Andolana originals

ಬಸ್ ಟಿಕೆಟ್ ದರ ಏರಿಕೆ ಬಿಸಿ; ಪ್ರಯಾಣಿಕರಿಗೆ ಕಸಿವಿಸಿ

ರಾಜ್ಯ ಸರ್ಕಾರದ ವಿರುದ್ಧ ಹಿಡಿಶಾಪ ಹಾಕುತ್ತಿರುವ ಪ್ರಯಾಣಿಕರು

ಹೊಸ ವರ್ಷದ ಸಂಭ್ರಮದಲ್ಲಿದ್ದ ಜನತೆಗೆ ಬಸ್ ಟಿಕೆಟ್ ದರ ಏರಿಕೆ ಬರೆ ಎಳೆದಿದ್ದು, ಶೇ.೧೫ರಷ್ಟು ಏರಿಕೆ ಮಾಡಿರು ವುದಕ್ಕೆ ಸಾರ್ವಜನಿಕ ವಲಯದಲ್ಲಿ ಆಕ್ಷೇಪ ವ್ಯಕ್ತವಾಗಿದೆ. ಗ್ಯಾರಂಟಿ ಯೋಜನೆಗಳಿಂದ ಉಂಟಾಗಿರುವ ನಷ್ಟ ಸರಿದೂಗಿಸಲು ಸರ್ಕಾರ ಈ ಕ್ರಮಕ್ಕೆ ಮುಂದಾಗಿದೆ ಎನ್ನುವ ಮಾತುಗಳು ವ್ಯಾಪಾಕವಾಗಿ ಕೇಳಿಬರುತ್ತಿದ್ದು, ಸಾರ್ವಜನಿಕರು ಆಕ್ರೋಶ ಹೊರ ಹಾಕಿದ್ದಾರೆ.

ಸಾರಿಗೆ ಸಂಸ್ಥೆಗಳ ಆರ್ಥಿಕ ನಷ್ಟ ಸರಿದೂಗಿಸಲು ಸರ್ಕಾರ ಶಕ್ತಿ ಯೋಜನೆಯ ಹಣವನ್ನು ಕೆಎಸ್‌ಆರ್‌ಟಿಸಿಗೆ ನೀಡಿದರೆ ದರ ಏರಿಕೆ ಮಾಡುವ ಪ್ರಮೇಯ ಇರುವುದಿಲ್ಲ. ಹಾಗಾಗಿ ಈ ಹೊರೆಯನ್ನು ಸಾಮಾನ್ಯ ಪ್ರಯಾಣಿಕರ ಮೇಲೆ ಹೇರುವುದು ಸರಿಯಿಲ್ಲ.

-ಉಮಾ ಅನಿಲ್, ಮಳವಳ್ಳಿ.

ಮಹಿಳೆಯರ ಉಚಿತ ಪ್ರಯಾಣದಿಂದ ಉಂಟಾಗಿರುವ ನಷ್ಟ ಸರಿದೂಗಿಸಲು ಸರ್ಕಾರ ಈ ಕ್ರಮಕ್ಕೆ ಮುಂದಾಗಿದೆ. ಬಸ್ ಪ್ರಯಾಣ ದರ ಹೆಚ್ಚಳ ವಿದ್ಯಾರ್ಥಿಗಳ ಮೇಲೆ ಬರೆ ಎಳೆದಂತಾಗಿದೆ. ದರ ಹೆಚ್ಚಳದಿಂದ ವಿದ್ಯಾರ್ಥಿಗಳ ಬಸ್ ಪಾಸ್ ದರಕ್ಕೂ ಹೆಚ್ಚಿನ ಹೊರೆಯಾಗಲಿದೆ.

-ಸಿದ್ದರಾಜು, ಖಾಸಗಿ ಶಾಲೆ ಶಿಕ್ಷಕ

ಬಸ್ ದರವನ್ನು ಮತ್ತೇ ಹೆಚ್ಚಳ ಮಾಡಿರುವುದು ಸರಿಯಲ್ಲ. ಮಹಿಳೆಯರಿಗೆ ಉಚಿತ ಮಾಡಿರುವುದು ಸರಿ. ಆದರೆ, ಮತ್ತೇ ದರ ಹೆಚ್ಚಿಸಿ ಸಾರ್ವಜನಿಕರನ್ನು ಸಂಕಷ್ಟಕ್ಕೆ ಸಿಲುಕಿಸಿದ್ದಾರೆ. ಈ ವ್ಯವಸ್ಥೆಯನ್ನು ಸ್ಥಗಿತಗೊಳಿಸಿ ಪ್ರಸ್ತುತ ಇರುವ ದರವನ್ನೇ ಮುಂದುವರಿಸಿದರೆ ಅನುಕೂಲವಾಗುತ್ತದೆ.

-ರಾಜು, ಸರಗೂರು

ವ್ಯಾಪಾರಕ್ಕಾಗಿ ಹಳ್ಳಿಯಿಂದ ಮೈಸೂರಿಗೆ ಬಂದುಅದರಲ್ಲಿ ಬಂದ ಲಾಭದಲ್ಲಿ ಊರಿಗೆ ಹೋಗುತ್ತೇವೆ. ಸದ್ಯ ಟಿಕೆಟ್ ದರ ಹೆಚ್ಚಳ ಮಾಡಿರುವುದರಿಂದ ಊಟಕ್ಕೆ ಖರ್ಚು ಮಾಡಿದರೆ ಬಸ್ ಚಾರ್ಜ್‌ಗೆ ಹಣ ಇರಲ್ಲ. ಹಾಗಾಗಿ ಇರುವ ದರವನ್ನೇ ಮುಂದುವರಿಸಿದರೆ ಸಮಸ್ಯೆ ಇರುವುದಿಲ್ಲ.

-ಸುನಿಲ್, ವ್ಯಾಪಾರಸ್ಥರು.

ಶಕ್ತಿ ಯೋಜನೆಯಡಿ ಮಹಿಳೆಯರಿಗೆ ಉಚಿತ ಪ್ರಯಾಣಕ್ಕೆ ಅವಕಾಶ ನೀಡಿರುವುದು ಸ್ವಾಗತಾರ್ಹ. ಸದ್ಯ ಬಸ್ ಪ್ರಯಾಣ ದರ ಹೆಚ್ಚಿಸಿರುವುದರಿಂದ ಸಾರ್ವಜನಿಕರು ಖಾಸಗಿ ವಾಹನಗಳ ದರ ಕಡಿಮೆ ಇರುವುದರಿಂದ ಅತ್ತ ಮುಖ ಮಾಡಿದ್ದಾರೆ.

-ದೀಪಕ್ ಕಿರಣ್, ಮೈಸೂರು.

ನಾವು ಸಿಬ್ಬಂದಿಯಾಗಿ ಕೆಲಸ ಮಾಡುತ್ತಿದ್ದೇವೆ. ಪ್ರಯಾಣಿಕರಿಗೆ ಉತ್ತಮ ಸೇವೆ ಕೊಡುವುದಷ್ಟೇ ನಮ್ಮ ಕೆಲಸ. ಬಸ್ ದರ ಹೆಚ್ಚಳ ಅಥವಾ ಕಡಿಮೆ ಮಾಡುವುದರ ಸಂಬಂಧ ನಮಗೆ ಗೊತ್ತಿರು ವುದಿಲ್ಲ. ಮೇಲಾಧಿಕಾರಿಗಳ ಮಾರ್ಗದರ್ಶನದಲ್ಲಿ ನಾವು ಕರ್ತವ್ಯ ನಿರ್ವಹಿಸುತ್ತಿದ್ದೇವೆ.

-ನಾಗಣ್ಣ ಬಂಗಾರಗುಂಡ, ಚಾಲಕ ಕಂ ನಿರ್ವಾಹಕ

ಕೆಎಸ್‌ಆರ್‌ಟಿಸಿ ಬಸ್ ಪ್ರಯಾಣ ದರಕ್ಕಿಂತ ಖಾಸಗಿ ವಾಹನದ ದರ ಕಡಿಮೆ ಇದ್ದು, ಇನ್ನು ಮುಂದೆ ಅದರಲ್ಲಿ ಯೇ ಓಡಾಡುವಂತಹ ಸ್ಥಿತಿ ನಿರ್ಮಾಣವಾಗುತ್ತದೆ. ದರ ಹೆಚ್ಚಿಸುವ ಬದಲು ಮಹಿಳೆಯರಿಗೆ ನೀಡಿರುವ ಉಚಿತ ಪ್ರಯಾಣ ಯೋಜನೆಯನ್ನು ರದ್ದು ಮಾಡಿ ಅವರಿಗೆ ಕಡಿಮೆ ದರ ನಿಗದಿ ಮಾಡಿದರೆ ಉತ್ತಮ.

 -ಬಲರಾಮ್, ಪ್ರಯಾಣಿಕ.

ಉಚಿತಗಳ ಆಮಿಷವೊಡ್ಡಿ ಅಧಿಕಾರಕ್ಕೆ ಬಂದ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಈಗ ಏಕಾಏಕಿ ಬಸ್ ಪ್ರಯಾಣ ದರವನ್ನು ಏರಿಸಿ ಜನಸಾಮಾನ್ಯರ ಬದುಕಿಗೆ ಬರೆ ಎಳೆದಿದೆ. ಇದುವರೆಗೂ ಒಂದು ಕೈಯಲ್ಲಿ ನೀಡಿ ಇನ್ನೊಂದು ಕೈಯಲ್ಲಿ ಕಸಿದುಕೊಳ್ಳುತ್ತಿದ್ದ ರಾಜ್ಯ ಸರ್ಕಾರ ಈಗ ಎರಡೂ ಕೈಗಳಿಂದ ಕಸಿದುಕೊಳ್ಳಲಾರಂಭಿಸಿದೆ.

-ಹೇಮಾ ನಂದೀಶ್, ಉಪಾಧ್ಯಕ್ಷರು, ಮೈಸೂರು ನಗರ ಬಿಜೆಪಿ

ಆಂದೋಲನ ಡೆಸ್ಕ್

Recent Posts

IND vs SA | ಹರಿಣಗಳ ಬೌಲಿಂಗ್‌ ದಾಳಿಗೆ ತತ್ತರಿಸಿದ ಇಂಡಿಯಾ ; 76 ರನ್‌ಗಳ ಸೋಲು

ಕೋಲ್ಕತ್ತಾ : ಟಿ20 ವಿಶ್ವಕಪ್​​ನ ಸೂಪರ್​ 8 ಪಂದ್ಯದಲ್ಲಿ ಭಾರತ ತಂಡ ಹೀನಾಯ ಸೋಲು ಕಂಡಿದೆ. ದಕ್ಷಿಣ ಆಫ್ರಿಕಾ ನೀಡಿದ್ದ…

3 hours ago

ಈ ಭಾರಿ ವಾಡಿಕೆಗಿಂತ ಹೆಚ್ಚು ಬಿಸಿಲು ; ಎಚ್ಚರಿಕೆ ನೀಡಿದ ಹವಾಮಾನ ಇಲಾಖೆ

ಬೆಂಗಳೂರು : ಈ ವರ್ಷ ರಾಜ್ಯದಲ್ಲಿ ಬೇಸಿಗೆಯ ಬಿಸಿಲು ಸಾಮಾನ್ಯಕ್ಕಿಂತ ಹೆಚ್ಚಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ (IMD)…

5 hours ago

ಐಎಎಸ್‌ ಅಧಿಕಾರಿ ರೋಹಿಣಿ ಸಿಂಧೂರಿ ಅರ್ಜಿ ವಜಾ

ಬೆಂಗಳೂರು : ಐಪಿಎಸ್ ಅಧಿಕಾರಿ ಡಿ.ರೂಪಾ ಮೌದ್ಗಿಲ್ ಅವರು ಹೂಡಿರುವ ಮಾನಹಾನಿ ಪ್ರಕರಣವನ್ನು ರದ್ದುಗೊಳಿಸುವಂತೆ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ…

5 hours ago

HPCLನಲ್ಲಿ 608 ಅಪ್ರೆಂಟಿಸ್ ಟ್ರೈನಿ ನೇಮಕಾತಿ

ಬೆಂಗಳೂರು : ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಷನ್ ಲಿಮಿಟೆಡ್ (HPCL) 608 ಗ್ರಾಜುಯೇಟ್ ಅಪ್ರೆಂಟಿಸ್ ಟ್ರೈನಿ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. ಇದು…

5 hours ago

ಬಾಯಿ ಮುಚ್ಚಿಕೊಂಡಿದ್ದರೆ ಒಳ್ಳೆದು ; ಮೂವರು ಶಾಸಕರಿಗೆ ಡಿಸಿಎಂ ಡಿ.ಕೆ.ಶಿ ಎಚ್ಚರಿಕೆ

ಬೆಂಗಳೂರು : ಸಿಎಂ ಸ್ಥಾನ ಬದಲಾವಣೆ, ಡಿಸಿಎಂ ದಿಲ್ಲಿ ಪ್ರವಾಸ, ಹೈಕಮಾಂಡ್ ಭೇಟಿ ಹೀಗೆ ಹೇಳಿಕೆಗಳನ್ನು ನೀಡುತ್ತಿರುವ ಕಾಂಗ್ರೆಸ್ ಶಾಸಕರು…

6 hours ago

ದಿಲ್ಲಿಯಲ್ಲಿ ದಾಳಿಗೆ ಸಂಚು : 8 ಮಂದಿ ಬಂಧನ

ಹೊಸದಿಲ್ಲಿ : ದೆಹಲಿಯನ್ನು ಗುರಿಯಾಗಿಸಿಕೊಂಡು ಪಾಕಿಸ್ತಾನದ ಐಎಸ್‌ಐ ಮತ್ತು ಬಾಂಗ್ಲಾದೇಶ ಮೂಲದ ಭಯೋತ್ಪಾದಕ ಗುಂಪುಗಳ ಬೆಂಬಲದೊಂದಿಗೆ ಭಯೋತ್ಪಾದಕ ಪಿತೂರಿ ನಡೆಸುತ್ತಿದ್ದ…

8 hours ago