Andolana originals

ಜಂಬೂಸವಾರಿಯ ಸುದ್ದಿ ಮುಟ್ಟಿಸುವ ಫಿರಂಗಿ ಸದ್ದು!

ಮೈಸೂರು: ಜಂಬೂಸವಾರಿ ಮೆರವಣಿಗೆಯನ್ನು ಕಣ್ತುಂಬಿಕೊಳ್ಳಲು ಲಕ್ಷಾಂತರ ಪ್ರವಾಸಿಗರು ಕಾತರದಿಂದ ಕಾಯುವುದು ಸರ್ವೇ ಸಾಮಾನ್ಯ. ಅದರಲ್ಲೂ ಹಳ್ಳಿಗಳಿಂದ ಆಗಮಿಸಿ ದಾರಿಯುದ್ದಕ್ಕೂ ರಸ್ತೆಯ ಇಕ್ಕೆಲಗಳಲ್ಲಿ ಕಾದು ಕೂರುವ ಮಂದಿಗೆ ಜಂಬೂಸವಾರಿ ಯಾವಾಗ ಹೊರಡುತ್ತದೆ ಎನ್ನುವುದನ್ನು ಯಾರೂ ತಲುಪಿಸಲ್ಲ.

ಆದರೆ, ಜಂಬೂ ಸವಾರಿ ದಿನ ೨೧ ಬಾರಿ ಸಿಡಿಸುವ ಸಿಡಿಮದ್ದಿನ ಸದ್ದು ಮಾತ್ರ ಮುಟ್ಟಿಸುತ್ತದೆ. ತಮ್ಮ ಕಣ್ಣೆದುರು ಬಂದಾಗ ಕಣ್ತುಂಬಿ ವೀಕ್ಷಿಸಿ ಆನಂದಿಸುವ ತನಕ ಗಂಟೆಗಟ್ಟಲೇ ಕಾಯುವ ಮನದಲ್ಲಿ ಫಿರಂಗಿ ಸದ್ದು ಕೇಳಿದೊಡನೆ ಎಲ್ಲಿಲ್ಲದ ಸಂತಸ. ಈ ಫಿರಂಗಿ ಸದ್ದು ಹೊರ ಬೀಳುತ್ತಿದ್ದಂತೆ ಕೊನೆಗೂ ಜಂಬೂಸವಾರಿ ಶುರುವಾಯ್ತು ಅನ್ನುತ್ತಲೇ ಮನಸ್ಸಿನಲ್ಲಿ ತಿಳಿದು ನೋಡುತ್ತಾರೆ. ಅಂತಹ ವಿಶೇಷತೆ ಇರುವ ಫಿರಂಗಿಗೆ ನೂರಾರು ವರ್ಷಗಳ ಇತಿಹಾಸವಿದೆ. ಸುದೀರ್ಘ ಇತಿಹಾಸ: ಫಿರಂಗಿಗಳಿಗೆ ೨೦೦ಕ್ಕೂ ಹೆಚ್ಚು ವರ್ಷಗಳ ಸುದೀರ್ಘ ಇತಿಹಾಸವಿದೆ.

ಭಾರತದಲ್ಲಿ ಈ ಮೊದಲು ಯುದ್ಧದ ಸಂದರ್ಭದಲ್ಲಿ ಕತ್ತಿ, ಗುರಾಣಿ, ಈಟಿ ಇತ್ಯಾದಿ ಸ್ವದೇಶಿ ನಿರ್ಮಿತ ಆಯುಧಗಳ ಬಳಕೆಯಾಗುತ್ತಿತ್ತು. ಬ್ರಿಟಿಷರ ಆಗಮನದ ನಂತರ ಅವರೊಂದಿಗೆ ಈ ಫಿರಂಗಿಯೂ ಬಂದಿತು. ನಂತರದ ದಿನಗಳಲ್ಲಿ ಮೈಸೂರು ಪ್ರಾಂತ್ಯವನ್ನಾಳುತ್ತಿದ್ದ ಟಿಪ್ಪು ಸುಲ್ತಾನ್ ಅವರು ಫ್ರೆಂಚರ ನೆರವಿನಿಂದ ಮೈಸೂರಿಗೆ ಫಿರಂಗಿಗಳನ್ನು ತರಿಸಿಕೊಂಡಿ ದ್ದರು. ನಂತರ ೧೭೯೨ರಲ್ಲಿ ಶ್ರೀರಂಗಪಟ್ಟಣದ ಕೋಟೆಯಲ್ಲಿ ನಡೆದ ಮೂರನೇ ಮೈಸೂರು- ಆಂಗ್ಲೋ ಯುದ್ಧದಲ್ಲಿ ಇದೇ ಫಿರಂಗಿಗಳು ಬಳಕೆಯಾಗಿದ್ದವು.

ಬಳಿಕ ೧೭೯೯ರಲ್ಲಿ ನಡೆದ ನಾಲ್ಕನೇ ಯುದ್ಧದಲ್ಲಿಯೂ ಫಿರಂಗಿಗಳನ್ನು ಬ್ರಿಟಿಷರ ವಿರುದ್ಧ ಹೋರಾಟಕ್ಕೆ ಬಳಸಿಕೊಳ್ಳಲಾಗಿತ್ತು. ಈ ಯುದ್ಧದಲ್ಲಿ ಟಿಪ್ಪು ಸುಲ್ತಾನ್ ಸಾವನ್ನಪ್ಪಿದರು. ಇದಾದ ನಂತರ ಮತ್ತೇ ಫಿರಂಗಿಗಳನ್ನು ಬಳಸುವ ಸಂದರ್ಭ ಎದುರಾಗಲಿಲ್ಲ. ಇದೀಗ ಫಿರಂಗಿಗಳನ್ನು ದಸರಾ ಸಂದರ್ಭದಲ್ಲಿ ಬಳಸಲಾಗುತ್ತದೆ. ದಸರಾ ಮೆರವಣಿಗೆಗೆ ಚಾಲನೆ ನೀಡುವ ವೇಳೆ ಹಾಗೂ ಬನ್ನಿಮಂಟಪದಲ್ಲಿ ಪಂಜಿನ ಕವಾಯತು ನಡೆಯುವ ವೇಳೆ ಫಿರಂಗಿ ಮೂಲಕ ೨೧ ಕುಶಾಲುತೋಪುಗಳನ್ನು ಹಾರಿಸಲಾಗುತ್ತದೆ. ನಂತರ ಮತ್ತೆ ಪೊಲೀಸ್ ಇಲಾಖೆ ಅವುಗಳನ್ನು ಅರಮನೆ ಮಂಡಳಿಯ ವಶಕ್ಕೆ ನೀಡುತ್ತದೆ.

೫೩ ಸೆಕೆಂಡುಗಳಲ್ಲಿ ಕೆಲಸ ಪೂರ್ಣ: ಫಿರಂಗಿ ಸಿಡಿಸುವುದು ಅಷ್ಟು ಸುಲಭವಲ್ಲ. ನಿಜಕ್ಕೂ ಅತ್ಯಂತ ರೋಮಾಂಚನ ಮತ್ತು ಅಪಾಯಕಾರಿ ಕೆಲಸ. ರಾಷ್ಟ್ರಗೀತೆಯನ್ನು ನುಡಿಸುವ ಅವಽ ೫೩ ಸೆಕೆಂಡುಗಳು ಮಾತ್ರ. ಇಷ್ಟು ಕಡಿಮೆ ಅವಽಯಲ್ಲಿ ಪೊಲೀಸರು ೨೧ ಸುತ್ತು ಕುಶಾಲು ತೋಪುಗಳನ್ನು ಹಾರಿಸಬೇಕಿದೆ. ಪೊಟಾಷಿಯಂ ಹಾಗೂ ಮದ್ದು ಪುಡಿಯ ಮಿಶ್ರಣವನ್ನು ಒಬ್ಬರು ತುಂಬಿದರೆ, ಮತ್ತೊಬ್ಬರು ಅದಕ್ಕೆ ಬೆಂಕಿಯನ್ನು ತಗುಲಿಸುವ ಕೆಲಸ ಮಾಡಬೇಕು. ಭಾರೀ ಶಬ್ದದೊಂದಿಗೆ ಕುಶಾಲು ತೋಪು ಹಾರಿದ ನಂತರ ಮತ್ತೊಬ್ಬ ಪೊಲೀಸ್ ಸಿಬ್ಬಂದಿ ಅದನ್ನು ಕ್ಷಣ ಮಾತ್ರದಲ್ಲಿ ಸ್ವಚ್ಛಗೊಳಿಸಬೇಕು. ಈ ಪ್ರಕ್ರಿಯೆ ೨೧ ಸುತ್ತು ಕುಶಾಲು ತೋಪು ಹಾರಿಸುವಾಗಲೂ ನಡೆಯಬೇಕು. ಸಮಯದಲ್ಲಿ ಸ್ವಲ್ಪ ವ್ಯತ್ಯಾಸವಾದರೂ ಸ್ಥಳದಲ್ಲಿರುವ ಸಿಬ್ಬಂದಿ ಅಪಾಯಕ್ಕೆ ಸಿಲುಕಬೇಕಾಗುತ್ತದೆ.

ಶುಕ್ರವಾರದಿಂದ ಕುಶಾಲು ತೋಪು ತಾಲೀಮು

ಕುಶಾಲತೋಪು ಹಾರಿಸುವ ಸಲುವಾಗಿ ಸಿಎಆರ್ ಎಸಿಪಿ, ಎಎಸ್‌ಐ ನೇತೃತ್ವದಲ್ಲಿ ೩೦ ಮಂದಿ ಪೊಲೀಸರ ತಂಡ ಶುಕ್ರವಾರದಿಂದ ತಾಲೀಮು ಶುರು ಮಾಡಿದೆ. ಪ್ರತಿದಿನ ಬೆಳಿಗ್ಗೆ ೭ ಗಂಟೆಯಿಂದ ೧೦ ಗಂಟೆಯವರೆಗೆ ಮದ್ದು ಮಿಶ್ರಣವನ್ನು ಬಳಸದೆ ಅಭ್ಯಾಸ ನಡೆಸಲಿದೆ. ಮುಂದಿನ ದಿನಗಳಲ್ಲಿ ಆನೆಗಳು, ಅಶ್ವಾರೋಹಿ ಪಡೆಯನ್ನು ನಿಲ್ಲಿಸಿಕೊಂಡು ಕುಶಾಲು ತೋಪು ಸಿಡಿಸುವ ತಾಲೀಮು ನಡೆಯಲಿದೆ.

ಕುಶಾಲುತೋಪು ಸಿಡಿಸಲು 35 ಮಂದಿ ಬಳಕೆ: ಕುಶಾಲು ತೋಪು ಹಾರಿಸುವುದೆಂದರೆ ಅದು ಸಾಮಾನ್ಯವಾದ ವಿಷಯವಲ್ಲ. ಅದಕ್ಕೆ ನುರಿತ ಸಿಬ್ಬಂದಿ ಬೇಕು. ಕುಶಾಲು ತೋಪು ಸಿಡಿಸುವ ವೇಳೆ ಸ್ವಲ್ಪ ಏರುಪೇರಾದರೂ ಪ್ರಾಣಕ್ಕೆ ಕುತ್ತು ಬರುವುದು ಗ್ಯಾರಂಟಿ. ಹೀಗಾಗಿ ಫಿರಂಗಿ ಬಳಕೆಯ ಅನುಭವವಿರುವ ೩೫ ಮಂದಿ ಸಿಬ್ಬಂದಿಯನ್ನು ಈ ಕೆಲಸಕ್ಕೆ ಬಳಸಿಕೊಳ್ಳಲಾಗುತ್ತದೆ.

ಫಿರಂಗಿ ಬಳಕೆ ತಂಡಕ್ಕೂ ಜೀವ ವಿಮೆ: ಕುಶಾಲು ತೋಪು ಸಿಡಿಸುವಾಗ ಈ ಹಿಂದೆ ಸಣ್ಣಪುಟ್ಟ ಅಹಿತಕರ ಘಟನೆಗಳು ನಡೆದು ಪೊಲೀಸರು ಗಾಯಗೊಂಡಿದ್ದು ಉಂಟು. ಹಾಗಾಗಿ, ಕಳೆದ ಮೂರು ವರ್ಷಗಳಿಂದ ಫಿರಂಗಿ ಬಳಕೆಯ ತಂಡಕ್ಕೂ ಜೀವ ವಿಮೆ ಮಾಡಿಸಲಾಗಿದೆ.

 

ಕೆ.ಬಿ. ರಮೇಶ ನಾಯಕ

ಪ್ರಸ್ತುತ ಆಂದೋಲನ ದಿನಪತ್ರಿಕೆಯಲ್ಲಿ ಹಿರಿಯ ವರದಿಗಾರನಾಗಿ ಕೆಲಸ ನಿರ್ವಹಿಸುತ್ತಿರುವ ನಾನು ಮೂಲತಃ ಚಾಮರಾಜನಗರ ತಾಲ್ಲೂಕು ಮತ್ತು ಜಿಲ್ಲೆಯ ಕಣ್ಣೇಗಾಲ ಗ್ರಾಮದವನು. ಚಾಮರಾಜನಗರ ತಾಲ್ಲೂಕಿನ ಆಲೂರು ಗ್ರಾಮದಲ್ಲಿ ಪ್ರಾಥಮಿಕ,ಪ್ರೌಢಶಿಕ್ಷಣ, ಚಾಮರಾಜನಗರದಲ್ಲಿ ಪಿಯುಸಿ ವ್ಯಾಸಂಗ ಮಾಡಿದ ನಾನು ಪತ್ರಿಕೋದ್ಯಮದಲ್ಲಿ ಎಂಎ ಪದವಿ ಪಡೆದಿದ್ದೇನೆ. 1992ರಿಂದ 2002ರವರೆಗೆ ಮೈಸೂರು ಮಿತ್ರ ಪತ್ರಿಕೆಯಲ್ಲಿ ಚಾಮರಾಜನಗರ ಜಿಲ್ಲಾ ವರದಿಗಾರನಾಗಿ ಸೇವೆ ಸಲ್ಲಿಸಿದ ಬಳಿಕ 2002ರಿಂದ 2012ರವರೆಗೆ ಸಂಯುಕ್ತ ಕರ್ನಾಟಕ ಮೈಸೂರು ಪ್ರಾದೇಶಿಕ ಕಚೇರಿಯಲ್ಲಿ ವರದಿಗಾರನಾಗಿ, 2013ರಿಂದ 2015ರವರೆಗೆ ಹಾಸನ ಮತ್ತು ಮೈಸೂರಿನಲ್ಲಿ ವಿಜಯ ಕರ್ನಾಟಕ ಹಿರಿಯ ವರದಿಗಾರನಾಗಿ, 2015ರಿಂದ 2017ರವರೆಗೆ ಸಂಯುಕ್ತ ಕರ್ನಾಟಕ ಮುಖ್ಯ ವರದಿಗಾರನಾಗಿ, 2017ರಿಂದ 2020 ಜೂನ್‌ವರಗೆ ವಿಶ್ವವಾಣಿ ಮೈಸೂರು ಬ್ಯೂರೋ ಮುಖ್ಯಸ್ಥರಾಗಿ ಕೆಲಸ ನಿರ್ವಹಿಸಿದ್ದೇನೆ.

Recent Posts

ಉತ್ತರ ಪ್ರದೇಶ: ಕಟ್ಟಡದಲ್ಲಿ ಅಗ್ನಿ ಅವಘಡ: 15 ವಿದ್ಯಾರ್ಥಿಗಳು ಸಾವು

ಲಖನೌ: ಉತ್ತರ ಪ್ರದೇಶದ ಅಲಿಗಂಜ್‌ನಲ್ಲಿರುವ ಮೂರು ಅಂತಸ್ತಿನ ವಾಣಿಜ್ಯ ಕಟ್ಟಡವೊಂದರಲ್ಲಿ ಭಾರೀ ಅಗ್ನಿ ದುರಂತ ಸಂಭವಿಸಿದ್ದು, ಕನಿಷ್ಠ 15 ವಿದ್ಯಾರ್ಥಿಗಳು…

8 hours ago

ಕಾಂಗೋದಲ್ಲಿ ಎಬೋಲಾ ಅಟ್ಟಹಾಸ: 1000 ಗಡಿ ದಾಟಿದ ಸೋಂಕಿತರ ಸಂಖ್ಯೆ

ಕೀನ್ಯಾ: ಕಾಂಗೋದಲ್ಲಿ ಎಬೋಲಾ ವೈರಸ್‌ನ ಅಟ್ಟಹಾಸ ಮುಂದುವರಿದಿದ್ದು, ದೇಶದಲ್ಲಿ ದೃಢಪಟ್ಟ ಒಟ್ಟು ಪ್ರಕರಣಗಳ ಸಂಖ್ಯೆ 1003ಕ್ಕೆ ಏರಿಕೆಯಾಗಿದೆ ಎಂದು ಸರ್ಕಾರ…

10 hours ago

ಗಾಣಾಳು ಜಲಪಾತದಲ್ಲಿ ಈಜಲು ಹೋದ ಯುವಕ ಸಾವು

ಹಲಗೂರು: ಇಲ್ಲಿಗೆ ಸಮೀಪದ ಗಾಣಾಳು ಜಲಪಾತದಲ್ಲಿ ಈಜಲು ಇಳಿದಿದ್ದ ಯುವಕನೊಬ್ಬ ನೀರಿನಲ್ಲಿ ಸಿಲುಕಿ ಮೃತಪಟ್ಟಿರುವ ಘಟನೆ ಶನಿವಾರ ಮಧ್ಯಾಹ್ನ ಸಂಭವಿಸಿದೆ.…

10 hours ago

ರಾಜ್ಯದಲ್ಲಿ ಮೂರು ದಿನ ಭಾರೀ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು: ರಾಜ್ಯದ ಕರಾವಳಿ ಹಾಗೂ ಒಳನಾಡು ಜಿಲ್ಲೆಗಳಲ್ಲಿ ಮೂರು ದಿನ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.…

11 hours ago

ಶೀಘ್ರದಲ್ಲೇ ಬಸ್‌ ಪ್ರಯಾಣ ದರ ಹೆಚ್ಚಳ?

ಬೆಂಗಳೂರು: ದಿನದಿಂದ ದಿನಕ್ಕೆ ಸಾರಿಗೆ ನಿಗಮಗಳು ತೀವ್ರ ಆರ್ಥಿಕ ಸಂಕಷ್ಟಕ್ಕೆ ಸಿಲುಕಿರುವ ಕಾರಣ ಶೀಘ್ರದಲ್ಲೇ ರಾಜ್ಯ ಸರ್ಕಾರ ಬಸ್ ಪ್ರಯಾಣ…

11 hours ago

ಎರಡೇ ವರ್ಷಕ್ಕೆ ಬ್ರಿಟನ್‌ ಪ್ರಧಾನಿ ಕೀರ್‌ ಸ್ಟಾರ್ಮರ್‌ ರಾಜೀನಾಮೆ

ಲಂಡನ್:‌ ನಿರೀಕ್ಷೆಯಂತೆ ಬ್ರಿಟನ್‌ ಪ್ರಧಾನಿ ಕೀರ್‌ ಸ್ಟಾರ್ಮರ್‌ ಅವರು ಇಂದು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಆಡಳಿತಾರೂಢ ಲೇಬರ್‌ ಪಕ್ಷದೊಳಗೆ…

12 hours ago