Andolana originals

ಫುಟ್‌ಪಾತ್‌ಗಳಿಗೆ ಸಿಮೆಂಟ್ ಟೈಲ್ಸ್ ಬಳಕೆಯಿಂದ ಪರಿಸರಕ್ಕೆ ಹಾನಿ

ಮೈಸೂರು ಗ್ರಾಹಕರ ಪರಿಷತ್‌ ಸೇರಿದಂತೆ ಸಾರ್ವಜನಿಕರ ಆಕ್ರೋಶ
ವಾಸು ವಿ.ಹೊಂಗನೂರು

ಮೈಸೂರು: ನಗರದ ಫುಟ್‌ ಪಾತ್‌ಗಳಿಗೆ ಇಂಟರ್‌ಲಾಕ್ ಟೈಲ್ಸ್‌ ಗಳನ್ನು ಅಳವಡಿಸಿ ಸಿಮೆಂಟ್ ಹಾಕುತ್ತಿರುವುದರಿಂದ ಭೂಮಿಯಲ್ಲಿ ನೀರು ಇಂಗದೆ ಅಧಿಕ ಮಳೆ ಬಂದಾಗ ತಗ್ಗು ಪ್ರದೇಶಗಳಲ್ಲಿರುವ ನುಗ್ಗುತ್ತಿರುವುದು ಒಂದು ಸಮಸ್ಯೆಯಾದರೆ, ಮತ್ತೊಂದೆಡೆ ಪರಿಸರಕ್ಕೆ ಸಿಮೆಂಟ್ ಫುಟ್ ಪಾತ್‌ಗಳು ಮಾರಕವಾಗುತ್ತಿವೆ ಎಂದು ಮೈಸೂರು ಗ್ರಾಹಕರ ಪರಿಷತ್ ಸದಸ್ಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಮೈಸೂರು ಮಹಾನಗರ ಪಾಲಿಕೆ ನಗರದಲ್ಲಿ ಫುಟ್‌ಪಾತ್‌ಗಳಿಗೆ ಇಂಟರ್‌ಲಾಕ್ ಟೈಲ್ಸ್ ಅಳವಡಿಸುತ್ತಿದೆ. ಈ ಯೋಜನೆ ಪರಿಸರದ ಮೇಲೆ ಎಂಥ ಪರಿಣಾಮ ಬೀರುತ್ತದೆ ಎನ್ನುವ ಬಗ್ಗೆ ಕಿಂಚಿತ್ತೂ ಅರಿವಿಲ್ಲದಿರುವುದು ಕಂಡು ಬಂದಿದೆ. ಬಿದ್ದ ಮಳೆ ನೀರು ಭೂಮಿಯಲ್ಲಿ ಇಂಗದೇ ಅಂತರ್ಜಲದ ಮಟ್ಟವೂ ಕುಸಿ ಯುವ ಸ್ಥಿತಿಯಲ್ಲಿವೆ. ವಿವಿಧ ಸ್ಥಳಗಳಲ್ಲಿ ನಡೆಯುತ್ತಿರುವ ಫುಟ್‌ಪಾತ್ ಹಾಗೂ ರಸ್ತೆಗಳಿಗೆ ಸಿಮೆಂಟ್ ಹಾಕುವ ಕಾಮಗಾರಿಯಿಂದಾಗಿ ಪರಿಸರ, ಪ್ರಾಣಿ ಪಕ್ಷಿಗಳಿಗೂ ಅಪಾಯ ಎದುರಾಗಿದೆ ಎಂದು ಪರಿಷತ್‌ನ ಮಾಜಿ ಅಧ್ಯಕ್ಷ ಭಾಮಿ ವಿ. ಶೆಣೈ ದೂರಿದ್ದಾರೆ.

ನಗರದ ಯಾದವಗಿರಿಯ ಚೆಲುವಾಂಬ ಉದ್ಯಾನ ಸೇರಿದಂತೆ ನಗರದ ಬಹುತೇಕ ಮುಖ್ಯ ರಸ್ತೆಗಳ ಫುಟ್‌ಪಾತ್‌ಗೆ ಇಂಟ‌ರ್ ಲಾಕ್ ಟೈಲ್ಸ್‌ಗಳನ್ನು ಬಳಸಿ ಸಿಮೆಂಟ್ ಹಾಕಲಾಗಿದೆ. ಇದರಿಂದಾಗಿ ಇಲ್ಲಿನ ಮರಗಿಡಗಳ ಬೆಳವಣಿಗೆ ಹಾಗೂ ಸುತ್ತಲ ಪರಿಸರಕ್ಕೆ ಹಾನಿಯುಂಟಾಗುತ್ತದೆ. ಮರಗಳ ಬೇರಿಗೆ ಉಸಿರಾಟದ ತೊಂದರೆ ಆಗುತ್ತದೆ. ಅಧಿಕಾರಿಗಳು ಈ ಬಗ್ಗೆ ಗಮನವೇ ಇಲ್ಲದವರಂತೆ ವರ್ತಿಸಿದ್ದಾರೆ ಎಂದು ತಿಳಿಸಿದರು.

ಈ ಹಿಂದೆಯೇ ಈ ಬಗ್ಗೆ ಪಾಲಿಕೆಗೆ ದೂರು ನೀಡಿದ್ದರೂ ಕ್ರಮ ಜರುಗಿಸಿಲ್ಲ. ಕಳೆದ ವಾರ ಬಿದ್ದ ಮಳೆಯಿಂದಾಗಿ ಯಾದವಗಿರಿ ಸಮೀಪದ ರಾಜರಾಜೇಶ್ವರಿನಗರದಲ್ಲಿಕೊಳಚೆನಿರ್ಮೂಲನ ಮಂಡಳಿ ನಿರ್ಮಿಸಿರುವ ಅಪಾರ್ಟ್‌ ಮೆಂಟ್‌ಗೆ ನೀರು ನುಗ್ಗಿ ಅನೇಕ ಕುಟುಂಬಗಳಿಗೆ ತೊಂದರೆ ಯಾಗಿದೆ. ಇದಕ್ಕೆ ಪಾಲಿಕೆಯ ಇಂಥ ಯೋಜನೆಗಳೇ ಕಾರಣ ಎಂದು ಮೈಗ್ರಾಪ ಸದಸ್ಯರು ಬೇಸರ ವ್ಯಕ್ತಪಡಿಸಿದ್ದಾರೆ.

ಮಣ್ಣಿನ ಸವಕಳಿ, ಬಿಸಿಲಿನ ತಾಪಮಾನ ಏರಿಕೆ ಜೊತೆಯಲ್ಲಿ ವಾತಾವರಣ ಕಲುಷಿತ ಗೊಳ್ಳುವ ಆತಂಕ ಎದುರಾಗಿದೆ. ಸಿಮೆಂಟ್ ಬಳಕೆ ಯೋಜನೆಗೆ ಬದಲಿಯಾಗಿ, ಕಲ್ಲು ಅಥವಾ ಇತರ ಪರಿಸರ ಸ್ನೇಹಿ ವಸ್ತುಗಳನ್ನು ಬಳಸಬೇಕು. ಪಾರ್ಕ್‌ಗಳ ಅಭಿವೃದ್ಧಿ ಹೆಸರಲ್ಲಿ ಸಿಮೆಂಟ್ ಇಟ್ಟಿಗೆ ಬಳಸುವುದು ಸೂಕ್ತ ಕ್ರಮವಲ್ಲ. ಜಲಮೂಲ ಸಂರಕ್ಷಣೆಗೆ ಒತ್ತು ನೀಡ ಬೇಕು. ಆದರೆ, ಸಿಮೆಂಟ್ ಇಟ್ಟಿಗೆ ಬಳಸಿ ಫುಟ್‌ ಪಾತ್ ನಿರ್ಮಾಣ ಮಾಡುತ್ತಿರುವ ಈ ನಿರ್ಧಾರ ಜನರ ಆಕ್ರೋಶಕ್ಕೆ ಕಾರಣವಾಗಿದೆ.

ಚೆಲುವಾಂಬ ಉದ್ಯಾನದ ಸುತ್ತಲೂ ಫುಟ್ ಪಾತ್‌ಗೆ ಇಂಟರ್ ಲಾಕ್ ಟೈಲ್ಸ್‌ಗಳನ್ನು ಹಾಕಿ ಸಿಮೆಂಟ್ ಬಳಸಿರುವುದರಿಂದ ಭೂಮಿಯಲ್ಲಿ ಒಂದು ಹನಿ ನೀರು ಇಂಗುತ್ತಿಲ್ಲ. ಇದರಿಂದ ಅಂತರ್ಜಲ ಕೂಡ ಕಡಿಮೆಯಾಗುತ್ತದೆ. ಬಿಸಿಲಿನ ತಾಪ ಏರಿಕೆಯಾಗುತ್ತದೆ. ಕಳೆದ ವರ್ಷ ಮೈಸೂರಿನಲ್ಲಿ ಅತಿ ಹೆಚ್ಚು ತಾಪಮಾನವಿತ್ತು. ಇದನ್ನೆಲ್ಲ ಗಮನದಲ್ಲಿಟ್ಟುಕೊಂಡು ಪಾಲಿಕೆ ಕ್ರಮ ವಹಿಸಬೇಕಾಗಿತ್ತು.
ನೀಲಾಂಬಿಕ, ಯಾದವಗಿರಿ ನಿವಾಸಿ ಹಾಗೂ ಮೈಗ್ರಾಪ ಸದಸ್ಯೆ

ಆಂದೋಲನ ಡೆಸ್ಕ್

Recent Posts

ಅಗತ್ಯ ಸುರಕ್ಷತಾ ಕ್ರಮಗಳೊಂದಿಗೆ ಬಂಡೀಪುರ-ನಾಗರಹೊಳೆ ಸಫಾರಿ ಆರಂಭಿಸಿ: ಸಿಎಂ ಡಿ.ಕೆ.ಶಿವಕುಮಾರ್‌ ಸೂಚನೆ

ಬೆಂಗಳೂರು: ಅಗತ್ಯ ಸುರಕ್ಷತಾ ಕ್ರಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಿ ಬಂಡೀಪುರ ಹಾಗೂ ನಾಗರಹೊಳೆ ಉದ್ಯಾನಗಳಲ್ಲಿ ಸಫಾರಿ ಆರಂಭಿಸಿ ಎಂದು ಸಿಎಂ ಡಿ.ಕೆ.ಶಿವಕುಮಾರ್‌…

8 hours ago

ವೆನೆಜುವೆಲಾ ಭೂಕಂಪ: ಮೃತರ ಸಂಖ್ಯೆ 1700ಕ್ಕೆ ಏರಿಕೆ

ವೆನೆಜುವೆಲಾ: ಇಲ್ಲಿ ಬುಧವಾರ ಸಂಜೆ ಸಂಭವಿಸಿದ ಎರಡು ಪ್ರಬಲ ಭೂಕಂಪಗಳಲ್ಲಿ ಮೃತಪಟ್ಟವರ ಸಂಖ್ಯೆ 1700ಕ್ಕೆ ಏರಿಕೆಯಾಗಿದೆ. ಈ ದುರಂತದಲ್ಲಿ 5000ಕ್ಕೂ…

9 hours ago

ರಾಜಸ್ಥಾನದಲ್ಲಿ ಪ್ಯಾರಾಮೆಡಿಕಲ್‌ ಪರೀಕ್ಷೆ ಪ್ರಶ್ನೆ ಪತ್ರಿಕೆ ಸೋರಿಕೆ: ನಾಲ್ವರು ಅರೆಸ್ಟ್‌

ಜೈಪುರ: ರಾಜಸ್ಥಾನ ಆರೋಗ್ಯ ವಿಜ್ಞಾನ ವಿಶ್ವವಿದ್ಯಾಲಯದ ಪ್ಯಾರಾಮೆಡಿಕಲ್‌ ಪರೀಕ್ಷೆಯಲ್ಲಿ ಸಾಮೂಹಿಕ ನಕಲು ನಡೆಯುತ್ತಿದ್ದ ವೇಳೆಯೇ ಪರೀಕ್ಷೆ ಹಾಲ್‌ ಮೇಲೆ ಪೊಲೀಸರು…

9 hours ago

ಎಸ್‌ಐಆರ್‌ ಬಗ್ಗೆ ಗಾಬರಿ ಬೇಡ: ಬಾನು ಮುಷ್ತಾಕ್‌

ಹಾಸನ: ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ ಪ್ರಕ್ರಿಯೆಯು ಆರಂಭವಾಗಿದೆ. ಹಾಸನದಲ್ಲಿ ಬೂಕರ್‌ ಪ್ರಶಸ್ತಿ ವಿಜೇತೆ ಬಾನು ಮುಷ್ತಾಕ್‌…

10 hours ago

ನಾಡಿನ ಖ್ಯಾತ ಕಲಾವಿದ ಕೆ.ಟಿ.ಶಿವಪ್ರಸಾದ್‌ ನಿಧನ

ಬೆಂಗಳೂರು: ನಾಡಿನ ಖ್ಯಾತ ಹಾಗೂ ಅಂತರಾಷ್ಟ್ರೀಯ ಖ್ಯಾತಿಯ ಕಲಾವಿದರಾದ, ದಲಿತ ಸಂಘರ್ಷ ಸಮಿತಿಯ ಕಾರ್ಯಕರ್ತ ‌ಕೆ.ಟಿ. ಶಿವಪ್ರಸಾದ್(77) ಬೆಂಗಳೂರಿನಲ್ಲಿ ನಿಧನರಾಗಿದ್ದಾರೆ.…

10 hours ago

ಕೈಕೊಟ್ಟ ಮುಂಗಾರು: 126 ವರ್ಷಗಳಲ್ಲೇ ಮೂರನೇ ಬಾರಿ ದೇಶದಲ್ಲಿ ಮಳೆ ಕೊರತೆ

ನವದೆಹಲಿ: ದೇಶದಲ್ಲಿ ಈ ಬಾರಿ ಮುಂಗಾರು ಮಳೆ ಸಂಪೂರ್ಣವಾಗಿ ಕೈಕೊಟ್ಟಿದ್ದು, ಕಳೆದ 126 ವರ್ಷಗಳ ಇತಿಹಾಸದಲ್ಲೇ ಜೂನ್‌ ತಿಂಗಳಿನಲ್ಲಿ ಮೂರನೇ…

11 hours ago