Categories: Andolana originals

ಕೋಟೆ: ಮಕ್ಕಳ ಬಿಸಿಯೂಟದ ಗೋಧಿಗೆ ಬೆಂಕಿ

ಸಮರ್ಪಕವಾಗಿ ಬಳಸಿಕೊಳ್ಳದೆ ಹುಳು ಹಿಡಿದಿದ್ದ ಗೋಧಿ; ಮುಖ್ಯ ಶಿಕ್ಷಕರು, ಅಡುಗೆ ಸಿಬ್ಬಂದಿ ವಿರುದ್ಧ ಆಕ್ರೋಶ

ಮಂಜು ಕೋಟೆ

ಎಚ್.ಡಿ.ಕೋಟೆ: ಸರ್ಕಾರಿ ಶಾಲೆಯ ಮಕ್ಕಳ ವಿದ್ಯಾರ್ಥಿಗಳಿಗೆ ಬಿಸಿ ಊಟಕ್ಕಾಗಿ ಸರಬರಾಜು ಮಾಡಿದ್ದ ಗೋಧಿಯನ್ನು ಸಮರ್ಪಕವಾಗಿ ಸದುಪಯೋಗಪಡಿಸಿಕೊಳ್ಳದೆ ಹುಳು ಬಂದಿದ್ದ 4-5 ಗೋಧಿ ಮೂಟೆಗಳನ್ನು ಶಾಲೆಯ ಹಿಂಭಾಗದಲ್ಲಿ ಅಡುಗೆ ಸಿಬ್ಬಂದಿ ಮತ್ತು ಮುಖ್ಯ ಶಿಕ್ಷಕರು ಸುಟ್ಟು ಹಾಕಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ.

ತಾಲ್ಲೂಕಿನ ಅಂತರಸಂತೆ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಈ ಘಟನೆ ನಡೆದಿದೆ.

ಈ ಸರ್ಕಾರಿ ಶಾಲೆಯಲ್ಲಿ 1ರಿಂದ 7ನೇ ತರಗತಿವರೆಗೆ 200ಕ್ಕೂ ಹೆಚ್ಚು ಬಡ ಮಕ್ಕಳು ಓದುತ್ತಿದ್ದು, ಇವರ ಊಟಕ್ಕಾಗಿ ಸರ್ಕಾರ ಪ್ರತಿ ತಿಂಗಳು ಸಾವಿರಾರು ರೂ. ಖರ್ಚು ಮಾಡಿ ಆಹಾರ ಪದಾರ್ಥಗಳನ್ನು ಪೂರೈಸುತ್ತಿದೆ. ಅದರೆ ಈ ಶಾಲೆಯ ಮುಖ್ಯಶಿಕ್ಷಕರು ಮತ್ತು ಅಡುಗೆಯವರ ಬೇಜವಾಬ್ದಾರಿತನ ಮತ್ತು ಪರಸ್ಪರ ಮುಸುಕಿನ ಗುದ್ದಾಟದಿಂದಾಗಿ ಮಕ್ಕಳಿಗೆ ಸಿಗಬೇಕಾಗಿದ್ದ ಪೌಷ್ಠಿಕಾಂಶದ ಆಹಾರ ಪದಾರ್ಥಗಳು ಹಾಳಾಗಿ ಹೋಗಿವೆ.

ಈ ಶಾಲೆಗೆ ವಿತರಿಸಲಾಗಿದ್ದ ಗೋಧಿಯಿಂದ ಮಕ್ಕಳಿಗೆ ಉಪ್ಪಿಟ್ಟು ಮಾಡಿಕೊಡದೇ ಹಾಗೆಯೇ ಶೇಖರಣೆ ಮಾಡಿ ಇಟ್ಟಿದ್ದರಿಂದ ಗೋಧಿಯಲ್ಲಿ ಹುಳುಗಳು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಕಳೆದ ವಾರ ಶಾಲೆ ಹಿಂಭಾಗದಲ್ಲಿ 4-5 ಗೋಧಿ ಮೂಟೆಗಳನ್ನು ಸುಟ್ಟು ಹಾಕಿದ್ದರು.

ಈ ವಿಚಾರ ತಿಳಿಯುತ್ತಿದ್ದಂತೆ ಕೆಲವರು ಅದರ ವಿಡಿಯೋ ಚಿತ್ರೀಕರಣ ಮಾಡಿ ಶಿಕ್ಷಣ ಇಲಾಖೆಯ ಕೆಲ ಅಧಿಕಾರಿಗಳಿಗೆ ಕಳಿಸಿದ್ದರು. ನಂತರ ಬಿಆರ್‌ಸಿ ಮತ್ತು ಸಿಆರ್‌ಪಿಗಳಾದ ಪ್ರಕಾಶ ಮತು ಕೃಷ್ಣಯ್ಯ ಅವರು ಸ್ಥಳಕ್ಕೆ ಭೇಟಿ ನೀಡಿ ಗೋಧೀಯನ್ನು ಸುಟ್ಟು ಹಾಕಿರುವುದನ್ನು ಪರಿಶೀಲಿಸಿ ತಪ್ಪಿತಸ್ಥರಿಗೆ ಎಚ್ಚರಿಕೆ ನೀಡಿ ಹೋಗಿದ್ದಾರೆ.

ಬಿಸಿ ಊಟದ ವಿಚಾರವಾಗಿ ತಾಲ್ಲೂಕಿನ ಸರ್ಕಾರಿ ಕಿರಿಯ ಮತ್ತು ಹಿರಿಯ ಪ್ರಾಥಮಿಕ ಶಾಲೆಗಳಲ್ಲಿ ಆಗಿಂದಾಗ್ಗೆ ಅಡುಗೆಯವರು ಮತ್ತು ಶಿಕ್ಷಕರ ನಿರ್ಲಕ್ಷ್ಯದಿಂದ ಒಂದಲ್ಲಾ ಒಂದು ಅಧ್ವಾನ ನಡೆಯುತ್ತಲೇ ಇರುತ್ತದೆ. ಈಗಲಾದರೂ ಬಡ ಮಕ್ಕಳಿಗೆ ಸಿಗಬೇಕಾಗಿದ್ದ ಬಿಸಿ ಊಟದ ವಿಚಾರದಲ್ಲಿ ಬೇಜವಾಬ್ದಾರಿ ವಹಿಸುವ ಯಾವುದೇ ಶಿಕ್ಷಕರು, ನೌಕರರ ವಿರುದ್ಧ ಕಠಿಣ ಕ್ರಮ ಕೈಗೊಂಡರೆ ಮುಂದಿನ ದಿನಗಳಲ್ಲಿ ಇಂತಹ ಘಟನೆಗಳು ಮರುಕಳಿಸುವುದು ತಪ್ಪಬಹುದು ಮತ್ತು ಸರ್ಕಾರದ ಸೌಲಭ್ಯ ಮಕ್ಕಳಿಗೆ ತಲುಪುತ್ತದೆ ಎನ್ನುವುದು ಸಾರ್ವಜನಿಕರ ಅನಿಸಿಕೆಯಾಗಿದೆ.

“ಅಂತರಸಂತೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಹಿಂಭಾಗದಲ್ಲಿ ಗೋಧಿ ಮೂಟೆಗಳನ್ನು ಸುಟ್ಟು ಹಾಕಿರುವ ವಿಚಾರವಾಗಿ ನಮ್ಮ ಅಧಿಕಾರಿಗಳು ಪರಿಶೀಲಿಸಿದ್ದಾರೆ. ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಲು ಡಿಡಿಪಿಐ ಅವರಿಗೆ ವರದಿ ಕಳುಹಿಸಲಾಗಿದೆ. ವರದಿ ಬಂದ ತಕ್ಷಣ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು.”
– ಕಾಂತರಾಜ್, ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಡಿ.ಕೋಟೆ

ಆಂದೋಲನ ಡೆಸ್ಕ್

Recent Posts

ಚಾಮರಾಜನಗರ| ಒಟ್ಟಿಗೆ ಕಾಣಿಸಿಕೊಂಡ ಐದು ಹುಲಿಗಳು: ಭಯಭೀತರಾದ ಗ್ರಾಮಸ್ಥರು

ಚಾಮರಾಜನಗರ: ಚಾಮರಾಜನಗರ ಹಾಗೂ ಗುಂಡ್ಲುಪೇಟೆ ತಾಲ್ಲೂಕುಗಳ ಗ್ರಾಮಸ್ಥರಲ್ಲಿ ವ್ಯಾಘ್ರಗಳ ಆತಂಕ ಮನೆ ಮಾಡಿದೆ. ಒಟ್ಟಿಗೆ ಐದು ಹುಲಿಗಳು ರಸ್ತೆಯಲ್ಲಿ ಹಾದು…

28 mins ago

ಹಾಸನ ಜಿಲ್ಲೆಯಲ್ಲಿ ಹೃದಯಾಘಾತಕ್ಕೆ ಇಬ್ಬರು ಬಲಿ

ಹಾಸನ: ಹಾಸನ ಜಿಲ್ಲೆಯಲ್ಲಿ ಹೃದಯಾಘಾತಕ್ಕೆ ಇಬ್ಬರು ಬಲಿಯಾಗಿರುವ ಘಟನೆ ನಡೆದಿದೆ. ಜಿಲ್ಲೆಯ ಅರಕಲಗೂಡು ತಾಲ್ಲೂಕಿನ ದೊಡ್ಡಳ್ಳಿ ಗ್ರಾಮದ ಸುಧಾಮಣಿ ಹಾಗೂ…

49 mins ago

ಅಸ್ಸಾಂನಲ್ಲಿ ಘೋರ ದುರಂತ: ರೈಲು ಡಿಕ್ಕಿಯಾಗಿ 7 ಆನೆಗಳು ಸಾವು

ಗುವಾಹಟಿ: ರೈಲು ಡಿಕ್ಕಿ ಹೊಡೆದ ಪರಿಣಾಮ ಏಳು ಆನೆಗಳು ಸ್ಥಳದಲ್ಲೇ ಮೃತಪಟ್ಟಿದ್ದು, ಒಂದು ಆನೆ ಗಂಭೀರವಾಗಿ ಗಾಯಗೊಂಡಿರುವ ಘಟನೆ ಅಸ್ಸಾಂನ…

2 hours ago

ಬುರುಡೆ ಗ್ಯಾಂಗ್‌ನಲ್ಲಿ ಬಿರುಕು: ಏನಾಗಿದೆ ಗೊತ್ತಾ?

ಮಂಗಳೂರು: ಧರ್ಮಸ್ಥಳ ಷಡ್ಯಂತ್ರ ಪ್ರಕರಣದ ಪ್ರಮುಖ ಆರೋಪಿ ಮಾಸ್ಕ್‌ ಮ್ಯಾನ್‌ ಚಿನ್ನಯ್ಯ ಇದೀಗ ಬುರುಡೆ ಗ್ಯಾಂಗ್‌ ವಿರುದ್ಧವೇ ತಿರುಗಿ ಬಿದ್ದಿದ್ದಾನೆ.…

2 hours ago

ದ್ವೇಷ ಭಾಷಣ ಪ್ರತಿಬಂಧನ ಮಸೂದೆಗೆ ಅಂಕಿತ ಹಾಕದಂತೆ ರಾಜ್ಯಪಾಲರಿಗೆ ಪತ್ರ ಬರೆದ ಶೋಭಾ ಕರಂದ್ಲಾಜೆ

ಬೆಂಗಳೂರು: ಬೆಳಗಾವಿ ವಿಧಾನಮಂಡಲ ಅಧಿವೇಶನದಲ್ಲಿ ಅಂಗೀಕರಿಸಲಾದ ಕರ್ನಾಟಕ ದ್ವೇಷ ಭಾಷಣ ಮತ್ತು ದ್ವೇಷ ಅಪರಾಧಗಳ ಪ್ರತಿಬಂಧಕ ಮಸೂದೆಗೆ ಅಂಕಿತ ಹಾಕಬಾರದು…

2 hours ago

ಓದುಗರ ಪತ್ರ: ಕಾನೂನು ಎಷ್ಟರ ಮಟ್ಟಿಗೆ ಕೆಲಸ ಮಾಡುತ್ತೆ?

ದ್ವೇಷ ಭಾಷಣ ಮತ್ತು ದ್ವೇಷ ಅಪರಾಧಗಳ ವಿಧೇಯಕವನ್ನು ರಾಜ್ಯ ಕಾಂಗ್ರೆಸ್ ಸರ್ಕಾರ ಡಿ.೧೮ರಂದು ಬೆಳಗಾವಿ ಸುವರ್ಣ ವಿಧಾನಸೌಧದಲ್ಲಿ ನಡೆಯುತ್ತಿರುವ ಅಧಿವೇಶನದಲ್ಲಿ…

3 hours ago