆಮ್ಮದಿಯಿಂದ ಊಟ ಮಾಡಲು ಸಾಧ್ಯವಾಗಿದೆ. ಆಧುನಿಕ ಆವಿಷ್ಕಾರಗಳಿಂದ…

2 hours ago

ಸೌಹಾರ್ದ ಸಮಾಜಕ್ಕಾಗಿ ಮಕ್ಕಳಲ್ಲಿ ಭಾವೈಕ್ಯತೆ ಬಿತ್ತನೆ ಅತ್ಯಗತ್ಯ

ಟಿ.ಕೆ.ಹರೀಶ್ ತಂತ್ರಜ್ಞಾನ ಬಳಕೆ ಅತಿಯಾದರೆ ಮಕ್ಕಳಲ್ಲಿ ಸಹಾನುಭೂತಿ ಕ್ಷೀಣ  ಮಾನವೀಯತೆಯ ಮೂಲ ಮಂತ್ರವೇ ಸೌಹಾರ್ದತೆ. ಇದು ಕೇವಲ ಸಹಬಾಳ್ವೆಯಲ್ಲ, ಬದಲಿಗೆ…

2 hours ago

ಶಿವಾಜಿ ಗಣೇಶನ್‌ ಅವರ ವಾರದ ಅಂಕಣ: ಸೋಲಿನಿಂದ ಸೊರಗಿದ ದೀದಿಯನ್ನು ಕೈಬಿಟ್ಟ ಆಪ್ತರು

ರಾಜಕಾರಣವೀಗ ಅಧಿಕಾರದಾಹಿಗಳ ಅಡ್ಡ ಆಗಿಹೋಗಿದೆ. ಅಧಿಕಾರವಿಲ್ಲದೆ ಯಾರಿಗೂ ಯಾವ ಸೈದ್ಧಾಂತಿಕ ರಾಜಕಾರಣವೂ ಬೇಡವಾಗಿದೆ. ಕಾಲ ಸರಿಯುತ್ತಿದ್ದಂತೆ ನಿತ್ಯದ ರಾಜಕಾರಣದ ಬದಲಾವಣೆಯೂ…

2 hours ago

ಇತಿಹಾಸದ ಪುಟಗಳಲ್ಲಿ ಜಿರಳೆಗಳು

ರೇಣುಕಾ ನಿಡುಗುಂದಿ ಯಾವುದೇ ಒಬ್ಬ ಸರ್ವಾಧಿಕಾರಿ ಅಥವಾ ಭ್ರಷ್ಟ ರಾಜಕಾರಣಿ ಜನರಲ್ಲಿ ತನ್ನ ಬಗ್ಗೆ ಭಯ ಹುಟ್ಟಿಸಿ ಆಡಳಿತ ನಡೆಸುತ್ತಾನೆ.…

2 hours ago