Andolana originals

ಅರಮನೆ ನಗರಿ ಮೈಸೂರಿನಲ್ಲಿ ಕ್ರಿಸ್‌ಮಸ್ ಸಂಭ್ರಮ

ಸಂತ ಫಿಲೋಮಿನಾ ಚರ್ಚ್‌ಗೆ ವಿಶೇಷ ಅಲಂಕಾರ; ದೀಪಾಲಂಕಾರ, ನಕ್ಷತ್ರಗಳಿಂದ ಕಂಗೊಳಿಸುತ್ತಿರುವ ಚರ್ಚ್‌ಗಳು

ಮೈಸೂರು: ಕ್ರೈಸ್ತರ ಪವಿತ್ರ ಹಬ್ಬ ಕ್ರಿಸ್‌ಮಸ್ ಆಚರಣೆಗೆ ಸಾಂಸ್ಕೃತಿಕ ನಗರಿ ಮೈಸೂರು ಸಜ್ಜಾಗಿದ್ದು, ಐತಿಹಾಸಿಕ ಸಂತ ಫಿಲೋಮಿನಾ ಚರ್ಚ್ ಸೇರಿದಂತೆ ನಗರದ ವಿವಿಧೆಡೆ ಇರುವ ಚರ್ಚ್‌ಗಳು ದೀಪಾಲಂಕಾರ, ನಕ್ಷತ್ರಗಳಿಂದ ಅಲಂಕೃತಗೊಂಡು ಕಂಗೊಳಿಸುತ್ತಿವೆ. ತಡ ರಾತ್ರಿಯಿಂದಲೇ ಕ್ರಿಸ್‌ಮಸ್ ಆಚರಣೆ ಆರಂಭವಾಗಿದೆ.

ಕ್ರಿಸ್‌ಮಸ್ ಮರಕ್ಕೆ ಬಣ್ಣ ಬಣ್ಣದ ದೀಪಾಲಂಕಾರ ಮಾಡಲಾಗಿದೆ. ಅಲ್ಲದೆ- ಚರ್ಚ್ ಆವರಣದಲ್ಲಿ ಯೇಸುಕ್ರಿಸ್ತನ ಮೂರ್ತಿಗಳನ್ನು ವಿಶೇಷವಾಗಿ ಸಿಂಗರಿಸಿ, ಯೇಸು ಜನಿಸಿದ ಚಿತ್ರಣವನ್ನು ಕಟ್ಟಿ ಕೊಡ ಲಾಗಿದೆ.

ಬೆಂಗಳೂರು-ನೀಲಗಿರಿ ರಸ್ತೆಯ ವೆಸ್ಲಿ ಕ್ಯಾಥೆಡ್ರಲ್, ಸೇಂಟ್ ಬಾರ್ಥ ಲೋಮಿಯಸ್ ಕ್ಯಾಥೆಡ್ರಲ್, ವಿಜಯನಗರದ ೪ನೇ ಹಂತದ ಇನ್‌ಫ್ಯಾಂಟ್ ಜೀಸಸ್ ಚರ್ಚ್, ಹಾರ್ಡ್ವಿಕ್ ಚರ್ಚ್ ಗಳಲ್ಲಿ ಕ್ರಿಸ್‌ಮಸ್ ಆಚರಣೆಗೆ ಸಿದ್ಧತೆ ಮಾಡಿಕೊಳ್ಳಲಾಗಿದೆ.

ಬೆತ್ಲೆಹೆಮ್, ಜೆರುಸಲೇಮ್ ನಗರಗಳನ್ನು ಬಿಂಬಿಸುವ ಗೋದಲಿ ನಿರ್ಮಾಣದಿಂದ ಆಕರ್ಷಿಸುತ್ತಿರುವ ಸೇಂಟ್ ಫಿಲೋಮಿನಾ ಚರ್ಚ್‌ನಲ್ಲಿ ವಿಶೇಷ ತಯಾರಿ ಮಾಡಿಕೊಳ್ಳಲಾಗಿದೆ. ಮಂಗಳವಾರ ಮಧ್ಯರಾತ್ರಿಯಿಂದಲೇ ಚರ್ಚ್‌ಗಳಲ್ಲಿ ಹಬ್ಬದ ಸಂಭ್ರಮ ಮನೆ ಮಾಡಿದ್ದು, ನಗರದ ಎಲ್ಲ ಚರ್ಚ್ ಗಳಲ್ಲಿಯೂ ವಿಶೇಷ ಪ್ರಾರ್ಥನೆ ನಡೆಯಿತು. ಚರ್ಚ್‌ಗಳಿಗೆ ಆಗಮಿಸುವ ಜನರು ಯೇಸು ವನ್ನು ಪ್ರಾರ್ಥಿಸಿ, ಪರಸ್ಪರ ಕ್ರಿಸ್‌ಮಸ್ ಶುಭಾಶಯ ವಿನಿಮಯ ಮಾಡಿಕೊಂಡರು. ಐತಿಹಾಸಿಕ ಸಂತ ಫಿಲೋಮಿನಾ ಚರ್ಚ್ ನಲ್ಲಿ ವಿಶೇಷವಾಗಿ ಕ್ರಿಸ್‌ಮಸ್ ಆಚರಣೆ ನಡೆಯಲಿದ್ದು, ಈಗಾಗಲೇ ಚರ್ಚ್‌ನ್ನು ವಿದ್ಯುದ್ದೀಪಗಳಿಂದ ಸಿಂಗರಿಸಲಾಗಿದೆ. ಚರ್ಚ್‌ನ ಒಳ ಆವರಣವೂ ಪ್ರಾರ್ಥನೆಗೆ ವಿಶೇಷವಾಗಿ ಸಿದ್ಧವಾಗಿದೆ. ಚರ್ಚ್‌ನ ಒಳಾವರಣದಲ್ಲಿ ಸಾವಿರ ಮಂದಿ ಕೂರಲು ಅವಕಾಶವಿದ್ದು, ಹೊರ ಆವ ರಣದಲ್ಲೂ ಪ್ರಾರ್ಥನೆ ವೀಕ್ಷಣೆಗೆ ಎಲ್‌ಇಡಿ ಪರದೆಗಳನ್ನು ಅಳವಡಿಸಲಾಗಿದೆ.

ಭರ್ಜರಿ ವ್ಯಾಪಾರ: ಕ್ರಿಸ್‌ಮಸ್ ಹಬ್ಬದ ಹಿನ್ನೆಲೆಯಲ್ಲಿ ಕ್ರೈಸ್ತರು ಹಬ್ಬಕ್ಕೆ ಬೇಕಾದ ವಸ್ತುಗಳನ್ನು ಮಂಗಳವಾರ ಖರೀದಿಸಿದರು. ಇದರಿಂದ ನಗರದ ಶಿವರಾಂಪೇಟೆಯ ಮನ್ನಾರ‍್ಸ್ ಮಾರುಕಟ್ಟೆ, ದೇವರಾಜ ಮಾರುಕಟ್ಟೆ, ಅರಸು ರಸ್ತೆ ಸೇರಿದಂತೆ ವಿವಿಧೆಡೆ ಭರ್ಜರಿ ವ್ಯಾಪಾರ ನಡೆಯಿತು. ಬೊಂಬೆ ಗಳು, ಜಿಂಗಲ್ ಬೆಲ್ಸ್, ಸಂತ ಕ್ಲಾಸ್ ಕಟೌಟ್ ಗಳು, ನಕ್ಷತ್ರಗಳು, ದೀಪಗಳು, ಕ್ಯಾಂಡಲ್, ತಮ್ಮ ಪ್ರೀತಿ ಪಾತ್ರರಿಗೆ ನೀಡಲು ಉಡುಗೊರೆ, ಕೇಕ್‌ಗಳನ್ನು ಖರೀದಿ ಮಾಡಿದರು.

ರಂಗೋಲಿಯಲ್ಲಿ ಅರಳಿದ ಯೇಸು: ಕ್ರಿಸ್‌ಮಸ್ ಪ್ರಯುಕ್ತ ನಗರದ ಸಂತ ಫಿಲೋಮಿನಾ ಚರ್ಚ್ ಆವರಣದಲ್ಲಿ ರಂಗೋಲಿಯಲ್ಲಿ ಬಿಡಿಸಿರುವ ಯೇಸು ಕ್ರಿಸ್ತನ ಬೃಹತ್ ಚಿತ್ರ ಎಲ್ಲರ ಗಮನ ಸೆಳೆಯುತ್ತಿದೆ. ಕಲಾವಿದ ಪುನೀತ್ ಬಳಗ ಹಾಗೂ ಖ್ಯಾತ ರಂಗೋಲಿ ಕಲಾವಿದೆ ಸಿ. ಲಕ್ಷ್ಮಿಮತ್ತು ಕೆಥಡ್ರೆಲ್ ಪ್ಯಾರಿಸ್‌ನ ಉಸ್ತುವಾರಿ ಸ್ಟೇನಿ ಡಿ. ಅಲ್ಮೇಡಾ ಅವರ ಸಹಯೋಗದೊಂದಿಗೆ ಸುಮಾರು ೪,೫೦೦ ಚದರ ಅಡಿ ವಿಸ್ತೀರ್ಣದಲ್ಲಿ ಬೃಹತ್ ಚಿತ್ರ ಬಿಡಿಸಲಾಗಿದೆ. ವಿವಿಧ ಬಣ್ಣಗಳಲ್ಲಿ ರಚಿಸಿರುವ ಯೇಸು ಚಿತ್ರ ಚರ್ಚ್‌ನಲ್ಲಿ ಪ್ರಮುಖ ಆಕರ್ಷಣೆಯಾಗಿದೆ.

ಗೋದಲಿ ನಿರ್ಮಿಸಿ ಪೂಜೆ: ಕ್ಯಾಥೋಲಿಕ್ ಪ್ರಧಾನ ಚರ್ಚ್ ಸಂತ ಫಿಲೋಮಿನಾದಲ್ಲಿ ಮಂಗಳವಾರ ರಾತ್ರಿ ೧೦. ೩೦ಕ್ಕೆ ಕ್ರಿಸ್‌ಮಸ್ ಹಾಡುಗಳೊಂದಿಗೆ ಕಾರ್ಯಕ್ರಮ ಆರಂಭಗೊಂಡು ೧೧. ೩೦ರಿಂದ ಜಾಗರಣೆ ಕ್ರಿಸ್‌ಮಸ್ ಬಲಿಪೂಜೆ ನಡೆಯಿತು. ಸರಿಯಾಗಿ ೧೨ ಗಂಟೆಗೆ ಬಾಲ ಯೇಸುವನ್ನು ಮೆರವಣಿಗೆ ಮೂಲಕ ಗೋದಲಿಯಲ್ಲಿ ಪ್ರತಿಷ್ಠಾಪನೆ ಮಾಡಲಾಯಿತು. ಮೈಸೂರು ಧರ್ಮಕ್ಷೇತ್ರ ಆಡಳಿತಾಽಕಾರಿ ಬರ್ನಾರ್ಡ್ ಮೋರಸ್ ನೇತೃತ್ವದಲ್ಲಿ ಪೂಜಾ ವಿಽ-ವಿಧಾನಗಳು ನೆರವೇರಿದವು. ಡಿ. ೨೫ರಂದು ಬೆಳಿಗ್ಗೆ ೫ರಿಂದ ೯ರವರೆಗೆ ಪ್ರಮುಖ ಪ್ರಾರ್ಥನೆ ತಮಿಳು, ಕನ್ನಡ, ಇಂಗ್ಲಿಷ್ ಭಾಷೆಗಳಲ್ಲಿ ನಡೆಯಲಿದೆ. ಬಳಿಕ ಸಾರ್ವಜನಿಕರಿಗೆ ಚರ್ಚ್ ಪ್ರವೇಶ ನೀಡಲಾಗುತ್ತದೆ. ಮತ್ತೆ ಸಂಜೆ ೬ ಗಂಟೆಗೆ ಪೂಜೆ ನಡೆಯಲಿದೆ ಎಂದು ಚರ್ಚ್‌ನ ಫಾ. ಪೀಟರ್ ತಿಳಿಸಿದ್ದಾರೆ. ಪ್ರಾಟೆಸ್ಟೆಂಟ್ ಚರ್ಚ್‌ಗಳಲ್ಲಿ ಡಿ. ೨೫ರಂದು ಬೆಳಿಗ್ಗೆ ೮ರಿಂದ ೧೦. ೩೦ರವರೆಗೆ ಪೂಜಾ ಕಾರ್ಯಕ್ರಮ ನಡೆಯಲಿದೆ.

 

ಆಂದೋಲನ ಡೆಸ್ಕ್

Recent Posts

ಉಡುಪಿ ಮಲ್ಪೆ ಬಳಿ ದೋಣಿ ಪಲ್ಟಿ: ಮೈಸೂರಿನ ಇಬ್ಬರು ಸಾವು

ಉಡುಪಿ: ಇಲ್ಲಿನ ಮಲ್ಪೆ ಕೋಡಿಬೆಂಗ್ರೆ ಬೀಷಚ್‌ ಸಮೀಪ ಪ್ರವಾಸಿ ದೋಣಿ ಮುಗುಚಿದ ಪರಿಣಾಮ ತೀವ್ರ ಅಸ್ವಸ್ಥಗೊಂಡಿದ್ದ ಮೈಸೂರಿನ ಇಬ್ಬರು ಮೃತಪಟ್ಟಿರುವ…

7 hours ago

ಜೆಡಿಎಸ್‌ ಬಿಟ್ಟಿದ್ದು ದ್ರೋಹ ಹೇಗಾಗುತ್ತೆ: ಶಾಸಕ ಶಿವಲಿಂಗೇಗೌಡ

ಹಾಸನ: ನಾನು ಜೆಡಿಎಸ್‌ ಬಿಟ್ಟು ಹೋದರೆ ದ್ರೋಹ ಹೇಗಾಗುತ್ತದೆ? ನಾನು ಅಲ್ಲಿದ್ದರೆ ಇನ್ನೊಂದು ಸೀಟ್‌ ಜಾಸ್ತಿ ಆಗೋದು ಅಷ್ಟೇ. ಏನು…

7 hours ago

ಭಾಷಣ ಮಾಡದೇ ತೆರಳುತ್ತಿದ್ದ ರಾಜ್ಯಪಾಲರಿಗೆ ಅಡ್ಡಿಪಡಿಸಿದ ವಿಚಾರ: ರಾಷ್ಟ್ರಪತಿಗೆ ವರದಿ ರವಾನಿಸಿದ ಲೋಕಭವನ

ಬೆಂಗಳೂರು: ವಿಧಾನಮಂಡಲ ವಿಶೇಷ ಜಂಟಿ ಅಧಿವೇಶನದಲ್ಲಿ ಭಾಷಣ ಮಾಡದೇ ತೆರಳುತ್ತಿದ್ದ ರಾಜ್ಯಪಾಲ ಥಾವರ್‌ ಚಂದ್‌ ಗೆಹ್ಲೋಟ್‌ ಅವರಿಗೆ ಕಾಂಗ್ರೆಸ್‌ ಸದಸ್ಯರು…

8 hours ago

ಮಳವಳ್ಳಿ: ಈಜಲು ಹೋಗಿದ್ದ ಯುವಕ ಸಾವು

ಮಳವಳ್ಳಿ: ಮಳವಳ್ಳಿ ತಾಲ್ಲೂಕಿನ ಹಲಗೂರು ಸಮೀಪದ ಮುತ್ತತ್ತಿ ಕಾವೇರಿ ನದಿಯಲ್ಲಿ ಈಜಾಡುತ್ತಿದ್ದಾಗ ನೀರಿನ ಸೆಳೆತಕ್ಕೆ ಸಿಲುಕಿ ಯುವಕ ಮೃತಪಟ್ಟ ಘಟನೆ…

8 hours ago

ಮಂಡ್ಯದಲ್ಲಿ 3 ಕೋಟಿ ವೆಚ್ಚದಲ್ಲಿ ಗಾಂಧಿಭವನ ನಿರ್ಮಾಣ: ಸಚಿವ ಚಲುವರಾಯಸ್ವಾಮಿ

ಮಂಡ್ಯ: ಮಹಾತ್ಮ ಗಾಂಧೀಜಿ ಅವರ ವಿಚಾರಧಾರೆಗಳನ್ನು ಯುವ ಪೀಳಿಗೆಗೆ ತಲುಪಿಸುವ ಕೆಲಸವನ್ನು ಗಾಂಧಿ ಭವನದಲ್ಲಿ ಮಾಡಲಾಗುವುದು ಎಂದು ಮಂಡ್ಯ ಜಿಲ್ಲಾ…

8 hours ago

ಗ್ರಾಮ ಪಂಚಾಯತ್‌ಗಳ 590 ಸಿಬ್ಬಂದಿಗಳಿಗೆ ಅನುಮೋದನೆ: ಆದೇಶ ಪ್ರತಿ ವಿತರಿಸಿದ ಸಚಿವ ಎನ್‌.ಚಲುವರಾಯಸ್ವಾಮಿ

ಮಂಡ್ಯ: ಮಂಡ್ಯ ಜಿಲ್ಲೆಯ ವ್ಯಾಪ್ತಿಯ ಗ್ರಾಮ ಪಂಚಾಯತ್‌ಗಳಲ್ಲಿ ದಿನಾಂಕ:31-10-2017ಕ್ಕೂ ಪೂರ್ವದಲ್ಲಿ ಗ್ರಾಮ ಪಂಚಾಯತ್ ನಿಂದ ನೇಮಕಗೊಂಡು ನೀರುಗಂಟಿ, ಸ್ವಚ್ಛತಗಾರ, ಅಟೆಂಡರ್…

8 hours ago