Andolana originals

ನಾಲೆಯನ್ನು ಪ್ಲಾಸ್ಟಿಕ್ ಮುಕ್ತಗೊಳಿಸಿದ ಸ್ವಚ್ಛ ಮನಸ್ಸುಗಳು

ಮಂಡ್ಯ:ನಗರದ ವಿವಿಧ ಬಡಾವಣೆಗಳನ್ನು ಹಾದು ಬೇಲೂರು ಗ್ರಾ.ಪಂ.ವ್ಯಾಪ್ತಿಯಲ್ಲಿ ಹರಿಯುವ ವಿಶ್ವೇಶ್ವರಯ್ಯ ನಾಲೆಯ ೮ನೇ ವಿತರಣಾ ನಾಲೆಯ ದುಸ್ಥಿತಿ ಬಗ್ಗೆ ‘ಆಂದೋಲನ’ ಪತ್ರಿಕೆಯಲ್ಲಿ ಪ್ರಕಟಗೊಂಡ ಸಚಿತ್ರ ವರದಿಯಿಂದ ಎಚ್ಚೆತ್ತ ಗ್ರಾಮ ಪಂಚಾಯಿತಿ ಆಡಳಿತ ಹಾಗೂ ವರದಿಗೆ ಓಗೊಟ್ಟ ಬಡಾವಣೆಗಳ ಮುಖಂಡರು ತ್ಯಾಜ್ಯವನ್ನು ತೆರವುಗೊಳಿಸಿದ್ದಾರೆ.

ಹನಿ ಹನಿ ನೀರೂ ಅಮೂಲ್ಯ ಎನ್ನುವ ಸರ್ಕಾರದ ಜಾಗೃತಿ ಫಲಕಗಳನ್ನು ಅಪಹಾಸ್ಯ ಮಾಡುವಂತೆ…..ಸ್ವಚ್ಛ ಪರಿಸರವನ್ನು ಕಾಪಾಡಿ ಎಂಬ ಪ್ರಚಾರವನ್ನು ಅಣಕಿಸುವಂತೆ ಹಲವರು ತಮ್ಮ ಮನೆಯ ಪ್ಲಾಸ್ಟಿಕ್ ತ್ಯಾಜ್ಯವನ್ನು ರಸ್ತೆಯೋ, ಖಾಲಿ ನಿವೇಶನವೋ, ಚರಂಡಿಯೋ ಎಲ್ಲೆಂದರಲ್ಲಿ ಬಿಸಾಡುತ್ತಿರುವ ಬಗ್ಗೆ ‘ಆಂದೋಲನ’ ಪತ್ರಿಕೆ ವರದಿ ಮಾಡಿತ್ತು.

ಮಂಡ್ಯದ ಮರೀಗೌಡ ಬಡಾವಣೆ, ದ್ವಾರಕಾನಗರ,ಅನ್ನಪೂರ್ಣೇಶ್ವರಿ ನಗರ, ಶ್ರೀರಾಮನಗರದ ಮೂಲಕ ಹಾದು ಬೇಲೂರು ಗ್ರಾಪಂ ವ್ಯಾಪ್ತಿಯಲ್ಲಿ ಹರಿಯುವ ವಿಶ್ವೇಶ್ವರಯ್ಯ ನಾಲೆಯ ೮ನೇ ವಿತರಣಾ ನಾಲೆ ಪ್ಲಾಸ್ಟಿಕ್ ತ್ಯಾಜ್ಯಗಳಿಂದ ಉಸಿರು ಕಟ್ಟಿ ಸಾಯುತ್ತಿರುವಂತೆ ಭಾಸವಾಗುತ್ತಿದೆ.

ಸುಮಾರು ೧೦ ಕ್ಯೂಸೆಕ್ಸ್ ಸಾಮರ್ಥ್ಯದ ಈ ನಾಲೆ ಸುಮಾರು ೬೦ ಎಕರೆ ಪ್ರದೇಶಕ್ಕೆ ನೀರುಣಿಸುತ್ತದೆ. ನೀರು ನಿಂತ ಬಳಿಕ ಅಕ್ಷರಶಃ ದೊಡ್ಡ ಮೋರಿಯಂತೆ ಕಾಣುವ ಈ ನಾಲೆ ಇಲ್ಲಿನ ನಿವಾಸಿಗಳಿಗೆ ಕಸ ಎಸೆಯುವ ತೊಟ್ಟಿಯಂತೆ ಭಾಸವಾದಂತಿದೆ. ನಾಲೆ ಉದ್ದಕ್ಕೂ ಮರುಬಳಕೆಯಾಗುವ ಪ್ಲಾಸ್ಟಿಕ್, ಏಕಬಳಕೆಯ ಪ್ಲಾಸ್ಟಿಕ್ ಕವರ್‌ಗಳೂ ಸೇರಿದಂತೆ ಅನೇಕ ತ್ಯಾಜ್ಯಗಳು ಯಥೇಚ್ಛವಾಗಿ  ಸಂಗ್ರಹವಾಗುತ್ತಿರುವ ಕುರಿತು ಸಚಿತ್ರ ವರದಿ ಪ್ರಕಟವಾಗಿತ್ತು.

ಈ ವರದಿಯಿಂದ ಎಚ್ಚೆತ್ತುಕೊಂಡ ಬೇಲೂರು ಗ್ರಾಮ ಪಂಚಾಯಿತಿ ಆಡಳಿತ ಹಾಗೂ ಸ್ಥಳೀಯ ಬಡಾವಣೆಗಳ ಮುಖಂಡರು ಪ್ಲಾಸ್ಟಿಕ್ ತ್ಯಾಜ್ಯಗಳನ್ನು ತೆರವುಗೊಳಿಸಿ, ನಾಲೆಯಲ್ಲಿ ನೀರು ಸ್ವಚ್ಛತೆಯಿಂದ ಹರಿಯುವಂತೆ ಶ್ರಮ ವಹಿಸಿದ ಪರಿಣಾಮ ಇಂದು ಈ ಬಡಾವಣೆಗಳ ಉದ್ದಕ್ಕೂ ಸ್ವಚ್ಛವಾಗಿ,ಸರಾಗವಾಗಿ ನೀರು ಹರಿಯುತ್ತಿದೆ. ಮಾತ್ರವಲ್ಲ, ಪ್ಲಾಸ್ಟಿಕ್ ತ್ಯಾಜ್ಯಗಳ ರಾಶಿಗಳನ್ನೂ ಅಲ್ಲಿಂದ ತೆರವುಗೊಳಿಸಿ, ಪೊಲೀಸರಿಂದ ಎಚ್ಚರಿಕೆಯ ಫಲಕಗಳನ್ನೂ ಅಳವಡಿಸಲಾಗಿದೆ.

ಆಂದೋಲನ ಡೆಸ್ಕ್

Recent Posts

‘ಅಂಕಲ್ ಚೋಕ್’ ಕಟ್ಟಿದ ಬಿದಿರಿನ ಮಾಯಾಲೋಕ

ಜಿ.ಕೃಷ್ಣ ಪ್ರಸಾದ್ ‘ಇಂದು ನಿಮ್ಮನ್ನು ಬಿದಿರಿನ ಲೋಕಕ್ಕೆ ಕರೆದೊಯ್ಯುತ್ತೇನೆ’. ಬೆಳಿಗ್ಗೆ ಕಾಫಿ ಕುಡಿಯುತ್ತಿದ್ದಾಗ ಗೆಳೆಯ ಮೈಕೆಲ್ ಕಾಮನ್ಸ್ ಹೇಳಿದ ಈ…

1 hour ago

ಮುಚ್ಚುತ್ತಿರುವ ಚಿತ್ರಮಂದಿರ

ಮಧುಕರ ಎಂ.ಎಲ್. ಒಂದು ಕಾಲದಲ್ಲಿ ಚಲನಚಿತ್ರವೇ ನಮ್ಮ ಮನರಂಜನೆ ಮಾಧ್ಯಮವಾಗಿದ್ದು, ಪೌರಾಣಿಕ ಕಥೆಗಳು, ರಾಮಾಯಣ ಕಥೆಗಳು, ಮಹಾಭಾರತ ಪ್ರಸಂಗಗಳು ಚಲನಚಿತ್ರವಾಗಿ…

1 hour ago

ಅಳಿಯ ಅಲ್ಲ, ಮಗಳ ಗಂಡ!

ಸುರೇಶ ಕಂಜರ್ಪಣೆ ದೆಹಲಿಯ ಯುವ ಜನಾಂಗದ ಪ್ರತಿಭಟನೆ ದೇಶದ ಗಮನ ಸೆಳೆದಿದೆ. ಎಲ್ಲ ಚಳವಳಿಗಳ ಆರಂಭಿಕ ಶಂಕೆ, ಆತಂಕಗಳನ್ನು ಮೀರಿ…

1 hour ago

ವಿರಾಜಪೇಟೆ: ರಸ್ತೆಯುದ್ದಕ್ಕೂ ಗುಂಡಿಗಳದ್ದೇ ಪಾರಮ್ಯ

ಕಾಂಗೀರ ಬೋಪಣ್ಣ ವಿರಾಜಪೇಟೆ: ತಾಲ್ಲೂಕಿನಲ್ಲಿನ ಮುಖ್ಯರಸ್ತೆಗಳು ವಾಹನಗಳು ಸಂಚರಿಸಲಾರದಷ್ಟು ಹಾಳಾಗಿದ್ದು, ವಾಹನ ಸವಾರರು ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ. ಆದರೆ, ಈ…

1 hour ago

ಇದು ಅಂತ್ಯವಲ್ಲ-ಹೊಸ ಆರಂಭ

ರೇಣುಕಾ ನಿಡುಗುಂದಿ ಜಂತರ್ ಮಂತರ್‌ನಲ್ಲಿ ಹೋರಾಟ ನಡೆಸುತ್ತಿದ್ದ ವಿದ್ಯಾರ್ಥಿಗಳಿಗೆ ಇಂದು ತಾತ್ಕಾಲಿಕ ನೈತಿಕ ಗೆಲುವು ದೊರೆತಿದೆ. ಕೇಂದ್ರ ಶಿಕ್ಷಣ ಸಚಿವ…

1 hour ago

ಎಸ್‌ಐಆರ್ ಅರ್ಜಿ; ಅನಿವಾರ್ಯ ಮರ್ಜಿ

ಚಿರಂಜೀವಿ ಸಿ ಹುಲ್ಲಹಳ್ಳಿ ಗ್ರಾಮೀಣ ಭಾಗಗಳಲ್ಲಿ ಸಮಸ್ಯೆ ಇನ್ನಷ್ಟು ಗಂಭೀರವಾಗಿದೆ. ಹಲವು ಗ್ರಾಮಗಳಲ್ಲಿ ಎಸ್‌ಐಆರ್ ಪ್ರಕ್ರಿಯೆ ಕುರಿತು ಸಮರ್ಪಕ ಜಾಗೃತಿಯೇ…

1 hour ago