Andolana originals

ಬಸ್‌ಗಾಗಿ ಪ್ರತಿನಿತ್ಯ ಬಸವಳಿಯುವ ಪ್ರಯಾಣಿಕರು

ಪ್ರಶಾಂತ್ ಎಸ್.

ಮೈಸೂರು: ಕೊರೊನಾ ಸಂದರ್ಭದಲ್ಲಿ ಜಿಲ್ಲೆಯಹಲವೆಡೆ ಕಡಿತಗೊಳಿಸಲಾಗಿದ್ದ ಒಟ್ಟು ೧೧೦ ಬಸ್ ಮಾರ್ಗಗಳ ಸೇವೆಯನ್ನು ಐದು ವರ್ಷಗಳಾದರೂ ಪರಿಷ್ಕರಿಸದ ಕಾರಣದಿಂದಾಗಿ ಪ್ರಯಾಣಕ್ಕೆ ಬಸ್ಗಳನ್ನೇ ಅವಲಂಬಿಸಿರುವ ಜಿಲ್ಲೆಯ ಸರಗೂರು, ಎಚ್.ಡಿ.ಕೋಟೆ ಮತ್ತಿತರ ಪ್ರದೇಶಗಳಲ್ಲಿನ ವಿದ್ಯಾರ್ಥಿಗಳು, ಉದ್ಯೋಗಿಗಳು, ಸಾರ್ವಜನಿಕರು ಸರಿಯಾದ ಸಮಯಕ್ಕೆ ಬಸ್ ಸಿಗದೆ ಗಂಟೆಗಟ್ಟಲೆ ಕಾದು ನಿಲ್ಲುವಂತಹ ಸ್ಥಿತಿ ನಿರ್ಮಾಣವಾಗಿದೆ.

ಮೈಸೂರು ವಿಭಾಗದಲ್ಲಿ ಕೇವಲ ೧,೦೭೨ ಬಸ್ಗಳ ಸೇವೆಯನ್ನು ಮಾತ್ರ ಒದಗಿಸಲಾಗಿತ್ತು. ಇದೀಗ ಪರಿಸ್ಥಿತಿ ಸಹಜ ಸ್ಥಿತಿಗೆ ಮರಳಿದರೂ ಮೊದಲಿನಂತೆ ಸಾರಿಗೆ ಸೇವೆಯನ್ನು ಕಲ್ಪಿಸಲಾಗಿಲ್ಲ. ಸಂಜೆ ವೇಳೆ ಬಸ್‌ಗಳು ಮೈಸೂರಿನಿಂದಲೂ ಲಭ್ಯವಿಲ್ಲದ ಕಾರಣದಿಂದ ಅಥವಾ ಬರುವ ಒಂದಷ್ಟು ಬಸ್‌ಗಳಲ್ಲಿ ಹೆಚ್ಚು ಪ್ರಯಾಣಿಕರ ಒತ್ತಡದಿಂದ ತಮ್ಮ ಊರು ಗಳನ್ನು ತಲುಪಲು ಜನರು ಪರದಾಡುವಂತಾಗಿದೆ.

ಬಸ್‌ಗಳ ಕೊರತೆಗೆ ಕಾರಣ: ಗ್ರಾಮಾಂತರ ಭಾಗಗಳಲ್ಲಿ ೩೦ಕ್ಕೂ ಹೆಚ್ಚು ಬಸ್‌ಗಳ ಕೊರತೆ ಇದ್ದರೆ, ನಗರ ಸಾರಿಗೆಯಲ್ಲೂ ಇದೇ ಪರಿಸ್ಥಿತಿ ಮುಂದುವರಿದಿದೆ. ಇಲ್ಲೂ ಕೂಡ ಎಲ್ಲ ಕಡೆಗೆ ಸಮರ್ಪಕ ಬಸ್ ವ್ಯವಸ್ಥೆಯನ್ನು ಇನ್ನೂ ಕಲ್ಪಿಸಲಾಗಿಲ್ಲ. ಹೀಗಾಗಿ ಗ್ರಾಮೀಣ ಪ್ರದೇಶದ ಜನರ ಜತೆ ನಗರವಾಸಿಗಳೂ ಸಂಚರಿಸಲು ಬಸ್ಗಳ ಸಮಸ್ಯೆ ಎದುರಿಸುತ್ತಿದ್ದಾರೆ. ಮೈಸೂರು ಜಿಲ್ಲೆಯಾದ್ಯಂತ ೧.೨೫ ಲಕ್ಷ ವಿದ್ಯಾರ್ಥಿಗಳಿದ್ದು ಇವರೆಲ್ಲರಿಗೂ ಉನ್ನತ ಶಿಕ್ಷಣ ಕಲಿಕೆಗೆ ಮೈಸೂರು ನಗರ ಕೇಂದ್ರವಾಗಿರುವ ಕಾರಣ, ಗ್ರಾಮೀಣ ಪ್ರದೇಶದ ಸಾಕಷ್ಟು ವಿದ್ಯಾರ್ಥಿಗಳು ದಿನನಿತ್ಯ ಮೈಸೂರಿಗೆ ಆಗಮಿಸುತ್ತಾರೆ. ಇಷ್ಟೇ ಅಲ್ಲದೆ ಉದ್ಯೋಗ ಅರಸಿ ನಗರದ ಕಡೆಗೆ ನೂರಾರು ಕೂಲಿ ಕಾರ್ಮಿಕರು ಬರುತ್ತಿದ್ದಾರೆ. ಇವರೆಲ್ಲರಿಗೂ ಉತ್ತಮ ಸಾರಿಗೆ ವ್ಯವಸ್ಥೆಯನ್ನು ಕಲ್ಪಿಸಬೇಕಾಗಿರುವುದು ಕೆಎಸ್‌ಆರ್‌ಟಿಸಿ ನಿಗಮದ ಪ್ರಮುಖ ಜವಾಬ್ದಾರಿಯಾಗಿದೆ.

ಶಕ್ತಿ ಯೋಜನೆಯ ಫಲಾನುಭವಿಗಳೇ ಹೆಚ್ಚು : ರಾಜ್ಯ ಸರ್ಕಾರದಿಂದ ಪಂಚ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಶಕ್ತಿ ಯೋಜನೆ ಜಾರಿ ಆದ ಬಳಿಕ ಗ್ರಾಮಾಂತರ ಮತ್ತು ನಗರ ಸಾರಿಗೆ ಬಸ್ಗಳಲ್ಲಿ ಮಹಿಳಾ ಪ್ರಯಾಣಿಕರ ಸಂಖ್ಯೆ ಹೆಚ್ಚಿದೆ. ಇದರಿಂದ ವಿದ್ಯಾರ್ಥಿಗಳ ಸಂಚಾರಕ್ಕೆ ಒಂದಷ್ಟು ಅನನುಕೂಲ ಉಂಟಾಗಿದೆ. ಸಕಾಲಕ್ಕೆ ಬಸ್ ಬಾರದಿರುವುದರಿಂದ ಬ್ಯಾಗುಗಳನ್ನು ಹೊತ್ತು ನಿಂತು ಬಸವಳಿದ ಶಾಲಾ ಮಕ್ಕಳು ಬಸ್ ಬಂದಾಕ್ಷಣ ಜನರ ನೂಕು ನುಗ್ಗಲಿನ ನಡುವೆ ಬಸ್ ಹತ್ತಲು ಹರಸಾಹಸ ಪಡುವಂತಾಗಿದೆ. ಈ ಸಮಸ್ಯೆಯನ್ನು ನೀಗಿಸಲು ಸಾರಿಗೆ ನಿಗಮ ಹೆಚ್ಚುವರಿ ಬಸ್‌ಗಳ ಸೇವೆಯನ್ನು ಒದಗಿಸುವ ಅಗತ್ಯವಿದೆ.

” ಜಿಲ್ಲೆಯಲ್ಲಿ ಸಾರ್ವಜನಿಕರಿಗೆ ಬಸ್ ವ್ಯವಸ್ಥೆ ಸರಿಯಾದ ರೀತಿಯಲ್ಲಿದೆ. ’ಶಕ್ತಿ’ ಯೋಜನೆಯಡಿ ಪ್ರಯಾಣಿಸುವ ಮಹಿಳೆಯರ ಸಂಖ್ಯೆಯೂ ಹೆಚ್ಚಿದೆ. ಹಾಗಾಗಿ ಸ್ವಲ್ಪ ಮಟ್ಟಿಗೆ ಸಮಸ್ಯೆ ಆಗಿರಬಹುದು. ಅದನ್ನು ಪರಿಶೀಲಿಸಿ ಪ್ರಯಾಣಿಕರಿಗೆ ಸರಿಯಾದ ವ್ಯವಸ್ಥೆ ಮಾಡುತ್ತೇವೆ.”

ಶ್ರೀನಿವಾಸ್, ಕೆಎಸ್‌ಆರ್‌ಟಿಸಿ ವಿಭಾಗೀಯ ನಿಯಂತ್ರಣಾಧಿಕಾರಿ,ಮೈಸೂರು

” ಶಕ್ತಿ ಯೋಜನೆ ಉತ್ತಮವಾಗಿದೆ. ಆದರೆಈ ಯೋಜನೆ ಜಾರಿಯಾದ ಬಳಿಕ ಮಹಿಳಾ ಪ್ರಯಾಣಿಕರ ಸಂಖ್ಯೆ ಹೆಚ್ಚಾಗಿದೆ. ಹಾಗಾಗಿ ಬಸ್‌ಗಳ ಸಮಸ್ಯೆ ಹೆಚ್ಚಿದ್ದು ಇನ್ನಷ್ಟು ಹೆಚ್ಚುವರಿ ಬಸ್‌ಗಳನ್ನು ರಾತ್ರಿ ೭ ಗಂಟೆ ನಂತರ ನಿಯೋಜನೆ ಮಾಡಿದರೆ ಪ್ರಯಾಣಿಕರಿಗೆ ಅನುಕೂಲ ಆಗುತ್ತದೆ.”

-ಸುನಿಲ್, ಪ್ರಯಾಣಿಕ 

ಆಂದೋಲನ ಡೆಸ್ಕ್

Recent Posts

ಶಿಕ್ಷಣ ವ್ಯವಸ್ಥೆ ಸುಧಾರಣೆಗೆ ಸರ್ಕಾರ ಮಣಿಸಿದ ಜೆನ್ ಝೀ ಚಳವಳಿ

ದೇಶ ಆಳುವ ವರ್ಗದ ಏಕಚಕ್ರಾಧಿಪತ್ಯವನ್ನು ವಿರೋಧಿಸಿ ನಡೆದ ಚಳವಳಿ ಸರ್ಕಾರವನ್ನು ಮಂಡಿಯೂರುವಂತೆ ಮಾಡಿದೆ. ದೇಶಾದ್ಯಂತ ಕಾಕ್ರೋಚ್ ಜನತಾ ಪಾರ್ಟಿ ನೇತೃತ್ವದಲ್ಲಿ…

3 hours ago

ಸಂಪುಟ ವಿಸ್ತರಣೆ ವಿಳಂಬ; ಡಿಕೆಶಿ ಅಸಮಾಧಾನ

ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ಸರ್ಕಾರ ಟೇಕಾಫ್ ಆಗಲು ಪೂರ್ಣ ಪ್ರಮಾಣದ ಸಚಿವ ಸಂಪುಟ ರಚನೆ ಅನಿವಾರ್ಯ ಕಳೆದ ವಾರ…

3 hours ago

ಕೃಷಿಗೆ ನೀರಿಲ್ಲ ಎಂಬ ಆದೇಶದಿಂದ ರೈತರು ಕಂಗಾಲು

ಆನಂದ್ ಹೊಸೂರು ಚುಂಚನಕಟ್ಟೆ ಹೋಬಳಿಯಲ್ಲಿ ಭತ್ತ ಬೆಳೆಯುತ್ತಿದ್ದ ರೈತರಿಗೆ ಈಗ ಸಂಕಷ್ಟದ ಸ್ಥಿತಿ ಹೊಸೂರು: ಕಾವೇರಿ ನೀರು ಕುಡಿಯಲು ಮಾತ್ರ,…

3 hours ago

ರಸ್ತೆ ಬದಿ ಅಗೆದು ಹಾಗೆಯೇ ಬಿಟ್ಟ ಗುತ್ತಿಗೆದಾರರು

ಮಹೇಂದ್ರ ಹಸಗೂಲಿ ಸಂಚಾರಕ್ಕೆ ಅಡಚಣೆ; ಬಿಎಸ್‌ಎನ್‌ಎಲ್ ಗುತ್ತಿಗೆದಾರರ ವಿರುದ್ಧ ಕ್ರಮಕ್ಕೆ ಸಾರ್ವಜನಿಕರ ಒತ್ತಾಯ ಗುಂಡ್ಲುಪೇಟೆ: ಬಿಎಸ್‌ಎನ್‌ಎಲ್‌ನಿಂದ ನೇಮಿಸಲ್ಪಟ್ಟಿರುವ ಗುತ್ತಿಗೆದಾರರು ಕೇಬಲ್…

4 hours ago

ಎಕ್ಸ್ ಬಿಟ್ಟು ಇನ್‌ಸ್ಟಾ ಹಿಡಿದ ರಾಜಕಾರಣ : ಮೋದಿಗೆ ಜೆನ್-ಝೀ ಕಾಟ

ನವದೆಹಲಿ : ದೇಶದ ರಾಜಕೀಯದ ಭಾಷೆ ಬದಲಾಗುತ್ತಿದೆ. ಒಮ್ಮೆ ಟ್ವಿಟರ್, ಈಗಿನ ಎಕ್ಸ್‌ನಲ್ಲಿ ನಡೆಯುತ್ತಿದ್ದ ವಾಗ್ವಾದ, ಟ್ರೆಂಡ್‌ಗಳು ಈಗ ಇನ್‌ಸ್ಟಾಗ್ರಾಂ…

16 hours ago