Andolana originals

ಶಿಕ್ಷಕರ ಬದಲಾಗಿ ಪಾಲಕರಿಂದಲೇ ಮಕ್ಕಳಿಗೆ ಅಕ್ಷರಾಭ್ಯಾಸ!

ಭೇರ್ಯ ಮಹೇಶ್

ಕೆ.ಆರ್.ನಗರ ತಾಲ್ಲೂಕಿನ ಡಿ.ಕೆ.ಕೊಪ್ಪಲು ಸರ್ಕಾರಿ ಶಾಲೆಯಲ್ಲಿ ವಿಶಿಷ್ಟ ಕಾರ್ಯಕ್ರಮ

ಕೆ.ಆರ್.ನಗರ: ಶಾಲೆಗೆ ಸೇರಿಸುವ ಮುನ್ನ ಅಕ್ಷರಾಭ್ಯಾಸ ಮಾಡುವ ಪದ್ಧತಿ ಇದೆ. ಶುಭದಿನದಂದು ಅಕ್ಷರಾಭ್ಯಾಸ ಮಾಡಿದ ಮಗು ಮುಂದೆ ಉತ್ತಮ ಸಂಸ್ಕಾರವನ್ನು ರೂಢಿಸಿಕೊಳ್ಳುತ್ತದೆ ಎಂಬ ನಂಬಿಕೆ ಇದೆ. ಇದರಂತೆ ಮಗುವಿನ ಅಕ್ಷರಾ ಭ್ಯಾಸಕ್ಕಾಗಿ ತಾಲ್ಲೂಕಿನ ಡಿ.ಕೆ.ಕೊಪ್ಪಲು ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವಿಶಿಷ್ಟ ಕಾರ್ಯಕ್ರಮ ಆಯೋಜಿಸಲಾಗಿತ್ತು.

ಶಾಲೆಯಲ್ಲಿ ಮಗುವಿಗೆ ಶಿಕ್ಷಕರು ಅಕ್ಷರಾಭ್ಯಾಸ ಮಾಡಿಸುವುದು ರೂಢಿ. ಆದರೆ ಅಂದು ಡಿ.ಕೆ.ಕೊಪ್ಪಲು ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಮಕ್ಕಳೊ ಟ್ಟಿಗೆ ಅವರ ಪಾಲಕರೂ ಶಾಲೆಯಲ್ಲಿ ಹಾಜರಿದ್ದರು. ಅಂದು ಮಕ್ಕಳಿಗೆ ಶಿಕ್ಷಕರು ಪಾಠ ಹೇಳಿಕೊಡಲಿಲ್ಲ. ಬದಲಿಗೆ ಪಾಲಕರೇ ಮಡಿಲಲ್ಲಿ ಕೂರಿಸಿಕೊಂಡು ಅಕ್ಷರಾಭ್ಯಾಸ ಮಾಡಿಸಿದರು.

ಮಕ್ಕಳು ಅಪ್ಪ-ಅಮ್ಮನ ಜತೆಯಲ್ಲಿ ಕುಳಿತು ನಗುನಗುತ್ತಲೇ ತಮ್ಮ ಪುಟ್ಟ ಕೈಗಳಲ್ಲಿ ಅಕ್ಷರಾಭ್ಯಾಸಕ್ಕೆ ಮುನ್ನುಡಿ ಬರೆದರು. ಮಕ್ಕಳಲ್ಲಿ ಶಿಕ್ಷಣದ ಬಗೆಗೆ ಪ್ರೀತಿ ಹುಟ್ಟಿಸುವ, ಕಲಿಕೆಯು ಬದುಕಿನ ಮೊದಲ ಆದ್ಯತೆಯಾಗಬೇಕಾದ ಬಗ್ಗೆ ಅರಿವು ಮೂಡಿಸುವ ಉದ್ದೇಶದಿಂದ ಹಮ್ಮಿಕೊಂಡ ಈ ಕಾರ್ಯಕ್ರಮವನ್ನು ಶಾಲೆಯ ಮುಖ್ಯ ಶಿಕ್ಷಕರು ವಿಶಿಷ್ಟವಾಗಿ ನೆರವೇರಿಸಿಕೊಟ್ಟರು. ಹೊಸದಾಗಿ ದಾಖಲಾದ ಮಕ್ಕಳ ಜೊತೆಗೆ ಪಾಲ್ಗೊಂಡಿದ್ದ ಪಾಲಕರು ಶಾಲೆಯ ಈ ನೂತನ ಪ್ರಯತ್ನಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದರು. ಈ ಸಂದರ್ಭದಲ್ಲಿ ಶಾಲೆಯ ಶಿಕ್ಷಕರು ವೈಯಕ್ತಿಕವಾಗಿ ಕಲಿಕಾ ಸಾಮಗ್ರಿಗಳನ್ನು ವಿತರಿಸಿ ಶುಭ ಕೋರಿದರು.

ಎಸ್.ಡಿ.ಎಂ.ಸಿ. ಅಧ್ಯಕ್ಷ ಡಿ.ಪಿ. ನಾಗೇಂದ್ರ, ಉಪಾಧ್ಯಕ್ಷೆ ಪ್ರಮೀಳಾ, ಪೋಷಕರಾದ ಪುಟ್ಟಸ್ವಾಮೇಗೌಡ, ತೇಜ, ಸೌಮ್ಯ, ಶಿಕ್ಷಕ ಎಸ್.ಟಿ.ರಘುವರ, ಕೆ.ಟಿ.ಚಂದನ್, ಇನ್ನಿತರರು ಕಾರ್ಯಕ್ರಮ ದಲ್ಲಿ ಹಾಜರಿದ್ದರು.

” ನಮ್ಮ ಶಾಲೆಯಲ್ಲಿ ೨೦೨೫-೨೬ನೇ ಸಾಲಿನಲ್ಲಿ ಒಂದನೇ ತರಗತಿಗೆ ಸೇರಿರುವ ಮಕ್ಕಳಿಗೆ ಅಕ್ಷರಾಭ್ಯಾಸ ಮಾಡಿಸುವ ಮೂಲಕ ಶಾಲೆಗೆ ಸ್ವಾಗತಿಸಲಾಗುತ್ತಿದೆ. ಸರ್ಕಾರಿ ಶಾಲೆಯಲ್ಲಿ ಮಕ್ಕಳಿಗೆ ಉತ್ತಮ ಶಿಕ್ಷಕರ ನಿಯೋಜನೆ ಜತೆಗೆ ಉಚಿತ ದಾಸೋಹ, ಸಮವಸ್ತ್ರ ಸೇರಿದಂತೆ ಹತ್ತಾರು ಸೌಲಭ್ಯವನ್ನು ನೀಡಲಾಗುತ್ತಿದ್ದು, ಪೋಷಕರು ಸರ್ಕಾರಿ ಶಾಲೆಗೆ ಮಕ್ಕಳನ್ನು ಸೇರಿಸಿ ಶಾಲೆಗಳ ಅಭಿವೃದ್ಧಿಗೆ ಸಹಕಾರ ನೀಡಬೇಕು.”

-ಎಂ.ಕೆ.ಕುಮಾರ್, ಮುಖ್ಯಶಿಕ್ಷಕ, ಸರ್ಕಾರಿ ಹಿ.ಪ್ರಾ. ಶಾಲೆ.

ಆಂದೋಲನ ಡೆಸ್ಕ್

Recent Posts

ಬಲೂಚಿಸ್ತಾನ | ಸೇನಾ ಸಿಬ್ಬಂದಿ ಇದ್ದ ರೈಲು ಗುರಿಯಾಗಿಸಿ ಸ್ಫೋಟ ; 24 ಸಾವು

ಪೇಶಾವರ : ಪಾಕಿಸ್ತಾನದ ಬಲೂಚಿಸ್ತಾನದಲ್ಲಿ ಸೇನಾ ಸಿಬ್ಬಂದಿ ಪ್ರಯಾಣಿಸುತ್ತಿದ್ದ ರೈಲನ್ನು ಗುರಿಯಾಗಿಸಿಕೊಂಡು ನಡೆಸಿದ ಸ್ಪೋಟದಲ್ಲಿ 24 ಮಂದಿ ಸಾವು ಸೇರಿದಂತೆ…

25 mins ago

ಶಿವಾಜಿ ಗಣೇಶನ್‌ ಅವರ ವಾರದ ಅಂಕಣ | ಜನಸಂಖ್ಯೆ ಏರುಪೇರು : ಆಂಧ್ರದ ನೀತಿ ಅನುಕರಣೀಯವೇ?

ದೇಶದ ಜನಸಂಖ್ಯೆಯಲ್ಲಾಗುತ್ತಿರುವ ಏರುಪೇರು ರಾಷ್ಟ್ರೀಯ ಜನಸಂಖ್ಯೆ ನಿರ್ವಹಣೆಯ ನೀತಿಯ ದಿಕ್ಕನ್ನೇ ಬದಲಿಸುತ್ತಿದೆ. ಉತ್ತರ ಭಾರತದ ಜನಸಂಖ್ಯೆ ಪ್ರಮಾಣ ಲಂಗು ಲಗಾಮಿಲ್ಲದೆ…

2 hours ago

ಮೆಲೊಡಿ ಖಾವೋ ; ಕುಚ್‌ ಜಾನ್‌ ಜಾವೋ!

ರಾಜಾರಾಂ ತಲ್ಲೂರು ಬೆಳಿಗ್ಗೆ ಎದ್ದ ತಕ್ಷಣ ಹಲ್ಲು ತಿಕ್ಕಿ ಮುಖ ತೊಳೆಯಬೇಕು ಎಂದು ದೇಶದ ಸಂವಿಧಾನದಲ್ಲಿ ಬರೆದಿದೆಯೇನ್ರಿ? . .…

2 hours ago

ಭಾನುವಾರದ ಹಾಡುಪಾಡು | ಈ ಮೋಹ, ಈ ಬಯಕೆ ಮತ್ತು ಇದೆಲ್ಲಾ ಯಾಕೆ ಹೀಗೆ?

ಮೋಹಿತ್‌ ಎಸ್‌ ಗೌಡ ನಾನು ಪ್ರಾಥಮಿಕ ಶಾಲೆಯಲ್ಲಿ ಓದುವಾಗ ಪರೀಕ್ಷೆಯ ಪ್ರಶ್ನೆಪತ್ರಿಕೆಗಳಲ್ಲಿ ‘ಲಿಂಗ ಬದಲಿಸಿ ಬರೆಯಿರಿ’ ಅಥವಾ ‘ವಿರುದ್ಧ ಪದ…

3 hours ago

ಭಾನುವಾರದ ಹಾಡುಪಾಡು | ಒಂದು ಸುಂದರ ಸಂಸಾರ ಮುರಿದುಹೋದ ಕಥೆ

ರೇಣುಕಾ ನಿಡಗುಂದಿ  ಕಾಲೇಜಿನ ದಿನಗಳಲ್ಲಿ ಅವರಿಬ್ಬರೂ ಭೇಟಿಯಾದಾಗಲೇ ಆಕೆ ತಾನು ಬೈ ( Bisexual) ಎಂದು ಹೇಳಿಕೊಂಡಿದ್ದಳು. ಹೊಸತಲೆಮಾರಿನ ಹುಡುಗ…

3 hours ago

ಒಬ್ಬ ಹುಡುಗ ಯಾವ ಕಾರಣಕ್ಕೆ ʼಗೇʼ ಆಗುತ್ತಾನೆ?

ವಸುಧೇಂದ್ರ ಹುಡುಗನೊಬ್ಬನಿಗೆ ಮತ್ತೊಬ್ಬ ಹುಡುಗನ ಮೇಲೆ ಅದು ಹೇಗೆ ಆಕರ್ಷಣೆ ಮೂಡುತ್ತದೆ? ಅದು ಅವನ ಆಯ್ಕೆಯೆ? ಕಲಿತ ದುಶ್ಚಟವೆ? ವಿಷಮ…

3 hours ago