Categories: Andolana originals

ಕೋಟೆ: ಮಕ್ಕಳ ಬಿಸಿಯೂಟದ ಗೋಧಿಗೆ ಬೆಂಕಿ

ಸಮರ್ಪಕವಾಗಿ ಬಳಸಿಕೊಳ್ಳದೆ ಹುಳು ಹಿಡಿದಿದ್ದ ಗೋಧಿ; ಮುಖ್ಯ ಶಿಕ್ಷಕರು, ಅಡುಗೆ ಸಿಬ್ಬಂದಿ ವಿರುದ್ಧ ಆಕ್ರೋಶ

ಮಂಜು ಕೋಟೆ

ಎಚ್.ಡಿ.ಕೋಟೆ: ಸರ್ಕಾರಿ ಶಾಲೆಯ ಮಕ್ಕಳ ವಿದ್ಯಾರ್ಥಿಗಳಿಗೆ ಬಿಸಿ ಊಟಕ್ಕಾಗಿ ಸರಬರಾಜು ಮಾಡಿದ್ದ ಗೋಧಿಯನ್ನು ಸಮರ್ಪಕವಾಗಿ ಸದುಪಯೋಗಪಡಿಸಿಕೊಳ್ಳದೆ ಹುಳು ಬಂದಿದ್ದ 4-5 ಗೋಧಿ ಮೂಟೆಗಳನ್ನು ಶಾಲೆಯ ಹಿಂಭಾಗದಲ್ಲಿ ಅಡುಗೆ ಸಿಬ್ಬಂದಿ ಮತ್ತು ಮುಖ್ಯ ಶಿಕ್ಷಕರು ಸುಟ್ಟು ಹಾಕಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ.

ತಾಲ್ಲೂಕಿನ ಅಂತರಸಂತೆ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಈ ಘಟನೆ ನಡೆದಿದೆ.

ಈ ಸರ್ಕಾರಿ ಶಾಲೆಯಲ್ಲಿ 1ರಿಂದ 7ನೇ ತರಗತಿವರೆಗೆ 200ಕ್ಕೂ ಹೆಚ್ಚು ಬಡ ಮಕ್ಕಳು ಓದುತ್ತಿದ್ದು, ಇವರ ಊಟಕ್ಕಾಗಿ ಸರ್ಕಾರ ಪ್ರತಿ ತಿಂಗಳು ಸಾವಿರಾರು ರೂ. ಖರ್ಚು ಮಾಡಿ ಆಹಾರ ಪದಾರ್ಥಗಳನ್ನು ಪೂರೈಸುತ್ತಿದೆ. ಅದರೆ ಈ ಶಾಲೆಯ ಮುಖ್ಯಶಿಕ್ಷಕರು ಮತ್ತು ಅಡುಗೆಯವರ ಬೇಜವಾಬ್ದಾರಿತನ ಮತ್ತು ಪರಸ್ಪರ ಮುಸುಕಿನ ಗುದ್ದಾಟದಿಂದಾಗಿ ಮಕ್ಕಳಿಗೆ ಸಿಗಬೇಕಾಗಿದ್ದ ಪೌಷ್ಠಿಕಾಂಶದ ಆಹಾರ ಪದಾರ್ಥಗಳು ಹಾಳಾಗಿ ಹೋಗಿವೆ.

ಈ ಶಾಲೆಗೆ ವಿತರಿಸಲಾಗಿದ್ದ ಗೋಧಿಯಿಂದ ಮಕ್ಕಳಿಗೆ ಉಪ್ಪಿಟ್ಟು ಮಾಡಿಕೊಡದೇ ಹಾಗೆಯೇ ಶೇಖರಣೆ ಮಾಡಿ ಇಟ್ಟಿದ್ದರಿಂದ ಗೋಧಿಯಲ್ಲಿ ಹುಳುಗಳು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಕಳೆದ ವಾರ ಶಾಲೆ ಹಿಂಭಾಗದಲ್ಲಿ 4-5 ಗೋಧಿ ಮೂಟೆಗಳನ್ನು ಸುಟ್ಟು ಹಾಕಿದ್ದರು.

ಈ ವಿಚಾರ ತಿಳಿಯುತ್ತಿದ್ದಂತೆ ಕೆಲವರು ಅದರ ವಿಡಿಯೋ ಚಿತ್ರೀಕರಣ ಮಾಡಿ ಶಿಕ್ಷಣ ಇಲಾಖೆಯ ಕೆಲ ಅಧಿಕಾರಿಗಳಿಗೆ ಕಳಿಸಿದ್ದರು. ನಂತರ ಬಿಆರ್‌ಸಿ ಮತ್ತು ಸಿಆರ್‌ಪಿಗಳಾದ ಪ್ರಕಾಶ ಮತು ಕೃಷ್ಣಯ್ಯ ಅವರು ಸ್ಥಳಕ್ಕೆ ಭೇಟಿ ನೀಡಿ ಗೋಧೀಯನ್ನು ಸುಟ್ಟು ಹಾಕಿರುವುದನ್ನು ಪರಿಶೀಲಿಸಿ ತಪ್ಪಿತಸ್ಥರಿಗೆ ಎಚ್ಚರಿಕೆ ನೀಡಿ ಹೋಗಿದ್ದಾರೆ.

ಬಿಸಿ ಊಟದ ವಿಚಾರವಾಗಿ ತಾಲ್ಲೂಕಿನ ಸರ್ಕಾರಿ ಕಿರಿಯ ಮತ್ತು ಹಿರಿಯ ಪ್ರಾಥಮಿಕ ಶಾಲೆಗಳಲ್ಲಿ ಆಗಿಂದಾಗ್ಗೆ ಅಡುಗೆಯವರು ಮತ್ತು ಶಿಕ್ಷಕರ ನಿರ್ಲಕ್ಷ್ಯದಿಂದ ಒಂದಲ್ಲಾ ಒಂದು ಅಧ್ವಾನ ನಡೆಯುತ್ತಲೇ ಇರುತ್ತದೆ. ಈಗಲಾದರೂ ಬಡ ಮಕ್ಕಳಿಗೆ ಸಿಗಬೇಕಾಗಿದ್ದ ಬಿಸಿ ಊಟದ ವಿಚಾರದಲ್ಲಿ ಬೇಜವಾಬ್ದಾರಿ ವಹಿಸುವ ಯಾವುದೇ ಶಿಕ್ಷಕರು, ನೌಕರರ ವಿರುದ್ಧ ಕಠಿಣ ಕ್ರಮ ಕೈಗೊಂಡರೆ ಮುಂದಿನ ದಿನಗಳಲ್ಲಿ ಇಂತಹ ಘಟನೆಗಳು ಮರುಕಳಿಸುವುದು ತಪ್ಪಬಹುದು ಮತ್ತು ಸರ್ಕಾರದ ಸೌಲಭ್ಯ ಮಕ್ಕಳಿಗೆ ತಲುಪುತ್ತದೆ ಎನ್ನುವುದು ಸಾರ್ವಜನಿಕರ ಅನಿಸಿಕೆಯಾಗಿದೆ.

“ಅಂತರಸಂತೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಹಿಂಭಾಗದಲ್ಲಿ ಗೋಧಿ ಮೂಟೆಗಳನ್ನು ಸುಟ್ಟು ಹಾಕಿರುವ ವಿಚಾರವಾಗಿ ನಮ್ಮ ಅಧಿಕಾರಿಗಳು ಪರಿಶೀಲಿಸಿದ್ದಾರೆ. ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಲು ಡಿಡಿಪಿಐ ಅವರಿಗೆ ವರದಿ ಕಳುಹಿಸಲಾಗಿದೆ. ವರದಿ ಬಂದ ತಕ್ಷಣ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು.”
– ಕಾಂತರಾಜ್, ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಡಿ.ಕೋಟೆ

ಆಂದೋಲನ ಡೆಸ್ಕ್

Recent Posts

ಶಿಷ್ಯವೇತನಕ್ಕೆ ಸಂಶೋಧಕರ ಆಗ್ರಹ : ಭಾನುವಾರ ಸಭೆ

ಮೈಸೂರು : ಶಿಷ್ಯವೇತನಕ್ಕೆ ಆಗ್ರಹಿಸಿ ಮೈಸೂರು ವಿಶ್ವವಿದ್ಯಾನಿಲಯದ ಸಂಶೋಧಕರು ನಡೆಸುತ್ತಿರುವ ಹೋರಾಟವನ್ನು ತೀವ್ರಗೊಳಿಸಲು ಭಾನುವಾರ ಬೆಳಿಗ್ಗೆ 11ಕ್ಕೆ ವಿಶ್ವವಿದ್ಯಾನಿಲಯದ ಕ್ರಾಫರ್ಡ್…

2 hours ago

ನಿರ್ಮಾಣ ಹಂತದಲ್ಲಿದ್ದ ಹನುಮನ ದೇಗುಲದ ಛಾವಣಿ ಕುಸಿತ ; 7 ಭಕ್ತರು ಸಾವು

ಮುಂಬೈ : ಇಲ್ಲಿನ ಪರ್ಭಾನಿಯಲ್ಲಿರುವ ನಿರ್ಮಾಣ ಹಂತದ ಹನುಮನ ದೇವಾಲಯದ ಛಾವಣಿ ಕುಸಿದು 7 ಭಕ್ತರು ಸಾವನ್ನಪ್ಪಿದ್ದು, 30ಕ್ಕೂ ಅಧಿಕ…

4 hours ago

ಚೂರಿ ಇರಿತ ಆರೋಪ : ಐವರ ವಿರುದ್ಧ ಪ್ರಕರಣ

ಸಿದ್ದಾಪುರ : ಟಿಂಬರ್ ಯೂನಿಯನ್ ಸಭೆಯಲ್ಲಿ ಮಾರಾಮಾರಿ ನಡೆದು ಇಬ್ಬರಿಗೆ ಚೂರಿಯಿಂದ ಇರಿದು ಗಾಯಗೊಳಿಸಿದ ಆರೋಪದಡಿ ಐವರ ವಿರುದ್ಧ ಸಿದ್ದಾಪುರ…

6 hours ago

ಹನೂರು | ಪೊನ್ನಾಚಿ ಗ್ರಾಮದ ಬಳಿ ಬೋನಿಗೆ ಬಿದ್ದ ಚಿರತೆ

ಹನೂರು : ಅನೇಕ ದಿನಗಳಿಂದ ಸಾಕುಪ್ರಾಣಿಗಳನ್ನು ಕೊಂದು ಗ್ರಾಮಸ್ಥರು ಹಾಗೂ ಅರಣ್ಯ ಇಲಾಖೆಗೆ ತಲೆ ನೋವಾಗಿದ್ದ ಚಿರತೆಯನ್ನು ಕೊನೆಗೂ ಸೆರೆ…

7 hours ago

ಮುಂದಿನ ಎರಡು ತಿಂಗಳ ಕಾಲ ಕುಡಿಯುವ ನೀರಿಗೆ ಸಮಸ್ಯೆಯಿಲ್ಲ: ಸಚಿವ ರಾಮಲಿಂಗಾರೆಡ್ಡಿ

ಬೆಂಗಳೂರು: ರಾಜ್ಯದಲ್ಲಿ ಈ ಬಾರಿ ನಿರೀಕ್ಷಿತ ಪ್ರಮಾಣದ ಮಳೆ ಬಾರದೇ ಇದ್ದರೂ, ಮುಂದಿನ ಎರಡು ತಿಂಗಳ ಕಾಲ ಕುಡಿಯುವ ನೀರಿಗೆ…

10 hours ago

ಕದನ ವಿರಾಮದ ನಡುವೆ ಮತ್ತೆ ಲೆಬನಾನ್‌ ಮೇಲೆ ಇಸ್ರೇಲ್‌ ದಾಳಿ: 5 ಮಂದಿ ಸಾವು

ಬೈರುತ್:‌ ಲೆಬನಾನ್‌ ಮೇಲೆ ಇಸ್ರೇಲ್‌ ದಾಳಿ ಮುಂದುವರಿದಿದ್ದು, ಇಸ್ರೇಲ್ ಮತ್ತು ಇರಾನ್‌ ಬೆಂಬಲಿತ ಹೆಬ್ಜೊಲ್ಲಾ ನಡುವೆ ಕದನ ವಿರಾಮ ಜಾರಿಗೆ…

10 hours ago