Andolana originals

ಸರಗೂರು ಬಸ್ ನಿಲ್ದಾಣದಲ್ಲಿ ಅವ್ಯವಸ್ಥೆ; ಸಾರ್ವಜನಿಕರ ಆಕ್ರೋಶ

ದಾಸೇಗೌಡ ಸರಗೂರು

ಅಸಮರ್ಪಕ ವ್ಯವಸ್ಥೆಯಿಂದ ನೀರು ಪೋಲು;ನಿರ್ವಹಣೆಯಿಲ್ಲದ ಶೌಚಾಲಯ, ಕಸದ ರಾಶಿ ತಾಂಡವ

ಸರಗೂರು: ಪಟ್ಟಣದ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಲ್ಲಿ ಶೌಚಾಲಯ ಹಾಗೂ ಹೋಟೆಲ್ಗಳಿಗೆ ನೀರು ಪೂರೈಕೆ ಮಾಡುವ ವ್ಯವಸ್ಥೆಯಲ್ಲಿ ಎರಡು ಓವರ್‌ಹೆಡ್ ಟ್ಯಾಂಕ್‌ಗಳ ನಡುವೆ ತಪ್ಪಾದ ಸಂಪರ್ಕ ಆಗಿರುವ ಹಿನ್ನೆಲೆಯಲ್ಲಿ ಬಸ್ ನಿಲ್ದಾಣದಲ್ಲಿ ಪ್ರತಿ ದಿನ ಸಾವಿರಾರು ಲೀಟರ್ ನೀರು ಪೋಲಾಗುತ್ತಿದ್ದು, ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ನೀರು ಹರಿಯುತ್ತಾ ಪಾಚಿ ಕಟ್ಟಿರುವುದರಿಂದ ಎಷ್ಟೋ ಬಾರಿ ಪ್ರಯಾಣಿಕರು ಓಡಾಡುವಾಗ ಜಾರಿ ಬಿದ್ದು ಗಾಯಗೊಂಡಿರುವ ಘಟನೆಗಳು ನಡೆದಿವೆ. ಹತ್ತು ವರ್ಷಗಳ ಹಳೆಯದಾದ ಶೌಚಾಲಯದಲ್ಲಿ ಸರಿಯಾದ ನಿರ್ವಹಣೆ ಇಲ್ಲದೆ ದುರ್ವಾಸನೆ ಬರುತ್ತಿದೆ. ಕೆಲವು ಶೌಚಾಲಯದ ಬಾಗಿಲುಗಳಿಗೆ ಯಾವುದೇ ಚಿಲಕಗಳು ಇಲ್ಲ. ಮುಖ್ಯ ರಸ್ತೆಯ ಎರಡು ಭಾಗಗಳಲ್ಲೂ ಚರಂಡಿ ವ್ಯವಸ್ಥೆ ಇಲ್ಲ. ಹೀಗಾಗಿ ನೀರು ಬಸ್ ನಿಲ್ದಾಣದ ಒಳಗೆ ಹರಿದುಬರುತ್ತಿದೆ.

ಇಲ್ಲಿನ ಪ್ಲಾಟ್‌ಫಾರಂಗಳಂತೂ ಗುಂಡಿಗಳಿಂದ ಕೂಡಿದ್ದು, ಪ್ರಯಾಣಿಕರು ಬಸ್ ಹತ್ತಲು ಹೋಗುವಾಗ, ಇಳಿಯುವಾಗ ಗಾರೆ ಇಲ್ಲದೆ ರಾಡುಗಳು ಪ್ರಯಾಣಿಕರಿಗೆ ತಗುಲಿ ಗಾಯಗಳಾಗುತ್ತಿವೆ.

ಬಸ್ ನಿಲ್ದಾಣದ ನೀರು ಮುಖ್ಯ ಚರಂಡಿಗೆ ಸೇರಿದಾಗ ಮಾತ್ರ ಸಮಸ್ಯೆ ಬಗೆಹರಿಯುತ್ತದೆ ಎನ್ನುತ್ತಾರೆ ಪ್ರಯಾಣಿಕ ಲಕ್ಷ್ಮಣ್ ಅವರು. ಈ ಬಸ್ ನಿಲ್ದಾಣಕ್ಕೆ ಹೊಂದಿಕೊಂಡಿರುವ ಕಾಂಪೌಂಡ್ ಪಕ್ಕದ ರಸ್ತೆಯ ಬದಿಯಲ್ಲಿ ಅಂಗಡಿ ನಡೆಸುತ್ತಿದ್ದು, ಕಸದ ರಾಶಿ, ಹೋಟೆಲ್‌ಗಳಿಂದ ಬರುವ ತ್ಯಾಜ್ಯದ ನೀರಿನಿಂದ ದುರ್ವಾಸನೆ ಉಂಟಾಗಿ ನಮ್ಮ ಅಂಗಡಿ ಒಳಗಡೆ ಕೂರಲು ಆಗುವುದಿಲ್ಲ ಎಂದು ಅಂಗಡಿ ಮಾಲೀಕರು ತಿಳಿಸುತ್ತಾರೆ.

” ಪ್ರಯಾಣಿಕರು ಬಸ್ ನಿಲ್ದಾಣದಲ್ಲಿ ಕುಳಿತುಕೊಳ್ಳಲು ಸಮರ್ಪಕ ವ್ಯವಸ್ಥೆ ಇಲ್ಲದೆ ನೆಲದ ಮೇಲೆಯೇ ಕುಳಿತುಕೊಳ್ಳುತ್ತಾರೆ. ಕುಡಿಯುವ ನೀರಿನ ಫಿಲ್ಟರ್ ವ್ಯವಸ್ಥೆ ಇಲ್ಲ. ಇಲ್ಲಿನ ಟಿ ಸಿಕೊಠಡಿ ಮುಂಭಾಗ ಬಲ್ಬ್‌ಗಳೆಲ್ಲ ಕೆಟ್ಟು ಹೋಗಿದ್ದು ಅದನ್ನು ಸರಿಪಡಿಸಿಲ್ಲ. ಜನರೇಟರ್, ಸಿಸಿಟಿವಿ ವ್ಯವಸ್ಥೆ ಇಲ್ಲ.”

-ಚಿ.ಕು.ಗೋವಿಂದರಾಜು, ಪ್ರಯಾಣಿಕರು

” ಸದ್ಯದಲ್ಲೇ ಕೇಂದ್ರ ಕಚೇರಿಗೆ ಸಮಸ್ಯೆ ಕುರಿತು ಮಾಹಿತಿ ಕಳುಹಿಸುತ್ತೇವೆ. ಅಲ್ಲಿಂದ ಉತ್ತರ ಬಂದ ತಕ್ಷಣ ಕ್ರಮ ಕೈಗೊಳ್ಳುತ್ತೇವೆ.”

-ವೀರೇಶ್, ಸಾರಿಗೆ ನಿಯಂತ್ರಣಾಧಿಕಾರಿ

” ಬಸ್ ನಿಲ್ದಾಣದಲ್ಲಿನ ಸಮಸ್ಯೆಗಳ ಕುರಿತು ಸಂಬಂಧಪಟ್ಟ ಮೇಲಧಿಕಾರಿಗಳ ಗಮನಕ್ಕೆ ತಂದು ಕ್ರಮ ಕೈಗೊಳ್ಳಲಾಗುತ್ತದೆ.”

-ತ್ಯಾಗರಾಜು, ಹೆಚ್.ಡಿ ಕೋಟೆ ಸಾರಿಗೆ ಘಟಕ ವ್ಯವಸ್ಥಾಪಕರು

 

 

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಒಣಗಿದ ಮರ ತೆರವುಗೊಳಿಸಿ

ಮೈಸೂರು ವಿವಿ ಕ್ರಾಫರ್ಡ್ ಭವನದ ಎದುರಿನ ರಸ್ತೆ ಬದಿಯಲ್ಲಿರುವ ಮರ ಒಣಗಿದೆ. ಈ ಮಾರ್ಗದಲ್ಲಿ ಪ್ರತಿನಿತ್ಯ ನೂರಾರು ವಾಹನಗಳು ಹಾಗೂ…

14 mins ago

ಓದುಗರ ಪತ್ರ: ಎಸ್.ಜಾನಕಿ ಅಜರಾಮರ

ದಕ್ಷಿಣ ಭಾರತದ ಕೋಗಿಲೆ ಎಂದೇ ಜನಪ್ರಿಯರಾಗಿದ್ದ, ಎಸ್. ಜಾನಕಿಯವರು ತಮ್ಮ ಅಂತಿಮ ಇಚ್ಛೆಯಂತೆ ಕನ್ನಡದ ನೆಲದಲ್ಲಿ ಅದರಲ್ಲೂ ಸಾಂಸ್ಕೃತಿಕ ನಗರಿ…

16 mins ago

ಓದುಗರ ಪತ್ರ: 39 ಅಗತ್ಯ ಔಷಧಗಳ ಬೆಲೆ ಇಳಿಕೆ ಸ್ವಾಗತಾರ್ಹ

ಕೇಂದ್ರ ಸರ್ಕಾರದ ಅಧೀನದಲ್ಲಿರುವ ರಾಷ್ಟ್ರೀಯ ಔಷದ ದರ ನಿಯಂತ್ರಣ ಪ್ರಾಧಿಕಾರ (ಎನ್‌ಪಿಪಿಎ) ೩೯ ಅಗತ್ಯ ಔಷಧಗಳ ಬೆಲೆ ಇಳಿಕೆಗೆ ಮಹತ್ವದ…

18 mins ago

ಪಂಜು ಗಂಗೊಳ್ಳಿ ಅವರ ವಾರದ ಅಂಕಣ: ರಮಣ್ ಕಿಶೋರ್ ಎಂಬ ‘ಗಾಂವ್ ಕಾ ಡಾಕ್ಟರ್’

ಕುಗ್ರಾಮಗಳಲ್ಲಿ ವೈದ್ಯಕೀಯ ಶಿಬಿರಗಳ ಆಯೋಜನೆ ಬಿಹಾರದ ಪಟ್ನಾ ಜಿಲ್ಲೆಯ ದರ್ಭಾಂಗಾದ ಭುರವನ್ ಗ್ರಾಮದ ರಮಣ್ ಕಿಶೋರ್ ಅವರದ್ದು ಒಂದು ಸಾಧಾರಣ…

20 mins ago

ದೇವಸ್ಥಾನಗಳ ಅಭಿವೃದ್ಧಿಗೆ ಧಾರ್ಮಿಕ ಪ್ರವಾಸೋದ್ಯಮ ವರದಾನ

ಕೆ.ಬಿ.ರಮೇಶನಾಯಕ ಧಾರ್ಮಿಕತೆ ಹೆಸರಿನಲ್ಲಿ ನಿಷೇಧ ಹೇರಿದ್ದ ವಿಡಿಯೋ, ಫೋಟೋ ಚಿತ್ರೀಕರಣಕ್ಕೂ ಅವಕಾಶ ಮೈಸೂರು, ಮಂಡ್ಯ, ಚಾಮರಾಜನಗರ ಜಿಲ್ಲೆಗಳಲ್ಲಿರುವ ಹೆಸರಾಂತ ದೇವಸ್ಥಾನಗಳಿಗೆ…

23 mins ago

ಮಂಡ್ಯ ಜಿಲ್ಲೆಯ 289 ಗ್ರಾಮಗಳಲ್ಲಿ ಕುಡಿಯುವ ನೀರಿನ ಸಮಸ್ಯೆ

ಹೇಮಂತ್‌ಕುಮಾರ್ ಮಂಡ್ಯ: ಜಿಲ್ಲೆಯಲ್ಲಿ ಮಳೆ ಅಭಾವದಿಂದಾಗಿ ಕುಡಿಯುವ ನೀರಿನ ಸಮಸ್ಯೆ ಎದುರಾಗಿದ್ದು, ನೀರು ಸರಬರಾಜಿಗೆ ಸಂಬಂಧಿಸಿದಂತೆ ಜಿಲ್ಲಾಡಳಿತ ಈಗಾಗಲೇ ಸಮಸ್ಯೆ…

27 mins ago