Andolana originals

ಗಾಳೀಪುರ ಬೀಡಿ ಕಾಲೋನಿಗೆ ಇನ್ನು ಮುಂದೆ ಶುದ್ಧ ಗಾಳಿ!

ಚುಡಾ ವತಿಯಿಂದ ಹೊಸದಾಗಿ ತಲೆಎತ್ತಲಿದೆ ಉದ್ಯಾನ…

ಚಾಮರಾಜನಗರ: ಚಾಮರಾಜನಗರ- ರಾಮಸಮುದ್ರ ನಗರಾಭಿವೃದ್ಧಿ ಪ್ರಾಧಿಕಾರ (ಚುಡಾ) ಇಲ್ಲಿನ ಗಾಳೀಪುರ ಬೀಡಿ ಕಾಲೋನಿಯಲ್ಲಿ ಉದ್ಯಾನ ನಿರ್ಮಾಣ ಮಾಡಲು ಮುಂದಾಗಿದೆ.

ನಗರಸಭೆಯ 4ನೇ ವಾರ್ಡಿಗೆ ಸೇರಿರುವ ಸರ್ಕಾರಿ ಜಾಗದಲ್ಲಿ ಅಂದಾಜು 2೦೦ ಮೀಟರ್ ಉದ್ದ, 2೦೦ ಮೀ. ಅಗಲ ವಿಸ್ತೀರ್ಣದಲ್ಲಿ ನಿರ್ಮಾಣ ಮಾಡಲು ಯೋಜನೆ ತಯಾರಿಸಿ ನಗರಾಭಿವೃದ್ಧಿ ಇಲಾಖೆಯ ಕೇಂದ್ರ ಕಚೇರಿಗೆ ತಾಂತ್ರಿಕ ಮೌಲ್ಯ ಮಾಪನಕ್ಕಾಗಿ ಕಳುಹಿಸಲಾಗಿದೆ. ಇದಾದ ಬಳಿಕ ಹಣಕಾಸಿಗೆ ಸಂಬಂಧಿಸಿದಂತೆ ಅನು ಮೋದನೆ ಪಡೆದು ಉದ್ಯಾನ ನಿರ್ಮಾಣ ಕಾರ್ಯ ಆದೇಶ ಪತ್ರವನ್ನು (ವರ್ಕ್ ಆರ್ಡರ್) ಗುತ್ತಿಗೆದಾರರಿಗೆ ನೀಡಲಾಗುವುದು. ಎಲ್ಲವೂ ಅಂದುಕೊಂಡಂತೆ ಆದರೆ, ಎಲ್ಲಾ ಪ್ರಕ್ರಿಯೆ ಇನ್ನು ೧೫ ದಿನಗಳಲ್ಲಿ ಮುಗಿಯಲಿದೆ ಎಂದು ಚುಡಾ ಕಚೇರಿ ಮೂಲಗಳು ತಿಳಿಸಿವೆ.

ಇದನ್ನು ಓದಿ: ನವೆಂಬರ್ ಬಂದರೂ ನಡೆಯದ ಚುಂಚನಕಟ್ಟೆ ಜಲಪಾತೋತ್ಸವ 

ಸುತ್ತು ಗೋಡೆ, ವಾಕಿಂಗ್ ಪಾಥ್, ಗಾರ್ಡನ್, ವಿಶ್ರಾಂತಿಗಾಗಿ ಕೂರಲು ಬೆಂಚುಗಳು, ಲೈಟಿಂಗ್ಸ್ ಇವೇ ಮೊದಲಾದವು ಉದ್ಯಾನ ಸ್ಥಳದಲ್ಲಿ ಇರುವಂತೆ ಯೋಜನೆ ರೂಪಿಸಲಾಗಿದೆ. ಉದ್ಯಾನ ವ್ಯಾಪ್ತಿಯಲ್ಲಿ ಬಹುತೇಕ ಬೀಡಿ ಕಾರ್ಮಿಕರೇ ಇದ್ದಾರೆ. ಅವರಿಗೆ ವಾಕಿಂಗ್, ವಿಶ್ರಾಂತಿ, ಯೋಗ ಮಾಡಲು ನೆರವಾಗುತ್ತಿರುವುದು ಒಳ್ಳೆಯ ಆಲೋ ಚನೆಯೇ ಸರಿ ಎಂಬುದು ಪ್ರಜ್ಞಾವಂತರ ಅನಿಸಿಕೆಯಾಗಿದೆ. ಮುಂಚೆ, ಒಂದು ಎಕರೆ ಒಳಗಡೆ ಯಾರಾದರೂ ಹೊಸ ಲೇಔಟ್ ನಿರ್ಮಾಣ ಮಾಡಿದರೆ ಉದ್ಯಾನಕ್ಕೆ ಜಾಗ ಬಿಡುವ ಬದಲಾಗಿ ವಿನಾಯಿತಿ ಶುಲ್ಕ ಪಾವತಿಸಲು ಅವಕಾಶ ಇತ್ತು. ಈ ಯೋಜನೆಯಡಿ ಸಂಗ್ರಹ ಆಗಿರುವ ವಿನಾಯಿತಿ ಶುಲ್ಕ ವನ್ನು ಅಭಿವೃದ್ಧಿ ಕಾರ್ಯಗಳಿಗೆ ಮಾತ್ರ ಬಳಸಬೇಕೆಂಬ ನಿಯಮವಿದೆ. ಹಾಗಾಗಿ ಈ ಹಣದಿಂದ ಉದ್ಯಾನ ನಿರ್ಮಾಣ ಮಾಡಲಾಗುತ್ತದೆ ಎಂದು ಚುಡಾ ಆಯುಕ್ತರು ಮಾಹಿತಿ ನೀಡಿದ್ದಾರೆ.

” ಗಾಳೀಪುರದಲ್ಲಿ ನಗರಾಭಿವೃದ್ಧಿ ಪ್ರಾಧಿಕಾರದ ವತಿಯಿಂದ 44ಲಕ್ಷ ರೂ.ವೆಚ್ಚದಲ್ಲಿ ಉದ್ಯಾನವನ್ನು ನಿರ್ಮಾಣ ಮಾಡಲಾಗುವುದು.:

ಎಚ್.ವಿ.ಸೀಮಾ, ಚುಡಾ ಆಯುಕ್ತರು

” ಬೀಡಿ ಕಾರ್ಮಿಕರೇ ಹೆಚ್ಚಿನ ಸಂಖ್ಯೆಯಲ್ಲಿರುವ ಗಾಳೀ ಪುರದಲ್ಲಿ ಉದ್ಯಾನ ನಿರ್ಮಾಣಕ್ಕೆ ಇನ್ನು 15ದಿನಗಳಲ್ಲಿ ಚಾಲನೆ ದೊರೆಯಲಿದೆ. ಜೊತೆಗೆ, ಚುಡಾ ಕಚೇರಿ ಸುತ್ತಲೂ 16 ಲಕ್ಷ ರೂ. ವೆಚ್ಚದಲ್ಲಿ ಪ್ರಾಧಿಕಾರದ ವತಿಯಿಂದ ಕಾಂಪೌಂಡ್ ನಿರ್ಮಾಣವನ್ನೂ ಮಾಡಲಾಗುವುದು.

ಮಹಮ್ಮದ್ ಅಸ್ಗರ್ (ಮುನ್ನಾ), ಚುಡಾ ಅಧ್ಯಕ್ಷರು

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಕೆಪಿಎಸ್ ಶಾಲೆ ಯೋಜನೆ ಸರ್ಕಾರದ ಜಾಣ ನಡೆ!

ಶಾಲಾ ಶಿಕ್ಷಣ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯಲ್ಲಿ ಭಾಗವಹಿಸಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ, ಹೊಸದಾಗಿ ೮೦೦ ಕರ್ನಾಟಕ ಪಬ್ಲಿಕ್ ಶಾಲೆಗಳನ್ನು ತೆರೆಯಲು…

2 hours ago

ಓದುಗರ ಪತ್ರ: ಸರ್ಕಾರಿ ಶಾಲೆ ದತ್ತು ಪಡೆಯುವ ಪ್ರಕ್ರಿಯೆ ಆರಂಭವಾಗಲಿ

ರಾಜ್ಯಾದ್ಯಂತ ಸರ್ಕಾರಿ ಶಾಲೆಗಳು ಮೇ ೨೯ರಂದು ಪ್ರಾರಂಭವಾಗುತ್ತಿವೆ. ಸರ್ಕಾರಿ ಶಾಲೆಗಳಲ್ಲಿ ರಾಜ್ಯ ಸರ್ಕಾರ ಪ್ರತೀ ವರ್ಷ ಮಕ್ಕಳಿಗೆ ಉಚಿತ ಪಠ್ಯಪುಸ್ತಕ,…

2 hours ago

ಓದುಗರ ಪತ್ರ: ತಮಿಳುನಾಡು ಮುಖ್ಯಮಂತ್ರಿ ನಡೆ ಶ್ಲಾಘನೀಯ

ಕೆಲ ದಿನಗಳ ಹಿಂದಷ್ಟೇ ತಮಿಳುನಾಡಿನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ಚಿತ್ರನಟ ಜೋಸೆಫ್ ವಿಜಯ್ ಅವರು, ಸಾರ್ವಜನಿಕರಿಗೆ ತೊಂದರೆಯಾಗದಂತೆ ಒಂದೇ ರಸ್ತೆಯಲ್ಲಿ…

2 hours ago

ಪ್ರಾಕೃತಿಕ ವಿಕೋಪ ಎದುರಿಸಲು ಪೊಲೀಸ್ ಇಲಾಖೆ ಸಜ್ಜು

ನವೀನ್ ಡಿಸೋಜ ವಿಪತ್ತು ರಕ್ಷಣಾ ಕಾರ್ಯಾಚರಣೆಯ ಅಣಕು ಪ್ರದರ್ಶನ; ಸಂತ್ರಸ್ತರನ್ನು ರಕ್ಷಿಸುವ ವಿಧಾನ, ದೋಣಿ ಮೋಟಾರ್‌ಗಳನ್ನು ಚಾಲನೆ ಮಾಡುವ ಬಗ್ಗೆ…

5 hours ago

ಗಾಂಧಿ ಅಭಿಯಾನ ಅರಿವಿನ ಯಾನ

ಬಾಪೂಜಿ ಮತ್ತು ವಾಜಪೇಯಿ ದಾರಿ ಬೇರೆಯಾಗಿದ್ದರೂ ನೈತಿಕತೆಗೆ ಮಾದರಿಯಾಗಿದ್ದರು ರಾಜೀವ ಹೆಗಡೆ ಗಾಂಧೀಜಿ ಕ್ವಿಟ್ ಇಂಡಿಯಾ ಚಳವಳಿ ಆರಂಭಿ ಸಿದಾಗ…

5 hours ago

ಗಾಂಧಿ ಅಭಿಯಾನ ಅರಿವಿನ ಯಾನ

ಸುಧಾರಣೆ ನೆಪದಲ್ಲಿ ಎಚ್ಚರ ತಪ್ಪಿದೆ.  ಪ್ರೌಢಶಾಲೆಯಲ್ಲಿ ನನಗೆ ಆಪ್ತ ಸ್ನೇಹಿತರು ಬಹಳ ಕಡಿಮೆಯಿದ್ದರು. ಅಲ್ಲಿ ಬೇರೆ ಬೇರೆ ಕಾಲದಲ್ಲಿ ನನಗೆ…

5 hours ago