Andolana originals

ಬೃಹತ್‌ ಎಂಸಿಸಿ ರಚನೆ ನನೆಗುದಿಗೆ

ಕೆ.ಬಿ.ರಮೇಶನಾಯಕ

ಮೈಸೂರು : ಮೈಸೂರು ಮಹಾನಗರಪಾಲಿಕೆ ಯನ್ನು ಬೃಹತ್ ಮೈಸೂರು ಮಹಾನಗರ ಪಾಲಿಕೆಯನ್ನಾಗಿ ಮೇಲ್ದರ್ಜೆಗೇರಿಸಿ ೫ ತಿಂಗಳು ಕಳೆದರೂ ರಾಜ್ಯ ಸರ್ಕಾರ ಅಂತಿಮ ಅಧಿಸೂಚನೆ ಹೊರಡಿಸಿಲ್ಲ. ಕೇಂದ್ರ ಸರ್ಕಾರ ದೇಶಾದ್ಯಂತ ನಡೆಸುತ್ತಿರುವ ಜನಗಣತಿ ವರದಿ ಹೊರ ಬೀಳುವ ತನಕ ಅಧಿಕೃತ ಆದೇಶ ಹೊರಡಿ ಸುವುದು ಅನುಮಾನವಾಗಿದೆ.

ಬೃಹತ್ ನಗರಪಾಲಿಕೆಯನ್ನಾಗಿ ೨೦೨೬ರ ಜನವರಿ ೮ ರಂದು ಮರು ನಾಮಕರಣ ಮಾಡಿ ಅಧಿಕೃತ ಆದೇಶ ಹೊರಡಿಸಿ ಆಕ್ಷೇಪಣೆಗೆ ನೀಡಿದ್ದ ಒಂದು ತಿಂಗಳ ಕಾಲಾವಕಾಶ ಮುಗಿದ ಮೇಲೆ ಈತನಕ ಯಾವುದೇ ಪ್ರಕ್ರಿಯೆಗಳು ನಡೆದಿಲ್ಲ. ಇದರಿಂದಾಗಿ, ಯಾವುದೇ ಬದಲಾವಣೆ ಇಲ್ಲದೆ ಯಥಾಸ್ಥಿತಿಯಲ್ಲೇ ಮೈಸೂರು ನಗರಪಾಲಿಕೆ ಸೇರಿದಂತೆ ಸ್ಥಳೀಯ ಸಂಸ್ಥೆಗಳ ಆಡಳಿತ ನಿರ್ವ ಹಣೆ ಮುಂದುವರಿದಿದೆ.

ಬೆಂಗಳೂರು ನಂತರ ರಾಜಕೀಯ, ಪ್ರವಾ ಸೋದ್ಯಮ, ಧಾರ್ಮಿಕ, ಐಟಿ-ಬಿಟಿ ಕ್ಷೇತ್ರಗಳಲ್ಲಿ ಮುಂದುವರಿಯುತ್ತಿರುವ ಮೈಸೂರನ್ನು ಬಿಬಿ ಎಂಪಿ ಮಾದರಿಯಲ್ಲಿ ಬೃಹತ್ ನಗರಪಾಲಿಕೆಯನ್ನಾಗಿ ಮಾಡಬೇಕೆಂಬ ಕೂಗು ಎದ್ದಿತ್ತು.

ಹೀಗಾಗಿ, ಜಿಲ್ಲೆಯವರೇ ಆಗಿರುವ ಸಿದ್ದರಾಮಯ್ಯ ಅವರು ಹಲವಾರು ಯೋಜನೆಗಳನ್ನು ಬಜೆಟ್‌ನಲ್ಲಿ ಘೋಷಣೆ ಮಾಡುವ ಜತೆಗೆ, ಬೃಹತ್ ನಗರಪಾಲಿಕೆಯನ್ನಾಗಿ ಮಾಡುವ ಅಭಯ ನೀಡಿದ್ದರು. ಅದಕ್ಕಾಗಿ,ಮೈಸೂರಿನಲ್ಲೇ ಸಂಸದರು, ಶಾಸಕರು ಸೇರಿದಂತೆ ಅಧಿಕಾರಿಗಳ ಮಹತ್ವದ ಸಭೆ ನಡೆಸಿದ್ದರು.

ನಂತರ ಜನವರಿ ೮ರಂದು ರಾಜ್ಯಪತ್ರ ಹೊರಡಿಸಲಾಗಿತ್ತು. ಬೃಹತ್ ಪಾಲಿಕೆ ರಚನೆ ವಿಚಾರದಲ್ಲಿ ಏನಾದರೂ ಆಕ್ಷೇಪಣೆಗಳಿದ್ದಲ್ಲಿ ಪೌರಾಡಳಿತ ನಿರ್ದೇಶನಾಲಯಕ್ಕೆ ೩೦ದಿನಗಳ ಒಳಗಾಗಿ ಸಲ್ಲಿಸಬಹುದೆಂದು ಪ್ರಕಟಣೆ ಹೊರಡಿಸಿತ್ತು. ಆಕ್ಷೇಪಣೆ ಅವಧಿ ಫೆ.೮ಕ್ಕೆ ಮುಗಿದ ಮೇಲೆ ಈತನಕ ಯಾವುದೇ ಬೆಳವಣಿಗೆಗಳು ನಡೆಯದೇ ಇರುವುದು ಹಲವು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ. ಪೌರಾಡಳಿತ ನಿರ್ದೇಶನಾಲಯ ಹೊರಡಿಸಿರುವ ಆದೇಶದ ಪ್ರಕಾರ ಆಕ್ಷೇಪಣೆ ಗಡುವು ಮುಗಿಯುತ್ತಿದ್ದಂತೆ ರಾಜ್ಯಸರ್ಕಾರ ಅಂತಿಮ ಆದೇಶ ಹೊರಡಿಸಬೇಕಿತ್ತಾದರೂ ಆಂತರಿಕವಾಗಿ ನಡೆದಿರುವ ಕೆಲವು ವಿದ್ಯಮಾನಗಳು ವಿಳಂಬಕ್ಕೆ ಕಾರಣ ಎನ್ನಲಾಗಿದೆ.

ಜನಗಣತಿ ವರದಿ ಅಡ್ಡಿ
ಕೇಂದ್ರ ಸರ್ಕಾರ ದೇಶಾದ್ಯಂತ ನಡೆಸುತ್ತಿರುವ ಜನಗಣತಿ ವರದಿ ಹೊರ ಬೀಳುವ ತನಕ ಅಂತಿಮ ಅಧಿಸೂಚನೆ ಹೊರಡಿಸುವುದು ಅನುಮಾನವಾಗಿದೆ ಎಂದು ಬಲ್ಲ ಮೂಲಗಳು ಹೇಳಿವೆ. ೨೦೧೧ರ ಜನಗಣತಿ ಪ್ರಕಾರ ಮೈಸೂರು ನಗರದಲ್ಲಿ ೯,೨೦,೫೫೦ ಜನಸಂಖ್ಯೆ ಇದ್ದು,ಪ್ರಸ್ತುತ ೧೧,೪೬,೦೬೯ ಜನಸಂಖ್ಯೆ ಇರಬಹುದೆಂದು ಅಂದಾಜಿಸಲಾಗಿದೆ. ಘೋಷಿತವಾಗಿರುವ ಬೃಹತ್ ಮೈಸೂರು ನಗರಪಾಲಿಕೆಯಲ್ಲಿ ೧೪,೧೬,೬೭೧ ಜನಸಂಖ್ಯೆ ಇರಬಹುದು ಎಂದು ಹೇಳಲಾಗಿದೆ. ಜನಗಣತಿ ವರದಿ ಬಂದ ಮೇಲೆ ಮೈಸೂರು ನಗರದ ಜನಸಂಖ್ಯೆಯು ನಿಖರವಾಗಿ ಗೊತ್ತಾಗುವ ಕಾರಣ ಮುಂದಿನ ದಿನಗಳಲ್ಲಿ ಒಂದಿಷ್ಟು ಬದಲಾವಣೆ, ಸೇರ್ಪಡೆ, ವಾರ್ಡುಗಳ ವಿಂಗಡಣೆ ಮೊದಲಾದ ವಿಚಾರಗಳಲ್ಲಿ ನಿರ್ಧರಿಸಬೇಕಿರುವ ಕಾರಣ ಅಲ್ಲಿಯವರೆಗೆ ಅಂತಿಮ ಅಧಿಸೂಚನೆ ಹೊರಡಿವುದು ಅನುಮಾನವಾಗಿದೆ.

ಯಥಾಸ್ಥಿತಿಯಲ್ಲೇ ಸ್ಥಳೀಯ ಸಂಸ್ಥೆಗಳ ಆಡಳಿತ
ಬೃಹತ್ ನಗರಪಾಲಿಕೆಯನ್ನಾಗಿ ಸರ್ಕಾರ ಅಂತಿಮ ಅಽಸೂಚನೆ ಹೊರಡಿಸದ ಕಾರಣ ಮಹಾನಗರಪಾಲಿಕೆ ಸೇರಿದಂತೆ ಸ್ಥಳೀಯ ಸಂಸ್ಥೆಗಳಲ್ಲಿ ಯಥಾಸ್ಥಿತಿ ಮುಂದುವರಿದಿದೆ. ಅಧಿಕಾರಿಗಳ ಬದಲಾವಣೆ ಸೇರಿದಂತೆ ಇನ್ನಿತರ ಕೆಲಸಗಳು ಎಂದಿನಂತೆ ನಡೆಯುತ್ತಿದೆ. ಹೂಟಗಳ್ಳಿ ನಗರಸಭೆ, ಬೋಗಾದಿ, ಶ್ರೀರಾಂಪುರ, ಕಡಕೊಳ, ರಮ್ಮನಹಳ್ಳಿ ಪಪಂ, ಸೇರ್ಪಡೆಗೊಂಡಿರುವ ಗ್ರಾಮ ಪಂಚಾಯಿತಿಗಳ ಅಧಿಕಾರಿಗಳು ಕಾರ್ಯ ನಿರ್ವಹಿಸುತ್ತಿದ್ದಾರೆ. ಪಪಂಗಳಿಗೆ ತಹಸಿಲ್ದಾರ್‌ಗಳನ್ನು ಆಡಳಿತಾಧಿಕಾರಿಗಳನ್ನಾಗಿ, ಗ್ರಾಪಂಗಳಿಗೆ ತಾಲ್ಲೂಕು ಮಟ್ಟದ ಅಧಿಕಾರಿಗಳನ್ನು ಆಡಳಿತಾಧಿಕಾರಿಗಳನ್ನಾಗಿ ನೇಮಿಸಲಾಗಿದೆ.

 

ಆಂದೋಲನ ಡೆಸ್ಕ್

Recent Posts

ಮಕ್ಕಳನ್ನು ಪ್ರಚೋದಿಸಬೇಡಿ, ಸರಿಯಾದ ದಾರಿ ತೋರಿಸಿ: ಪ್ರಧಾನಿ ಮೋದಿ ಮಹತ್ವದ ಸಂದೇಶ

ನವದೆಹಲಿ: ನೀಟ್‌-ಯುಜಿ 2026 ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣದ ಕುರಿತು ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ನಡುವೆ ಪ್ರಧಾನಿ ನರೇಂದ್ರ ಮೋದಿ…

8 hours ago

ಪ್ರಧಾನಿ ನಿವಾಸದ ಎದುರು ರಾಹುಲ್‌, ಪ್ರಿಯಾಂಕಾ ಪ್ರತಿಭಟನೆ

ನವದೆಹಲಿ: ದೆಹಲಿಯಲ್ಲಿ ಸಿಜೆಪಿ ಬೆಂಬಲಿಗರ ಮೇಲಿನ ಪೊಲೀಸರ ಕ್ರಮ ಖಂಡಿಸಿ, ಲೋಕಸಭೆಯ ವಿಪಕ್ಷ ನಾಯಕ ರಾಹುಲ್‌ ಗಾಂಧಿ ಅವರಿಂದು ಪ್ರಧಾನಿ…

9 hours ago

ಖಾಸಗಿ ಆಸ್ಪತ್ರೆಗೆ ಸೋನಮ್‌ ವಾಂಗ್ಚುಕ್‌ ಸ್ಥಳಾಂತರಕ್ಕೆ ದೆಹಲಿ ಹೈಕೋರ್ಟ್‌ ಸೂಚನೆ

ನವದೆಹಲಿ: ಪರೀಕ್ಷಾ ಅಕ್ರಮಗಳ ಆರೋಪದ ಹಿನ್ನೆಲೆಯಲ್ಲಿ ಜೂನ್.‌28ರಿಂದ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಸೋನಮ್‌ ವಾಂಗ್ಚುಕ್‌ ಅವರನ್ನು ಇಲ್ಲಿನ ಸಫ್ದರ್‌ಜಂಗ್‌…

9 hours ago

ಹಾರಂಗಿ ಜಲಾಶಯ ಭರ್ತಿಗೆ 8 ಅಡಿ ಬಾಕಿ: ಅನ್ನದಾತರ ಮೊಗದಲ್ಲಿ ಮಂದಹಾಸ

ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಮುಂಗಾರು ಮಳೆಯ ಆರ್ಭಟ ಮುಂದುವರಿದಿದ್ದು, ಹಾರಂಗಿ ಜಲಾಶಯಕ್ಕೆ ಒಳಹರಿವು ಹೆಚ್ಚಾಗಿದೆ. ಹಾರಂಗಿ ಜಲಾಶಯಕ್ಕೆ 3 ಸಾವಿರಕ್ಕೂ…

10 hours ago

ಹುಣಸೂರು: ಇಬ್ಬರು ಮಕ್ಕಳು, ಹೆಂಡತಿಯನ್ನು ಕೊಂದು ಪತಿ ಆತ್ಮಹತ್ಯೆ

ಮೈಸೂರು: ಇಬ್ಬರು ಮಕ್ಕಳು ಹಾಗೂ ಹೆಂಡತಿಯನ್ನು ಕೊಂದು ಬಳಿಕ ಪತಿಯೂ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಮೈಸೂರು ಜಿಲ್ಲೆಯ ಹುಣಸೂರಿನಲ್ಲಿ ನಡೆದಿದೆ.…

10 hours ago

ಇಂದು ಚಲೋ ಸಂಸದ್ ಮುಂದುವರಿಯಲಿದೆ: ಅಭಿಜಿತ್‌ ದೀಪ್ಕೆ ಘೋಷಣೆ

ನವದೆಹಲಿ: ಇಂದು ತಮ್ಮ ಪ್ರತಿಭಟನೆ ಹಾಗು ಚಲೋ ಸಂಸದ್‌ ಮುಂದುವರಿಯಲಿದೆ ಎಂದು ಕಾಕ್ರೋಚ್‌ ಜನತಾ ಪಾರ್ಟಿ ಸಂಸ್ಥಾಪಕ ಅಭಿಜಿತ್‌ ದೀಪ್ಕೆ…

13 hours ago