ಕೆ.ಬಿ ರಮೇಶ್ ನಾಯಕ
ಮೈಸೂರು: ಸತತ ಎರಡು ಬಾರಿ ಮೈಸೂರನ್ನು ದೇಶದ ಸ್ವಚ್ಛ ನಗರವಾಗಿ ರೂಪಿಸುವಲ್ಲಿ ಪೌರಕಾರ್ಮಿಕರು ವಹಿಸಿರುವ ಪಾತ್ರ ಅಪಾರವಾಗಿದ್ದು, ನಗರವನ್ನು ಸ್ವಚ್ಛವಾಗಿಡಲು ಹಗಲಿರುಳು ಶ್ರಮಿಸುತ್ತಿರುವ ಬಹಳಷ್ಟು ಪೌರ ಕಾರ್ಮಿಕರಿಗೆ ಇಂದಿಗೂ ತಲೆ ಮೇಲೆ ಸ್ವಂತದೊಂದು ಸೂರು ಇಲ್ಲ. ಈ ಸಮಸ್ಯೆಯನ್ನು ನಿವಾರಿಸಲು ನಗರಪಾಲಿಕೆಯು ಖಾಯಂ ಪೌರಕಾರ್ಮಿಕರಿಗೆ ಮನೆ ನಿರ್ಮಿಸಿಕೊಡುವ ಕಾಮಗಾರಿಯನ್ನು ಕೈಗೆತ್ತಿಕೊಂಡಿದ್ದು, ಮೂರು ತಿಂಗಳ ಒಳಗೆ ಮನೆಗಳ ನಿಮಾರ್ಣ ಸಂಪೂರ್ಣಗೊಳ್ಳುವ ನಿರೀಕ್ಷೆ ಇದೆ.
ಬೆಂಗಳೂರು-ಮೈಸೂರು ರಸ್ತೆಯ ಮಣಿಪಾಲ್ ಆಸ್ಪತ್ರೆ ವೃತ್ತದಿಂದ ನಾರಾಯಣ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಗೆ ತೆರಳುವ ವರ್ತುಲ ರಸ್ತೆ (ಕೆಸರೆ) ಬಳಿಯಲ್ಲಿ ನಗರಪಾಲಿಕೆಗೆ ಸೇರಿದ ಜಾಗದಲ್ಲಿ ಜಿ ಪ್ಲಸ್-೩ ಮನೆಗಳನ್ನು ನಿರ್ಮಿಸಲಾಗುತ್ತಿದ್ದು, ಕಾಮಗಾರಿಯು ಬಹುತೇಕ ಮುಕ್ತಾಯ ಹಂತದಲ್ಲಿದೆ. ವಿದ್ಯುತ್ ಸಂಪರ್ಕ ಹಾಗೂ ಸುಣ್ಣ ಬಣ್ಣ ಬಳಿಯುವ ಹಾಗೂ ಸಣ್ಣ ಪುಟ್ಟ ಕಾಮಗಾರಿಗಳು ಮಾತ್ರ ಬಾಕಿ ಉಳಿದಿವೆ.
ರಾಜ್ಯ ಸರ್ಕಾರದ ಅನುದಾನ, ಪ್ರಧಾನ ಮಂತ್ರಿ ಆವಾಸ್ ಯೋಜನೆಯ ಶೇ. ೨೪. ೧ ನಿಧಿ ಹಾಗೂ ನಗರ ಪಾಲಿಕೆ ಅನುದಾನವನ್ನು ಬಳಕೆ ಮಾಡಿಕೊಂಡು ಮನೆ ನಿರ್ಮಾಣ ಮಾಡಲಾಗುತ್ತಿದೆ. ಪುಷ್ಪಲತಾ ಜಗನ್ನಾಥ್ ಅವರು ಮಹಾಪೌರರಾಗಿದ್ದ ಸಂದರ್ಭದಲ್ಲಿ ಪೌರಕಾರ್ಮಿಕರಿಗೆ ಮನೆ ನಿರ್ಮಾಣ ಮಾಡುವ ಯೋಜನೆ ರೂಪಿಸಲಾಯಿತು. ಆದರೆ, ಜಾಗ ಗುರುತಿಸಲು ಆದ ವಿಳಂಬ ಹಾಗೂ ಕೋವಿಡ್ ಕಾರಣಗಳಿಂದ ಮನೆಗಳ ನಿರ್ಮಾಣ ತಡವಾಯಿತು.
ಪ್ರತಿಮನೆಗೆ ೧೪. ೨೭ ಲಕ್ಷ ರೂ. : ಒಟ್ಟು ೨೨. ೫೪ ಕೋಟಿ ರೂ. ವೆಚ್ಚದಲ್ಲಿ ೧೫೮ ಸುವ್ಯವಸ್ಥಿತ ಜಿ ಪ್ಲಸ್ ೩ ಮನೆಗಳನ್ನು ನಿರ್ಮಾಣ ಮಾಡಲಾಗಿದೆ. ಪ್ರತಿ ಮನೆಯನ್ನು ೧೪. ೨೭ಲಕ್ಷ ರೂ. ಅಂದಾಜು ವೆಚ್ಚದಲ್ಲಿ ನಿರ್ಮಿಸಲಾಗಿದೆ. ಪ್ರತಿ ಮನೆಯು ೧ ಲಿವಿಂಗ್ ಹಾಲ್, ೨ ಬೆಡ್ರೂಂ, ತಲಾ ಒಂದು ಅಡುಗೆ ಮನೆ, ಬಾತ್ ರೂಂ, ಶೌಚಗೃಹವನ್ನು ಒಳಗೊಂಡಿದೆ.
ಜಿ ಪ್ಲಸ್ ೩ ಮನೆಗಳಲ್ಲಿ ವಾಸಿಸುವವರು ಮಹಡಿಗಳಿಗೆ ಹೋಗಿ, ಬರುವುದಕ್ಕಾಗಿ ಲಿಫ್ಟ್ ವ್ಯವಸ್ಥೆಯನ್ನೂ ಒದಗಿಸಲಾಗುವುದು. ವಸ್ತುಗಳನ್ನು ಸಾಗಿಸಲು ಕೂಡ ಲಿಫ್ಟ್ ನೆರವಾಗಲಿದೆ. ಪ್ರತಿ ಮನೆಗೆ ಪಾಲಿಕೆ ೧. ೨೭ ಲಕ್ಷ ರೂ. ವಂತಿಕೆ ನೀಡಲಿದೆ. ರಾಜ್ಯ ಸರ್ಕಾರ ೬ ಲಕ್ಷ ರೂ. , ಶೇ. ೨೪. ೧೦ ನಿಽಯಡಿ ೩ ಲಕ್ಷ ರೂ. , ಫಲಾನುಭವಿ ವಂತಿಕೆ ೨. ೫೦ ಲಕ್ಷ ರೂ. , ಪ್ರಧಾನಮಂತ್ರಿ ಆವಾಸ್ ಯೋಜನೆಯಡಿ ೧. ೫೦ ಲಕ್ಷ ರೂ. ನೀಡಲಾಗುವುದು. ಆದರೆ, ಇಷ್ಟೊಂದು ಮೊತ್ತ ನಮಗೆ ಪಾವತಿಸಲು ಸಾಧ್ಯವಿಲ್ಲ. ಉಚಿತವಾಗಿ ಮನೆಗಳನ್ನು ನೀಡಬೇಕು ಎಂಬುದು ಪೌರಕಾರ್ಮಿಕರ ಒತ್ತಾಯವಾಗಿದೆ.
ಎರಡು ಬಾರಿ ಜಾಗ ಬದಲು: ಪ್ರಾರಂಭದಲ್ಲಿ ಪೌರ ಕಾರ್ಮಿಕರಿಗೆ ಸೀವೇಜ್ ಫಾರ್ಮ್ಗೆ ಹೊಂದಿಕೊಂಡಿರುವ ಮೈಸೂರು-ಊಟಿ ರಸ್ತೆಯಲ್ಲಿರುವ ಎರಡು ಎಕರೆ ಜಾಗದಲ್ಲಿ ಜಿ ಪ್ಲಸ್ ೩ ಮನೆಗಳನ್ನು ನಿರ್ಮಾಣ ಮಾಡಲು ಉದ್ದೇಶಿಸಲಾಗಿತ್ತು. ಆದರೆ, ಮಾಲಿನ್ಯ ನಿಯಂತ್ರಣ ಮಂಡಳಿಯು ೨೦೧೪ರಲ್ಲಿ ಸೀವೇಜ್ ಫಾರ್ಮ್ ಸುತ್ತಲಿನ ೫೦೦ ಮೀಟರ್ ಪ್ರದೇಶವನ್ನು ಬಫರ್ ಜೋನ್ ಎಂದು ಗುರುತಿಸಿದ್ದು, ಪಾಲಿಕೆ ಗುರುತಿಸಿದ ಜಾಗವು ೫೦೦ ಮೀಟರ್ ಒಳಗೆ ಇದ್ದ ಹಿನ್ನೆಲೆಯಲ್ಲಿ ಪೌರ ಕಾರ್ಮಿಕರ ಆರೋಗ್ಯದ ದೃಷ್ಟಿಯಿಂದ ಕೈಬಿಡಲಾಯಿತು. ನಂತರ ಪಾಲಿಕೆಯ ಮನವಿ ಮೇರೆಗೆ ಮೈಸೂರು ನಗರಾಭಿವೃದ್ಧಿ ಪ್ರಾಽಕಾರವು ಮಳಲ ವಾಡಿಯಲ್ಲಿ ೧. ೨೦ ಎಕರೆ ಜಾಗವನ್ನು ಒದಗಿಸಿತ್ತು. ಆದರೆ, ವಿವಿಧ ಕಾರಣಗಳಿಂದ ಅಲ್ಲಿ ಮನೆಗಳನ್ನು ನಿರ್ಮಿಸಲು ಪಾಲಿಕೆಗೆ ಸಾಧ್ಯವಾಗಲಿಲ್ಲ. ಅಂತಿಮವಾಗಿ ಕೆಸರೆಯಲ್ಲಿರುವ ಪಾಲಿಕೆಗೆ ಸೇರಿದ ಜಾಗದಲ್ಲಿ ಮನೆಗಳನ್ನು ನಿರ್ಮಾಣ ಮಾಡಲಾಗಿದೆ.
ಈ ಜಾಗ ಮಣಿಪಾಲ್ ಆಸ್ಪತ್ರೆ ವೃತ್ತದ ಬಳಿಯಲ್ಲಿಯೇ ಇದ್ದು, ಸುಂದರವಾದ ಪರಿಸರವನ್ನು ಹೊಂದಿದ್ದು, ಮೈಸೂರಿಗೂ ಹತ್ತಿರವಾಗಿದೆ. ನಗರಪಾಲಿಕೆಯಲ್ಲಿ ೪೦೦ಕ್ಕೂ ಹೆಚ್ಚು ಪೌರ ಕಾರ್ಮಿಕರಿಗೆ ಸ್ವಂತ ಮನೆ ಇಲ್ಲ. ಈ ಯೋಜನೆ ಜಾರಿಗೆ ಬಂದರೆ ೧೫೮ ಜನರಿಗೆ ಸ್ವಂತ ಸೂರು ಲಭ್ಯವಾಗಲಿದೆ.
ಹನೂರು: ತಾಲೂಕಿನ ಲೊಕ್ಕನಹಳ್ಳಿ ಹೋಬಳಿ ವ್ಯಾಪ್ತಿಯ ಮಲೆ ಮಹದೇಶ್ವರ ಅರಣ್ಯ ಪ್ರದೇಶ ವ್ಯಾಪ್ತಿಯ ಬಳಗುಡ್ಡ ಬಿಟ್ ವ್ಯಾಪ್ತಿಯಲ್ಲಿ ಏಕಕಾಲಕ್ಕೆ ಎರಡು…
ನವದೆಹಲಿ: ನಾಗರಿಕ ವಿಮಾನಯಾನ ಸಚಿವಾಲಯವು ಇಂಡಿಗೋದ ಬಾಕಿ ಇರುವ ಎಲ್ಲಾ ಪ್ರಯಾಣಿಕರ ಮರುಪಾವತಿಗಳನ್ನು ವಿಳಂಬವಿಲ್ಲದೇ ಪಾವತಿಸಲು ಆದೇಶಿಸಿದೆ. ರದ್ದಾದ ಅಥವಾ…
ತುಮಕೂರು: ರಾಜ್ಯದಲ್ಲಿ ಸಿಎಂ ಸ್ಥಾನ ಬದಲಾವಣೆ ಚರ್ಚೆ ಬೆನ್ನಲ್ಲೇ ಮಾಜಿ ಸಚಿವ ಕೆ.ಎನ್.ರಾಜಣ್ಣ ಮಹತ್ವದ ಹೇಳಿಕೆ ಕೊಟ್ಟಿದ್ದಾರೆ. ಈ ಕುರಿತು…
ಹಾಸನ: ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ದೆಹಲಿ ಪೊಲೀಸರು ನೋಟಿಸ್ ಕೊಟ್ಟ ವಿಚಾರಕ್ಕೆ ಡಿಸಿಎಂ ಡಿ.ಕೆ.ಶಿವಕುಮಾರ್ ಪ್ರತಿಕ್ರಿಯೆ ನೀಡಿದ್ದಾರೆ. ಈ ಕುರಿತು…
ಹಾಸನ: ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಒಂದು ವರ್ಷದೊಳಗೆ ಎಲ್ಲ ಗ್ಯಾರಂಟಿ ಯೋಜನೆಗಳನ್ನು ಯಶಸ್ವಿಯಾಗಿ ಜಾರಿಗೊಳಿಸಿದ್ದು, ಕರ್ನಾಟಕದ ಇತಿಹಾಸದಲ್ಲಿಯೇ ಕಾಂಗ್ರೆಸ್…
ನಂಜನಗೂಡು: ಜಮೀನಿನಲ್ಲಿ ಭಾರೀ ಗಾತ್ರದ ಹೆಬ್ಬಾವು ಪತ್ತೆಯಾಗಿದ್ದು, ಅರಣ್ಯ ಇಲಾಖೆ ಸಿಬ್ಬಂದಿಗಳು ರಕ್ಷಿಸಿ ಸುರಕ್ಷಿತ ಪ್ರದೇಶಕ್ಕೆ ಬಿಟ್ಟಿದ್ದಾರೆ. ಜಿಲ್ಲೆಯ ನಂಜನಗೂಡು…