Andolana originals

ಚಿಕ್ಕದೇವಮ್ಮನವರ ಜಾತ್ರಾ ಮಹೋತ್ಸವಕ್ಕೆ ಸಕಲ ಸಿದ್ಧತೆ

ದಾಸೇಗೌಡ

ಮಾ.೧೯ರಿಂದ ೩ ದಿನಗಳ ಕಾಲ ಉತ್ಸವ; ಹಾಲುಗಡ, ಇಟ್ನ ಗ್ರಾಮಗಳಲ್ಲಿ ಮನೆ ಮಾಡಿದ ಸಂಭ್ರಮ

ಸರಗೂರು: ಇತಿಹಾಸ ಪ್ರಸಿದ್ಧ ಶ್ರೀ ಚಿಕ್ಕದೇವಮ್ಮನವರ ಜಾತ್ರಾ ಮಹೋತ್ಸವವನ್ನು ವಿಜೃಂಭಣೆಯಿಂದ ನಡೆಸಲು ಸಕಲ ಸಿದ್ಧತೆಗಳು ಭರದಿಂದ ನಡೆಯುತ್ತಿವೆ.

ಕಪಿಲ ನದಿಗೆ ಹೊಂದಿಕೊಂಡಂತಿರುವ ಹಾಲುಗಡ, ಇಟ್ನ ಗ್ರಾಮಗಳಲ್ಲಿ ಮಾ.೧೯ರಿಂದ ೩ ದಿನಗಳು ನಡೆಯುವ ಅಮ್ಮನವರ ಜಾತ್ರೆಗೆ ಜಾತ್ರಾ ಮಹೋತ್ಸವ ಸಮಿತಿ, ಇಟ್ನ ಗ್ರಾಮಸ್ಥರು ಸಿದ್ಧತೆ ಕೈಗೊಂಡಿದ್ದಾರೆ.

ಮಾ.೧೯ರಂದು ಯುಗಾದಿ ಹಬ್ಬದ ಪ್ರಯುಕ್ತ ಶ್ರೀ ಚಿಕ್ಕದೇವಮ್ಮನ ಬೆಟ್ಟದಿಂದ ಅಮ್ಮನವರ ಉತ್ಸವಮೂರ್ತಿಯನ್ನು ತಂದು ಹಾಲುಗಡದ ಜಪದಕಟ್ಟೆಯಲ್ಲಿ ಇಟ್ಟು ಪೂಜಿಸಲಾಗುವುದು. ನಂತರ ಭಕ್ತರು ಜಪ್ಪದಕಟ್ಟೆಯಲ್ಲಿನ ಚಿಕ್ಕದೇವಮ್ಮ ನಿಗೆ ವಿಶೇಷ ಪೂಜೆ ಸಲ್ಲಿಸಿ, ದೇವರಿಗೆ ಹರಕೆ ತೀರಿಸಲಿದ್ದಾರೆ. ಮಧ್ಯಾಹ್ನ ೩.೩೦ಕ್ಕೆ ಅಮ್ಮನವರನ್ನು ಗೂಳಿ ಮಂಟಪದಲ್ಲಿ ಕೂರಿಸಿ ಪೂಜಿಸಿದ ಬಳಿಕ ಹಾಲಿನ ಮಂಟಪದಲ್ಲಿ ಪೂಜಿಸಲಾಗುವುದು.

ಸಂಜೆ ೪ಕ್ಕೆ ಉತ್ಸವಮೂರ್ತಿಯನ್ನು ಹಾಲುಗಡದಿಂದ ಇಟ್ನ ಗ್ರಾಮಕ್ಕೆ ವಾದ್ಯಗೋಷ್ಠಿಗಳೊಂದಿಗೆ ತಂದು ಮಠದ ಹೊಲದ ಮಂಟಪ ದಲ್ಲಿ ಪೂಜಿಸಲಾಗುವುದು. ರಾತ್ರಿ ೯ಕ್ಕೆ ಚಿಕ್ಕದೇವಮ್ಮ ಅಮ್ಮನವರನ್ನು ಕುದುರೆಯ ರಥದ ಮೇಲೆ ಕೂರಿಸಿ ಹೂವಿನಿಂದ ಅಲಂಕರಿಸಿ ವಿವಿಧ ಕಲಾತಂಡಗಳ ಸಮೇತ ಗ್ರಾಮದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ನಡೆಸಲಾಗುವುದು. ಮಾ.೨೦ರಂದು ಮುಂಜಾನೆ ೪ಕ್ಕೆ ಬಾಣ ಬಿರುಸುಗಳ ಸಮೇತ ವಿಶೇಷ ಪೂಜೆ ಸಲ್ಲಿಸಲಾಗುವುದು. ಬಳಿಕ ಮಾರಮ್ಮನ ದೇವಸ್ಥಾನದಲ್ಲಿ ಪೂಜಿಸಲಾಗುವುದು.

ಬೆಳಿಗ್ಗೆ ೮ಕ್ಕೆ ಚಿಕ್ಕದೇವಮ್ಮ ಅಮ್ಮನವರಿಗೆ ಕಪಿಲ ನದಿಯಲ್ಲಿ ತೀಥೋತ್ಸವ, ಕುಂಕುಮಾರ್ಚನೆ ಸೇರಿದಂತೆ ವಿವಿಧ ಪೂಜಾ ವಿಽ-ವಿಧಾನ ನೆರವೇರಿಸಲಾಗುವುದು. ನಂತರ ಗ್ರಾಮದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ನಡೆಸಿ, ಮತ್ತೆ ಮಠದ ಹೊಲದ ಮಂಟಪದಲ್ಲಿ ಪೂಜಿಸಲಾಗುವುದು. ರಾತ್ರಿ ೯ಕ್ಕೆ ‘ಅಣ್ಣನ ಅರಮನೆ’ ಅಥವಾ ‘ಕಲಿಯುಗದ ಅರ್ಜುನ’ ಎಂಬ ನಾಟಕ ಪ್ರದರ್ಶನ ನಡೆಯಲಿದೆ.

ಮಾ.೨೧ರಂದು ಚಿಕ್ಕದೇವಮ್ಮನಿಗೆ ವಿಶೇಷ ಪೂಜೆ ಮುಗಿಸಿ, ಮಧ್ಯಾಹ್ನ ೧೨ಕ್ಕೆ ಇಟ್ನ ಗ್ರಾಮ ದಿಂದ ಹೊರಟು ಹಾಲುಗಡದ ಜಪದಕಟ್ಟೆಯಲ್ಲಿ ಎಡೆಪೂಜೆ, ತಳಿಗೆ ಪೂಜೆ, ಮಹಾಮಂಗಳಾರತಿ ಮಾಡಲಾಗುವುದು. ಬಳಿಕ ದೇವಿಯ ಮೂರ್ತಿ ಬೆಟ್ಟಕ್ಕೆ ಹೊರಡಲಿದೆ.

ಭಕ್ತರಿಗೆ ಕಪಿಲ ನದಿ ಸಮೀಪದಲ್ಲಿ ಮೂರು ದಿನಗಳ ಕಾಲ ಅನ್ನ ಸಂತರ್ಪಣೆ ಆಯೋಜಿಸಲಾಗಿದೆ. ಶಾಸಕ ಅನಿಲ್ ಚಿಕ್ಕಮಾದು, ಮಾಜಿ ಶಾಸಕ ಬೀಚನಹಳ್ಳಿ ಚಿಕ್ಕಣ್ಣ, ಜಾ.ದಳ ಮುಖಂಡ ಕೆ.ಎಂ.ಕೃಷ್ಣನಾಯಕ, ಉದ್ಯಮಿ ಎನ್.ಬೆಳ್ತೂರು ನಿಂಗರಾಜು, ಇಟ್ನ ಗ್ರಾಮದ ದೇವಾಲಮ್ಮ ಬೊಂಡನಚಿನ್ನನಾಯಕ ಅನ್ನದಾನ ಸೇವಾರ್ಥದಾರರಾಗಿದ್ದಾರೆ.

ಚಿಕ್ಕದೇವಮ್ಮನ ಜಾತ್ರೆ ಕಮಿಟಿ ಟ್ರಸ್ಟ್ ಅಧ್ಯಕ್ಷ ದೊಡ್ಡವೀರನಾಯಕ, ಎನ್.ಬಸವನಾಯಕ, ಯಜಮಾನರಾದ ಬಿ.ಬೆಟ್ಟನಾಯಕ, ಚಿನ್ನನಾಯಕ, ತಮ್ಮರಾಜು, ಡೈರಿ ಬೆಟ್ಟನಾಯಕ, ಅನಿಲ್, ಕಾಳಿಂಗನಾಯಕ, ಸಣ್ಣಸ್ವಾಮಿನಾಯಕ, ಐಬಿ ರವಿಕುಮಾರ್, ಜಯರಾಮ್, ನಾಗೇಂದ್ರ, ಸೋಮಣ್ಣ, ಚಿಕ್ಕಣ್ಣ, ಬಿ.ಬಸವರಾಜು ಸೇರಿದಂತೆ ಹಾಲುಗಡ ಹಾಗೂ ಇಟ್ನ ಗ್ರಾಮಗಳವರು ಜಾತ್ರೆಗೆ ಸಿದ್ಧತೆ ನಡೆಸುತ್ತಿದ್ದಾರೆ.

ಬಸ್ ವ್ಯವಸ್ಥೆ: 

ಮೂರು ದಿನಗಳ ಕಾಲ ನಡೆಯುವ ಚಿಕ್ಕದೇವಮ್ಮನ ಜಾತ್ರಾ ಮಹೋತ್ಸವಕ್ಕೆ ಮೈಸೂರು, ಕೋಟೆ, ಸರಗೂರಿನಿಂದ ಸಾರಿಗೆ ಬಸ್ ವ್ಯವಸ್ಥೆ ಕಲ್ಪಿಸಲಾಗಿದೆ. ಇದಲ್ಲದೆ ಜಾತ್ರಾ ಮಹೋತ್ಸವ ಸಂದರ್ಭದಲ್ಲಿ ಯಾವುದೇ ಅಹಿಕತರ ಘಟನೆ ಜರುಗದಂತೆ ಮುನ್ನೆಚ್ಚರಿಕೆ ಕ್ರಮವಾಗಿ ಹೆಚ್ಚುವರಿ ಪೊಲೀಸ್ ವ್ಯವಸ್ಥೆಯನ್ನು ಮಾಡಲಾಗಿದೆ. ಪ್ರಾಣಿ ಬಲಿಯನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ ಎಂದು ಗ್ರಾಪಂ ಮಾಜಿ ಅಧ್ಯಕ್ಷ ಇಟ್ನ ಜಯರಾಮ್, ಡೈರಿ ಬೆಟ್ಟನಾಯಕ ತಿಳಿಸಿದರು

” ಮೂರು ದಿನಗಳ ಕಾಲ ಚಿಕ್ಕದೇವಮ್ಮನ ಜಾತ್ರಾ ಮಹೋತ್ಸವವು ಜಾತ್ರಾ ಕಮಿಟಿ, ಇಟ್ನ ಗ್ರಾಮಸ್ಥರು ಹಾಗೂ ಭಕ್ತರ ಸಹಕಾರದಿಂದ ವಿಜೃಂಭಣೆಯಿಂದ ನಡೆಯಲಿದೆ. ವರ್ಷದಿಂದ ವರ್ಷಕ್ಕೆ ವಿಭಿನ್ನವಾಗಿ ಜಾತ್ರೆಯನ್ನು ಆಚರಿಸಲಾಗುತ್ತಿದೆ.”

-ದೊಡ್ಡವೀರನಾಯಕ, ಜಾತ್ರಾ ಕಮಿಟಿ ಅಧ್ಯಕ್ಷ

 

 

ಆಂದೋಲನ ಡೆಸ್ಕ್

Recent Posts

ಅಗತ್ಯ ಸುರಕ್ಷತಾ ಕ್ರಮಗಳೊಂದಿಗೆ ಬಂಡೀಪುರ-ನಾಗರಹೊಳೆ ಸಫಾರಿ ಆರಂಭಿಸಿ: ಸಿಎಂ ಡಿ.ಕೆ.ಶಿವಕುಮಾರ್‌ ಸೂಚನೆ

ಬೆಂಗಳೂರು: ಅಗತ್ಯ ಸುರಕ್ಷತಾ ಕ್ರಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಿ ಬಂಡೀಪುರ ಹಾಗೂ ನಾಗರಹೊಳೆ ಉದ್ಯಾನಗಳಲ್ಲಿ ಸಫಾರಿ ಆರಂಭಿಸಿ ಎಂದು ಸಿಎಂ ಡಿ.ಕೆ.ಶಿವಕುಮಾರ್‌…

8 hours ago

ವೆನೆಜುವೆಲಾ ಭೂಕಂಪ: ಮೃತರ ಸಂಖ್ಯೆ 1700ಕ್ಕೆ ಏರಿಕೆ

ವೆನೆಜುವೆಲಾ: ಇಲ್ಲಿ ಬುಧವಾರ ಸಂಜೆ ಸಂಭವಿಸಿದ ಎರಡು ಪ್ರಬಲ ಭೂಕಂಪಗಳಲ್ಲಿ ಮೃತಪಟ್ಟವರ ಸಂಖ್ಯೆ 1700ಕ್ಕೆ ಏರಿಕೆಯಾಗಿದೆ. ಈ ದುರಂತದಲ್ಲಿ 5000ಕ್ಕೂ…

8 hours ago

ರಾಜಸ್ಥಾನದಲ್ಲಿ ಪ್ಯಾರಾಮೆಡಿಕಲ್‌ ಪರೀಕ್ಷೆ ಪ್ರಶ್ನೆ ಪತ್ರಿಕೆ ಸೋರಿಕೆ: ನಾಲ್ವರು ಅರೆಸ್ಟ್‌

ಜೈಪುರ: ರಾಜಸ್ಥಾನ ಆರೋಗ್ಯ ವಿಜ್ಞಾನ ವಿಶ್ವವಿದ್ಯಾಲಯದ ಪ್ಯಾರಾಮೆಡಿಕಲ್‌ ಪರೀಕ್ಷೆಯಲ್ಲಿ ಸಾಮೂಹಿಕ ನಕಲು ನಡೆಯುತ್ತಿದ್ದ ವೇಳೆಯೇ ಪರೀಕ್ಷೆ ಹಾಲ್‌ ಮೇಲೆ ಪೊಲೀಸರು…

9 hours ago

ಎಸ್‌ಐಆರ್‌ ಬಗ್ಗೆ ಗಾಬರಿ ಬೇಡ: ಬಾನು ಮುಷ್ತಾಕ್‌

ಹಾಸನ: ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ ಪ್ರಕ್ರಿಯೆಯು ಆರಂಭವಾಗಿದೆ. ಹಾಸನದಲ್ಲಿ ಬೂಕರ್‌ ಪ್ರಶಸ್ತಿ ವಿಜೇತೆ ಬಾನು ಮುಷ್ತಾಕ್‌…

9 hours ago

ನಾಡಿನ ಖ್ಯಾತ ಕಲಾವಿದ ಕೆ.ಟಿ.ಶಿವಪ್ರಸಾದ್‌ ನಿಧನ

ಬೆಂಗಳೂರು: ನಾಡಿನ ಖ್ಯಾತ ಹಾಗೂ ಅಂತರಾಷ್ಟ್ರೀಯ ಖ್ಯಾತಿಯ ಕಲಾವಿದರಾದ, ದಲಿತ ಸಂಘರ್ಷ ಸಮಿತಿಯ ಕಾರ್ಯಕರ್ತ ‌ಕೆ.ಟಿ. ಶಿವಪ್ರಸಾದ್(77) ಬೆಂಗಳೂರಿನಲ್ಲಿ ನಿಧನರಾಗಿದ್ದಾರೆ.…

10 hours ago

ಕೈಕೊಟ್ಟ ಮುಂಗಾರು: 126 ವರ್ಷಗಳಲ್ಲೇ ಮೂರನೇ ಬಾರಿ ದೇಶದಲ್ಲಿ ಮಳೆ ಕೊರತೆ

ನವದೆಹಲಿ: ದೇಶದಲ್ಲಿ ಈ ಬಾರಿ ಮುಂಗಾರು ಮಳೆ ಸಂಪೂರ್ಣವಾಗಿ ಕೈಕೊಟ್ಟಿದ್ದು, ಕಳೆದ 126 ವರ್ಷಗಳ ಇತಿಹಾಸದಲ್ಲೇ ಜೂನ್‌ ತಿಂಗಳಿನಲ್ಲಿ ಮೂರನೇ…

10 hours ago