Andolana originals

ಬಜೆಟ್; ಚಾಮರಾಜನಗರ ಜಿಲ್ಲೆಯ ಜನರಿಗಿದೆ ಬಹಳಷ್ಟು ನಿರೀಕ್ಷೆ

ಪ್ರಸಾದ್ ಲಕ್ಕೂರು

ಚಾ.ನಗರ ಜಿಲ್ಲೆಗೆ ವಿಶೇಷ ಪ್ಯಾಕೇಜ್ ಘೋಷಣೆ, ಎಂಸಿಡಿಸಿಸಿ ಬ್ಯಾಂಕ್ ರಚನೆ ಸೇರಿ ಹಲವು ಆಶಾಭಾವನೆ

ಚಾಮರಾಜನಗರ: ರಾಜ್ಯ ಬಜೆಟ್ ಮಂಡನೆಗೆ ದಿನಗಣನೆ ಆರಂಭವಾಗಿದ್ದು, ಮಾ.೬ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಡಿಸಲಿರುವ ಬಜೆಟ್‌ನಲ್ಲಿ ಜಿಲ್ಲೆಯ ಅಭಿವೃದ್ಧಿಗೆ ಹಲವು ಯೋಜನೆಗಳು ಮತ್ತು ಕಾರ್ಯಕ್ರಮಗಳನ್ನು ಘೋಷಿಸಬಹುದು ಎಂದು ಜಿಲ್ಲೆಯ ಜನರು ನಿರೀಕ್ಷೆ ಇಟ್ಟುಕೊಂಡಿದ್ದಾರೆ.

ನೆರೆಯ ಮೈಸೂರು ಜಿಲ್ಲೆಯವರಾದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ೨೦೧೩ರಲ್ಲಿ ಮುಖ್ಯಮಂತ್ರಿಯಾಗಿದ್ದಾಗ ೩ ಸಾವಿರ ಕೋಟಿ ರೂ.ಗಳಿಗೂ ಹೆಚ್ಚು ಅನುದಾನವನ್ನು ಜಿಲ್ಲೆಯ ಅಭಿ ವೃದ್ಧಿಗೆ ನೀಡಿ ಕಾಳಜಿ ವಹಿಸಿದ್ದರು. ಜಿಲ್ಲೆಯ ಸ್ಥಿತಿಗತಿಯ ಕುರಿತು ಸಿದ್ದರಾಮಯ್ಯ ಅವರಿಗೆ ಅರಿವಿದೆ. ಹಾಗಾಗಿ ಜಿಲ್ಲೆಗೆ ಏನಾದರೂ ಕೊಡುಗೆಗಳನ್ನು ನೀಡಲಿದ್ದಾರೆ ಎಂಬ ಆಶಾಭಾವನೆಯನ್ನು ಜನರು ಹೊಂದಿದ್ದಾರೆ.

೨೦೨೫ರ ಏಪ್ರಿಲ್ ೨೪ರಂದು ಜಿಲ್ಲೆಯ ಯಾತ್ರಾಸ್ಥಳವಾದ ಮಲೆ ಮಹದೇಶ್ವರ ಬೆಟ್ಟದಲ್ಲಿ ಪ್ರಥಮ ಬಾರಿಗೆ ಮೈಸೂರು ವಿಭಾಗೀಯ ಮಟ್ಟದ ಮಹತ್ವದ ಸಚಿವ ಸಂಪುಟ ಸಭೆ ನಡೆಸಿ ೩೬೪೭.೬೨ ಕೋಟಿ ರೂ.ಗಳ ಅಭಿವೃದ್ಧಿ ಕಾಮಗಾರಿಗಳಿಗೆ ಅನುಮೋದನೆ ನೀಡಿದ್ದರು.

ಅದರಲ್ಲಿ ಹಲವಾರು ಯೋಜನೆಗಳು ಹಾಗೂ ಕಾರ್ಯ ಕ್ರಮಗಳನ್ನು ಜಿಲ್ಲೆಗೆ ಘೋಷಿಸಿದ್ದರು. ಮುಖ್ಯಮಂತ್ರಿಗಳ ಈ ನಡೆಯ ಬಗ್ಗೆ ಭಾರಿ ಮೆಚ್ಚುಗೆ ವ್ಯಕ್ತವಾಗಿತ್ತು. ಜಿಲ್ಲೆಯು ಹಿಂದಿನಿಂದಲೂ ಕಾಂಗ್ರೆಸ್ ಭದ್ರಕೋಟೆ. ಚಾಮರಾಜನಗರ, ಗುಂಡ್ಲುಪೇಟೆ, ಕೊಳ್ಳೇಗಾಲ ವಿಧಾನಸಭೆ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳೇ ಗೆದ್ದಿದ್ದಾರೆ. ಹನೂರು ವಿಧಾನಸಭೆ ಕ್ಷೇತ್ರದಲ್ಲಿ ಮಾತ್ರ ಜಾ.ದಳ ಅಭ್ಯರ್ಥಿ ಜಯಗಳಿಸಿದ್ದಾರೆ. ಕಾಂಗ್ರೆಸ್‌ನಿಂದ ಸಂಸದರನ್ನು ಕೂಡ ಆಯ್ಕೆ ಮಾಡಿದ್ದಾರೆ. ಜಿಲ್ಲೆಯ ಜನತೆ ಹೆಚ್ಚು ಬಾರಿ ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸಿದ್ದಾರೆ.

ಚಾಮರಾಜನಗರಕ್ಕೆ ಭೇಟಿ ನೀಡಿದ ಮುಖ್ಯಮಂತ್ರಿಗಳು ಅಧಿಕಾರ ಕಳೆದುಕೊಳ್ಳಲಿದ್ದಾರೆ ಎಂಬ ಮೌಢ್ಯವನ್ನು ಅಳಿಸಿ ಹಾಕಿದ ಕೀರ್ತಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಸಲ್ಲಲಿದೆ. ಅವರು ಹತ್ತು ಹಲವು ಬಾರಿ ಚಾಮರಾಜನಗರಕ್ಕೆ ಭೇಟಿ ನೀಡಿದ್ದಾರೆ. ಚಾಮರಾಜನಗರಕ್ಕೆ ಬಂದು ಹೋದರೆ ನನ್ನ ಪದವಿ ಗಟ್ಟಿಯಾಗುತ್ತದೆ ಎಂದು ಹೇಳುತ್ತಲೇ ಇದ್ದಾರೆ. ಹೀಗೆ ಜಿಲ್ಲೆಯ ಬಗ್ಗೆ ಪ್ರೀತಿ ಇಟ್ಟುಕೊಂಡಿರುವ ಸಿದ್ದರಾಮಯ್ಯ ಅವರು ಮಂಡಿಸುವ ಬಜೆಟ್ ಬಗ್ಗೆ ಜಿಲ್ಲೆಯ ಜನರು] ಬಹಳಷ್ಟು ನಿರೀಕ್ಷೆ ಇಟ್ಟುಕೊಂಡಿದ್ದಾರೆ.

ಕಳೆದ ಬಾರಿ ಬಜೆಟ್‌ನಲ್ಲಿ ಜಿಲ್ಲೆಯ ಹೊಸ ತಾಲ್ಲೂಕಾದ ಹನೂರಿನ ಅಭಿವೃದ್ಧಿಗೆ ೩ ಯೋಜನೆಗಳನ್ನು ಸೇರಿಸಿದ್ದರು. ಹನೂರು ಪಟ್ಟಣದಲ್ಲಿ ಪ್ರಜಾಸೌಧ ನಿರ್ಮಾಣ, ಪ್ರಾಥಮಿಕ ಆರೋಗ್ಯ ಕೇಂದ್ರ ಸಮುದಾಯ ಆರೋಗ್ಯ ಕೇಂದ್ರವಾಗಿಮೇಲ್ದರ್ಜೆಗೆ ಏರಿಕೆ, ಜಿಲ್ಲೆಯ ೫ ವಸತಿ ಶಾಲೆಗಳನ್ನು ದ್ವಿತೀಯ ಪಿಯುಸಿ ತನಕ ಮೇಲ್ದರ್ಜೆಗೆ ಏರಿಸುವುದು, ಕೆ-ಶಿಪ್-೪ ಯೋಜನೆ ಯಡಿ ಹನೂರು-ರಾಮಾಪುರ-ಪಾಲಾರ್ ರಸ್ತೆ ಅಭಿವೃದ್ಧಿಪಡಿಸುವುದಾಗಿ ಪ್ರಸ್ತಾಪಿಸಿದ್ದರು. ಚಾ.ನಗರದ ಡಾ.ಅಂಬೇಡ್ಕರ್ ಜಿಲ್ಲಾ ಕ್ರೀಡಾಂಗಣದಲ್ಲಿ ಒಲಿಂಪಿಕ್ಸ್ ಮಾದರಿಯ ಈಜುಕೊಳ, ನಗರದಲ್ಲಿ ಸ್ವಯಂ ಚಾಲಿತ ಪರೀಕ್ಷಾ ಪಥ ನಿರ್ಮಾಣ ಮಾಡುವುದಾಗಿ ಘೋಷಿಸಿದ್ದರು.

ಆಂದೋಲನ ಡೆಸ್ಕ್

Recent Posts

ಕಾರ್ಮಿಕರ ಮೇಲೆ ಕಾಡಾನೆ ದಾಳಿ: ಒಬ್ಬ ಸಾವು, ಮತ್ತೊಬ್ಬನ ಸ್ಥಿತಿ ಗಂಭೀರ

ಕೊಡಗು: ಸಿದ್ದಾಪುರ ವ್ಯಾಪ್ತಿಯ ಶಿಲ್ಪ ಎಸ್ಟೇಟ್‌ನಲ್ಲಿ ಕೆಲಸ ನಿರ್ವಹಿಸುತ್ತಿದ್ದ ಕಾರ್ಮಿಕರ ಮೇಲೆ ಕಾಡಾನೆ ಏಕಾಏಕಿ ದಾಳಿ ನಡೆಸಿದೆ. ಬಂಗಾಳ ಮೂಲದ…

2 hours ago

ಕಾವೇರಿ ವನ್ಯಜೀವಿಧಾಮದಲ್ಲಿ ಎನ್‌ಕೌಂಟರ್: ಮೃತ 3 ಕುಟುಂಬಗಳಿಗೆ ಶಾಸಕ ಎಂ.ಆರ್. ಮಂಜುನಾಥ್ 15 ಲಕ್ಷ ಪರಿಹಾರ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳ ಗುಂಡಿನ ದಾಳಿಗೆ ಬಲಿಯಾಗಿದ್ದ…

2 hours ago

ಹನೂರಿನಲ್ಲಿ ಮೂವರ ಎನ್‌ಕೌಂಟರ್ ಪ್ರಕರಣ: ಘಟನಾ ಸ್ಥಳಕ್ಕೆ ತನಿಖಾ ತಂಡ ಭೇಟಿ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಕಾವೇರಿ ವನ್ಯಜೀವಿ ಧಾಮ ವ್ಯಾಪ್ತಿಯಲ್ಲಿ ನಡೆದ ಎನ್‌ಕೌಂಟರ್ ಘಟನೆಯ…

3 hours ago

ವಿಚಾರಣೆ ಇಲ್ಲದೆ ಶಿಕ್ಷೆ ಕೊಡಲು ಸಂವಿಧಾನ ಒಪ್ಪುವುದಿಲ್ಲ

ಚಾಮರಾಜನಗರ ಜಿಲ್ಲೆಯ ಹನೂರು ತಾಲ್ಲೂಕಿನ ಕಾವೇರಿ ವನ್ಯಜೀವಿಧಾಮದ ಹನೂರು ವಲಯದ ಶಾಗ್ಯ ಬೀಟ್ ವ್ಯಾಪ್ತಿಯ ಹೊಳೆಮುರಿ ದಟ್ಟಿ ಅರಣ್ಯ ಪ್ರದೇಶದಲ್ಲಿ…

6 hours ago

ಆ ಮೂರು ಜೀವಗಳಿಗೂ ಬೆಲೆಯೇ ಇರಲಿಲ್ಲವೇ?

ಅನ್ಬುರಾಜ್ ಅರಣ್ಯ ಇಲಾಖೆ ಮತ್ತೆ ತನ್ನ ಇತಿಹಾಸವನ್ನು ಹಿಂದಕ್ಕೆ ಕೊಂಡೊಯ್ಯುತ್ತಿರುವಂತೆ ಕಾಣುತ್ತಿದೆ. ಜನವಿರೋಧಿ ಧೋರಣೆಯನ್ನು ಅನುಸರಿಸಿ, ಅರಣ್ಯದ ಅಂಚಿನಲ್ಲಿ ವಾಸಿಸುವ…

6 hours ago

ಅಸಮಾಧಾನದ ಬೇಗೆ: ಸಿಎಂ ಡಿಕೆಶಿಗೆ ಹೈಕಮಾಂಡ್ ‘ಎಸಿ’

ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ರಾಜ್ಯ ಕಾಂಗ್ರೆಸ್‌ನಲ್ಲಿ ಪರ್ಯಾಯ ಶಕ್ತಿ ಕೇಂದ್ರ ತಲೆ ಎತ್ತುತ್ತದೆಯೇ? ಇಂತಹದೊಂದು ಪ್ರಶ್ನೆಗೆ ತಕ್ಷಣ ಉತ್ತರ…

6 hours ago