ನಂಜನಗೂಡು: ‘ನಾಲೆ ಮಣ್ಣು ಖಾಸಗಿಯವರಿಗೆ; ಕೋಟಿ ಕೋಟಿ ಕಾಸು ಅನ್ಯರ ಜೇಬಿಗೆ’ ಶಿರೋನಾಮೆಯಲ್ಲಿ ಸೋಮವಾರ ‘ಆಂದೋಲನ’ ದಿನಪತ್ರಿಕೆಯ ಮುಖಪುಟದಲ್ಲಿ ಪ್ರಕಟವಾದ ಸುದ್ದಿಗೆ ಸಂಬಂಽಸಿದಂತೆ ಎಚ್ಚೆತ್ತ ನೀರಾವರಿ ಇಲಾಖೆಯ ಅಧಿಕಾರಿಗಳು, ಈ ಕುರಿತು ಸಮಗ್ರ ವರದಿ ನೀಡುವಂತೆ ಕಾವೇರಿ ನೀರಾವರಿ ನಿಗಮದ ಕಬಿನಿ ನಾಲಾ ವಿಭಾಗದ ಸ್ಥಳೀಯ ಅಭಿಯಂತರ ಸುಹಾಸ ಅವರಿಗೆ ಆದೇಶ ನೀಡಿದ್ದಾರೆ.
ಈಗ ನಂಜನಗೂಡಿನ ನೀರಾವರಿ ಇಲಾಖೆಯಲ್ಲಿ ಬುಧವಾರದಿಂದ ಕಬಿನಿ ಬಲದಂಡೆ ಹಾಗೂ ನುಗು ನಾಲೆ ಮಣ್ಣಿನ ಕುರಿತಂತೆ ಇಲಾಖೆ ನೀಡಿದ ಅನುಮತಿ ಹಾಗೂ ನಾಲೆಯುದ್ದಕ್ಕೂ ತೆಗೆದಿರುವ ಮಣ್ಣಿನ ಕುರಿತಂತೆ ದಾಖಲೆಗಳನ್ನು ಪರಿಶೀಲಿಸಿ ಸಮಗ್ರವಾದ ವರಿದಿಯನ್ನು ಸಿದ್ಧಪಡಿಸಲಾಗುತ್ತಿದೆ ಎಂದು ತಿಳಿದುಬಂದಿದೆ.
ನೀರಾವರಿ ಇಲಾಖೆಯ ಕಡತದಲ್ಲಿ ಅಕ್ರಮ ಸಾಗಾಟದ ಲೆಕ್ಕ ಖಚಿತವಾಗಿ ಸಿಗುವುದಿಲ್ಲ. ಈ ಕುರಿತಾದ ಲೆಕ್ಕ ಬೇಕಾದಲ್ಲಿ ಭೂ ಮತ್ತು ಗಣಿ ವಿಜ್ಞಾನ ಇಲಾಖೆ ಹಾಗೂ ನೀರಾವರಿ ಇಲಾಖೆಯ ಹಿರಿಯ ಅಧಿಕಾರಿಗಳೇ ಆಗಮಿಸಿ ಅಧಿಕಾರಿಗಳಸಹಾಯದಿಂದ ಗುತ್ತಿಗೆದಾರರು ಅಕ್ರಮವಾಗಿ ನಾಲೆ ಮಣ್ಣಿಂದ ಸಮತಟ್ಟು ಮಾಡಿದ ಬಡಾವಣೆ ಹಾಗೂ ರೆಸಾರ್ಟ್ ಮಾಡಲು ಉದ್ದೇಶಿಸಿರುವ ತೆಂಗಿನ ತೋಟಕ್ಕೆ ಭರ್ತಿ ಮಾಡಿದ ಮಣ್ಣಿನ ಅಳತೆ ಮಾಡಿದರೆ ಮಾತ್ರ ಸರ್ಕಾರಕ್ಕೆ ಬರಬೇಕಾದ ಕೋಟ್ಯಂತರ ರೂ. ಲೆಕ್ಕ ಸಿಗುತ್ತದೆ. ಈ ಧೈರ್ಯ ಆಡಳಿತಗಾರರಿಗೆ ಇದ್ದರೆ ಮಾತ್ರ ಇದರ ಪ್ರಾಮಾಣಿಕ ತನಿಖೆ ಸಾಧ್ಯ ಎಂದು ರೈತ ಹೋರಾಟಗಾರ ಬೊಕ್ಕಹಳ್ಳಿ ನಂಜುಂಡಸ್ವಾಮಿ ಪತ್ರಿಕೆಗೆ ತಿಳಿಸಿದರು.
ಮೈಸೂರು : ಯುಗಾದಿ ಮತ್ತು ರಂಜಾನ್ ಹಬ್ಬದ ಪ್ರಯುಕ್ತ ಸಾಲು ಸಾಲು ಸರಣಿ ರಜೆ ಹಿನ್ನೆಲೆ ಮೈಸೂರಿನ ಪ್ರಮುಖ ಪ್ರವಾಸಿ…
ಬೆಂಗಳೂರು: ರಾಜ್ಯದಲ್ಲಿ ಸಾರಿಗೆ ಬಸ್ ಟಿಕೆಟ್ ದರವನ್ನು ಏರಿಕೆ ಮಾಡುವುದಿಲ್ಲ ಎಂದು ಸಚಿವ ರಾಮಲಿಂಗಾರೆಡ್ಡಿ ಸ್ಪಷ್ಟನೆ ನೀಡಿದ್ದಾರೆ. ಈ ಕುರಿತು…
ಹಾಸನ: ಜೂಜಾಡುವ ವೇಲೆ ಪೊಲೀಸರು ದಾಳಿ ನಡೆಸಿದ ಪರಿಣಾಮ ತಪ್ಪಿಸಿಕೊಂಡು ಓಡುವ ವೇಳೆ ಆಯತಪ್ಪಿ ಬಿದ್ದು ವ್ಯಕ್ತಿ ಸಾವನ್ನಪ್ಪಿರುವ ಘಟನೆ…
ಮೈಸೂರು: ನಾಡಿನಾದ್ಯಂತ ರಂಜಾನ್ ಹಬ್ಬದ ಸಂಭ್ರಮ ಮನೆಮಾಡಿದ್ದು, ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಮುಸ್ಲಿಂ ಬಾಂಧವರು ಸಾಮೂಹಿಕ ಪ್ರಾರ್ಥನೆ ಸಲ್ಲಿಸುವ ಮೂಲಕ…
ಬೆಂಗಳೂರು: ಧುರಂಧರ್-2 ಚಿತ್ರವನ್ನು ಹಾಡಿ ಹೊಗಳಿರುವ ತೆಲುಗು ಚಿತ್ರರಂಗದ ಖ್ಯಾತ ನಟರ ವಿರುದ್ಧ ಪ್ರಕಾಶ್ ರಾಜ್ ಕಿಡಿಕಾರಿದ್ದಾರೆ. ತೆಲುಗಿನ ಖ್ಯಾತ…
ಬೆಂಗಳೂರು: ರಾಜ್ಯದಲ್ಲಿ ಇದಕ್ಕಿದ್ದಂತೆ ಆಲಿಕಲ್ಲು ಸಹಿತ ವ್ಯಾಪಕ ಮಳೆ ದಾಖಲಾಗಿದ್ದರಿಂದ ಮತ್ತೆ ಅಪಾರ ಪ್ರಮಾಣದ ಬೆಳೆ ಹಾನಿ ಉಂಟಾಗಿದೆ. ಕೂಡಲೇ…