Andolana originals

ನವೆಂಬರ್ ಬಂದರೂ ನಡೆಯದ ಚುಂಚನಕಟ್ಟೆ ಜಲಪಾತೋತ್ಸವ

೫ ವರ್ಷಗಳಿಂದ ನಡೆದುಕೊಂಡು ಬರುತ್ತಿದ್ದ ಉತ್ಸವ; ಕಾತರದಿಂದ ಕಾಯುತ್ತಿರುವ ಜನತೆ

ಹೊಸೂರು: ಮೈಸೂರು ಜಿಲ್ಲೆಯ ಏಕೈಕ ಜಲಪಾತ ಉತ್ಸವಕ್ಕೆ ಗ್ರಹಣ ಹಿಡಿದಿದ್ದು ಹಣದ ಕೊರತೆಯೋ, ಅಧಿಕಾರಿಗಳ ನಿರ್ಲಕ್ಷ್ಯವೋ, ಜನಪ್ರತಿನಿಧಿಗಳ ನಿರಾಸಕ್ತಿಯೋ ತಿಳಿಯದಾಗಿದೆ.

ಸಾಲಿಗ್ರಾಮ ತಾಲ್ಲೂಕಿನ ಚುಂಚನಕಟ್ಟೆಯ ಕಾವೇರಿ ನದಿಯ ಧನುಷ್ಕೋಟಿ ಜಲಪಾತೋತ್ಸವ ಐದು ವರ್ಷಗಳಿಂದ ಜರುಗುತ್ತಾ ಬರುತ್ತಿದ್ದು, ಕಳೆದ ವರ್ಷವೂ ಸೆಪ್ಟೆಂಬರ್ ತಿಂಗಳಲ್ಲಿ ಅದ್ಧೂರಿ ಯಾಗಿ ನಡೆದಿತ್ತು.

ಆದರೆ ಈ ಬಾರಿ ನವೆಂಬರ್ ತಿಂಗಳು ಬಂದರೂ ಸರ್ಕಾರ ಹಣ ಬಿಡುಗಡೆ ಮಾಡದ ಕಾರಣ ಜಲಪಾತೋತ್ಸವಕ್ಕೆ ಹಣಕಾಸಿನ ನೆರವಿಲ್ಲದೆ ಸ್ಥಗಿತಗೊಂಡಿದೆ ಎಂಬ ಮಾತುಗಳು ಕೇಳಿಬರುತ್ತಿವೆ.

ಈ ಬಾರಿ ಜೂನ್ ಆರಂಭದಲ್ಲಿ ಕಾವೇರಿ ಮೈದುಂಬಿ ಹರಿದಿದ್ದು ಆಗಸ್ಟ್, ಸೆಪ್ಟೆಂಬರ್‌ನಲ್ಲಿ ನಡೆಯಬೇಕಿದ್ದ ಜಲಪಾತ ಉತ್ಸವಕ್ಕೆ ಈ ಭಾಗದ ಜನ ಕಾತರದಿಂದ ಕಾಯುತ್ತಿದ್ದರು. ಕೆಆರ್‌ಎಸ್ ತುಂಬಿದ ನಂತರ ಈಗಾಗಲೇ ಗಗನಚುಕ್ಕಿ ಭರಚುಕ್ಕಿ ಜಲಪಾತೋತ್ಸವ ಅದ್ಧೂರಿಯಾಗಿ ನಡೆದಿದ್ದು ಅರ್ಧಕ್ಕೂ ಹೆಚ್ಚಿನ ಸಚಿವ ಸಂಪುಟವೇ ಹಾಜರಾಗಿತ್ತು. ಆದರೆ, ಮುಖ್ಯಮಂತ್ರಿಗಳ ತವರು ಜಿಲ್ಲೆಯ ಜಲಪಾತೋತ್ಸವ ನಡೆಯದಿರುವುದು ಬೇಸರ ಮೂಡಿಸಿದೆ. ೫ ವರ್ಷಗಳ ಹಿಂದೆ ಚುಂಚನಕಟ್ಟೆ ಯನ್ನು ಪ್ರವಾಸೋದ್ಯಮ ಇಲಾಖೆ ವತಿಯಿಂದ ಅಂದಿನ ಸಚಿವ ಸಾ.ರಾ.ಮಹೇಶ್ ರವರ ಶ್ರಮದಿಂದ ಸುಮಾರು ೮ ಕೋಟಿ ರೂ. ವೆಚ್ಚದಲ್ಲಿ ಅಭಿವೃದ್ಧಿಪಡಿಸಿದ್ದು, ಜಲಪಾತೋತ್ಸವವನ್ನು ನಡೆಸಿ ರಾಜ್ಯದ ಮೂಲೆ ಮೂಲೆಯಿಂದ ಪ್ರವಾಸಿಗರನ್ನು ಸೆಳೆಯುವಲ್ಲಿ ಯಶಸ್ವಿ ಯಾಗಿದ್ದರು. ಆದರೆ ಇಂದು ಚುಂಚನಕಟ್ಟೆಯ ಧನುಷ್ಕೋಟಿ ಜಲಪಾತೋತ್ಸವ ನಡೆಯುವುದಿಲ್ಲ ವೇನೋ ಎಂಬ ಜಿಜ್ಞಾಸೆ ಉಂಟಾಗಿದೆ.

ಇದನ್ನು ಓದಿ: ಪರೀಕ್ಷೆ ಮುಗಿದು ನಾಲ್ಕು ತಿಂಗಳು; ಫಲಿತಾಂಶ ಗೋಜಲು

ಪ್ರತಿ ಬಾರಿ ಜಲಪಾತೋತ್ಸವ ನಡೆಸುವ ಸಂದರ್ಭದಲ್ಲಿ ನದಿಯ ನೀರಿನ ಪ್ರಮಾಣ ಕಡಿಮೆ ಇರುತ್ತದೆ. ಆಗಸ್ಟ್ ಅಂತ್ಯದೊಳಗೆ ಜಲ ಪಾತೋತ್ಸವವನ್ನು ಮಾಡಬೇಕೆಂಬ ಈ ಭಾಗದ ಆಸಕ್ತರ ಕೂಗಿಗೆ ಯಾರೂ ಸ್ಪಂದಿಸದಿರುವುದು ವಿಪರ್ಯಾಸ.

ಸೆಪ್ಟೆಂಬರ್ ನಂತರ ಹಾರಂಗಿ ಅಣೆಕಟ್ಟೆಯಿಂದ ನೀರು ಬಿಡಿಸಿ ಜಲಪಾತೋತ್ಸವ ನಡೆಸುವುದು ದುರ್ದೈವದ ಸಂಗತಿಯಾಗಿದೆ. ಜಲಪಾತೋತ್ಸವ ಕೇವಲ ಎರಡು ದಿನಗಳ ಕಾರ್ಯಕ್ರಮವೇ ಆಗಿದ್ದರೂ ನಿರಂತರವಾಗಿ ರಾಜ್ಯಾದ್ಯಂತ ಜನರನ್ನು ಸೆಳೆಯುವಲ್ಲಿ ಪ್ರಮುಖ ಕಾರ್ಯಕ್ರಮವಾಗಿದೆ.

ಜೊತೆಗೆ ಸ್ಥಳೀಯ ಶ್ರೀ ಕೋದಂಡರಾಮ ದೇವಾಲಯದ ಆದಾಯವೂ ಹೆಚ್ಚುತ್ತಿದ್ದು ಜನಪ್ರತಿನಿಧಿಗಳು, ಅಧಿಕಾರಿ ವರ್ಗದವರು, ಪ್ರವಾಸೋದ್ಯಮ ಇಲಾಖೆ ಇತ್ತ ಗಮನಹರಿಸಿ ಕಾರ್ಯಕ್ರಮ ಆಯೋಜಿಸಲು ಮುಂದಾಗಬೇಕಿದೆ.

” ಕಾರ್ಯಕ್ರಮ ಆಯೋಜನೆಗಾಗಿಈಗಾಗಲೇಸಿದ್ಧತೆಗಳು ನಡೆಯುತ್ತಿದ್ದು, ಈ ತಿಂಗಳ ಅಂತ್ಯಕ್ಕೆ ಖಚಿತವಾಗಿ ಚುಂಚನಕಟ್ಟೆ ಧನುಷ್ಕೋಟಿ ಜಲಪಾತೋತ್ಸವ ಜರುಗಲಿದೆ.”

-ಡಿ.ರವಿಶಂಕರ್, ಶಾಸಕರು

” ಸರ್ಕಾರ ಪ್ರತಿ ವರ್ಷ ನಡೆಸುವ ಕಾರ್ಯಕ್ರಮಗಳಿಗೆ ಮೊದಲೇದಿನಾಂಕಗಳನ್ನು ನಿಗದಿಪಡಿಸಿ ಸಿದ್ಧತೆ ಮಾಡಿಕೊಳ್ಳಬೇಕು. ಈ ಬಾರಿ ಪ್ರವಾಸೋದ್ಯಮ ಇಲಾಖೆ ಮತ್ತು ಜಿಲ್ಲಾಡಳಿತ ನಿರ್ಲಕ್ಷ್ಯ ಮುಂದುವರಿಸಿದ್ದು ನವೆಂಬರ್ ತಿಂಗಳಲ್ಲಿ ಕಾರ್ಯಕ್ರಮ ನಡೆಯದೇ ಇದ್ದರೆ ಹೋರಾಟ ಮಾಡಲಾಗುವುದು.”

-ಕರ್ತಾಳ್ ಮಧು, ಮುಖಂಡರು

– ಆನಂದ್ ಹೊಸೂರು

ಆಂದೋಲನ ಡೆಸ್ಕ್

Recent Posts

ಕಾಡಾನೆಗಳ ಸೆರೆಗೆ ಕಾರ್ಯಾಚರಣೆ: ಮುಂಜಾಗ್ರತಾ ಕ್ರಮವಾಗಿ ಸೆಕ್ಷನ್ 144 ಜಾರಿ

ಕೊಡಗು: ಸಾರ್ವಜನಿಕರಿಗೆ ಉಪಟಳ ನೀಡುತ್ತಿರುವ ಮೂರು ಗಂಡಾನೆಗಳನ್ನು ಸೆರೆ ಹಿಡಿಯಲು ಅರಣ್ಯ ಇಲಾಖೆ ಆದೇಶ ನೀಡಿದೆ. ಇಂದು ಬೆಳಿಗ್ಗೆ 10…

1 hour ago

ಹನೂರು ಎನ್‌ಕೌಂಟರ್: ಆತ್ಮರಕ್ಷಣೆಗಾಗಿ ಗುಂಡು ಹಾರಿಸಿದೆವು: ACF ಮರಿಸ್ವಾಮಿ

ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ನಡೆದ ಹನೂರು ಎನ್‌ಕೌಂಟರ್ ಬಗ್ಗೆ ಮೊದಲ ಬಾರಿಗೆ ಕಾವೇರಿ ವನ್ಯಧಾಮದ ACF ಮರಿಸ್ವಾಮಿ ಮಾಧ್ಯಮಗಳಿಗೆ ಪ್ರತಿಕ್ರಿಯೆ…

2 hours ago

ಓದುಗರ ಪತ್ರ: ಇ-ಕೊಲಿ ಬ್ಯಾಕ್ಟೀರಿಯಾ ಪತ್ತೆ: ಮನಸ್ಸುಗಳಿಗಿಲ್ಲ ‘ಕೂಲ್‌ಕೂಲ್’

ದೇಶದ ಬಹುತೇಕ ರೈಲು ನಿಲ್ದಾಣದ ಫ್ಲಾಟ್‌ ಫಾರ್ಮ್‌ಗಳಲ್ಲಿ  ಸಾರ್ವಜನಿಕರು ಕುಡಿಯುವ ವಾಟರ್ ಕೂಲರ್‌ಗಳಲ್ಲಿ, ಇ-ಕೊಲಿ ಬ್ಯಾಕ್ಟೀರಿಯಾ ಪತ್ತೆಯಾಗಿದೆ ಎಂದು ಕಂಟ್ರೋಲರ್…

5 hours ago

ಓದುಗರ ಪತ್ರ: ಕೆಎಸ್‌ಪಿಸಿಬಿಯನ್ನು ರಾಜಕೀಯ ಮುಕ್ತಗೊಳಿಸಿ

ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಉನ್ನತ ಹುದ್ದೆಗಳಿಗೆ ತಜ್ಞರನ್ನು ಬಿಟ್ಟು ರಾಜಕೀಯ ವ್ಯಕ್ತಿಗಳನ್ನು ನೇಮಿಸುತ್ತಿರುವುದು ರಾಜ್ಯದ ಪರಿಸರ ಆಡಳಿತಕ್ಕೆ…

5 hours ago

ಓದುಗರ ಪತ್ರ: ಪರಸ್ಪರ ಗೌರವಕ್ಕೆ ಮತ್ತೊಮ್ಮೆ ಕನ್ನಡಿ

ದೇಶದ ೮೦ನೇ ಸ್ವಾತಂತ್ರ್ಯ ದಿನಾಚರಣೆಯ ಸಂಭ್ರಮದ ಕ್ಷಣಗಳಲ್ಲಿ, ವಿಶ್ವದ ಅತಿ ಎತ್ತರದ ಕಟ್ಟಡವಾದ ದುಬೈನ ‘ಬುರ್ಜ್ ಖಲೀಫಾ’ದಲ್ಲಿ ಭಾರತದ ತ್ರಿವರ್ಣ…

5 hours ago

ನಡೆಯದ ಸಂಸತ್ ಕಲಾಪ; ಕುಗ್ಗಿದ ಮೋದಿ-ಶಾ ವರ್ಚಸ್ಸು

ದೆಹಲಿ ಕಣ್ಣೋಟ ಶಿವಾಜಿ ಗಣೇಶನ್‌ ಅವರ ವಾರದ ಅಂಕಣ  ಸಂಸತ್ ಎಂದರೆ ಪ್ರಜಪ್ರಭುತ್ವದ ಮೌಲ್ಯಗಳನ್ನು ರಕ್ಷಿಸಿಕೊಂಡು ದೇಶದ ಸಮಸ್ಯೆಗಳು ಮತ್ತು…

5 hours ago