Andolana originals

ನಾಲೆ ಮಣ್ಣು ಖಾಸಗಿಯವರ ಪಾಲು ಪ್ರಕರಣ; ವರದಿ ನೀಡಲು ಸೂಚನೆ

ನಂಜನಗೂಡು: ‘ನಾಲೆ ಮಣ್ಣು ಖಾಸಗಿಯವರಿಗೆ; ಕೋಟಿ ಕೋಟಿ ಕಾಸು ಅನ್ಯರ ಜೇಬಿಗೆ’ ಶಿರೋನಾಮೆಯಲ್ಲಿ ಸೋಮವಾರ ‘ಆಂದೋಲನ’ ದಿನಪತ್ರಿಕೆಯ ಮುಖಪುಟದಲ್ಲಿ ಪ್ರಕಟವಾದ ಸುದ್ದಿಗೆ ಸಂಬಂಽಸಿದಂತೆ ಎಚ್ಚೆತ್ತ ನೀರಾವರಿ ಇಲಾಖೆಯ ಅಧಿಕಾರಿಗಳು, ಈ ಕುರಿತು ಸಮಗ್ರ ವರದಿ ನೀಡುವಂತೆ ಕಾವೇರಿ ನೀರಾವರಿ ನಿಗಮದ ಕಬಿನಿ ನಾಲಾ ವಿಭಾಗದ ಸ್ಥಳೀಯ ಅಭಿಯಂತರ ಸುಹಾಸ ಅವರಿಗೆ ಆದೇಶ ನೀಡಿದ್ದಾರೆ.

ಈಗ ನಂಜನಗೂಡಿನ ನೀರಾವರಿ ಇಲಾಖೆಯಲ್ಲಿ ಬುಧವಾರದಿಂದ ಕಬಿನಿ ಬಲದಂಡೆ ಹಾಗೂ ನುಗು ನಾಲೆ ಮಣ್ಣಿನ ಕುರಿತಂತೆ ಇಲಾಖೆ ನೀಡಿದ ಅನುಮತಿ ಹಾಗೂ ನಾಲೆಯುದ್ದಕ್ಕೂ ತೆಗೆದಿರುವ ಮಣ್ಣಿನ ಕುರಿತಂತೆ ದಾಖಲೆಗಳನ್ನು ಪರಿಶೀಲಿಸಿ ಸಮಗ್ರವಾದ ವರಿದಿಯನ್ನು ಸಿದ್ಧಪಡಿಸಲಾಗುತ್ತಿದೆ ಎಂದು ತಿಳಿದುಬಂದಿದೆ.

ನೀರಾವರಿ ಇಲಾಖೆಯ ಕಡತದಲ್ಲಿ ಅಕ್ರಮ ಸಾಗಾಟದ ಲೆಕ್ಕ ಖಚಿತವಾಗಿ ಸಿಗುವುದಿಲ್ಲ. ಈ ಕುರಿತಾದ ಲೆಕ್ಕ ಬೇಕಾದಲ್ಲಿ ಭೂ ಮತ್ತು ಗಣಿ ವಿಜ್ಞಾನ ಇಲಾಖೆ ಹಾಗೂ ನೀರಾವರಿ ಇಲಾಖೆಯ ಹಿರಿಯ ಅಧಿಕಾರಿಗಳೇ ಆಗಮಿಸಿ ಅಧಿಕಾರಿಗಳಸಹಾಯದಿಂದ ಗುತ್ತಿಗೆದಾರರು ಅಕ್ರಮವಾಗಿ ನಾಲೆ ಮಣ್ಣಿಂದ ಸಮತಟ್ಟು ಮಾಡಿದ ಬಡಾವಣೆ ಹಾಗೂ ರೆಸಾರ್ಟ್ ಮಾಡಲು ಉದ್ದೇಶಿಸಿರುವ ತೆಂಗಿನ ತೋಟಕ್ಕೆ ಭರ್ತಿ ಮಾಡಿದ ಮಣ್ಣಿನ ಅಳತೆ ಮಾಡಿದರೆ ಮಾತ್ರ ಸರ್ಕಾರಕ್ಕೆ ಬರಬೇಕಾದ ಕೋಟ್ಯಂತರ ರೂ. ಲೆಕ್ಕ ಸಿಗುತ್ತದೆ. ಈ ಧೈರ್ಯ ಆಡಳಿತಗಾರರಿಗೆ ಇದ್ದರೆ ಮಾತ್ರ ಇದರ ಪ್ರಾಮಾಣಿಕ ತನಿಖೆ ಸಾಧ್ಯ ಎಂದು ರೈತ ಹೋರಾಟಗಾರ ಬೊಕ್ಕಹಳ್ಳಿ ನಂಜುಂಡಸ್ವಾಮಿ ಪತ್ರಿಕೆಗೆ ತಿಳಿಸಿದರು.

ಆಂದೋಲನ ಡೆಸ್ಕ್

Recent Posts

ಬೆಳೆಗೆ ಸಿಗದ ಬೆಲೆ: ಯುವ ರೈತ ಆತ್ಮಹತ್ಯೆ

ಕೆ.ಆರ್.ನಗರ: ತಂಬಾಕು ಬೆಳೆಗೆ ಸರಿಯಾಗಿ ಬೆಲೆ ಸಿಗದೇ ನಷ್ಟವಾದ ಹಿನ್ನೆಲೆಯಲ್ಲಿ ಮಾಡಿದ್ದ ಸಾಲ ತೀರಿಸಲಾಗದೆ ಮನನೊಂದು ರೈತರೊಬ್ಬರು ತಮ್ಮ ಜಮೀನಿನಲ್ಲಿ…

43 mins ago

ಮುಂದಿನ ಒಂದು ವಾರಗಳ ಕಾಲ ಭಾರೀ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು: ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರೀ ಗಾಳಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಚಿಕ್ಕಮಗಳೂರು, ಹಾಸನ, ಶಿವಮೊಗ್ಗ,…

2 hours ago

ಸಾಲಬಾಧೆ; ರೈತ ಆತ್ಮಹತ್ಯೆ

ರಾವಂದೂರು: ರೈತರೊಬ್ಬರು ತಾವು ಬೆಳೆದ ತಂಬಾಕಿಗೆ ಸೂಕ್ತ ಬೆಲೆ ಸಿಗದೆ ಮನನೊಂದು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.…

3 hours ago

ಹರಿಹರದಲ್ಲಿ ಶಂಕಿತ ಉಗ್ರನ ಬಂಧನ: ಪೊಲೀಸರಿಂದ ಸ್ಫೋಟಕ ಮಾಹಿತಿ ಬಹಿರಂಗ

ಬೆಂಗಳೂರು: ದಾವಣಗೆರೆ ಜಿಲ್ಲೆಯ ಹರಿಹರದಲ್ಲಿ ಬಂಧನಕ್ಕೊಳಗಾಗಿರುವ ಶಂಕಿತ ಉಗ್ರ ಸುಹೈಲ್ ಉತ್ತರಪ್ರದೇಶದ ಅಯೋಧ್ಯೆಯಲ್ಲಿರುವ ರಾಮ ಮಂದಿರವನ್ನು ಸ್ಫೋಟಿಸಲು ಸಂಚು ನಡೆಸಿದ್ದ…

3 hours ago

ಮುಂಗಾರು ಮಳೆ ಹಿನ್ನಡೆ ; ರಾಜ್ಯದ ಹಲವೆಡೆ ಕೃಷಿ ಕುಂಠಿತ

ಬೆಂಗಳೂರು : ಮುಂಗಾರು ಮಳೆ ಹಿನ್ನಡೆಯಿಂದ ರಾಜ್ಯದ ಹಲವು ಕಡೆ ಕೃಷಿ ಚಟುವಟಿಕೆಗಳು ಕುಂಟುತ್ತಾ ಸಾಗುತ್ತಿದ್ದು, ದಾವಣಗೆರೆ, ಕಲಬುರಗಿ, ಬೆಳಗಾವಿ, ಹಾವೇರಿ,…

4 hours ago

ಮುಂಬೈನಲ್ಲಿ ಭಾರೀ ಮಳೆ: ಜನಜೀವನ ಅಸ್ತವ್ಯಸ್ತ

ಮುಂಬೈ: ಮುಂಬೈನಲ್ಲಿ ಭಾರೀ ಮಳೆಯಾಗುತ್ತಿದ್ದು, ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದೆ. ಭಾರೀ ಮಳೆಯಿಂದ ರಸ್ತೆಗಳಲ್ಲಿ ನೀರು ನಿಂತಿದ್ದು, ವಾಹನ ಸಂಚಾರಕ್ಕೆ ತೊಂದರೆಯಾಗಿದೆ.…

4 hours ago