Andolana originals

ರಸ್ತೆಯಲ್ಲಿ ಸಿಕ್ಕ ಮಗು ; ದತ್ತು ಪಡೆಯಲು ಸಹೃದಯರ ಸಾಲು

ಹತ್ತಕ್ಕು ಹೆಚ್ಚು ಕುಟುಂಬಗಳಿಂದ ಮಗುವನ್ನು ದತ್ತು ಪಡೆಯಲು ಕೋರಿಕೆ

ಚಾಮರಾಜನಗರ: ಹೆತ್ತವರಿಗೆ ಬೇಡ ವಾಗಿ ರಸ್ತೆ ಬದಿಯಲ್ಲಿ ಬಿದ್ದಿದ್ದ ನವಜಾತ ಶಿಶುವಿಗೆ ಬದುಕು ನೀಡಲು ಹಲವು ಕುಟುಂಬಗಳು ಉತ್ಸುಕವಾಗಿವೆ. ಮಗು ವನ್ನು ನಮಗೆ ದತ್ತು ನೀಡಿ ನಾವು ಸಾಕಿ, ಸಲಹಿ ನಮ್ಮ ಮನೆ ಮಗುವನ್ನಾಗಿ ಮಾಡಿಕೊಳ್ಳುತ್ತೇವೆ ಎಂದು ಹಲವರು ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಮೊರೆ ಹೋಗಿದ್ದಾರೆ.

ತಾಲ್ಲೂಕಿನ ಸಾಗಡೆ-ತಮ್ಮಡಹಳ್ಳಿ ಸಂಪರ್ಕ ರಸ್ತೆ ಬದಿಯಲ್ಲಿ ಜು. ೧೯ರಂದು ನವಜಾತ ಹೆಣ್ಣು ಶಿಶು ಪತ್ತೆಯಾಯಿತು. ಮಕ್ಕಳಿಲ್ಲದ ೧೦ಕ್ಕೂ ಹೆಚ್ಚು ವಿವಿಧ ಕುಟುಂಬಗಳ ಸದಸ್ಯರು ಈ ಹೆಣ್ಣು ಮಗುವನ್ನು ದತ್ತು ಪಡೆದುಕೊಳ್ಳಲು ಆಸಕ್ತಿ ತೋರಿದ್ದಾರೆ. ಮಕ್ಕಳ ರಕ್ಷಣಾ ಘಟಕಕ್ಕೆ ಕರೆ ಮಾಡಿ ವಿಚಾರಿಸುತ್ತಿದ್ದಾರೆ. ಇನ್ನೂ ಕೆಲವು ದಂಪತಿಗಳ ಘಟಕದ ಸಿಬ್ಬಂದಿಯನ್ನು ನೇರವಾಗಿ ಭೇಟಿ ಮಾಡಿ ದತ್ತು ಪಡೆಯುವ ಇಚ್ಚೆ ವ್ಯಕ್ತಪಡಿಸಿದ್ದಾರೆ.

ಸದ್ಯ ಮಗು ನಗರದ ಜಿಲ್ಲಾಸ್ಪತ್ರೆಯ ಮಕ್ಕಳ ಆರೈಕೆ ಕೇಂದ್ರದಲ್ಲಿದ್ದು ಮಕ್ಕಳ ತಜ್ಞ ವೈದ್ಯರು, ಶುಶ್ರೂಷಕರು, ರಕ್ಷಣಾ ಘಟಕದ ಸಿಬ್ಬಂದಿ ನಿಗಾದಲ್ಲಿದೆ. ನವಜಾತ ಶಿಶು ಪತ್ತೆಯಾದ ಸುದ್ದಿ ಹರಡುತ್ತಿದ್ದಂತೆ ಮಕ್ಕಳಿಲ್ಲದ ದಂಪತಿ ಆ ಮಗುವನ್ನು ದತ್ತು ಸ್ವೀಕರಿಸಲು ಮುಂದಾಗಿದ್ದಾರೆ.

2 ತಿಂಗಳು ಘಟಕದ ವಶದಲ್ಲಿ: ಮಗುವನ್ನು ಈಗಲೇ ದತ್ತು ನೀಡಲು ಮಕ್ಕಳ ರಕ್ಷಣಾ ಘಟಕ ನಿರಾಕರಿಸಿದೆ. ಮಗು ಕನಿಷ್ಠ ೬೦ ದಿನಗಳ ಕಾಲ ಘಟಕದ ವಶದಲ್ಲಿರಬೇಕು. ಅಲ್ಲಿಯ ತನಕ ಪೋಷಕರ ಪತ್ತೆ ಕಾರ್ಯ ನಡೆಸಲಾಗುವುದು. ಸಂಬಂಧಪಟ್ಟ ಪೋಷಕರು ಯಾರು ಮಗುವನ್ನು ಪಡೆಯದೆ ಹೋದರೆ ಕಾನೂನು ಪ್ರಕಾರ ಮಾನದಂಡಗಳನ್ನು ಅನುಸರಿಸಿ ದತ್ತು ನೀಡಲಾಗುವುದು ಎಂದು ಘಟಕದ ಸಿಬ್ಬಂದಿ ತಿಳಿಸಿದ್ದಾರೆ.

ಮಗುವಿನ ನೈಜ ಪೋಷಕರು ಮುಂದೆ ಬರದಿದ್ದರೆ ನಂತರ ಮಗುವನ್ನು ಕೊಳ್ಳೇಗಾಲ ಪಟ್ಟಣದಲ್ಲಿರುವ ಜೀವನ ಜ್ಯೋತಿ ದತ್ತು ಸಂಸ್ಥೆಯ ವಶಕ್ಕೆ ನೀಡಲಾಗುವುದು. ಅಲ್ಲಿನ ಸಿಬ್ಬಂದಿ ಮಗುವಿನ ಆರೈಕೆ, ಪಾಲನೆ ಮಾಡಲಿದ್ದಾರೆ. ಬಳಿಕ ಜಿಲ್ಲಾಧಿಕಾರಿ ಸಮ್ಮುಖದಲ್ಲಿ ದತ್ತು ಸ್ವೀಕಾರ ಕಾನೂನಿನ ಷರತ್ತುಗಳನ್ನು ಪೂರೈಸಿದವರಿಗೆ ಮಗುವನ್ನು ಹಸ್ತಾಂತರಿಸುವ ಪ್ರಕ್ರಿಯೆ ನಡೆಯಲಿದೆ.

ಕಾರಾ ಪೋರ್ಟಲ್‌ನಲ್ಲಿ ಅರ್ಜಿ ಸಲ್ಲಿಕೆ ಅವಶ್ಯ: ಮಗುವನ್ನು ದತ್ತು ಪಡೆಯಬೇಕಾದರೆ ‘ಕಾರಾ’ ಎಂಬ ಪೋರ್ಟಲ್‌ನಲ್ಲಿ ಅರ್ಜಿ ಸಲ್ಲಿಸಬೇಕು. ಮಗುವನ್ನು ದತ್ತು ನೀಡಲು ಅವಕಾಶವಿದ್ದರೆ ಅರ್ಜಿ ಸಲ್ಲಿಸಿದವರನ್ನು ಕರೆಸಿ ದತ್ತು ಸ್ವೀಕಾರ ಕಾನೂನಿನ ಬಗ್ಗೆ ತಿಳಿವಳಿಕೆ ನೀಡಲಾಗುತ್ತದೆ. ದತ್ತು ಪಡೆಯಲು ಇರುವ ಷರತ್ತುಗಳನ್ನು ಪೂರೈಸಿದರೆ ಮಾತ್ರ ಮಗುವನ್ನು ನೀಡಲಾಗು ತ್ತದೆ. ಅನಾಥ ಹಾಗೂ ಪಾಲಕರಿಂದ ತಿರಸ್ಕರಿ ಸಲ್ಪಟ್ಟ ಮಕ್ಕಳಿಗೆ ದತ್ತು ಸ್ವೀಕಾರ ಕಾರ್ಯಕ್ರಮ ದಡಿ ಹೊರ ರಾಜ್ಯ, ವಿದೇಶಗಳಲ್ಲಿ ಹೊಸ ಬದುಕು ಸಿಕ್ಕಿದೆ. ಮಕ್ಕಳಿಲ್ಲದ ಅನಿವಾಸಿ ಭಾರತೀಯರು ಅಮೆರಿಕ, ಆಸ್ಟ್ರೇಲಿಯಾ, ಇಟಲಿಗೂ ಮಕ್ಕಳನ್ನು ದತ್ತು ಪಡೆದುಕೊಂಡು ಹೋಗಿದ್ದಾರೆ. ೨೦೨೩-೨೪ನೇ ಸಾಲಿನಲ್ಲಿ ೨, ೨೦೨೪-೨೫ನೇ ಸಾಲಿನಲ್ಲಿ ೪, ೨೦೨೫ರಲ್ಲಿ ಇಬ್ಬರು ಮಕ್ಕಳನ್ನು ಪಾಲಕರು ಆಸ್ಪತ್ರೆಗಳಿಗೆ ನೀಡಿದ್ದಾರೆ. ಇಂತಹ ಮಕ್ಕಳು ಮಕ್ಕಳಿಲ್ಲದ ದಂಪತಿಯ ಮಡಿಲು ಸೇರಿ ಬೆಳೆಯುತ್ತಿದ್ದಾರೆ ಎಂದು ಮಕ್ಕಳ ಘಟಕದ ಸಿಬ್ಬಂದಿ ತಿಳಿಸಿದ್ದಾರೆ.

– ಪ್ರಸಾದ್ ಲಕ್ಕೂರು

ಆಂದೋಲನ ಡೆಸ್ಕ್

Recent Posts

ರಾಜ್ಯದ 50 ವರ್ಷಗಳ ಹಳೆಯ ಎಲ್ಲಾ ಡ್ಯಾಂ ಗೇಟ್‌ ಬದಲಾವಣೆಗೆ ನಿರ್ಧಾರ: ಡಿಸಿಎಂ ಡಿ.ಕೆ.ಶಿವಕುಮಾರ್‌

ಬೆಂಗಳೂರು: ರಾಜ್ಯದಲ್ಲಿ ಇರುವ 50 ವರ್ಷ ಹಳೆಯ ಎಲ್ಲಾ ಜಲಾಶಯಗಳ ಗೇಟ್‌ಗಳನ್ನು ಬದಲಾವಣೆ ಮಾಡಲು ನಮ್ಮ ಸರ್ಕಾರ ನಿರ್ಧಾರ ಮಾಡಿದೆ…

10 hours ago

ಗೃಹ ಬಳಕೆ ಗ್ಯಾಸ್‌ ಸಿಲಿಂಡರ್‌ಗೆ ಸಮಸ್ಯೆ ಇಲ್ಲ: ಸಚಿವ ಮುನಿಯಪ್ಪ

ಬೆಂಗಳೂರು: ಸಿಲಿಕಾನ್‌ ಸಿಟಿ ಬೆಂಗಳೂರಿನಲ್ಲಿ ಗ್ಯಾಸ್‌ ಸಿಲಿಂಡರ್‌ ಕೊರತೆ ಎಂಬ ವಿಚಾರಕ್ಕೆ ಸಂಬಂಧಿಸಿದಂತೆ ಆಹಾರ ಇಲಾಖೆ ಸಚಿವ ಮುನಿಯಪ್ಪ ಪ್ರತಿಕ್ರಿಯೆ…

10 hours ago

ಗುಂಡ್ಲುಪೇಟೆ: ಬರಗಿ ಗ್ರಾಮದಲ್ಲಿ ದೇವಸ್ಥಾನದ ಬಾಗಿಲು ಮುರಿದು ದೇವರನ್ನೇ ಹೊತ್ತೋಯ್ದ ಕಳ್ಳರು

ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು  ಗುಂಡ್ಲುಪೇಟೆ: ತಾಲ್ಲೂಕಿನಾದ್ಯಂತ ಗ್ರಾಮೀಣ ಭಾಗದ ದೇವಸ್ಥಾನಗಳ ಕಳ್ಳತನ ಪ್ರಕರಣ ಸಂಖ್ಯೆ ದಿನದಿಂದ ದಿನಕ್ಕೆ…

11 hours ago

ನಮ್‌ ಜೀವನ ನಮ್ದಲ್ಲಾ.? ಕನ್ನಡದಲ್ಲೇ ಪೋಸ್ಟ್‌ ಹಾಕಿದ ರಶ್ಮಿಕಾ ಮಂದಣ್ಣ

ವಿವಾಹದ ಬಳಿಕ ಭಾರೀ ಸುದ್ದಿಯಲ್ಲಿರುವ ನಟಿ ರಶ್ಮಿಕಾ ಮಂದಣ್ಣ ಅವರು ಕನ್ನಡದಲ್ಲಿಯೇ ಪೋಸ್ಟ್‌ ಒಂದನ್ನು ಹಾಕಿದ್ದಾರೆ. ಇಲ್ಲಿ ತನಕ ನನಗೆ…

11 hours ago

ಅನೈತಿಕ ಸಂಬಂಧ; ಜೋಡಿ ಕೊಲೆ: ಮಹಿಳೆ ಸೋದರನಿಂದಲೇ ಕೃತ್ಯ

ಮಡಿಕೇರಿ: ಅನೈತಿಕ ಸಂಬಂಧ ಹಿನ್ನೆಲೆ ಸಹೋದರಿ ಹಾಗೂ ಆಕೆಯ ಜೊತೆ ಸಹ ಜೀವನ ನಡೆಸುತ್ತಿದ್ದ ವ್ಯಕ್ತಿಯನ್ನು ೭೦ ವರ್ಷದ ವೃದ್ಧ…

11 hours ago

ಬಿಕ್ಲು ಶಿವ ಕೊಲೆ ಪ್ರಕರಣ: ಶಾಸಕ ಭೈರತಿ ಬಸವರಾಜುಗೆ ಜಾಮೀನು ಮಂಜೂರು

ಬೆಂಗಳೂರು: ರೌಡಿಶೀಟರ್‌ ಬಿಕ್ಲು ಶಿವ ಕೊಲೆ ಪ್ರಕರಣದಲ್ಲಿ ಬಿಜೆಪಿ ಶಾಸಕ ಭೈರತಿ ಬಸವರಾಜುಗೆ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಕೋರ್ಟ್‌ ಜಾಮೀನು…

11 hours ago