Andolana originals

ಅರಮನೆ ನಗರಿ ಮೈಸೂರಿನಲ್ಲಿ ಕ್ರಿಸ್‌ಮಸ್ ಸಂಭ್ರಮ

ಸಂತ ಫಿಲೋಮಿನಾ ಚರ್ಚ್‌ಗೆ ವಿಶೇಷ ಅಲಂಕಾರ; ದೀಪಾಲಂಕಾರ, ನಕ್ಷತ್ರಗಳಿಂದ ಕಂಗೊಳಿಸುತ್ತಿರುವ ಚರ್ಚ್‌ಗಳು

ಮೈಸೂರು: ಕ್ರೈಸ್ತರ ಪವಿತ್ರ ಹಬ್ಬ ಕ್ರಿಸ್‌ಮಸ್ ಆಚರಣೆಗೆ ಸಾಂಸ್ಕೃತಿಕ ನಗರಿ ಮೈಸೂರು ಸಜ್ಜಾಗಿದ್ದು, ಐತಿಹಾಸಿಕ ಸಂತ ಫಿಲೋಮಿನಾ ಚರ್ಚ್ ಸೇರಿದಂತೆ ನಗರದ ವಿವಿಧೆಡೆ ಇರುವ ಚರ್ಚ್‌ಗಳು ದೀಪಾಲಂಕಾರ, ನಕ್ಷತ್ರಗಳಿಂದ ಅಲಂಕೃತಗೊಂಡು ಕಂಗೊಳಿಸುತ್ತಿವೆ. ತಡ ರಾತ್ರಿಯಿಂದಲೇ ಕ್ರಿಸ್‌ಮಸ್ ಆಚರಣೆ ಆರಂಭವಾಗಿದೆ.

ಕ್ರಿಸ್‌ಮಸ್ ಮರಕ್ಕೆ ಬಣ್ಣ ಬಣ್ಣದ ದೀಪಾಲಂಕಾರ ಮಾಡಲಾಗಿದೆ. ಅಲ್ಲದೆ- ಚರ್ಚ್ ಆವರಣದಲ್ಲಿ ಯೇಸುಕ್ರಿಸ್ತನ ಮೂರ್ತಿಗಳನ್ನು ವಿಶೇಷವಾಗಿ ಸಿಂಗರಿಸಿ, ಯೇಸು ಜನಿಸಿದ ಚಿತ್ರಣವನ್ನು ಕಟ್ಟಿ ಕೊಡ ಲಾಗಿದೆ.

ಬೆಂಗಳೂರು-ನೀಲಗಿರಿ ರಸ್ತೆಯ ವೆಸ್ಲಿ ಕ್ಯಾಥೆಡ್ರಲ್, ಸೇಂಟ್ ಬಾರ್ಥ ಲೋಮಿಯಸ್ ಕ್ಯಾಥೆಡ್ರಲ್, ವಿಜಯನಗರದ ೪ನೇ ಹಂತದ ಇನ್‌ಫ್ಯಾಂಟ್ ಜೀಸಸ್ ಚರ್ಚ್, ಹಾರ್ಡ್ವಿಕ್ ಚರ್ಚ್ ಗಳಲ್ಲಿ ಕ್ರಿಸ್‌ಮಸ್ ಆಚರಣೆಗೆ ಸಿದ್ಧತೆ ಮಾಡಿಕೊಳ್ಳಲಾಗಿದೆ.

ಬೆತ್ಲೆಹೆಮ್, ಜೆರುಸಲೇಮ್ ನಗರಗಳನ್ನು ಬಿಂಬಿಸುವ ಗೋದಲಿ ನಿರ್ಮಾಣದಿಂದ ಆಕರ್ಷಿಸುತ್ತಿರುವ ಸೇಂಟ್ ಫಿಲೋಮಿನಾ ಚರ್ಚ್‌ನಲ್ಲಿ ವಿಶೇಷ ತಯಾರಿ ಮಾಡಿಕೊಳ್ಳಲಾಗಿದೆ. ಮಂಗಳವಾರ ಮಧ್ಯರಾತ್ರಿಯಿಂದಲೇ ಚರ್ಚ್‌ಗಳಲ್ಲಿ ಹಬ್ಬದ ಸಂಭ್ರಮ ಮನೆ ಮಾಡಿದ್ದು, ನಗರದ ಎಲ್ಲ ಚರ್ಚ್ ಗಳಲ್ಲಿಯೂ ವಿಶೇಷ ಪ್ರಾರ್ಥನೆ ನಡೆಯಿತು. ಚರ್ಚ್‌ಗಳಿಗೆ ಆಗಮಿಸುವ ಜನರು ಯೇಸು ವನ್ನು ಪ್ರಾರ್ಥಿಸಿ, ಪರಸ್ಪರ ಕ್ರಿಸ್‌ಮಸ್ ಶುಭಾಶಯ ವಿನಿಮಯ ಮಾಡಿಕೊಂಡರು. ಐತಿಹಾಸಿಕ ಸಂತ ಫಿಲೋಮಿನಾ ಚರ್ಚ್ ನಲ್ಲಿ ವಿಶೇಷವಾಗಿ ಕ್ರಿಸ್‌ಮಸ್ ಆಚರಣೆ ನಡೆಯಲಿದ್ದು, ಈಗಾಗಲೇ ಚರ್ಚ್‌ನ್ನು ವಿದ್ಯುದ್ದೀಪಗಳಿಂದ ಸಿಂಗರಿಸಲಾಗಿದೆ. ಚರ್ಚ್‌ನ ಒಳ ಆವರಣವೂ ಪ್ರಾರ್ಥನೆಗೆ ವಿಶೇಷವಾಗಿ ಸಿದ್ಧವಾಗಿದೆ. ಚರ್ಚ್‌ನ ಒಳಾವರಣದಲ್ಲಿ ಸಾವಿರ ಮಂದಿ ಕೂರಲು ಅವಕಾಶವಿದ್ದು, ಹೊರ ಆವ ರಣದಲ್ಲೂ ಪ್ರಾರ್ಥನೆ ವೀಕ್ಷಣೆಗೆ ಎಲ್‌ಇಡಿ ಪರದೆಗಳನ್ನು ಅಳವಡಿಸಲಾಗಿದೆ.

ಭರ್ಜರಿ ವ್ಯಾಪಾರ: ಕ್ರಿಸ್‌ಮಸ್ ಹಬ್ಬದ ಹಿನ್ನೆಲೆಯಲ್ಲಿ ಕ್ರೈಸ್ತರು ಹಬ್ಬಕ್ಕೆ ಬೇಕಾದ ವಸ್ತುಗಳನ್ನು ಮಂಗಳವಾರ ಖರೀದಿಸಿದರು. ಇದರಿಂದ ನಗರದ ಶಿವರಾಂಪೇಟೆಯ ಮನ್ನಾರ‍್ಸ್ ಮಾರುಕಟ್ಟೆ, ದೇವರಾಜ ಮಾರುಕಟ್ಟೆ, ಅರಸು ರಸ್ತೆ ಸೇರಿದಂತೆ ವಿವಿಧೆಡೆ ಭರ್ಜರಿ ವ್ಯಾಪಾರ ನಡೆಯಿತು. ಬೊಂಬೆ ಗಳು, ಜಿಂಗಲ್ ಬೆಲ್ಸ್, ಸಂತ ಕ್ಲಾಸ್ ಕಟೌಟ್ ಗಳು, ನಕ್ಷತ್ರಗಳು, ದೀಪಗಳು, ಕ್ಯಾಂಡಲ್, ತಮ್ಮ ಪ್ರೀತಿ ಪಾತ್ರರಿಗೆ ನೀಡಲು ಉಡುಗೊರೆ, ಕೇಕ್‌ಗಳನ್ನು ಖರೀದಿ ಮಾಡಿದರು.

ರಂಗೋಲಿಯಲ್ಲಿ ಅರಳಿದ ಯೇಸು: ಕ್ರಿಸ್‌ಮಸ್ ಪ್ರಯುಕ್ತ ನಗರದ ಸಂತ ಫಿಲೋಮಿನಾ ಚರ್ಚ್ ಆವರಣದಲ್ಲಿ ರಂಗೋಲಿಯಲ್ಲಿ ಬಿಡಿಸಿರುವ ಯೇಸು ಕ್ರಿಸ್ತನ ಬೃಹತ್ ಚಿತ್ರ ಎಲ್ಲರ ಗಮನ ಸೆಳೆಯುತ್ತಿದೆ. ಕಲಾವಿದ ಪುನೀತ್ ಬಳಗ ಹಾಗೂ ಖ್ಯಾತ ರಂಗೋಲಿ ಕಲಾವಿದೆ ಸಿ. ಲಕ್ಷ್ಮಿಮತ್ತು ಕೆಥಡ್ರೆಲ್ ಪ್ಯಾರಿಸ್‌ನ ಉಸ್ತುವಾರಿ ಸ್ಟೇನಿ ಡಿ. ಅಲ್ಮೇಡಾ ಅವರ ಸಹಯೋಗದೊಂದಿಗೆ ಸುಮಾರು ೪,೫೦೦ ಚದರ ಅಡಿ ವಿಸ್ತೀರ್ಣದಲ್ಲಿ ಬೃಹತ್ ಚಿತ್ರ ಬಿಡಿಸಲಾಗಿದೆ. ವಿವಿಧ ಬಣ್ಣಗಳಲ್ಲಿ ರಚಿಸಿರುವ ಯೇಸು ಚಿತ್ರ ಚರ್ಚ್‌ನಲ್ಲಿ ಪ್ರಮುಖ ಆಕರ್ಷಣೆಯಾಗಿದೆ.

ಗೋದಲಿ ನಿರ್ಮಿಸಿ ಪೂಜೆ: ಕ್ಯಾಥೋಲಿಕ್ ಪ್ರಧಾನ ಚರ್ಚ್ ಸಂತ ಫಿಲೋಮಿನಾದಲ್ಲಿ ಮಂಗಳವಾರ ರಾತ್ರಿ ೧೦. ೩೦ಕ್ಕೆ ಕ್ರಿಸ್‌ಮಸ್ ಹಾಡುಗಳೊಂದಿಗೆ ಕಾರ್ಯಕ್ರಮ ಆರಂಭಗೊಂಡು ೧೧. ೩೦ರಿಂದ ಜಾಗರಣೆ ಕ್ರಿಸ್‌ಮಸ್ ಬಲಿಪೂಜೆ ನಡೆಯಿತು. ಸರಿಯಾಗಿ ೧೨ ಗಂಟೆಗೆ ಬಾಲ ಯೇಸುವನ್ನು ಮೆರವಣಿಗೆ ಮೂಲಕ ಗೋದಲಿಯಲ್ಲಿ ಪ್ರತಿಷ್ಠಾಪನೆ ಮಾಡಲಾಯಿತು. ಮೈಸೂರು ಧರ್ಮಕ್ಷೇತ್ರ ಆಡಳಿತಾಽಕಾರಿ ಬರ್ನಾರ್ಡ್ ಮೋರಸ್ ನೇತೃತ್ವದಲ್ಲಿ ಪೂಜಾ ವಿಽ-ವಿಧಾನಗಳು ನೆರವೇರಿದವು. ಡಿ. ೨೫ರಂದು ಬೆಳಿಗ್ಗೆ ೫ರಿಂದ ೯ರವರೆಗೆ ಪ್ರಮುಖ ಪ್ರಾರ್ಥನೆ ತಮಿಳು, ಕನ್ನಡ, ಇಂಗ್ಲಿಷ್ ಭಾಷೆಗಳಲ್ಲಿ ನಡೆಯಲಿದೆ. ಬಳಿಕ ಸಾರ್ವಜನಿಕರಿಗೆ ಚರ್ಚ್ ಪ್ರವೇಶ ನೀಡಲಾಗುತ್ತದೆ. ಮತ್ತೆ ಸಂಜೆ ೬ ಗಂಟೆಗೆ ಪೂಜೆ ನಡೆಯಲಿದೆ ಎಂದು ಚರ್ಚ್‌ನ ಫಾ. ಪೀಟರ್ ತಿಳಿಸಿದ್ದಾರೆ. ಪ್ರಾಟೆಸ್ಟೆಂಟ್ ಚರ್ಚ್‌ಗಳಲ್ಲಿ ಡಿ. ೨೫ರಂದು ಬೆಳಿಗ್ಗೆ ೮ರಿಂದ ೧೦. ೩೦ರವರೆಗೆ ಪೂಜಾ ಕಾರ್ಯಕ್ರಮ ನಡೆಯಲಿದೆ.

 

ಆಂದೋಲನ ಡೆಸ್ಕ್

Recent Posts

ಹೆಚ್ಚುತ್ತಿರುವ ಯುವತಿಯರ ಆತ್ಮಹತ್ಯೆ ; ಯುವತಿಯರಿಗೆ ಕಂಗನಾ ರಣಾವತ್ ಕಿವಿಮಾತು

ದೆಹಲಿ : ಮದುವೆಯಾದ ಯುವತಿಯರು ಸಾವನ್ನಪ್ಪುತ್ತಿರುವ ಪ್ರಕರಣಗಳು ಹೆಚ್ಚುತ್ತಿರುವ ಬೆನ್ನಲ್ಲೇ ಬಾಲಿವುಡ್ ನಟಿ ಹಾಗೂ ಸಂಸದೆ ಕಂಗನಾ ರಣಾವತ್ ಯುವತಿಯರಿಗೆ…

4 hours ago

ಆ.31ರೊಳಗೆ ಜಿಬಿಎ ಚುನಾವಣೆ ನಡೆಸಿ ; ರಾಜ್ಯ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಅಂತಿಮ ಗಡುವು

ಹೊಸದಿಲ್ಲಿ : ಆಗಸ್ಟ್ ೩೧ರೊಳಗೆ ಗ್ರೇಟರ್ ಬೆಂಗಳೂರು ಪ್ರಾಧಿಕಾರದ (ಜಿಬಿಎ) ವ್ಯಾಪ್ತಿಯ ಐದು ನಗರಪಾಲಿಕೆಗಳಿಗೆ ಚುನಾವಣೆ ನಡೆಸುವಂತೆ ಸರ್ವೋಚ್ಚ ನ್ಯಾಯಾಲಯ…

7 hours ago

ಸಫಾರಿಗಳಲ್ಲಿ ಇನ್ಮುಂದೆ ತೆರೆದ ವಾಹನಕ್ಕೆ ಅವಕಾಶವಿಲ್ಲ : ಈಶ್ವರ ಖಂಡ್ರೆ

ಸಫಾರಿ ಕ್ಯಾಂಪರ್ ಗಳಿಗೆ ಕಬ್ಬಿಣದ ಸರಳು, ಒಡೆಯದ ಗಾಜು ಅಳವಡಿಸಲು ಖಂಡ್ರೆ ಸೂಚನೆ ಬೆಂಗಳೂರು :  ರಾಜ್ಯದ ಐದು ಹುಲಿ…

8 hours ago

ಮ.ಬೆಟ್ಟ | ಮರದ ಕೊಂಬೆ ಬಿದ್ದು ಮೂವರಿಗೆ ಗಾಯ

ಹನೂರು : ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟಕ್ಕೆ ಬಂದಿದ್ದ ಭಕ್ತರ ಮೇಲೆ ಮರದ ಕೊಂಬೆ ಬಿದ್ದು ಮೂವರು ಗಾಯಗೊಂಡಿರುವ…

10 hours ago

ಔಷಧಿ ಮಾರಾಟಗಾರರ ಸಂಘ ಕರೆ ನೀಡಿದ್ದ ಬಂದ್‍ಗೆ ಮಿಶ್ರ ಪ್ರತಿಕ್ರಿಯೆ

ಬೆಂಗಳೂರು: ಆನ್‍ಲೈನ್‍ನಲ್ಲಿ ಔಷಧಿಗಳ ಮಾರಾಟ ವಿರೋಧಿಸಿ ಅಖಿಲ ಭಾರತ ಔಷಧಿ ಮಾರಾಟಗಾರರ ಸಂಘ ಕರೆ ನೀಡಿದ್ದ ಕರ್ನಾಟಕ ಬಂದ್‍ಗೆ ಮಿಶ್ರ…

13 hours ago

ಯಳಂದೂರು: ಬೋನಿಗೆ ಬಿದ್ದ ಚಿರತೆ

ಯಳಂದೂರು: ಕಳೆದ ಕೆಲ ದಿನಗಳಿಂದ ಉಪಟಳ ನೀಡುತ್ತಿದ್ದ ಚಿರತೆಯೊಂದು ಅರಣ್ಯ ಇಲಾಖೆ ಇರಿಸಿದ್ದ ಬೋನಿಗೆ ಸೆರೆಯಾಗಿದೆ. ತಾಲ್ಲೂಕಿನ ಗುಂಬಳ್ಳಿ ಗ್ರಾಮದಲ್ಲಿ…

13 hours ago