Andolana originals

ನಾಲೆಯನ್ನು ಪ್ಲಾಸ್ಟಿಕ್ ಮುಕ್ತಗೊಳಿಸಿದ ಸ್ವಚ್ಛ ಮನಸ್ಸುಗಳು

ಮಂಡ್ಯ:ನಗರದ ವಿವಿಧ ಬಡಾವಣೆಗಳನ್ನು ಹಾದು ಬೇಲೂರು ಗ್ರಾ.ಪಂ.ವ್ಯಾಪ್ತಿಯಲ್ಲಿ ಹರಿಯುವ ವಿಶ್ವೇಶ್ವರಯ್ಯ ನಾಲೆಯ ೮ನೇ ವಿತರಣಾ ನಾಲೆಯ ದುಸ್ಥಿತಿ ಬಗ್ಗೆ ‘ಆಂದೋಲನ’ ಪತ್ರಿಕೆಯಲ್ಲಿ ಪ್ರಕಟಗೊಂಡ ಸಚಿತ್ರ ವರದಿಯಿಂದ ಎಚ್ಚೆತ್ತ ಗ್ರಾಮ ಪಂಚಾಯಿತಿ ಆಡಳಿತ ಹಾಗೂ ವರದಿಗೆ ಓಗೊಟ್ಟ ಬಡಾವಣೆಗಳ ಮುಖಂಡರು ತ್ಯಾಜ್ಯವನ್ನು ತೆರವುಗೊಳಿಸಿದ್ದಾರೆ.

ಹನಿ ಹನಿ ನೀರೂ ಅಮೂಲ್ಯ ಎನ್ನುವ ಸರ್ಕಾರದ ಜಾಗೃತಿ ಫಲಕಗಳನ್ನು ಅಪಹಾಸ್ಯ ಮಾಡುವಂತೆ…..ಸ್ವಚ್ಛ ಪರಿಸರವನ್ನು ಕಾಪಾಡಿ ಎಂಬ ಪ್ರಚಾರವನ್ನು ಅಣಕಿಸುವಂತೆ ಹಲವರು ತಮ್ಮ ಮನೆಯ ಪ್ಲಾಸ್ಟಿಕ್ ತ್ಯಾಜ್ಯವನ್ನು ರಸ್ತೆಯೋ, ಖಾಲಿ ನಿವೇಶನವೋ, ಚರಂಡಿಯೋ ಎಲ್ಲೆಂದರಲ್ಲಿ ಬಿಸಾಡುತ್ತಿರುವ ಬಗ್ಗೆ ‘ಆಂದೋಲನ’ ಪತ್ರಿಕೆ ವರದಿ ಮಾಡಿತ್ತು.

ಮಂಡ್ಯದ ಮರೀಗೌಡ ಬಡಾವಣೆ, ದ್ವಾರಕಾನಗರ,ಅನ್ನಪೂರ್ಣೇಶ್ವರಿ ನಗರ, ಶ್ರೀರಾಮನಗರದ ಮೂಲಕ ಹಾದು ಬೇಲೂರು ಗ್ರಾಪಂ ವ್ಯಾಪ್ತಿಯಲ್ಲಿ ಹರಿಯುವ ವಿಶ್ವೇಶ್ವರಯ್ಯ ನಾಲೆಯ ೮ನೇ ವಿತರಣಾ ನಾಲೆ ಪ್ಲಾಸ್ಟಿಕ್ ತ್ಯಾಜ್ಯಗಳಿಂದ ಉಸಿರು ಕಟ್ಟಿ ಸಾಯುತ್ತಿರುವಂತೆ ಭಾಸವಾಗುತ್ತಿದೆ.

ಸುಮಾರು ೧೦ ಕ್ಯೂಸೆಕ್ಸ್ ಸಾಮರ್ಥ್ಯದ ಈ ನಾಲೆ ಸುಮಾರು ೬೦ ಎಕರೆ ಪ್ರದೇಶಕ್ಕೆ ನೀರುಣಿಸುತ್ತದೆ. ನೀರು ನಿಂತ ಬಳಿಕ ಅಕ್ಷರಶಃ ದೊಡ್ಡ ಮೋರಿಯಂತೆ ಕಾಣುವ ಈ ನಾಲೆ ಇಲ್ಲಿನ ನಿವಾಸಿಗಳಿಗೆ ಕಸ ಎಸೆಯುವ ತೊಟ್ಟಿಯಂತೆ ಭಾಸವಾದಂತಿದೆ. ನಾಲೆ ಉದ್ದಕ್ಕೂ ಮರುಬಳಕೆಯಾಗುವ ಪ್ಲಾಸ್ಟಿಕ್, ಏಕಬಳಕೆಯ ಪ್ಲಾಸ್ಟಿಕ್ ಕವರ್‌ಗಳೂ ಸೇರಿದಂತೆ ಅನೇಕ ತ್ಯಾಜ್ಯಗಳು ಯಥೇಚ್ಛವಾಗಿ  ಸಂಗ್ರಹವಾಗುತ್ತಿರುವ ಕುರಿತು ಸಚಿತ್ರ ವರದಿ ಪ್ರಕಟವಾಗಿತ್ತು.

ಈ ವರದಿಯಿಂದ ಎಚ್ಚೆತ್ತುಕೊಂಡ ಬೇಲೂರು ಗ್ರಾಮ ಪಂಚಾಯಿತಿ ಆಡಳಿತ ಹಾಗೂ ಸ್ಥಳೀಯ ಬಡಾವಣೆಗಳ ಮುಖಂಡರು ಪ್ಲಾಸ್ಟಿಕ್ ತ್ಯಾಜ್ಯಗಳನ್ನು ತೆರವುಗೊಳಿಸಿ, ನಾಲೆಯಲ್ಲಿ ನೀರು ಸ್ವಚ್ಛತೆಯಿಂದ ಹರಿಯುವಂತೆ ಶ್ರಮ ವಹಿಸಿದ ಪರಿಣಾಮ ಇಂದು ಈ ಬಡಾವಣೆಗಳ ಉದ್ದಕ್ಕೂ ಸ್ವಚ್ಛವಾಗಿ,ಸರಾಗವಾಗಿ ನೀರು ಹರಿಯುತ್ತಿದೆ. ಮಾತ್ರವಲ್ಲ, ಪ್ಲಾಸ್ಟಿಕ್ ತ್ಯಾಜ್ಯಗಳ ರಾಶಿಗಳನ್ನೂ ಅಲ್ಲಿಂದ ತೆರವುಗೊಳಿಸಿ, ಪೊಲೀಸರಿಂದ ಎಚ್ಚರಿಕೆಯ ಫಲಕಗಳನ್ನೂ ಅಳವಡಿಸಲಾಗಿದೆ.

ಆಂದೋಲನ ಡೆಸ್ಕ್

Recent Posts

ಬಲೂಚಿಸ್ತಾನ | ಸೇನಾ ಸಿಬ್ಬಂದಿ ಇದ್ದ ರೈಲು ಗುರಿಯಾಗಿಸಿ ಸ್ಫೋಟ ; 24 ಸಾವು

ಪೇಶಾವರ : ಪಾಕಿಸ್ತಾನದ ಬಲೂಚಿಸ್ತಾನದಲ್ಲಿ ಸೇನಾ ಸಿಬ್ಬಂದಿ ಪ್ರಯಾಣಿಸುತ್ತಿದ್ದ ರೈಲನ್ನು ಗುರಿಯಾಗಿಸಿಕೊಂಡು ನಡೆಸಿದ ಸ್ಪೋಟದಲ್ಲಿ 24 ಮಂದಿ ಸಾವು ಸೇರಿದಂತೆ…

2 hours ago

ಶಿವಾಜಿ ಗಣೇಶನ್‌ ಅವರ ವಾರದ ಅಂಕಣ | ಜನಸಂಖ್ಯೆ ಏರುಪೇರು : ಆಂಧ್ರದ ನೀತಿ ಅನುಕರಣೀಯವೇ?

ದೇಶದ ಜನಸಂಖ್ಯೆಯಲ್ಲಾಗುತ್ತಿರುವ ಏರುಪೇರು ರಾಷ್ಟ್ರೀಯ ಜನಸಂಖ್ಯೆ ನಿರ್ವಹಣೆಯ ನೀತಿಯ ದಿಕ್ಕನ್ನೇ ಬದಲಿಸುತ್ತಿದೆ. ಉತ್ತರ ಭಾರತದ ಜನಸಂಖ್ಯೆ ಪ್ರಮಾಣ ಲಂಗು ಲಗಾಮಿಲ್ಲದೆ…

4 hours ago

ಮೆಲೊಡಿ ಖಾವೋ ; ಕುಚ್‌ ಜಾನ್‌ ಜಾವೋ!

ರಾಜಾರಾಂ ತಲ್ಲೂರು ಬೆಳಿಗ್ಗೆ ಎದ್ದ ತಕ್ಷಣ ಹಲ್ಲು ತಿಕ್ಕಿ ಮುಖ ತೊಳೆಯಬೇಕು ಎಂದು ದೇಶದ ಸಂವಿಧಾನದಲ್ಲಿ ಬರೆದಿದೆಯೇನ್ರಿ? . .…

5 hours ago

ಭಾನುವಾರದ ಹಾಡುಪಾಡು | ಈ ಮೋಹ, ಈ ಬಯಕೆ ಮತ್ತು ಇದೆಲ್ಲಾ ಯಾಕೆ ಹೀಗೆ?

ಮೋಹಿತ್‌ ಎಸ್‌ ಗೌಡ ನಾನು ಪ್ರಾಥಮಿಕ ಶಾಲೆಯಲ್ಲಿ ಓದುವಾಗ ಪರೀಕ್ಷೆಯ ಪ್ರಶ್ನೆಪತ್ರಿಕೆಗಳಲ್ಲಿ ‘ಲಿಂಗ ಬದಲಿಸಿ ಬರೆಯಿರಿ’ ಅಥವಾ ‘ವಿರುದ್ಧ ಪದ…

5 hours ago

ಭಾನುವಾರದ ಹಾಡುಪಾಡು | ಒಂದು ಸುಂದರ ಸಂಸಾರ ಮುರಿದುಹೋದ ಕಥೆ

ರೇಣುಕಾ ನಿಡಗುಂದಿ  ಕಾಲೇಜಿನ ದಿನಗಳಲ್ಲಿ ಅವರಿಬ್ಬರೂ ಭೇಟಿಯಾದಾಗಲೇ ಆಕೆ ತಾನು ಬೈ ( Bisexual) ಎಂದು ಹೇಳಿಕೊಂಡಿದ್ದಳು. ಹೊಸತಲೆಮಾರಿನ ಹುಡುಗ…

5 hours ago

ಒಬ್ಬ ಹುಡುಗ ಯಾವ ಕಾರಣಕ್ಕೆ ʼಗೇʼ ಆಗುತ್ತಾನೆ?

ವಸುಧೇಂದ್ರ ಹುಡುಗನೊಬ್ಬನಿಗೆ ಮತ್ತೊಬ್ಬ ಹುಡುಗನ ಮೇಲೆ ಅದು ಹೇಗೆ ಆಕರ್ಷಣೆ ಮೂಡುತ್ತದೆ? ಅದು ಅವನ ಆಯ್ಕೆಯೆ? ಕಲಿತ ದುಶ್ಚಟವೆ? ವಿಷಮ…

5 hours ago