Andolana originals

ಸೆಸ್ಕ್‌ ದುರಸ್ತಿ ಕಾರ್ಯ ಬಹುತೇಕ ಪೂರ್ಣ

ಮಹಾಮಳೆಗೆ ೧,೪೦೦ಕ್ಕೂ ಅಽಕ ಕಂಬಗಳು, ೧೧ ವಿದ್ಯುತ್ ಪರಿವರ್ತಕ, ೧೩.೧೦೫ ಕಿ.ಮೀ. ವಾಹಕಗಳಿಗೆ ಹಾನಿ

ನವೀನ್ ಡಿಸೋಜ

ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಈ ಬಾರಿ ಮೇ ಕೊನೆಯಿಂದಲೇ ಆರಂಭವಾದ ವರುಣನ ಆರ್ಭಟಕ್ಕೆ ಸೆಸ್ಕ್ ತತ್ತರಿಸಿದ್ದು, ಸುಮಾರು ೧,೪೦೦ ಕಂಬಗಳು ಹಾನಿಗೊಳಗಾಗಿದ್ದು, ಭಾರೀ ನಷ್ಟ ಸಂಭವಿಸಿದೆ. ಈ ಬಾರಿ ಅವಧಿಗೂ ಮುನ್ನವೇ ಜಿಲ್ಲೆಯಲ್ಲಿ ಧಾರಾಕಾರ ಮಳೆಯಾಗಿದೆ. ಭಾರೀ ಗಾಳಿ ಮಳೆಗೆ ಹಲವೆಡೆ ಮರಗಳು ಧರೆಗುರುಳಿವೆ.

ತೀವ್ರ ಮಳೆ-ಗಾಳಿಯಿಂದಾಗಿ ಜಿಲ್ಲೆಯಲ್ಲಿ ಇದುವರೆಗೆ ಒಟ್ಟು ೧,೪೪೨ ವಿದ್ಯುತ್ ಕಂಬಗಳಿಗೆ ಹಾನಿಯಾಗಿವೆ. ಅಲ್ಲದೆ, ೧೧ ವಿದ್ಯುತ್ ಪರಿವರ್ತಕಗಳು ಹಾಗೂ ೧೩.೧೦೫ ಕಿ.ಮೀ. ವಾಹಕಗಳು ಕೂಡ ಹಾನಿಗೊಳಗಾಗಿವೆ.

ಸಾಮಾನ್ಯವಾಗಿ ಜಿಲ್ಲೆಯಲ್ಲಿ ಜುಲೈ, ಆಗಸ್ಟ್ ತಿಂಗಳಲ್ಲಿ ವರುಣನ ಆರ್ಭಟ ಹೆಚ್ಚಾಗಿರುತ್ತದೆ. ಈ ಸಂದರ್ಭದಲ್ಲಿ ಸೆಸ್ಕ್ ಸಿಬ್ಬಂದಿ ಮಳೆಯ ನಡುವೆಯೂ ಹೆಚ್ಚು ಒತ್ತಡದಲ್ಲಿ ಕೆಲಸ ಮಾಡಬೇಕಾದ ಪರಿಸ್ಥಿತಿ ನಿರ್ಮಾಣವಾಗುತ್ತದೆ. ಆದರೆ, ಈ ಬಾರಿ ಮೇ ಕೊನೆಯಲ್ಲಿಯೇ ಸುರಿದ ಧಾರಾಕಾರ ಮಳೆಯಿಂದ ಸೆಸ್ಕ್ ಸಿಬ್ಬಂದಿ ಪರದಾಡುವಂತಾಯಿತು. ಗ್ರಾಮೀಣ ಭಾಗದಲ್ಲಿ ವಿದ್ಯುತ್ ಸಂಪರ್ಕವಿಲ್ಲದೆ ಸಿಬ್ಬಂದಿಗೆ ದೂರುಗಳ ಸುರಿಮಳೆಯೇ ಬಂದಿತ್ತು. ರಾತ್ರಿ ಹಗಲೆನ್ನದೆ ಕಾರ್ಯನಿರ್ವಹಿಸಬೇಕಾದ ಪರಿಸ್ಥಿತಿ ನಿರ್ಮಾಣವಾಗಿತ್ತು.

ಸುಮಾರು ೧೦ ದಿನಗಳ ಕಾಲ ನಿರಂತರವಾಗಿ ಸುರಿದ ಮಳೆ ಹಾಗೂ ವಿಪರೀತ ಗಾಳಿಯಿಂದ ಕಂಬಗಳ ಬದಲಾವಣೆ ಕಾಮಗಾರಿ ಹಾಗೂ ಮಾರ್ಗದ ವಿಫಲತೆಯನ್ನು ಸರಿಪಡಿಸಲು ಹೆಚ್ಚಿನ ಸಮಯ ತೆಗೆದುಕೊಳ್ಳುತ್ತಿತ್ತು. ಮಳೆ-ಗಾಳಿಯಿಂದ ಪದೇ ಪದೇ ವಿದ್ಯುತ್ ಜಾಲಕ್ಕೆ ಹಾನಿ ಉಂಟಾಗುತ್ತಿರುವುದರಿಂದ ವಿದ್ಯುತ್ ವ್ಯತ್ಯಯವಾಗುತ್ತಿದ್ದರಿಂದ ಸಾರ್ವಜನಿಕರು ಅಸಮಾಧಾನ ವ್ಯಕ್ತಪಡಿಸುತ್ತಿದ್ದರು.

ಸದ್ಯ ಈಗ ಬಹುತೇಕ ಭಾಗಗಳಲ್ಲಿ ವಿದ್ಯುತ್ ಸಂಪರ್ಕ ಕಲ್ಪಿಸಲಾಗಿದೆ. ಬಿಸಿಲಿನ ವಾತಾವರಣ ಇರುವುದರಿಂದ ಕಾಮಗಾರಿ ಚುರುಕುಗೊಂಡಿದೆ. ಈಗಾಗಲೇ ನೆಲಕಚ್ಚಿದ್ದ ಕಂಬಗಳನ್ನು ಹಾಗೂ ಪರಿವರ್ತಕಗಳನ್ನು ದುರಸ್ತಿಗೊಳಿಸಿ ಬದಲಾಯಿಸಲಾಗಿದೆ. ದೈನಂದಿನ ಚಟುವಟಿಕೆಯಲ್ಲಿ ಸರಾಸರಿ ೧೦೦ ಕಂಬಗಳ ಬದಲಾವಣೆಯ ಕಾಮಗಾರಿಯನ್ನು ಕೈಗೊಂಡ ಪರಿಣಾಮವಾಗಿ ಸಮಸ್ಯೆ ಬಹುತೇಕ ಬಗೆಹರಿದಿದೆ. ಆದರೆ, ಜಿಲ್ಲೆಯಲ್ಲಿ ಜುಲೈ, ಆಗಸ್ಟ್ ತಿಂಗಳಲ್ಲಿ ವರುಣನ ಆರ್ಭಟ ಹೆಚ್ಚಾಗಲಿದ್ದು, ಮತ್ತೆ ಯಾವ ರೀತಿ ಪರಿಸ್ಥಿತಿ ಉಂಟಾಗಲಿದೆ ಎಂಬ ಆತಂಕದ ವಾತಾವರಣ ಮನೆ ಮಾಡಿದೆ.

ಅಗತ್ಯ ಸಿಬ್ಬಂದಿಗಳ ನೇಮಕ: 

ವಿದ್ಯುತ್ ಜಾಲದ ದುರಸ್ತಿ ಕಾರ್ಯವನ್ನು ಚುರುಕಗೊಳಿಸಲು, ವಿದ್ಯುತ್ ಜಾಲವನ್ನು ಪುನಃ ಸ್ಥಾಪಿಸಲು ಅಗತ್ಯ ಸಿಬ್ಬಂದಿಗಳ ನೇಮಕ ಮಾಡಿಕೊಳ್ಳಲಾಗಿದೆ. ಮಡಿಕೇರಿ ವಿಭಾಗದ ೨೩೧ ಸಿಬ್ಬಂದಿ, ಇತರೆ ವಿಭಾಗಗಳಿಂದ ೫೨ ಮಂದಿ ಸಿಬ್ಬಂದಿ ಹಾಗೂ ಹೊರಗುತ್ತಿಗೆಯಿಂದ ೭೫ ಸಂಖ್ಯೆ ಸಿಬ್ಬಂದಿಗಳನ್ನು ನೇಮಿಸಲಾಗಿದೆ. ಇವರ ಜೊತೆ ೧೨೪ ಮಂದಿ ವಿದ್ಯುತ್ ಗುತ್ತಿಗೆದಾರ ಸಿಬ್ಬಂದಿಗಳು ವಿವಿಧ ಸಲಕರಣೆಗಳೊಂದಿಗೆ ಕಾರ್ಯನಿರ್ವಹಿಸುತ್ತಿದ್ದಾರೆ.

” ಜಿಲ್ಲೆಯಾದ್ಯಂತ ಮಳೆ ಗಾಳಿಯಿಂದಾಗಿ ಶಾಖಾಧಿಕಾರಿಗಳು ಹಾಗೂ ಸಿಬ್ಬಂದಿ ವಿದ್ಯುತ್ ಜಾಲದ ಮರು ಸ್ಥಾಪನೆಯಲ್ಲಿ ನಿರತರಾಗಿದ್ದಾರೆ. ಶಾಖಾಧಿಕಾರಿಗಳು ಬ್ರೇಕ್‌ಡೌನ್ ನಿರ್ವಹಣೆ ಕಾಮಗಾರಿಗಳಲ್ಲಿ ನಿರತರಾಗಿದ್ದು, ಕೆಲವೊಂದು ಸಂದರ್ಭಗಳಲ್ಲಿ ಗ್ರಾಹಕರ ದೂರವಾಣಿ ಕರೆಗಳನ್ನು ಸ್ವೀಕರಿಸಲು ಸಾಧ್ಯವಾಗುವುದಿಲ್ಲ. ಆದ್ದರಿಂದ ಗ್ರಾಹಕರ ದೂರುಗಳನ್ನು ದಾಖಲಿಸಿ ನಿವಾರಿಸುವ ನಿಟ್ಟಿನಲ್ಲಿ ಮಡಿಕೇರಿ ವಿಭಾಗಕ್ಕೆ ಪ್ರತ್ಯೇಕವಾಗಿ ಟೋಲ್ ಫ್ರೀ ಸಂಖ್ಯೆ ೧೮೦೦-೫೯೯-೦೦೬೧ ನೀಡಲಾಗಿದ್ದು, ವಿದ್ಯುತ್ ಜಾಲದ ಯಾವುದೇ ಸಮಸ್ಯೆ ಇದ್ದಲ್ಲಿ ಗ್ರಾಹಕರು ಈ ಸಂಖ್ಯೆಯನ್ನು ಸಂಪರ್ಕಿಸಬಹುದು.”

ಎಂ.ರಾಮಚಂದ್ರ, ಸೆಸ್ಕ್ ಕಾರ್ಯ ಮತ್ತು ಪಾಲನೆ ವಿಭಾಗದ ಕಾರ್ಯನಿರ್ವಾಹಕ ಎಂಜಿನಿಯರ್

ಆಂದೋಲನ ಡೆಸ್ಕ್

Recent Posts

ಇಂಡೋನೇಷ್ಯಾದಲ್ಲಿ 7.7 ತೀವ್ರತೆಯ ಪ್ರಬಲ ಭೂಕಂಪ: ಮೃತರ ಸಂಖ್ಯೆ 40ಕ್ಕೆ ಏರಿಕೆ

ಜಕಾರ್ತ: ಇಂಡೋನೇಷ್ಯಾದ ಫ್ಲೋರ್ಸ್‌ ದ್ವೀಪದಲ್ಲಿ ಶನಿವಾರ ಮುಂಜಾನೆ 7.7 ತೀವ್ರತೆಯ ಪ್ರಬಲ ಭೂಕಂಪ ಸಂಭವಿಸಿದ್ದು, ಮೃತರ ಸಂಖ್ಯೆ 40ಕ್ಕೆ ಏರಿಕೆಯಾಗಿದೆ.…

1 hour ago

ಅಯೋಧ್ಯೆ ರಾಮಮಂದಿರ ಅರ್ಚಕರಿಗೆ ಹೊಸ ಡ್ರೆಸ್ ಕೋಡ್‌

ಅಯೋಧ್ಯೆ: ಅಯೋಧ್ಯೆ ರಾಮಮಂದಿರದ ಅರ್ಚಕರಿಗೆ ಹಳದಿ ರೇಷ್ಮೆ ಧೋತಿಯನ್ನು ಹೊಸ ಡ್ರೆಸ್‌ ಕೋಡ್‌ ಆಗಿ ಜಾರಿಗೆ ತರಲಾಗಿದೆ. ರಾಮನಂದಿ ಸಂಪ್ರದಾಯಕ್ಕೆ…

1 hour ago

ಶೂಟೌಟ್ ಪ್ರಕರಣ | ಮ್ಯಾಜಿಸ್ಟ್ರೇಟ್ ನೇತೃತ್ವದಲ್ಲಿ ತನಿಖೆ : ಸಿಎಂ ಡಿ.ಕೆ.ಶಿವಕುಮಾರ್

ವಸ್ತುಗಳು, ಬಂದೂಕು ಸೇರಿ ಸಾಕ್ಷಿಗಳು ಲಭ್ಯ ಬೆಂಗಳೂರು : ಹನೂರಿನಲ್ಲಿ ನಡೆದಿರುವ ಶೂಟೌಟ್ ಪ್ರಕರಣವನ್ನು ಮ್ಯಾಜಿಸ್ಟ್ರೇಟ್ ನೇತೃತ್ವದಲ್ಲಿ ತನಿಖೆಗೆ ಆದೇಶ…

12 hours ago

ಮುಂದಿನ ಆಗಸ್ಟ್‌ ಒಳಗೆ ಮೇಕೆದಾಟುಗೆ ಶಂಕುಸ್ಥಾಪನೆ: ಸಚಿವ ಚಲುವರಾಯಸ್ವಾಮಿ

ಮಂಡ್ಯ : ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ದೂರದೃಷ್ಠಿಯ ಮೇಕೆದಾಟು ಯೋಜನೆಗೆ 2027ರ ಸ್ವಾತಂತ್ರ ದಿನಾಚರಣೆ ವೇಳೆಗೆ ಶಂಕುಸ್ಥಾಪನೆ ನೆರವೇರಿಸಿ ಅಣೆಕಟ್ಟು…

16 hours ago

ಮೂವರು ಬೇಟೆಗಾರರ ಎನ್‌ಕೌಂಟರ್‌ ಪ್ರಕರಣ: ಸಂಸದ ಸುನೀಲ್‌ ಬೋಸ್‌ ಪ್ರತಿಕ್ರಿಯೆ

ಮೈಸೂರು: ಮೂವರು ಬೇಟೆಗಾರರ ಎನ್‌ಕೌಂಟರ್‌ ನಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂಸದ ಸುನೀಲ್‌ ಬೋಸ್‌ ಪ್ರತಿಕ್ರಿಯೆ ನೀಡಿದ್ದಾರೆ. ಮೈಸೂರಿನ ಕೆ.ಆರ್.ಆಸ್ಪತ್ರೆಯ ಶವಗಾರಕ್ಕೆ…

17 hours ago

ಮೂವರು ಬೇಟೆಗಾರರ ಎನ್‌ಕೌಂಟರ್‌ ಪ್ರಕರಣ: ಸಚಿವ ಪುಟ್ಟರಂಗಶೆಟ್ಟಿ ಪ್ರತಿಕ್ರಿಯೆ

ಮೈಸೂರು: ಅರಣ್ಯ ಇಲಾಖೆಯಿಂದ ಬಹಳ ದೊಡ್ಡ ತಪ್ಪು ಆಗಿದೆ ಎಂದು ಚಾಮರಾಜನಗರ ಜಿಲ್ಲಾ ಉಸ್ತುವಾರಿ ಸಚಿವ ಪುಟ್ಟರಂಗಶೆಟ್ಟಿ ಹೇಳಿದ್ದಾರೆ. ಈ…

18 hours ago