Andolana originals

ಚಿಕ್ಕದೇವಮ್ಮನವರ ಜಾತ್ರಾ ಮಹೋತ್ಸವಕ್ಕೆ ಸಕಲ ಸಿದ್ಧತೆ

ದಾಸೇಗೌಡ

ಮಾ.೧೯ರಿಂದ ೩ ದಿನಗಳ ಕಾಲ ಉತ್ಸವ; ಹಾಲುಗಡ, ಇಟ್ನ ಗ್ರಾಮಗಳಲ್ಲಿ ಮನೆ ಮಾಡಿದ ಸಂಭ್ರಮ

ಸರಗೂರು: ಇತಿಹಾಸ ಪ್ರಸಿದ್ಧ ಶ್ರೀ ಚಿಕ್ಕದೇವಮ್ಮನವರ ಜಾತ್ರಾ ಮಹೋತ್ಸವವನ್ನು ವಿಜೃಂಭಣೆಯಿಂದ ನಡೆಸಲು ಸಕಲ ಸಿದ್ಧತೆಗಳು ಭರದಿಂದ ನಡೆಯುತ್ತಿವೆ.

ಕಪಿಲ ನದಿಗೆ ಹೊಂದಿಕೊಂಡಂತಿರುವ ಹಾಲುಗಡ, ಇಟ್ನ ಗ್ರಾಮಗಳಲ್ಲಿ ಮಾ.೧೯ರಿಂದ ೩ ದಿನಗಳು ನಡೆಯುವ ಅಮ್ಮನವರ ಜಾತ್ರೆಗೆ ಜಾತ್ರಾ ಮಹೋತ್ಸವ ಸಮಿತಿ, ಇಟ್ನ ಗ್ರಾಮಸ್ಥರು ಸಿದ್ಧತೆ ಕೈಗೊಂಡಿದ್ದಾರೆ.

ಮಾ.೧೯ರಂದು ಯುಗಾದಿ ಹಬ್ಬದ ಪ್ರಯುಕ್ತ ಶ್ರೀ ಚಿಕ್ಕದೇವಮ್ಮನ ಬೆಟ್ಟದಿಂದ ಅಮ್ಮನವರ ಉತ್ಸವಮೂರ್ತಿಯನ್ನು ತಂದು ಹಾಲುಗಡದ ಜಪದಕಟ್ಟೆಯಲ್ಲಿ ಇಟ್ಟು ಪೂಜಿಸಲಾಗುವುದು. ನಂತರ ಭಕ್ತರು ಜಪ್ಪದಕಟ್ಟೆಯಲ್ಲಿನ ಚಿಕ್ಕದೇವಮ್ಮ ನಿಗೆ ವಿಶೇಷ ಪೂಜೆ ಸಲ್ಲಿಸಿ, ದೇವರಿಗೆ ಹರಕೆ ತೀರಿಸಲಿದ್ದಾರೆ. ಮಧ್ಯಾಹ್ನ ೩.೩೦ಕ್ಕೆ ಅಮ್ಮನವರನ್ನು ಗೂಳಿ ಮಂಟಪದಲ್ಲಿ ಕೂರಿಸಿ ಪೂಜಿಸಿದ ಬಳಿಕ ಹಾಲಿನ ಮಂಟಪದಲ್ಲಿ ಪೂಜಿಸಲಾಗುವುದು.

ಸಂಜೆ ೪ಕ್ಕೆ ಉತ್ಸವಮೂರ್ತಿಯನ್ನು ಹಾಲುಗಡದಿಂದ ಇಟ್ನ ಗ್ರಾಮಕ್ಕೆ ವಾದ್ಯಗೋಷ್ಠಿಗಳೊಂದಿಗೆ ತಂದು ಮಠದ ಹೊಲದ ಮಂಟಪ ದಲ್ಲಿ ಪೂಜಿಸಲಾಗುವುದು. ರಾತ್ರಿ ೯ಕ್ಕೆ ಚಿಕ್ಕದೇವಮ್ಮ ಅಮ್ಮನವರನ್ನು ಕುದುರೆಯ ರಥದ ಮೇಲೆ ಕೂರಿಸಿ ಹೂವಿನಿಂದ ಅಲಂಕರಿಸಿ ವಿವಿಧ ಕಲಾತಂಡಗಳ ಸಮೇತ ಗ್ರಾಮದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ನಡೆಸಲಾಗುವುದು. ಮಾ.೨೦ರಂದು ಮುಂಜಾನೆ ೪ಕ್ಕೆ ಬಾಣ ಬಿರುಸುಗಳ ಸಮೇತ ವಿಶೇಷ ಪೂಜೆ ಸಲ್ಲಿಸಲಾಗುವುದು. ಬಳಿಕ ಮಾರಮ್ಮನ ದೇವಸ್ಥಾನದಲ್ಲಿ ಪೂಜಿಸಲಾಗುವುದು.

ಬೆಳಿಗ್ಗೆ ೮ಕ್ಕೆ ಚಿಕ್ಕದೇವಮ್ಮ ಅಮ್ಮನವರಿಗೆ ಕಪಿಲ ನದಿಯಲ್ಲಿ ತೀಥೋತ್ಸವ, ಕುಂಕುಮಾರ್ಚನೆ ಸೇರಿದಂತೆ ವಿವಿಧ ಪೂಜಾ ವಿಽ-ವಿಧಾನ ನೆರವೇರಿಸಲಾಗುವುದು. ನಂತರ ಗ್ರಾಮದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ನಡೆಸಿ, ಮತ್ತೆ ಮಠದ ಹೊಲದ ಮಂಟಪದಲ್ಲಿ ಪೂಜಿಸಲಾಗುವುದು. ರಾತ್ರಿ ೯ಕ್ಕೆ ‘ಅಣ್ಣನ ಅರಮನೆ’ ಅಥವಾ ‘ಕಲಿಯುಗದ ಅರ್ಜುನ’ ಎಂಬ ನಾಟಕ ಪ್ರದರ್ಶನ ನಡೆಯಲಿದೆ.

ಮಾ.೨೧ರಂದು ಚಿಕ್ಕದೇವಮ್ಮನಿಗೆ ವಿಶೇಷ ಪೂಜೆ ಮುಗಿಸಿ, ಮಧ್ಯಾಹ್ನ ೧೨ಕ್ಕೆ ಇಟ್ನ ಗ್ರಾಮ ದಿಂದ ಹೊರಟು ಹಾಲುಗಡದ ಜಪದಕಟ್ಟೆಯಲ್ಲಿ ಎಡೆಪೂಜೆ, ತಳಿಗೆ ಪೂಜೆ, ಮಹಾಮಂಗಳಾರತಿ ಮಾಡಲಾಗುವುದು. ಬಳಿಕ ದೇವಿಯ ಮೂರ್ತಿ ಬೆಟ್ಟಕ್ಕೆ ಹೊರಡಲಿದೆ.

ಭಕ್ತರಿಗೆ ಕಪಿಲ ನದಿ ಸಮೀಪದಲ್ಲಿ ಮೂರು ದಿನಗಳ ಕಾಲ ಅನ್ನ ಸಂತರ್ಪಣೆ ಆಯೋಜಿಸಲಾಗಿದೆ. ಶಾಸಕ ಅನಿಲ್ ಚಿಕ್ಕಮಾದು, ಮಾಜಿ ಶಾಸಕ ಬೀಚನಹಳ್ಳಿ ಚಿಕ್ಕಣ್ಣ, ಜಾ.ದಳ ಮುಖಂಡ ಕೆ.ಎಂ.ಕೃಷ್ಣನಾಯಕ, ಉದ್ಯಮಿ ಎನ್.ಬೆಳ್ತೂರು ನಿಂಗರಾಜು, ಇಟ್ನ ಗ್ರಾಮದ ದೇವಾಲಮ್ಮ ಬೊಂಡನಚಿನ್ನನಾಯಕ ಅನ್ನದಾನ ಸೇವಾರ್ಥದಾರರಾಗಿದ್ದಾರೆ.

ಚಿಕ್ಕದೇವಮ್ಮನ ಜಾತ್ರೆ ಕಮಿಟಿ ಟ್ರಸ್ಟ್ ಅಧ್ಯಕ್ಷ ದೊಡ್ಡವೀರನಾಯಕ, ಎನ್.ಬಸವನಾಯಕ, ಯಜಮಾನರಾದ ಬಿ.ಬೆಟ್ಟನಾಯಕ, ಚಿನ್ನನಾಯಕ, ತಮ್ಮರಾಜು, ಡೈರಿ ಬೆಟ್ಟನಾಯಕ, ಅನಿಲ್, ಕಾಳಿಂಗನಾಯಕ, ಸಣ್ಣಸ್ವಾಮಿನಾಯಕ, ಐಬಿ ರವಿಕುಮಾರ್, ಜಯರಾಮ್, ನಾಗೇಂದ್ರ, ಸೋಮಣ್ಣ, ಚಿಕ್ಕಣ್ಣ, ಬಿ.ಬಸವರಾಜು ಸೇರಿದಂತೆ ಹಾಲುಗಡ ಹಾಗೂ ಇಟ್ನ ಗ್ರಾಮಗಳವರು ಜಾತ್ರೆಗೆ ಸಿದ್ಧತೆ ನಡೆಸುತ್ತಿದ್ದಾರೆ.

ಬಸ್ ವ್ಯವಸ್ಥೆ: 

ಮೂರು ದಿನಗಳ ಕಾಲ ನಡೆಯುವ ಚಿಕ್ಕದೇವಮ್ಮನ ಜಾತ್ರಾ ಮಹೋತ್ಸವಕ್ಕೆ ಮೈಸೂರು, ಕೋಟೆ, ಸರಗೂರಿನಿಂದ ಸಾರಿಗೆ ಬಸ್ ವ್ಯವಸ್ಥೆ ಕಲ್ಪಿಸಲಾಗಿದೆ. ಇದಲ್ಲದೆ ಜಾತ್ರಾ ಮಹೋತ್ಸವ ಸಂದರ್ಭದಲ್ಲಿ ಯಾವುದೇ ಅಹಿಕತರ ಘಟನೆ ಜರುಗದಂತೆ ಮುನ್ನೆಚ್ಚರಿಕೆ ಕ್ರಮವಾಗಿ ಹೆಚ್ಚುವರಿ ಪೊಲೀಸ್ ವ್ಯವಸ್ಥೆಯನ್ನು ಮಾಡಲಾಗಿದೆ. ಪ್ರಾಣಿ ಬಲಿಯನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ ಎಂದು ಗ್ರಾಪಂ ಮಾಜಿ ಅಧ್ಯಕ್ಷ ಇಟ್ನ ಜಯರಾಮ್, ಡೈರಿ ಬೆಟ್ಟನಾಯಕ ತಿಳಿಸಿದರು

” ಮೂರು ದಿನಗಳ ಕಾಲ ಚಿಕ್ಕದೇವಮ್ಮನ ಜಾತ್ರಾ ಮಹೋತ್ಸವವು ಜಾತ್ರಾ ಕಮಿಟಿ, ಇಟ್ನ ಗ್ರಾಮಸ್ಥರು ಹಾಗೂ ಭಕ್ತರ ಸಹಕಾರದಿಂದ ವಿಜೃಂಭಣೆಯಿಂದ ನಡೆಯಲಿದೆ. ವರ್ಷದಿಂದ ವರ್ಷಕ್ಕೆ ವಿಭಿನ್ನವಾಗಿ ಜಾತ್ರೆಯನ್ನು ಆಚರಿಸಲಾಗುತ್ತಿದೆ.”

-ದೊಡ್ಡವೀರನಾಯಕ, ಜಾತ್ರಾ ಕಮಿಟಿ ಅಧ್ಯಕ್ಷ

 

 

ಆಂದೋಲನ ಡೆಸ್ಕ್

Recent Posts

ಶ್ರೀರಂಗಪಟ್ಟಣ | ನಟೋರಿಯಸ್ ರೌಡಿಶೀಟರ್‌ ಬರ್ಬರ ಹತ್ಯೆ

ಶ್ರೀರಂಗಪಟ್ಟಣ  : ತಾಲೂಕಿನ ಪಾಲಹಳ್ಳಿ ಲಕ್ಷ್ಮೀಪುರ ರಸ್ತೆಯಲ್ಲಿ ಮೈಸೂರಿನ ನಟೋರಿಯಸ್ ರೌಡಿಶೀಟರ್ ನ ಬರ್ಬರ ಹತ್ಯೆ ಮಾಡಿರುವ ಘಟನೆ ನಡೆದಿದೆ.…

4 hours ago

ಅರ್ಜುನ ಆನೆ ಸ್ಮಾರಕ ಲೋಕರ್ಪಣೆ

ಹಾಸನ : ಯಸಳೂರಿನ ದಬ್ಬಳಿಕಟ್ಟೆ ನೆಡುತೋಪಿನಲ್ಲಿ ನಿರ್ಮಿಸಿರುವ ಹುತಾತ್ಮ ಅರ್ಜುನ ಆನೆಯ 650 ಕೆ.ಜಿ. ತೂಕದ ಸುಂದರ ಪ್ರತಿಮೆಯ ಸ್ಮಾರಕವನ್ನು…

4 hours ago

ಅಮೃತ್‌ಸರ, ಜಲಂಧರ್‌ನಲ್ಲಿ ಸ್ಫೋಟ : ಪಂಜಾಬ್‌ನಲ್ಲಿ ಕಟ್ಟೆಚ್ಚರ

ಅಮೃತ್‌ಸರ : ಪಂಜಾಬ್‌ನ ಅಮೃತ್‌ಸರ್ ಮತ್ತು ಜಲಂಧರ್‌ನ ಹೈ ಸೆಕ್ಯೂರಿಟಿ ವಲಯಗಳ ಬಳಿ ಮಂಗಳವಾರ ಕೆಲವೇ ಗಂಟೆಗಳ ಅಂತರದಲ್ಲಿ ಸ್ಛೋಟ…

4 hours ago

ದುಬಾರೆಯಲ್ಲಿ ತೂಗು ಸೇತುವೆಗೆ ಶಂಕುಸ್ಥಾಪನೆ ನೆರವೇರಿಸಿದ ಈಶ್ವರ ಖಂಡ್ರೆ

7.3 ಕೋಟಿ ರೂ. ವೆಚ್ಚದಲ್ಲಿ ತೂಗು ಸೇತುವೆ ನಿರ್ಮಾಣ ಶೀಘ್ರ :ಈಶ್ವರ ಖಂಡ್ರೆ ದುಬಾರೆ :  ವನ್ಯಜೀವಿಗಳ ಸಂಖ್ಯೆ ದಿನದಿಂದ…

5 hours ago

ಒಳಮೀಸಲಾತಿ ಜಾರಿ ಸರ್ಕಾರದ ಐತಿಹಾಸಿಕ ತೀರ್ಮಾನ : ಸಿಎಂ ಪ್ರತಿಪಾದನೆ

ಮೈಸೂರು : ರಾಜ್ಯದಲ್ಲಿ ಒಳಮೀಸಲಾತಿ ಜಾರಿಗೊಳಿಸುವಲ್ಲಿ ಕಾಂಗ್ರೆಸ್‌ ಸಫಲವಾಗಿದ್ದು, ಇದು ಸರ್ಕಾರದ ಐತಿಹಾಸಿಕ ತೀರ್ಮಾನವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಪಾದಿಸಿದರು.…

5 hours ago

ಮೈಸೂರು | ಉದ್ದೇಶಿತ ಮೇಲ್ಸೇತುವೆ ಪ್ರದೇಶಕ್ಕೆ ಈಶ್ವರ ಖಂಡ್ರೆ ಭೇಟಿ, ಪರಿಶೀಲನೆ

ಮೈಸೂರು : ಮೈಸೂರಿನ ಸಿದ್ದಿಕಿ ನಗರ, ಮಣಿಪಾಲ್ ಆಸ್ಪತ್ರೆ ವೃತ್ತದ ಬಳಿ ರಾ.ಹೆ.275ರಲ್ಲಿ ಉದ್ದೇಶಿತ ಮೇಲ್ಸೇತುವೆ ಸ್ಥಳಕ್ಕೆ ಅರಣ್ಯ, ಜೀವಿಶಾಸ್ತ್ರ…

5 hours ago