Child found on the street; Kind-hearted people line up to adopt him
ಹತ್ತಕ್ಕು ಹೆಚ್ಚು ಕುಟುಂಬಗಳಿಂದ ಮಗುವನ್ನು ದತ್ತು ಪಡೆಯಲು ಕೋರಿಕೆ
ಚಾಮರಾಜನಗರ: ಹೆತ್ತವರಿಗೆ ಬೇಡ ವಾಗಿ ರಸ್ತೆ ಬದಿಯಲ್ಲಿ ಬಿದ್ದಿದ್ದ ನವಜಾತ ಶಿಶುವಿಗೆ ಬದುಕು ನೀಡಲು ಹಲವು ಕುಟುಂಬಗಳು ಉತ್ಸುಕವಾಗಿವೆ. ಮಗು ವನ್ನು ನಮಗೆ ದತ್ತು ನೀಡಿ ನಾವು ಸಾಕಿ, ಸಲಹಿ ನಮ್ಮ ಮನೆ ಮಗುವನ್ನಾಗಿ ಮಾಡಿಕೊಳ್ಳುತ್ತೇವೆ ಎಂದು ಹಲವರು ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಮೊರೆ ಹೋಗಿದ್ದಾರೆ.
ತಾಲ್ಲೂಕಿನ ಸಾಗಡೆ-ತಮ್ಮಡಹಳ್ಳಿ ಸಂಪರ್ಕ ರಸ್ತೆ ಬದಿಯಲ್ಲಿ ಜು. ೧೯ರಂದು ನವಜಾತ ಹೆಣ್ಣು ಶಿಶು ಪತ್ತೆಯಾಯಿತು. ಮಕ್ಕಳಿಲ್ಲದ ೧೦ಕ್ಕೂ ಹೆಚ್ಚು ವಿವಿಧ ಕುಟುಂಬಗಳ ಸದಸ್ಯರು ಈ ಹೆಣ್ಣು ಮಗುವನ್ನು ದತ್ತು ಪಡೆದುಕೊಳ್ಳಲು ಆಸಕ್ತಿ ತೋರಿದ್ದಾರೆ. ಮಕ್ಕಳ ರಕ್ಷಣಾ ಘಟಕಕ್ಕೆ ಕರೆ ಮಾಡಿ ವಿಚಾರಿಸುತ್ತಿದ್ದಾರೆ. ಇನ್ನೂ ಕೆಲವು ದಂಪತಿಗಳ ಘಟಕದ ಸಿಬ್ಬಂದಿಯನ್ನು ನೇರವಾಗಿ ಭೇಟಿ ಮಾಡಿ ದತ್ತು ಪಡೆಯುವ ಇಚ್ಚೆ ವ್ಯಕ್ತಪಡಿಸಿದ್ದಾರೆ.
ಸದ್ಯ ಮಗು ನಗರದ ಜಿಲ್ಲಾಸ್ಪತ್ರೆಯ ಮಕ್ಕಳ ಆರೈಕೆ ಕೇಂದ್ರದಲ್ಲಿದ್ದು ಮಕ್ಕಳ ತಜ್ಞ ವೈದ್ಯರು, ಶುಶ್ರೂಷಕರು, ರಕ್ಷಣಾ ಘಟಕದ ಸಿಬ್ಬಂದಿ ನಿಗಾದಲ್ಲಿದೆ. ನವಜಾತ ಶಿಶು ಪತ್ತೆಯಾದ ಸುದ್ದಿ ಹರಡುತ್ತಿದ್ದಂತೆ ಮಕ್ಕಳಿಲ್ಲದ ದಂಪತಿ ಆ ಮಗುವನ್ನು ದತ್ತು ಸ್ವೀಕರಿಸಲು ಮುಂದಾಗಿದ್ದಾರೆ.
2 ತಿಂಗಳು ಘಟಕದ ವಶದಲ್ಲಿ: ಮಗುವನ್ನು ಈಗಲೇ ದತ್ತು ನೀಡಲು ಮಕ್ಕಳ ರಕ್ಷಣಾ ಘಟಕ ನಿರಾಕರಿಸಿದೆ. ಮಗು ಕನಿಷ್ಠ ೬೦ ದಿನಗಳ ಕಾಲ ಘಟಕದ ವಶದಲ್ಲಿರಬೇಕು. ಅಲ್ಲಿಯ ತನಕ ಪೋಷಕರ ಪತ್ತೆ ಕಾರ್ಯ ನಡೆಸಲಾಗುವುದು. ಸಂಬಂಧಪಟ್ಟ ಪೋಷಕರು ಯಾರು ಮಗುವನ್ನು ಪಡೆಯದೆ ಹೋದರೆ ಕಾನೂನು ಪ್ರಕಾರ ಮಾನದಂಡಗಳನ್ನು ಅನುಸರಿಸಿ ದತ್ತು ನೀಡಲಾಗುವುದು ಎಂದು ಘಟಕದ ಸಿಬ್ಬಂದಿ ತಿಳಿಸಿದ್ದಾರೆ.
ಮಗುವಿನ ನೈಜ ಪೋಷಕರು ಮುಂದೆ ಬರದಿದ್ದರೆ ನಂತರ ಮಗುವನ್ನು ಕೊಳ್ಳೇಗಾಲ ಪಟ್ಟಣದಲ್ಲಿರುವ ಜೀವನ ಜ್ಯೋತಿ ದತ್ತು ಸಂಸ್ಥೆಯ ವಶಕ್ಕೆ ನೀಡಲಾಗುವುದು. ಅಲ್ಲಿನ ಸಿಬ್ಬಂದಿ ಮಗುವಿನ ಆರೈಕೆ, ಪಾಲನೆ ಮಾಡಲಿದ್ದಾರೆ. ಬಳಿಕ ಜಿಲ್ಲಾಧಿಕಾರಿ ಸಮ್ಮುಖದಲ್ಲಿ ದತ್ತು ಸ್ವೀಕಾರ ಕಾನೂನಿನ ಷರತ್ತುಗಳನ್ನು ಪೂರೈಸಿದವರಿಗೆ ಮಗುವನ್ನು ಹಸ್ತಾಂತರಿಸುವ ಪ್ರಕ್ರಿಯೆ ನಡೆಯಲಿದೆ.
ಕಾರಾ ಪೋರ್ಟಲ್ನಲ್ಲಿ ಅರ್ಜಿ ಸಲ್ಲಿಕೆ ಅವಶ್ಯ: ಮಗುವನ್ನು ದತ್ತು ಪಡೆಯಬೇಕಾದರೆ ‘ಕಾರಾ’ ಎಂಬ ಪೋರ್ಟಲ್ನಲ್ಲಿ ಅರ್ಜಿ ಸಲ್ಲಿಸಬೇಕು. ಮಗುವನ್ನು ದತ್ತು ನೀಡಲು ಅವಕಾಶವಿದ್ದರೆ ಅರ್ಜಿ ಸಲ್ಲಿಸಿದವರನ್ನು ಕರೆಸಿ ದತ್ತು ಸ್ವೀಕಾರ ಕಾನೂನಿನ ಬಗ್ಗೆ ತಿಳಿವಳಿಕೆ ನೀಡಲಾಗುತ್ತದೆ. ದತ್ತು ಪಡೆಯಲು ಇರುವ ಷರತ್ತುಗಳನ್ನು ಪೂರೈಸಿದರೆ ಮಾತ್ರ ಮಗುವನ್ನು ನೀಡಲಾಗು ತ್ತದೆ. ಅನಾಥ ಹಾಗೂ ಪಾಲಕರಿಂದ ತಿರಸ್ಕರಿ ಸಲ್ಪಟ್ಟ ಮಕ್ಕಳಿಗೆ ದತ್ತು ಸ್ವೀಕಾರ ಕಾರ್ಯಕ್ರಮ ದಡಿ ಹೊರ ರಾಜ್ಯ, ವಿದೇಶಗಳಲ್ಲಿ ಹೊಸ ಬದುಕು ಸಿಕ್ಕಿದೆ. ಮಕ್ಕಳಿಲ್ಲದ ಅನಿವಾಸಿ ಭಾರತೀಯರು ಅಮೆರಿಕ, ಆಸ್ಟ್ರೇಲಿಯಾ, ಇಟಲಿಗೂ ಮಕ್ಕಳನ್ನು ದತ್ತು ಪಡೆದುಕೊಂಡು ಹೋಗಿದ್ದಾರೆ. ೨೦೨೩-೨೪ನೇ ಸಾಲಿನಲ್ಲಿ ೨, ೨೦೨೪-೨೫ನೇ ಸಾಲಿನಲ್ಲಿ ೪, ೨೦೨೫ರಲ್ಲಿ ಇಬ್ಬರು ಮಕ್ಕಳನ್ನು ಪಾಲಕರು ಆಸ್ಪತ್ರೆಗಳಿಗೆ ನೀಡಿದ್ದಾರೆ. ಇಂತಹ ಮಕ್ಕಳು ಮಕ್ಕಳಿಲ್ಲದ ದಂಪತಿಯ ಮಡಿಲು ಸೇರಿ ಬೆಳೆಯುತ್ತಿದ್ದಾರೆ ಎಂದು ಮಕ್ಕಳ ಘಟಕದ ಸಿಬ್ಬಂದಿ ತಿಳಿಸಿದ್ದಾರೆ.
– ಪ್ರಸಾದ್ ಲಕ್ಕೂರು
ಚಾಮರಾಜನಗರ ಜಿಲ್ಲೆಯ ಯಳಂದೂರು ತಾಲ್ಲೂಕಿನ ಮಸಣಾಪುರ ಚಾಟಿಪುರ ಗ್ರಾಮದಲ್ಲಿ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಭಾವಚಿತ್ರದ ಫಲಕಕ್ಕೆ ಕಿಡಿಗೇಡಿಗಳು ಅಪಮಾನ…
ಭಾರತೀಯ ಅಂಚೆ ಹಾಗೂ ಕರ್ನಾಟಕ ಅಂಚೆ ಚೀಟಿ ಸಂಗ್ರಹಣಾ ಸಂಘವು ಆಧುನಿಕ ಮೈಸೂರು ನಿರ್ಮಾಣಕ್ಕೆ ಮಹತ್ವದ ಕೊಡುಗೆ ನೀಡಿರುವ ಮೈಸೂರು…
ಮೈಸೂರಿನ ದಟ್ಟಗಳ್ಳಿ ೩ ನೇ ಹಂತದ ಕನಕದಾಸನಗರವು, ಬಡಾವಣೆ ನಿರ್ಮಾಣವಾದ ಆರಂಭದಲ್ಲಿ ರಾಮಕೃಷ್ಣ ನಗರ ಉಪ ಅಂಚೆ ಕಚೇರಿಗೆ ಸೇರಿತ್ತು.…
ಪುನೀತ್ ಮಡಿಕೇರಿ ಹೆಚ್ಚುವರಿ ಸಿಬ್ಬಂದಿಗಳ ನಿಯೋಜನೆ; ಅಗತ್ಯವಿರುವಷ್ಟು ವಿದ್ಯುತ್ ಕಂಬಗಳು, ಪರಿವರ್ತಕಗಳು, ವಾಹಕಗಳ ದಾಸ್ತಾನು ಮಡಿಕೇರಿ: ಗುಡ್ಡಗಾಡು ಪ್ರದೇಶವಾಗಿರುವ ಕೊಡಗು…
ಮಹೇಶ್ ಕರೋಠಿ ಮುಚ್ಚಿರುವ ರಸ್ತೆಯನ್ನು ಪುನಃ ತೆರೆದು ಸಮಸ್ಯೆ ಬಗೆಹರಿಸಬೇಕೆಂದು ಗ್ರಾಮಸ್ಥರ ಒತ್ತಾಯ ಕಿಕ್ಕೇರಿ: ಜಮ್ಮು-ಕಾಶ್ಮೀರದ ಗಡಿಯಲ್ಲಿ ದೇಶದ ಭದ್ರತೆಗಾಗಿ…
ಮಂಜು ಕೋಟೆ ಕೋಟೆ: ಕಾಂಗ್ರೆಸ್, ಬಿಜೆಪಿ, ಜಾ.ದಳ ಪಕ್ಷಗಳಲ್ಲಿ ಪೈಪೋಟಿ; ಮುಖಂಡರಿಗೆ ಪ್ರತಿ ಎಚ್.ಡಿ.ಕೋಟೆ: ಕ್ಷೇತ್ರದ ಟಿಎಪಿಸಿಎಂಎಸ್ ನಿರ್ದೇಶಕರ ಚುನಾವಣೆ…