Andolana originals

ಸರಗೂರು ಬಸ್ ನಿಲ್ದಾಣದಲ್ಲಿ ಅವ್ಯವಸ್ಥೆ; ಸಾರ್ವಜನಿಕರ ಆಕ್ರೋಶ

ದಾಸೇಗೌಡ ಸರಗೂರು

ಅಸಮರ್ಪಕ ವ್ಯವಸ್ಥೆಯಿಂದ ನೀರು ಪೋಲು;ನಿರ್ವಹಣೆಯಿಲ್ಲದ ಶೌಚಾಲಯ, ಕಸದ ರಾಶಿ ತಾಂಡವ

ಸರಗೂರು: ಪಟ್ಟಣದ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಲ್ಲಿ ಶೌಚಾಲಯ ಹಾಗೂ ಹೋಟೆಲ್ಗಳಿಗೆ ನೀರು ಪೂರೈಕೆ ಮಾಡುವ ವ್ಯವಸ್ಥೆಯಲ್ಲಿ ಎರಡು ಓವರ್‌ಹೆಡ್ ಟ್ಯಾಂಕ್‌ಗಳ ನಡುವೆ ತಪ್ಪಾದ ಸಂಪರ್ಕ ಆಗಿರುವ ಹಿನ್ನೆಲೆಯಲ್ಲಿ ಬಸ್ ನಿಲ್ದಾಣದಲ್ಲಿ ಪ್ರತಿ ದಿನ ಸಾವಿರಾರು ಲೀಟರ್ ನೀರು ಪೋಲಾಗುತ್ತಿದ್ದು, ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ನೀರು ಹರಿಯುತ್ತಾ ಪಾಚಿ ಕಟ್ಟಿರುವುದರಿಂದ ಎಷ್ಟೋ ಬಾರಿ ಪ್ರಯಾಣಿಕರು ಓಡಾಡುವಾಗ ಜಾರಿ ಬಿದ್ದು ಗಾಯಗೊಂಡಿರುವ ಘಟನೆಗಳು ನಡೆದಿವೆ. ಹತ್ತು ವರ್ಷಗಳ ಹಳೆಯದಾದ ಶೌಚಾಲಯದಲ್ಲಿ ಸರಿಯಾದ ನಿರ್ವಹಣೆ ಇಲ್ಲದೆ ದುರ್ವಾಸನೆ ಬರುತ್ತಿದೆ. ಕೆಲವು ಶೌಚಾಲಯದ ಬಾಗಿಲುಗಳಿಗೆ ಯಾವುದೇ ಚಿಲಕಗಳು ಇಲ್ಲ. ಮುಖ್ಯ ರಸ್ತೆಯ ಎರಡು ಭಾಗಗಳಲ್ಲೂ ಚರಂಡಿ ವ್ಯವಸ್ಥೆ ಇಲ್ಲ. ಹೀಗಾಗಿ ನೀರು ಬಸ್ ನಿಲ್ದಾಣದ ಒಳಗೆ ಹರಿದುಬರುತ್ತಿದೆ.

ಇಲ್ಲಿನ ಪ್ಲಾಟ್‌ಫಾರಂಗಳಂತೂ ಗುಂಡಿಗಳಿಂದ ಕೂಡಿದ್ದು, ಪ್ರಯಾಣಿಕರು ಬಸ್ ಹತ್ತಲು ಹೋಗುವಾಗ, ಇಳಿಯುವಾಗ ಗಾರೆ ಇಲ್ಲದೆ ರಾಡುಗಳು ಪ್ರಯಾಣಿಕರಿಗೆ ತಗುಲಿ ಗಾಯಗಳಾಗುತ್ತಿವೆ.

ಬಸ್ ನಿಲ್ದಾಣದ ನೀರು ಮುಖ್ಯ ಚರಂಡಿಗೆ ಸೇರಿದಾಗ ಮಾತ್ರ ಸಮಸ್ಯೆ ಬಗೆಹರಿಯುತ್ತದೆ ಎನ್ನುತ್ತಾರೆ ಪ್ರಯಾಣಿಕ ಲಕ್ಷ್ಮಣ್ ಅವರು. ಈ ಬಸ್ ನಿಲ್ದಾಣಕ್ಕೆ ಹೊಂದಿಕೊಂಡಿರುವ ಕಾಂಪೌಂಡ್ ಪಕ್ಕದ ರಸ್ತೆಯ ಬದಿಯಲ್ಲಿ ಅಂಗಡಿ ನಡೆಸುತ್ತಿದ್ದು, ಕಸದ ರಾಶಿ, ಹೋಟೆಲ್‌ಗಳಿಂದ ಬರುವ ತ್ಯಾಜ್ಯದ ನೀರಿನಿಂದ ದುರ್ವಾಸನೆ ಉಂಟಾಗಿ ನಮ್ಮ ಅಂಗಡಿ ಒಳಗಡೆ ಕೂರಲು ಆಗುವುದಿಲ್ಲ ಎಂದು ಅಂಗಡಿ ಮಾಲೀಕರು ತಿಳಿಸುತ್ತಾರೆ.

” ಪ್ರಯಾಣಿಕರು ಬಸ್ ನಿಲ್ದಾಣದಲ್ಲಿ ಕುಳಿತುಕೊಳ್ಳಲು ಸಮರ್ಪಕ ವ್ಯವಸ್ಥೆ ಇಲ್ಲದೆ ನೆಲದ ಮೇಲೆಯೇ ಕುಳಿತುಕೊಳ್ಳುತ್ತಾರೆ. ಕುಡಿಯುವ ನೀರಿನ ಫಿಲ್ಟರ್ ವ್ಯವಸ್ಥೆ ಇಲ್ಲ. ಇಲ್ಲಿನ ಟಿ ಸಿಕೊಠಡಿ ಮುಂಭಾಗ ಬಲ್ಬ್‌ಗಳೆಲ್ಲ ಕೆಟ್ಟು ಹೋಗಿದ್ದು ಅದನ್ನು ಸರಿಪಡಿಸಿಲ್ಲ. ಜನರೇಟರ್, ಸಿಸಿಟಿವಿ ವ್ಯವಸ್ಥೆ ಇಲ್ಲ.”

-ಚಿ.ಕು.ಗೋವಿಂದರಾಜು, ಪ್ರಯಾಣಿಕರು

” ಸದ್ಯದಲ್ಲೇ ಕೇಂದ್ರ ಕಚೇರಿಗೆ ಸಮಸ್ಯೆ ಕುರಿತು ಮಾಹಿತಿ ಕಳುಹಿಸುತ್ತೇವೆ. ಅಲ್ಲಿಂದ ಉತ್ತರ ಬಂದ ತಕ್ಷಣ ಕ್ರಮ ಕೈಗೊಳ್ಳುತ್ತೇವೆ.”

-ವೀರೇಶ್, ಸಾರಿಗೆ ನಿಯಂತ್ರಣಾಧಿಕಾರಿ

” ಬಸ್ ನಿಲ್ದಾಣದಲ್ಲಿನ ಸಮಸ್ಯೆಗಳ ಕುರಿತು ಸಂಬಂಧಪಟ್ಟ ಮೇಲಧಿಕಾರಿಗಳ ಗಮನಕ್ಕೆ ತಂದು ಕ್ರಮ ಕೈಗೊಳ್ಳಲಾಗುತ್ತದೆ.”

-ತ್ಯಾಗರಾಜು, ಹೆಚ್.ಡಿ ಕೋಟೆ ಸಾರಿಗೆ ಘಟಕ ವ್ಯವಸ್ಥಾಪಕರು

 

 

ಆಂದೋಲನ ಡೆಸ್ಕ್

Recent Posts

ನೇಪಾಳ ಪ್ರವಾಹ | ಮೃತರ ಸಂಖ್ಯೆ 939ಕ್ಕೆ ಏರಿಕೆ, ಇನ್ನೂ ಸುಮಾರು 4,000 ಜನ ಕಣ್ಮರೆ

ಕಠ್ಮಂಡು: ನೇಪಾಳದಲ್ಲಿ ಭೀಕರ ಪ್ರವಾಹದ ಅಬ್ಬರ ಮುಂದುವರಿದಿದ್ದು, ಮೃತರ ಸಂಖ್ಯೆ 939ಕ್ಕೆ ಏರಿಕೆಯಾಗಿದೆ. ಇನ್ನೂ ಸುಮಾರು 4 ಸಾವಿರ ಜನರು…

1 hour ago

ಮಡಿಕೇರಿ: ಕೆರೆಗೆ ಹಾರಿ ತಾಯಿ ಮಗಳು ಆತ್ಮಹತ್ಯೆ

ಮಡಿಕೇರಿ: ತಲಕಾವೇರಿ ಸಮೀಪದ ತಣ್ಣಿಮಾನಿ ಗ್ರಾಮದಲ್ಲಿ ತಾಯಿ ಮತ್ತು ಮಗಳು ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ನಡೆದಿದೆ.…

1 hour ago

ಮಡಿಕೇರಿ: ಭಾರೀ ಮಳೆಗೆ ಬೆಟ್ಟದಲ್ಲಿ ಜಾರಿನಿಂತ ಬೃಹತ್‌ ಕಲ್ಲುಬಂಡೆ!

ಮಡಿಕೇರಿ: ಕೊಡಗಿನಲ್ಲಿ ಭಾರೀ ಮಳೆಗೆ ಬೆಟ್ಟದಲ್ಲಿ ಜಾರಿನಿಂತ ಬೃಹತ್‌ ಕಲ್ಲುಬಂಡೆ ಆತಂಕ ಮೂಡಿಸಿದೆ. ಮಡಿಕೇರಿ ತಾಲೂಕಿನ ಕುಂದಚೇರಿ ಗ್ರಾಮದ ಪೊಲಮಾನಿ…

2 hours ago

ಓದುಗರ ಪತ್ರ: ನೀರು ಸೋರಿಕೆ ತಡೆಗಟ್ಟಿ

ಮೈಸೂರಿನ ಚಾಮರಾಜ ಮೊಹದ ಸೋನಾರ್ ಬೀದಿಯಲ್ಲಿ ಸಾರ್ವಜನಿಕ ನಲ್ಲಿಗೆ ಸಂಪರ್ಕ ಕಲ್ಪಿಸುವ ಪೈಪ್ ಪಡೆದುಹೋಗಿದ್ದು, ಕುಡಿಯುವ ನೀರು ಚರಂಡಿ ಪಾಲಾಗುತ್ತಿದೆ.…

9 hours ago

ಓದುಗರ ಪತ್ರ: ಬದಲಾಗುತ್ತಿದೆ ಚಾತುರ್ಮಾಸ ಪದದ ಅರ್ಥ

ಪ್ರತಿವರ್ಷ ಆಷಾಢ, ಶ್ರಾವಣ ಮಾಸದ ಸಮಯದಲ್ಲಿ ಎಲ್ಲ ಮಠಾಧೀಶರೂ ಚಾತುರ್ಮಾಸ ವ್ರತವನ್ನು ಆಚರಿಸುವುದು ವಾಡಿಕೆ. ಚಾತುರ್ಮಾಸ ಎಂದರೆ ನಾಲ್ಕು ತಿಂಗಳು.…

9 hours ago

ಓದುಗರ ಪತ್ರ: ದಸರಾ ಮಹೋತ್ಸವ ಸರಳವಾಗಿರಲಿ

ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವವು ನಮ್ಮ ನಾಡಿನ ಸಾಂಸ್ಕೃತಿಕ ಅನನ್ಯತೆಯನ್ನು ಎತ್ತಿ ಹಿಡಿಯುತ್ತದೆ. ಕಲೆ, ಸಾಹಿತ್ಯ, ಸಂಸ್ಕೃತಿಯ ಮೂಲಕ…

9 hours ago